AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಂ ಇಂಡಿಯಾ ಸುಧಾರಿಸಲು ಬರಲಿದ್ದಾರೆ ಎಂ.ಎಸ್​. ಧೋನಿ? ಪ್ರಮುಖ ಹುದ್ದೆ ನೀಡಲು ಮುಂದಾದ ಬಿಸಿಸಿಐ

ಇತ್ತೀಚೆಗೆ ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್ ಸೆಮಿಫೈನಲ್​​ನಲ್ಲಿ ಟೀಂ ಇಂಡಿಯಾ ತಂಡವು ಇಂಗ್ಲೆಂಡ್ ವಿರುದ್ಧ ಹೀನಾಯವಾಗಿ ಸೋತಿತ್ತು. ಮುಂದಿನ ದಿನಗಳಲ್ಲಿ ಈ ತಪ್ಪು ಆಗದಂತೆ ನೋಡಿಕೊಳ್ಳಲು ಬಿಸಿಸಿಐ ನಿರ್ಧರಿಸಿದೆ.

ಟೀಂ ಇಂಡಿಯಾ ಸುಧಾರಿಸಲು ಬರಲಿದ್ದಾರೆ ಎಂ.ಎಸ್​. ಧೋನಿ? ಪ್ರಮುಖ ಹುದ್ದೆ ನೀಡಲು ಮುಂದಾದ ಬಿಸಿಸಿಐ
ಧೋನಿ
TV9 Web
| Edited By: |

Updated on:Nov 15, 2022 | 8:06 PM

Share

ಐಸಿಸಿ ಟೂರ್ನಿಗಳಲ್ಲಿ (ICC Tourny) ಟೀಂ ಇಂಡಿಯಾ ಪದೇಪದೇ ಎಡವುತ್ತಿದೆ. ಸೆಮಿ ಫೈನಲ್, ಫೈನಲ್​ಗಳಲ್ಲಿ ಪಂದ್ಯ ಸೋತು ಕಪ್​ ಇಲ್ಲದೆ ಮನೆಗೆ ಬರುವುತ್ತಿರುವುದು ಸಾಕಷ್ಟು ಬಾರಿ ಮರುಕಳಿಸಿದೆ. ಹಲವು ಘಟಾನುಘಟಿ ಆಟಗಾರರು ಇದ್ದ ಹೊರತಾಗಿಯೂ ಈ ರೀತಿಯ ತಪ್ಪುಗಳು ಆಗುತ್ತಲೇ ಇವೆ. ಇದನ್ನು ಬಿಸಿಸಿಐ (BCCI) ಗಂಭೀರವಾಗಿ ಪರಿಗಣಿಸಿದೆ. ತಂಡವನ್ನು ಸುಧಾರಿಸಲು ಟೀಂ ಇಂಡಿಯಾದ ಮಾಜಿ ಹಾಗೂ ಯಶಸ್ವಿ ಕ್ಯಾಪ್ಟನ್ ಎಂ.ಎಸ್​. ಧೋನಿ ಅವರನ್ನು ಕರೆತಂದು ಪ್ರಮುಖ ಹುದ್ದೆ ನೀಡಲು ಬಿಸಿಸಿಐ ಚಿಂತನೆ ನಡೆಸಿದೆ ಎನ್ನಲಾಗಿದೆ.

ಮೂರು ಫಾರ್ಮ್ಯಾಟ್​ಗೆ ರಾಹುಲ್ ದ್ರಾವಿಡ್ ಅವರು ಕೋಚ್ ಆಗಿದ್ದಾರೆ. ಇದನ್ನು ನಿಭಾಯಿಸಲು ಅವರಿಗೆ ಹೆಚ್ಚು ಹೊರೆ ಆಗುತ್ತಿದೆ. ಹೀಗಾಗಿ, ಟಿ20ಗೆ ಪ್ರತ್ಯೇಕ ಕೋಚ್ ಮಾಡಲು ಬಿಸಿಸಿಐ ಚಿಂತನೆ ನಡೆಸಿದೆ ಎನ್ನಲಾಗಿದೆ. ಟಿ20 ಫಾರ್ಮ್ಯಾಟ್​ನಲ್ಲಿ ತಂಡದಲ್ಲಿ ಮಾಡಬೇಕಿರುವ ಬದಲಾವಣೆ ಬಗ್ಗೆ ಧೋನಿಯಿಂದ ಸಲಹೆ ಪಡೆಯಲು ಬಿಸಿಸಿಐ ಚಿಂತನೆ ನಡೆಸಿರುವುದಾಗಿ ಟೆಲಿಗ್ರಾಫ್ ವರದಿ ಮಾಡಿದೆ.

ಇತ್ತೀಚೆಗೆ ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್ ಸೆಮಿಫೈನಲ್​​ನಲ್ಲಿ ಟೀಂ ಇಂಡಿಯಾ ತಂಡವು ಇಂಗ್ಲೆಂಡ್ ವಿರುದ್ಧ ಹೀನಾಯವಾಗಿ ಸೋತಿತ್ತು. ಮುಂದಿನ ದಿನಗಳಲ್ಲಿ ಈ ತಪ್ಪು ಆಗದಂತೆ ನೋಡಿಕೊಳ್ಳಲು ಬಿಸಿಸಿಐ ನಿರ್ಧರಿಸಿದೆ. ಹೀಗಾಗಿ, ಯಶಸ್ವಿ ಕ್ಯಾಪ್ಟನ್ ಧೋನಿಗೆ ಟಿ20 ಕ್ರಿಕೆಟ್​ನ ನಿರ್ದೇಶಕ ಹುದ್ದೆ ಕೊಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದನ್ನೂ ಓದಿ
Image
ನಿರ್ಮಾಣದ ಜತೆಗೆ ನಟನೆ ಆರಂಭಿಸಿದ ಧೋನಿ? ಹಿಟ್ ನಿರ್ದೇಶಕನ ಚಿತ್ರದಲ್ಲಿ ಕೂಲ್ ಕ್ಯಾಪ್ಟನ್
Image
ಈ ಇಬ್ಬರಂತೆ ಸಾವಿರ ಆಟಗಾರರು ಸಿಗಬಹುದು, ಆದರೆ ಧೋನಿಯಂಥವರು ಸಿಗುವುದು ಅಸಾಧ್ಯ; ಗಂಭೀರ್
Image
ತಮಿಳು ಚಿತ್ರರಂಗಕ್ಕೆ ಎಂಟ್ರಿ ಕೊಡೋಕೆ ರೆಡಿ ಆದ ಧೋನಿ; ಮೊದಲ ಸಿನಿಮಾ ಹೀಗಿರಲಿದೆ?
Image
T20 World Cup 2022: ಈ ಬಾರಿ ಉಡೀಸ್ ಆಗಲಿದೆ 10 ವಿಶ್ವ ದಾಖಲೆಗಳು

2021ರಲ್ಲಿ ನಡೆದ ಟಿ20 ವಿಶ್ವಕಪ್​ನಲ್ಲಿ ಧೋನಿ ಅವರು ಟೀಂ ಇಂಡಿಯಾದಲ್ಲಿ ಸಲಹೆಗಾರರಾಗಿದ್ದರು. ಆದರೆ, ನಿರೀಕ್ಷಿತ ಫಲಿತಾಂಶ ಬಂದಿಲ್ಲ. ಈ ಆಯ್ಕೆ ಕೊನೆಯ ಹಂತದಲ್ಲಿ ಆಗಿತ್ತು. ಹೆಚ್ಚು ಸಮಯ ಸಿಗದ ಕಾರಣ ನಿರೀಕ್ಷಿತ ಫಲಿತಾಂಶ ಪಡೆಯಲು ಸಾಧ್ಯವಾಗಿರಲಿಲ್ಲ ಎಂಬುದು ಬಿಸಿಸಿಐ ಅಭಿಪ್ರಾಯ.

ಇದನ್ನೂ ಓದಿ: ನಿರ್ಮಾಣದ ಜತೆಗೆ ನಟನೆ ಆರಂಭಿಸಿದ ಧೋನಿ? ಹಿಟ್ ನಿರ್ದೇಶಕನ ಚಿತ್ರದಲ್ಲಿ ಕೂಲ್ ಕ್ಯಾಪ್ಟನ್

ಧೋನಿ ಅವರು ಸದ್ಯ ಐಪಿಎಲ್​ನಲ್ಲಿ ಚೆನ್ನೈ ಸೂಪರ್​ ಕಿಂಗ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಮುಂದಿನ ವರ್ಷ ಅವರು ಐಪಿಎಲ್​ನಿಂದ ನಿವೃತ್ತಿ ಪಡೆಯುವ ಸಾಧ್ಯತೆ ಇದೆ. ಆ ಬಳಿಕ ಅವರು ಬಿಸಿಸಿಐ ನೀಡುವ ಪ್ರಮುಖ ಹುದ್ದೆ ಸ್ವೀಕರಿಸಲಿದ್ದಾರೆ. ಈ ಬಗ್ಗೆ ಶೀಘ್ರದಲ್ಲೇ ನಡೆವ ಬಿಸಿಸಿಐನ ಅಪೆಕ್ಸ್ ಕೌನ್ಸಿಲ್ ಮೀಟಿಂಗ್​ನಲ್ಲಿ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.

Published On - 8:06 pm, Tue, 15 November 22

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು