Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni Tears: ಸಿಎಸ್​ಕೆ ಗೆಲ್ಲುತ್ತಿದ್ದಂತೆ ಜಡೇಜಾರನ್ನು ಅಪ್ಪಿ ಮೈದಾನದಲ್ಲೇ ಕಣ್ಣೀರಿಟ್ಟ ಎಂಎಸ್ ಧೋನಿ

Chennai Super Kings Champion IPL 2023: ಗುಜರಾತ್ ಟೈಟಾನ್ಸ್ ವಿರುದ್ಧ ಐಪಿಎಲ್ 2023 ಫೈನಲ್​ನಲ್ಲಿ ಸಿಎಸ್​ಕೆ ಗೆಲ್ಲುತ್ತಿದ್ದಂತೆ ಎಂಎಸ್ ಧೋನಿ ಅವರು ರವೀಂದ್ರ ಜಡೇಜಾ ಅವರನ್ನು ಎತ್ತಿ ಸಂಭ್ರಮಿಸಿದರು. ಇದರ ಜೊತೆಗೆ ಕಣ್ಣೀರು ಕೂಡ ಇತ್ತು.

MS Dhoni Tears: ಸಿಎಸ್​ಕೆ ಗೆಲ್ಲುತ್ತಿದ್ದಂತೆ ಜಡೇಜಾರನ್ನು ಅಪ್ಪಿ ಮೈದಾನದಲ್ಲೇ ಕಣ್ಣೀರಿಟ್ಟ ಎಂಎಸ್ ಧೋನಿ
MS Dhoni Tears IPL 2023 Final
Follow us
Vinay Bhat
|

Updated on: May 30, 2023 | 10:01 AM

ಇಂಡಿಯನ್ ಪ್ರೀಮಿಯರ್ ಲೀಗ್ 16ನೇ ಆವೃತ್ತಿಗೆ (IPL 2023) ತೆರೆ ಬಿದ್ದಿದೆ. ಎಂಎಸ್ ಧೋನಿ (MS Dhoni) ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಐದನೇ ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ರಣರೋಚಕ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸಿಎಸ್​ಕೆ ಡಕ್ವರ್ತ್ ಲುಯಿಸ್ ನಿಯಮದ ಅನ್ವಯ 5 ವಿಕೆಟ್​ಗಳಿಂದ ಗೆದ್ದು ಟ್ರೋಫಿ ಎತ್ತಿ ಹಿಡಿಯಿತು. ಈ ಪಂದ್ಯದಲ್ಲಿ ಯಾರೂ ಊಹಿಸಲಾಗದ ರೀತಿಯಲ್ಲಿ ಚೆನ್ನೈ ಗೆದ್ದಿದ್ದು ವಿಶೇಷ. ರವೀಂದ್ರ ಜಡೇಜಾ (Ravindra Jadeja) ಪಂದ್ಯವನ್ನು ಗೆಲ್ಲಿಸಿ ಹೀರೋ ಆದರು. ಕೊನೆಯ ಓವರ್​ನ 6 ಎಸೆತವಂತು ಅಭಿಮಾನಿಗಳನ್ನು ಮಾತ್ರವಲ್ಲದೆ ಎರಡೂ ತಂಡದ ಆಟಗಾರರನ್ನು ತುದಿಗಾಲಿನಲ್ಲಿ ನಿಲ್ಲಿಸಿತ್ತು.

ಕೊನೆಯ ಎರಡು ಎಸೆತದಲ್ಲಿ ಚೆನ್ನೈಗೆ ಗೆಲ್ಲಲು 10 ರನ್​ಗಳು ಬೇಕಾಗಿದ್ದವು. ಫಾರ್ಮ್​ನಲ್ಲಿ ಇಲ್ಲದ ಜಡೇಜಾ ಕ್ರೀಸ್​ನಲ್ಲಿದ್ದರು. ಸಿಎಸ್​ಕೆಗೆ ಗೆಲುವು ಅಸಾಧ್ಯ ಎಂದೇ ಹೆಚ್ಚಿನವರು ನಂಬಿದ್ದರು. ಆದರೆ, ಅನೇಕರ ಲೆಕ್ಕಚಾರವನ್ನು ಜಡ್ಡು ತಲೆಕೆಳಗಾಗಿಸಿದರು. ಮೋಹಿತ್ ಶರ್ಮಾ ಬೌಲಿಂಗ್​ನ 5ನೇ ಎಸೆತದಲ್ಲಿ ಸಿಕ್ಸ್ ಮತ್ತು ಕೊನೆಯ ಎಸೆತದಲ್ಲಿ ಫೋರ್ ಸಿಡಿಸಿ ಪಂದ್ಯವನ್ನು ಗೆಲ್ಲಿಸಿಕೊಟ್ಟರು. ಇದಕ್ಕೂ ಮುನ್ನ ಔಟ್ ಆಗಿದ್ದ ಎಂಎಸ್ ಧೋನಿ ಡಗೌಟ್​ನಲ್ಲಿ ಕೂತು ಪ್ರಾರ್ಥಿಸುತ್ತಿರುವುದು ಕಂಡು ಬಂತು. ಗೆದ್ದ ತಕ್ಷಣ ಜಡೇಜಾ ಅವರನ್ನು ಎತ್ತಿ ವಿಶೇಷವಾಗಿ ಸಂಭ್ರಮಿಸಿದರು. ಇದರ ಜೊತೆಗೆ ಕಣ್ಣೀರು ಕೂಡ ಇತ್ತು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

ಇದನ್ನೂ ಓದಿ
Image
MS Dhoni IPL 2023 Final: ನಿವೃತ್ತಿ ಹೇಳಲು ಇದು ಸರಿಯಾದ ಸಮಯ, ಆದರೆ: ಪಂದ್ಯದ ಬಳಿಕ ಧೋನಿಯಿಂದ ಶಾಕಿಂಗ್ ಹೇಳಿಕೆ
Image
IPL 2023 Prize Money: ಸಿಎಸ್​ಕೆಗೆ ಸಿಕ್ತು ಬರೋಬ್ಬರಿ 20 ಕೋಟಿ: ರಹಾನೆ, ಗಿಲ್, ಶಮಿಗೂ ಸಿಕ್ತು ಲಕ್ಷ ಲಕ್ಷ ಹಣ: ಇಲ್ಲಿದೆ ಸಂಪೂರ್ಣ ಮಾಹಿತಿ
Image
IPL 2023 Car Winner: RCB ಆಟಗಾರನ ಪಾಲಾದ ಟಾಟಾ ಕಾರ್
Image
IPL 2023: ಯಾರಿಗೆ ಯಾವ ಪ್ರಶಸ್ತಿ? ಇಲ್ಲಿದೆ ಸಂಪೂರ್ಣ ಮಾಹಿತಿ

IPL 2023: ಈ ಬಾರಿ ಅತೀ ಹೆಚ್ಚು ಫೋರ್ ಬಾರಿಸಿದ ಬ್ಯಾಟರ್​ಗಳ ಪಟ್ಟಿ ಇಲ್ಲಿದೆ

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್​ ಟೈಟಾನ್ಸ್ ತಂಡದ ಪರ ಯುವ ಆಟಗಾರ ಸಾಯಿ ಸುದರ್ಶನ್ ಅಮೋಘ ಆಟ ಪ್ರದರ್ಶಿಸಿದರು. ಇವರ ಬಿರುಸಾದ ಬ್ಯಾಟಿಂಗ್​ನಿಂದಾಗಿ 200 ರನ್​ ಗಡಿ ದಾಟಿತು. 96 ರನ್​ ಮಾಡಿದ ಸುದರ್ಶನ್​ ಫೈನಲ್​ ಪಂದ್ಯದ ಹೀರೋ ಆದರು. ಇದರ ಜೊತೆಗೆ ವೃದ್ಧಿಮಾನ್​ ಸಾಹ 54, ಶುಭಮನ್​ ಗಿಲ್​ 39, ಹಾರ್ದಿಕ್​ ಪಾಂಡ್ಯ 21 ರನ್​ಗಳ ಕಾಣಿಕೆ ನೀಡಿದರು. ಜಿಟಿ 20 ಓವರ್​ಗಳಲ್ಲಿ 4 ವಿಕೆಟ್​ಗೆ 214 ರನ್​ ಗಳಿಸಿತು.

ಟಾರ್ಗೆಟ್ ಬೆನ್ನಟ್ಟಲು ಬಂದ ಚೆನ್ನೈಗೆ ಮಳೆ ಅಡ್ಡಿ ಪಡಿಸಿತು. 2 ಗಂಟೆಗಳ ಕಾಲ ಆಟ ನಿಂತ ಕಾರಣ ಡಕ್ವರ್ಥ್​ ಲೂಯಿಸ್​ ನಿಯಮದನ್ವಯ ಚೆನ್ನೈಗೆ 15 ಓವರ್​ಗಳಲ್ಲಿ 171 ರನ್​ ಗುರಿ ನೀಡಲಾಯಿತು. ಅದರಂತೆ ಕ್ರೀಸ್​ಗೆ ಬಂದ ಗಾಯಕ್ವಾಡ್ ಹಾಗೂ ಕಾನ್ವೆ ಸ್ಫೋಟಕ ಬೌಂಡರಿ, ಸಿಕ್ಸರ್​ಗಳಿಂದಲೇ ರನ್​ ಗಳಿಸಿದರು. ಮೊದಲ ವಿಕೆಟ್​ಗೆ ಬಿರುಸಿನ 71 ರನ್ ಮಾಡಿದರು. ಗಾಯಕ್ವಾಡ್​ 16 ಎಸೆತಗಳಲ್ಲಿ 26 ರನ್​ ಮಾಡಿದರೆ, ಕಾನ್ವೆ 25 ಎಸೆತಗಳಲ್ಲಿ 47 ರನ್​ ಚಚ್ಚಿದರು. ಇದಾದ ಬಳಿಕ ಶಿವಂ ದುಬೆ 32, ಅಜಿಂಕ್ಯಾ ರಹಾನೆ 27, ಅಂಬಟಿ ರಾಯುಡು 19 ಹಾಗೂ ರವೀಂದ್ರ ಜಡೇಜಾ 15 ರನ್​ ಮಾಡಿ ತಂಡದ ಗೆಲುವಿನಲ್ಲಿ ಮುಖ್ಯ ಪಾತ್ರವಹಿಸಿದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹಿಮಾನಿ ಶವವನ್ನು ಸೂಟ್‌ಕೇಸ್‌ನಲ್ಲಿ ಎಳೆದೊಯ್ಯುತ್ತಿರುವ ವಿಡಿಯೋ ಪತ್ತೆ
ಹಿಮಾನಿ ಶವವನ್ನು ಸೂಟ್‌ಕೇಸ್‌ನಲ್ಲಿ ಎಳೆದೊಯ್ಯುತ್ತಿರುವ ವಿಡಿಯೋ ಪತ್ತೆ
ಮಹಿಳೆಯರ ಸ್ಫೂರ್ತಿದಾಯಕ ಪಯಣ ಹಂಚಿಕೊಳ್ಳಲು ಪ್ರಧಾನಿ ಮೋದಿ ಅವಕಾಶ
ಮಹಿಳೆಯರ ಸ್ಫೂರ್ತಿದಾಯಕ ಪಯಣ ಹಂಚಿಕೊಳ್ಳಲು ಪ್ರಧಾನಿ ಮೋದಿ ಅವಕಾಶ
ನಟ್ಟು ಬೋಲ್ಟು ಹೇಳಿಕೆ: ಡಿಕೆಶಿ ಬಳಸಿದ ಭಾಷೆ ಸರಿ ಇಲ್ಲ ಎಂದ ನಾಗಾಭರಣ
ನಟ್ಟು ಬೋಲ್ಟು ಹೇಳಿಕೆ: ಡಿಕೆಶಿ ಬಳಸಿದ ಭಾಷೆ ಸರಿ ಇಲ್ಲ ಎಂದ ನಾಗಾಭರಣ
ಡಾ ರಾಜ್​ಕುಮಾರ್ ಅವರ ಒಂದು ಸನ್ನೆಗೆ ಲಕ್ಷ ಜನ ಸೇರ್ತಿದ್ರು: ಸಾಧು ಕೋಕಿಲ
ಡಾ ರಾಜ್​ಕುಮಾರ್ ಅವರ ಒಂದು ಸನ್ನೆಗೆ ಲಕ್ಷ ಜನ ಸೇರ್ತಿದ್ರು: ಸಾಧು ಕೋಕಿಲ
ಹೆಚ್ಚುವರಿ ಉತ್ತರ ಪತ್ರಿಕೆ ನೀಡದ ಮೇಲ್ವಿಚಾರಕ: ವಿದ್ಯಾರ್ಥಿನಿ ಕಣ್ಣೀರು
ಹೆಚ್ಚುವರಿ ಉತ್ತರ ಪತ್ರಿಕೆ ನೀಡದ ಮೇಲ್ವಿಚಾರಕ: ವಿದ್ಯಾರ್ಥಿನಿ ಕಣ್ಣೀರು
ಪ್ರತಿಭಟನೆಗಳಿಗೆ ಬಂದ್ ಒಂದೇ ಅಸ್ತ್ರವಲ್ಲ, ಅದು ಬ್ರಹ್ಮಾಸ್ತ್ರ: ನಾರಾಯಣಗೌಡ
ಪ್ರತಿಭಟನೆಗಳಿಗೆ ಬಂದ್ ಒಂದೇ ಅಸ್ತ್ರವಲ್ಲ, ಅದು ಬ್ರಹ್ಮಾಸ್ತ್ರ: ನಾರಾಯಣಗೌಡ
ಉತ್ತರ ಕನ್ನಡ ಜಿಲ್ಲೆಲಿ ಅತಿ ಹೆಚ್ಚು ಉಷ್ಣಾಂಶ ದಾಖಲು: ಡಿಸಿ ಹೇಳಿದ್ದಿಷ್ಟು
ಉತ್ತರ ಕನ್ನಡ ಜಿಲ್ಲೆಲಿ ಅತಿ ಹೆಚ್ಚು ಉಷ್ಣಾಂಶ ದಾಖಲು: ಡಿಸಿ ಹೇಳಿದ್ದಿಷ್ಟು
ಗಿರ್‌ನಲ್ಲಿ ಪ್ರಧಾನಿ ಮೋದಿಯ ಸಿಂಹ ಸಫಾರಿಯ ಕ್ಷಣಗಳ ವಿಡಿಯೋ ಇಲ್ಲಿದೆ
ಗಿರ್‌ನಲ್ಲಿ ಪ್ರಧಾನಿ ಮೋದಿಯ ಸಿಂಹ ಸಫಾರಿಯ ಕ್ಷಣಗಳ ವಿಡಿಯೋ ಇಲ್ಲಿದೆ
ಹೈಕಮಾಂಡ್ ನೀಡುವ ಸೂಚನೆಯನ್ನು ನಾನು ಪಾಲಿಸುತ್ತೇನೆ: ಸಿದ್ದರಾಮಯ್ಯ
ಹೈಕಮಾಂಡ್ ನೀಡುವ ಸೂಚನೆಯನ್ನು ನಾನು ಪಾಲಿಸುತ್ತೇನೆ: ಸಿದ್ದರಾಮಯ್ಯ
ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ
ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ