AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಂ ಇಂಡಿಯಾ ಸುಧಾರಿಸಲು ಬರಲಿದ್ದಾರೆ ಎಂ.ಎಸ್​. ಧೋನಿ? ಪ್ರಮುಖ ಹುದ್ದೆ ನೀಡಲು ಮುಂದಾದ ಬಿಸಿಸಿಐ

ಇತ್ತೀಚೆಗೆ ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್ ಸೆಮಿಫೈನಲ್​​ನಲ್ಲಿ ಟೀಂ ಇಂಡಿಯಾ ತಂಡವು ಇಂಗ್ಲೆಂಡ್ ವಿರುದ್ಧ ಹೀನಾಯವಾಗಿ ಸೋತಿತ್ತು. ಮುಂದಿನ ದಿನಗಳಲ್ಲಿ ಈ ತಪ್ಪು ಆಗದಂತೆ ನೋಡಿಕೊಳ್ಳಲು ಬಿಸಿಸಿಐ ನಿರ್ಧರಿಸಿದೆ.

ಟೀಂ ಇಂಡಿಯಾ ಸುಧಾರಿಸಲು ಬರಲಿದ್ದಾರೆ ಎಂ.ಎಸ್​. ಧೋನಿ? ಪ್ರಮುಖ ಹುದ್ದೆ ನೀಡಲು ಮುಂದಾದ ಬಿಸಿಸಿಐ
ಧೋನಿ
TV9 Web
| Edited By: |

Updated on:Nov 15, 2022 | 8:06 PM

Share

ಐಸಿಸಿ ಟೂರ್ನಿಗಳಲ್ಲಿ (ICC Tourny) ಟೀಂ ಇಂಡಿಯಾ ಪದೇಪದೇ ಎಡವುತ್ತಿದೆ. ಸೆಮಿ ಫೈನಲ್, ಫೈನಲ್​ಗಳಲ್ಲಿ ಪಂದ್ಯ ಸೋತು ಕಪ್​ ಇಲ್ಲದೆ ಮನೆಗೆ ಬರುವುತ್ತಿರುವುದು ಸಾಕಷ್ಟು ಬಾರಿ ಮರುಕಳಿಸಿದೆ. ಹಲವು ಘಟಾನುಘಟಿ ಆಟಗಾರರು ಇದ್ದ ಹೊರತಾಗಿಯೂ ಈ ರೀತಿಯ ತಪ್ಪುಗಳು ಆಗುತ್ತಲೇ ಇವೆ. ಇದನ್ನು ಬಿಸಿಸಿಐ (BCCI) ಗಂಭೀರವಾಗಿ ಪರಿಗಣಿಸಿದೆ. ತಂಡವನ್ನು ಸುಧಾರಿಸಲು ಟೀಂ ಇಂಡಿಯಾದ ಮಾಜಿ ಹಾಗೂ ಯಶಸ್ವಿ ಕ್ಯಾಪ್ಟನ್ ಎಂ.ಎಸ್​. ಧೋನಿ ಅವರನ್ನು ಕರೆತಂದು ಪ್ರಮುಖ ಹುದ್ದೆ ನೀಡಲು ಬಿಸಿಸಿಐ ಚಿಂತನೆ ನಡೆಸಿದೆ ಎನ್ನಲಾಗಿದೆ.

ಮೂರು ಫಾರ್ಮ್ಯಾಟ್​ಗೆ ರಾಹುಲ್ ದ್ರಾವಿಡ್ ಅವರು ಕೋಚ್ ಆಗಿದ್ದಾರೆ. ಇದನ್ನು ನಿಭಾಯಿಸಲು ಅವರಿಗೆ ಹೆಚ್ಚು ಹೊರೆ ಆಗುತ್ತಿದೆ. ಹೀಗಾಗಿ, ಟಿ20ಗೆ ಪ್ರತ್ಯೇಕ ಕೋಚ್ ಮಾಡಲು ಬಿಸಿಸಿಐ ಚಿಂತನೆ ನಡೆಸಿದೆ ಎನ್ನಲಾಗಿದೆ. ಟಿ20 ಫಾರ್ಮ್ಯಾಟ್​ನಲ್ಲಿ ತಂಡದಲ್ಲಿ ಮಾಡಬೇಕಿರುವ ಬದಲಾವಣೆ ಬಗ್ಗೆ ಧೋನಿಯಿಂದ ಸಲಹೆ ಪಡೆಯಲು ಬಿಸಿಸಿಐ ಚಿಂತನೆ ನಡೆಸಿರುವುದಾಗಿ ಟೆಲಿಗ್ರಾಫ್ ವರದಿ ಮಾಡಿದೆ.

ಇತ್ತೀಚೆಗೆ ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್ ಸೆಮಿಫೈನಲ್​​ನಲ್ಲಿ ಟೀಂ ಇಂಡಿಯಾ ತಂಡವು ಇಂಗ್ಲೆಂಡ್ ವಿರುದ್ಧ ಹೀನಾಯವಾಗಿ ಸೋತಿತ್ತು. ಮುಂದಿನ ದಿನಗಳಲ್ಲಿ ಈ ತಪ್ಪು ಆಗದಂತೆ ನೋಡಿಕೊಳ್ಳಲು ಬಿಸಿಸಿಐ ನಿರ್ಧರಿಸಿದೆ. ಹೀಗಾಗಿ, ಯಶಸ್ವಿ ಕ್ಯಾಪ್ಟನ್ ಧೋನಿಗೆ ಟಿ20 ಕ್ರಿಕೆಟ್​ನ ನಿರ್ದೇಶಕ ಹುದ್ದೆ ಕೊಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದನ್ನೂ ಓದಿ
Image
ನಿರ್ಮಾಣದ ಜತೆಗೆ ನಟನೆ ಆರಂಭಿಸಿದ ಧೋನಿ? ಹಿಟ್ ನಿರ್ದೇಶಕನ ಚಿತ್ರದಲ್ಲಿ ಕೂಲ್ ಕ್ಯಾಪ್ಟನ್
Image
ಈ ಇಬ್ಬರಂತೆ ಸಾವಿರ ಆಟಗಾರರು ಸಿಗಬಹುದು, ಆದರೆ ಧೋನಿಯಂಥವರು ಸಿಗುವುದು ಅಸಾಧ್ಯ; ಗಂಭೀರ್
Image
ತಮಿಳು ಚಿತ್ರರಂಗಕ್ಕೆ ಎಂಟ್ರಿ ಕೊಡೋಕೆ ರೆಡಿ ಆದ ಧೋನಿ; ಮೊದಲ ಸಿನಿಮಾ ಹೀಗಿರಲಿದೆ?
Image
T20 World Cup 2022: ಈ ಬಾರಿ ಉಡೀಸ್ ಆಗಲಿದೆ 10 ವಿಶ್ವ ದಾಖಲೆಗಳು

2021ರಲ್ಲಿ ನಡೆದ ಟಿ20 ವಿಶ್ವಕಪ್​ನಲ್ಲಿ ಧೋನಿ ಅವರು ಟೀಂ ಇಂಡಿಯಾದಲ್ಲಿ ಸಲಹೆಗಾರರಾಗಿದ್ದರು. ಆದರೆ, ನಿರೀಕ್ಷಿತ ಫಲಿತಾಂಶ ಬಂದಿಲ್ಲ. ಈ ಆಯ್ಕೆ ಕೊನೆಯ ಹಂತದಲ್ಲಿ ಆಗಿತ್ತು. ಹೆಚ್ಚು ಸಮಯ ಸಿಗದ ಕಾರಣ ನಿರೀಕ್ಷಿತ ಫಲಿತಾಂಶ ಪಡೆಯಲು ಸಾಧ್ಯವಾಗಿರಲಿಲ್ಲ ಎಂಬುದು ಬಿಸಿಸಿಐ ಅಭಿಪ್ರಾಯ.

ಇದನ್ನೂ ಓದಿ: ನಿರ್ಮಾಣದ ಜತೆಗೆ ನಟನೆ ಆರಂಭಿಸಿದ ಧೋನಿ? ಹಿಟ್ ನಿರ್ದೇಶಕನ ಚಿತ್ರದಲ್ಲಿ ಕೂಲ್ ಕ್ಯಾಪ್ಟನ್

ಧೋನಿ ಅವರು ಸದ್ಯ ಐಪಿಎಲ್​ನಲ್ಲಿ ಚೆನ್ನೈ ಸೂಪರ್​ ಕಿಂಗ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಮುಂದಿನ ವರ್ಷ ಅವರು ಐಪಿಎಲ್​ನಿಂದ ನಿವೃತ್ತಿ ಪಡೆಯುವ ಸಾಧ್ಯತೆ ಇದೆ. ಆ ಬಳಿಕ ಅವರು ಬಿಸಿಸಿಐ ನೀಡುವ ಪ್ರಮುಖ ಹುದ್ದೆ ಸ್ವೀಕರಿಸಲಿದ್ದಾರೆ. ಈ ಬಗ್ಗೆ ಶೀಘ್ರದಲ್ಲೇ ನಡೆವ ಬಿಸಿಸಿಐನ ಅಪೆಕ್ಸ್ ಕೌನ್ಸಿಲ್ ಮೀಟಿಂಗ್​ನಲ್ಲಿ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.

Published On - 8:06 pm, Tue, 15 November 22

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್