AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಂ ಇಂಡಿಯಾ ಸುಧಾರಿಸಲು ಬರಲಿದ್ದಾರೆ ಎಂ.ಎಸ್​. ಧೋನಿ? ಪ್ರಮುಖ ಹುದ್ದೆ ನೀಡಲು ಮುಂದಾದ ಬಿಸಿಸಿಐ

ಇತ್ತೀಚೆಗೆ ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್ ಸೆಮಿಫೈನಲ್​​ನಲ್ಲಿ ಟೀಂ ಇಂಡಿಯಾ ತಂಡವು ಇಂಗ್ಲೆಂಡ್ ವಿರುದ್ಧ ಹೀನಾಯವಾಗಿ ಸೋತಿತ್ತು. ಮುಂದಿನ ದಿನಗಳಲ್ಲಿ ಈ ತಪ್ಪು ಆಗದಂತೆ ನೋಡಿಕೊಳ್ಳಲು ಬಿಸಿಸಿಐ ನಿರ್ಧರಿಸಿದೆ.

ಟೀಂ ಇಂಡಿಯಾ ಸುಧಾರಿಸಲು ಬರಲಿದ್ದಾರೆ ಎಂ.ಎಸ್​. ಧೋನಿ? ಪ್ರಮುಖ ಹುದ್ದೆ ನೀಡಲು ಮುಂದಾದ ಬಿಸಿಸಿಐ
ಧೋನಿ
TV9 Web
| Edited By: |

Updated on:Nov 15, 2022 | 8:06 PM

Share

ಐಸಿಸಿ ಟೂರ್ನಿಗಳಲ್ಲಿ (ICC Tourny) ಟೀಂ ಇಂಡಿಯಾ ಪದೇಪದೇ ಎಡವುತ್ತಿದೆ. ಸೆಮಿ ಫೈನಲ್, ಫೈನಲ್​ಗಳಲ್ಲಿ ಪಂದ್ಯ ಸೋತು ಕಪ್​ ಇಲ್ಲದೆ ಮನೆಗೆ ಬರುವುತ್ತಿರುವುದು ಸಾಕಷ್ಟು ಬಾರಿ ಮರುಕಳಿಸಿದೆ. ಹಲವು ಘಟಾನುಘಟಿ ಆಟಗಾರರು ಇದ್ದ ಹೊರತಾಗಿಯೂ ಈ ರೀತಿಯ ತಪ್ಪುಗಳು ಆಗುತ್ತಲೇ ಇವೆ. ಇದನ್ನು ಬಿಸಿಸಿಐ (BCCI) ಗಂಭೀರವಾಗಿ ಪರಿಗಣಿಸಿದೆ. ತಂಡವನ್ನು ಸುಧಾರಿಸಲು ಟೀಂ ಇಂಡಿಯಾದ ಮಾಜಿ ಹಾಗೂ ಯಶಸ್ವಿ ಕ್ಯಾಪ್ಟನ್ ಎಂ.ಎಸ್​. ಧೋನಿ ಅವರನ್ನು ಕರೆತಂದು ಪ್ರಮುಖ ಹುದ್ದೆ ನೀಡಲು ಬಿಸಿಸಿಐ ಚಿಂತನೆ ನಡೆಸಿದೆ ಎನ್ನಲಾಗಿದೆ.

ಮೂರು ಫಾರ್ಮ್ಯಾಟ್​ಗೆ ರಾಹುಲ್ ದ್ರಾವಿಡ್ ಅವರು ಕೋಚ್ ಆಗಿದ್ದಾರೆ. ಇದನ್ನು ನಿಭಾಯಿಸಲು ಅವರಿಗೆ ಹೆಚ್ಚು ಹೊರೆ ಆಗುತ್ತಿದೆ. ಹೀಗಾಗಿ, ಟಿ20ಗೆ ಪ್ರತ್ಯೇಕ ಕೋಚ್ ಮಾಡಲು ಬಿಸಿಸಿಐ ಚಿಂತನೆ ನಡೆಸಿದೆ ಎನ್ನಲಾಗಿದೆ. ಟಿ20 ಫಾರ್ಮ್ಯಾಟ್​ನಲ್ಲಿ ತಂಡದಲ್ಲಿ ಮಾಡಬೇಕಿರುವ ಬದಲಾವಣೆ ಬಗ್ಗೆ ಧೋನಿಯಿಂದ ಸಲಹೆ ಪಡೆಯಲು ಬಿಸಿಸಿಐ ಚಿಂತನೆ ನಡೆಸಿರುವುದಾಗಿ ಟೆಲಿಗ್ರಾಫ್ ವರದಿ ಮಾಡಿದೆ.

ಇತ್ತೀಚೆಗೆ ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್ ಸೆಮಿಫೈನಲ್​​ನಲ್ಲಿ ಟೀಂ ಇಂಡಿಯಾ ತಂಡವು ಇಂಗ್ಲೆಂಡ್ ವಿರುದ್ಧ ಹೀನಾಯವಾಗಿ ಸೋತಿತ್ತು. ಮುಂದಿನ ದಿನಗಳಲ್ಲಿ ಈ ತಪ್ಪು ಆಗದಂತೆ ನೋಡಿಕೊಳ್ಳಲು ಬಿಸಿಸಿಐ ನಿರ್ಧರಿಸಿದೆ. ಹೀಗಾಗಿ, ಯಶಸ್ವಿ ಕ್ಯಾಪ್ಟನ್ ಧೋನಿಗೆ ಟಿ20 ಕ್ರಿಕೆಟ್​ನ ನಿರ್ದೇಶಕ ಹುದ್ದೆ ಕೊಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದನ್ನೂ ಓದಿ
Image
ನಿರ್ಮಾಣದ ಜತೆಗೆ ನಟನೆ ಆರಂಭಿಸಿದ ಧೋನಿ? ಹಿಟ್ ನಿರ್ದೇಶಕನ ಚಿತ್ರದಲ್ಲಿ ಕೂಲ್ ಕ್ಯಾಪ್ಟನ್
Image
ಈ ಇಬ್ಬರಂತೆ ಸಾವಿರ ಆಟಗಾರರು ಸಿಗಬಹುದು, ಆದರೆ ಧೋನಿಯಂಥವರು ಸಿಗುವುದು ಅಸಾಧ್ಯ; ಗಂಭೀರ್
Image
ತಮಿಳು ಚಿತ್ರರಂಗಕ್ಕೆ ಎಂಟ್ರಿ ಕೊಡೋಕೆ ರೆಡಿ ಆದ ಧೋನಿ; ಮೊದಲ ಸಿನಿಮಾ ಹೀಗಿರಲಿದೆ?
Image
T20 World Cup 2022: ಈ ಬಾರಿ ಉಡೀಸ್ ಆಗಲಿದೆ 10 ವಿಶ್ವ ದಾಖಲೆಗಳು

2021ರಲ್ಲಿ ನಡೆದ ಟಿ20 ವಿಶ್ವಕಪ್​ನಲ್ಲಿ ಧೋನಿ ಅವರು ಟೀಂ ಇಂಡಿಯಾದಲ್ಲಿ ಸಲಹೆಗಾರರಾಗಿದ್ದರು. ಆದರೆ, ನಿರೀಕ್ಷಿತ ಫಲಿತಾಂಶ ಬಂದಿಲ್ಲ. ಈ ಆಯ್ಕೆ ಕೊನೆಯ ಹಂತದಲ್ಲಿ ಆಗಿತ್ತು. ಹೆಚ್ಚು ಸಮಯ ಸಿಗದ ಕಾರಣ ನಿರೀಕ್ಷಿತ ಫಲಿತಾಂಶ ಪಡೆಯಲು ಸಾಧ್ಯವಾಗಿರಲಿಲ್ಲ ಎಂಬುದು ಬಿಸಿಸಿಐ ಅಭಿಪ್ರಾಯ.

ಇದನ್ನೂ ಓದಿ: ನಿರ್ಮಾಣದ ಜತೆಗೆ ನಟನೆ ಆರಂಭಿಸಿದ ಧೋನಿ? ಹಿಟ್ ನಿರ್ದೇಶಕನ ಚಿತ್ರದಲ್ಲಿ ಕೂಲ್ ಕ್ಯಾಪ್ಟನ್

ಧೋನಿ ಅವರು ಸದ್ಯ ಐಪಿಎಲ್​ನಲ್ಲಿ ಚೆನ್ನೈ ಸೂಪರ್​ ಕಿಂಗ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಮುಂದಿನ ವರ್ಷ ಅವರು ಐಪಿಎಲ್​ನಿಂದ ನಿವೃತ್ತಿ ಪಡೆಯುವ ಸಾಧ್ಯತೆ ಇದೆ. ಆ ಬಳಿಕ ಅವರು ಬಿಸಿಸಿಐ ನೀಡುವ ಪ್ರಮುಖ ಹುದ್ದೆ ಸ್ವೀಕರಿಸಲಿದ್ದಾರೆ. ಈ ಬಗ್ಗೆ ಶೀಘ್ರದಲ್ಲೇ ನಡೆವ ಬಿಸಿಸಿಐನ ಅಪೆಕ್ಸ್ ಕೌನ್ಸಿಲ್ ಮೀಟಿಂಗ್​ನಲ್ಲಿ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.

Published On - 8:06 pm, Tue, 15 November 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!