AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni Angry: ಪಂದ್ಯದ ಮಧ್ಯೆ ತಾಳ್ಮೆ ಕಳೆದುಕೊಂಡ ಧೋನಿ: ಎಂಎಸ್​ಡಿ ಕೋಪಕಂಡು ತಬ್ಬಿಬ್ಬಾದ ಸಿಎಸ್​ಕೆ ಬೌಲರ್

RR vs CSK, IPL 2023: ಕೂಲ್ ಕ್ಯಾಪ್ಟನ್ ಎಂದೇ ಖ್ಯಾತಿ ಪಡೆದಿರುವ ಮಹೇಂದ್ರ ಸಿಂಗ್ ಧೋನಿ ರಾಜಸ್ಥಾನ್ ರಾಯಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯದಲ್ಲಿ ಕೋಪಗೊಂಡ ಅಪರೂಪದ ಘಟನೆ ನಡೆಯಿತು. ಇದರ ವಿಡಿಯೋ ವೈರಲ್ ಆಗುತ್ತಿದೆ.

MS Dhoni Angry: ಪಂದ್ಯದ ಮಧ್ಯೆ ತಾಳ್ಮೆ ಕಳೆದುಕೊಂಡ ಧೋನಿ: ಎಂಎಸ್​ಡಿ ಕೋಪಕಂಡು ತಬ್ಬಿಬ್ಬಾದ ಸಿಎಸ್​ಕೆ ಬೌಲರ್
MS Dhoni Angry RR vs CSK
Vinay Bhat
|

Updated on:Apr 28, 2023 | 9:12 AM

Share

ಇಂಡಿಯನ್ ಪ್ರೀಮಿಯರ್ ಲೀಗ್​ 2023 ರಲ್ಲಿ (IPL 2023) ಗುರುವಾರ ನಡೆದ ರಾಜಸ್ಥಾನ್ ರಾಯಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ (RR vs CSK) ನಡುವಣ ಪಂದ್ಯ ಅಭಿಮಾನಿಗಳನ್ನು ತುದಿಗಾಲಿನಲ್ಲಿ ನಿಲ್ಲಿಸಿತ್ತು. ಜೈಪುರದ ಸವಾಯ್ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ಆಯೋಜಿಸಿದ್ದ ಈ ಹೈವೋಲ್ಟೇಜ್ ಮ್ಯಾಚ್​ನಲ್ಲಿ ಸಂಜು ಸ್ಯಾಮ್ಸನ್ ಪಡೆ 32 ರನ್​ಗಳ ಜಯ ಸಾಧಿಸಿ ಟೇಬಲ್ ಟಾಪರ್ ಆಯಿತು. ಇತ್ತ ಸೋತ ಸಿಎಸ್​ಕೆ ಮೂರನೇ ಸ್ಥಾನಕ್ಕೆ ಕುಸಿದಿದೆ. 203 ರನ್​ಗಳ ರನ್​ಗಳ ಟಾರ್ಗೆಟ್ ಬೆನ್ನಟ್ಟುವಲ್ಲಿ ಧೋನಿ ಪಡೆ ವಿಫಲವಾಯಿತು. ಎದುರಾಳಿಯ ಸ್ಫೋಟಕ ಬ್ಯಾಟಿಂಗ್​ಗೆ ಬ್ರೇಕ್ ಹಾಕಲು ಸಿಎಸ್​ಕೆಗೆ ಸಾಧ್ಯವಾಗಲಿಲ್ಲ. ಒಂದು ಹಂತದಲ್ಲಿ ಚೆನ್ನೈ ನಾಯಕ ಎಂಎಸ್ ಧೋನಿ (MS Dhoni) ತಾಳ್ಮೆ ಕಳೆದುಕೊಂಡ ಘಟನೆ ಕೂಡ ನಡೆಯಿತು.

ಕೂಲ್ ಕ್ಯಾಪ್ಟನ್ ಎಂದೇ ಖ್ಯಾತಿ ಪಡೆದಿರುವ ಮಹೇಂದ್ರ ಸಿಂಗ್ ಧೋನಿ ಆರ್​ಆರ್​- ಸಿಎಸ್​ಕೆ ನಡುವಣ ಪಂದ್ಯದಲ್ಲಿ ಕೋಪಗೊಂಡ ಅಪರೂಪದ ಘಟನೆ ನಡೆಯಿತು. 16ನೇ ಓವರ್‌ನಲ್ಲಿ ಮಥೀಶ ಪತಿರಾನ ಅವರು ಶಿಮ್ರಾನ್ ಹೆಟ್ಮೇರ್​ಗೆ ಸ್ಲೋವರ್ ಬೌನ್ಸರ್ ಎಸೆದರು. ಚೆಂಡು ಬ್ಯಾಟ್​ಗೆ ಸರಿಯಾಗಿ ಟೈಮ್ ಆಗದ ಕಾರಣ ಹೆಟ್ಮೇರ್ ದೇಹಕ್ಕೆ ತಗುಲಿ ಸ್ಟಂಪ್ ಹಿಂದೆ ಹೋಯಿತು. ತಕ್ಷಣವೆ ಚೆಂಡನ್ನು ಎತ್ತಿಕೊಂಡ ಧೋನಿ ನೇರವಾಗಿ ಬೌಲರ್‌ನ ತುದಿಯಲ್ಲಿರುವ ಸ್ಟಂಪ್‌ಗೆ ಎಸೆದರು.

ಇದನ್ನೂ ಓದಿ
Image
PBKS vs LSG, IPL 2023: ಐಪಿಎಲ್​ನಲ್ಲಿಂದು ಪಂಜಾಬ್-ಲಖನೌ ಮುಖಾಮುಖಿ: ಅಗ್ರಸ್ಥಾನದ ಮೇಲೆ ರಾಹುಲ್ ಕಣ್ಣು
Image
Virat Kohli: 300 ಪ್ಲಸ್ ರನ್: ಐಪಿಎಲ್​ನಲ್ಲಿ ವಿಶೇಷ ದಾಖಲೆ ಬರೆದ ವಿರಾಟ್ ಕೊಹ್ಲಿ
Image
IPL 2023: RCB ಕಪ್​ ಗೆಲ್ಲೋ ತನಕ ಸ್ಕೂಲ್​ಗೆ ಸೇರಲ್ಲ: ಆಗಿದ್ರೆ ಈ ಜನ್ಮದಲ್ಲಿ ಶಾಲೆಗೆ ಹೋಗಲ್ಲ ಎಂದು ಕಿಚಾಯಿಸಿದ ನೆಟ್ಟಿಗರು
Image
IPL 2023: ಸ್ಟಾರ್ ಆಲ್​ರೌಂಡರ್​ ತಂಡದಲ್ಲಿದ್ದರೂ ಕಣಕ್ಕಿಳಿಸದ RCB

IPL 2023: RCB ಪ್ಲೇಯಿಂಗ್​ 11 ಬದಲಿಸದಿರಲು ಇದುವೇ ಅಸಲಿ ಕಾರಣ..!

ಆದರೆ, ಪತಿರಾನ ವಿಕೆಟ್​ಗೆ ಅಡ್ಡವಾಗಿ ನಿಂತಿದ್ದರಿಂದ ಚೆಂಡು ಸ್ಟಂಪ್‌ಗೆ ತಲುಪಲು ಸಾಧ್ಯವಾಗಲಿಲ್ಲ. ಅಲ್ಲದೆ ವಿಕೆಟ್​ಗೆ ಬೀಳಲಿದ್ದ ಚೆಂಡನ್ನು ಸಿಎಸ್​ಕೆ ಬೌಲರ್​ ಕೈಯಲ್ಲಿ ಹಿಡಿಯಲು ಯತ್ನಿಸಿದರು. ಇದರಿಂದ ಕೋಪಗೊಂಡ ಧೋನಿ ಶ್ರೀಲಂಕಾದ ಯುವ ವೇಗಿಯ ಮೇಲೆ ಹರಿಹಾಯ್ದರು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಇನ್ನು 19ನೇ ಓವರ್​ನಲ್ಲಿ ಕೂಡ ಧೋನಿ ಮತ್ತೊಮ್ಮೆ ತಾಳ್ಮೆ ಕಳೆದುಕೊಂಡರು.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ಸ್ಫೋಟಕ ಆರಂಭ ಪಡೆದುಕೊಂಡಿತು. ಜೋಸ್ ಬಟ್ಲರ್ ಜೊತೆಗೂಡಿ ಯಶಸ್ವಿ ಜೈಸ್ವಾಲ್ ಮನಬಂದಂತೆ ಬ್ಯಾಟ್ ಬೀಸಿದರು. ಬಟ್ಲರ್ 21 ಎಸೆತಗಳಲ್ಲಿ 27 ರನ್ ಗಳಿಸಿದರೆ, ಜೈಸ್ವಾಲ್ ಕೇವಲ 43 ಎಸೆತಗಳಲ್ಲಿ 8 ಫೋರ್, 4 ಸಿಕ್ಸರ್ ಸಿಡಿಸಿ 77 ರನ್ ಚಚ್ಚಿದರು. ಧ್ರುವ್ ಜೂರೆಲ್ 15 ಎಸೆತಗಳಲ್ಲಿ 34 ಹಾಗೂ ದೇವದತ್ ಪಡಿಕ್ಕಲ್ ಅಜೇಯ 27 ರನ್ ಕಲೆಹಾಕಿದರು. ಆರ್​ಆರ್ 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 202 ರನ್ ಗಳಿಸಿತು. ಸಿಎಸ್​ಕೆ ಪರ ತುಷಾರ್ ದೇಶ್​ಪಾಂಡೆ 2 ವಿಕೆಟ್ ಪಡೆದರು.

ಟಾರ್ಗೆಟ್ ಬೆನ್ನಟ್ಟಿದ ಸಿಎಸ್​ಕೆ ಈ ಬಾರಿ ಉತ್ತಮ ಆರಂಭ ಪಡೆದುಕೊಳ್ಳಲಿಲ್ಲ. ಫಾರ್ಮ್​ನಲ್ಲಿದ್ದ ಡೆವೋನ್ ಕಾನ್ವೆ (8) ಹಾಗೂ ಅಜಿಂಕ್ಯಾ ರಹಾನೆ (15) ಬೇಗನೆ ಔಟಾದರು. ಆದರೆ, ರುತುರಾಜ್ ಗಾಯಕ್ವಾಡ್ (47) ಹಾಗೂ ಶಿವಂ ದುಬೆ (52) ಗೆಲುವಿಗೆ ಹೋರಾಡಿದರು. ಆದರೆ, ಇದಕ್ಕೆ ಯಶಸ್ಸು ಸಿಗಲಿಲ್ಲ. ಅಂಬಟಿ ರಾಯುಡು ಸೊನ್ನೆ ಸುತ್ತಿದರೆ, ಮೊಯಿನ್ ಅಲಿ ಹಾಗೂ ರವೀಂದ್ರ ಜಡೇಜಾ ತಲಾ 23 ಗಳಿಸಿದರು. ಚೆನ್ನೈ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 170 ರನ್ ಕಲೆಹಾಕಿತಷ್ಟೆ. ಆರ್​ಆರ್​ ಪರ ಆ್ಯಡಂ ಝಂಪಾ 3 ಹಾಗೂ ಅಶ್ವಿನ್ 2 ವಿಕೆಟ್ ಪಡೆದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:12 am, Fri, 28 April 23

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್