AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ಒಲಿಂಪಿಕ್ಸ್‌ನಲ್ಲಿ ಹಾಕಿ ತಂಡದ ಐತಿಹಾಸಿಕ ಸಾಧನೆ: 7 ವರ್ಷಗಳ ನಂತರ ವೈರಲ್ ಆಯ್ತು ಧೋನಿಯ ಅದೊಂದು ಟ್ವೀಟ್

MS Dhoni: ಇಂದು ಒಂದು ಉತ್ತಮ ದಿನ, CSK ಫೈನಲ್ ತಲುಪಿದ್ದರಿಂದ ಅಲ್ಲ. ಬದಲಿಗೆ, ಭಾರತೀಯ ಹಾಕಿ ತಂಡ ಚಿನ್ನದ ಪದಕ ಗೆದ್ದಿರುವುದೇ ಇದಕ್ಕೆ ಕಾರಣ. ನಮಗೆ ಹೆಮ್ಮೆ ತಂದಿದ್ದಕ್ಕಾಗಿ ಧನ್ಯವಾದಗಳು ಎಂದು ಬರೆದುಕೊಂಡಿದ್ದರು.

MS Dhoni: ಒಲಿಂಪಿಕ್ಸ್‌ನಲ್ಲಿ ಹಾಕಿ ತಂಡದ ಐತಿಹಾಸಿಕ ಸಾಧನೆ: 7 ವರ್ಷಗಳ ನಂತರ ವೈರಲ್ ಆಯ್ತು ಧೋನಿಯ ಅದೊಂದು ಟ್ವೀಟ್
ಎಂಎಸ್ ಧೋನಿ, ಭಾರತೀಯ ಪುರುಷರ ಹಾಕಿ ತಂಡ
TV9 Web
| Edited By: |

Updated on: Aug 06, 2021 | 3:45 PM

Share

ಟೋಕಿಯೊ ಒಲಿಂಪಿಕ್ಸ್ ನಲ್ಲಿ ಗುರುವಾರ (ಆಗಸ್ಟ್ 05), ಭಾರತೀಯ ಪುರುಷರ ಹಾಕಿ ತಂಡ ಜರ್ಮನಿಯ ವಿರುದ್ಧ 5-4 ಗೋಲುಗಳಿಂದ ಐತಿಹಾಸಿಕ ಗೆಲುವು ದಾಖಲಿಸುವ ಮೂಲಕ ಕಂಚಿನ ಪದಕ ಗೆದ್ದಿತು. ಈ ವಿಜಯವು ಐತಿಹಾಸಿಕವಾಗಿದೆ ಏಕೆಂದರೆ ಭಾರತೀಯ ಹಾಕಿ ತಂಡವು 41 ವರ್ಷಗಳ ನಂತರ ಒಲಿಂಪಿಕ್ ಪದಕವನ್ನು ಗೆದ್ದಿದೆ. ಪಂದ್ಯದ ಕೊನೆಯ ಸೆಕೆಂಡಿನವರೆಗೂ ಉತ್ಸಾಹ ಉತ್ತುಂಗದಲ್ಲಿತ್ತು. ಮನ್ ಪ್ರೀತ್ ಸಿಂಗ್ ನೇತೃತ್ವದ ತಂಡದ ಐತಿಹಾಸಿಕ ವಿಜಯವನ್ನು ದೇಶಾದ್ಯಂತ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಮಾಧ್ಯಮದಲ್ಲಿ ಅಭಿನಂದನಾ ಸಂದೇಶಗಳೊಂದಿಗೆ ಆಚರಿಸಿದರು. ಟೋಕಿಯೊ ಕ್ರೀಡಾಕೂಟದಲ್ಲಿ ಹಾಕಿ ತಂಡದ ಅದ್ಭುತ ಸಾಧನೆಗಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್‌ ಅವರಿಂದ ಹಿಡಿದು ಪ್ರಧಾನ ಮಂತ್ರಿ ನರೇಂದ್ರ ಮೋದಿ ವರೆಗೂ ಪ್ರಶಂಸೆಗಳ ಮಹಾಪೂರವೆ ಹರಿದುಬಂತು. ಆದರೆ ಪುರುಷರ ತಂಡದ ವಿಜಯದ ನಂತರ, ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಅವರ ಹಳೆಯ ಟ್ವೀಟ್​ವೊಂದು ಸೋಷಿಯಲ್​ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ಮಹೇಂದ್ರ ಸಿಂಗ್ ಧೋನಿಯ ಟ್ವೀಟ್ 2014 ರ ವರ್ಷದ್ದು. ಅದರಲ್ಲಿ ಧೋನಿ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಹಾಕಿ ತಂಡವನ್ನು ಅಭಿನಂದಿಸಿದ್ದರು. ಧೋನಿ ಆ ಸಮಯದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವನ್ನು ಮುನ್ನಡೆಸುತ್ತಿದ್ದರು. CSK 2014 ರ ಐಪಿಎಲ್ ಫೈನಲ್‌ಗೆ ಪ್ರವೇಶಿಸಲು ರೋಚಕ ಸೆಮಿಫೈನಲ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿತು.

ಧೋನಿ ಹಾಕಿ ತಂಡವನ್ನು ಅಭಿನಂದಿಸಿದ್ದರು ಫೈನಲ್‌ಗೆ ತಮ್ಮ ತಂಡದ ಪ್ರವೇಶ ಮತ್ತು ಚಿನ್ನದ ಪದಕ ಗೆದ್ದ ಭಾರತೀಯ ಹಾಕಿ ತಂಡವನ್ನು ಧೋನಿ ಟ್ವಿಟ್ಟರ್​ನಲ್ಲಿ ಅಭಿನಂದಿಸಿದ್ದರು. ಈ ಬಗ್ಗೆ ಟ್ವೀಟ್ ಮಾಡಿದ್ದ ಧೋನಿ, “ಇಂದು ಒಂದು ಉತ್ತಮ ದಿನ, CSK ಫೈನಲ್ ತಲುಪಿದ್ದರಿಂದ ಅಲ್ಲ. ಬದಲಿಗೆ, ಭಾರತೀಯ ಹಾಕಿ ತಂಡ ಚಿನ್ನದ ಪದಕ ಗೆದ್ದಿರುವುದೇ ಇದಕ್ಕೆ ಕಾರಣ. ನಮಗೆ ಹೆಮ್ಮೆ ತಂದಿದ್ದಕ್ಕಾಗಿ ಧನ್ಯವಾದಗಳು ಎಂದು ಬರೆದುಕೊಂಡಿದ್ದರು. ಭಾರತ ಹಾಕಿ ತಂಡ 2014 ರ ಏಷ್ಯನ್ ಗೇಮ್ಸ್ ಫೈನಲ್ ನಲ್ಲಿ ಪಾಕಿಸ್ತಾನವನ್ನು ಸೋಲಿಸಿತು .

ಕಂಚಿನ ಪದಕ ಪಂದ್ಯದಲ್ಲಿ ಜರ್ಮನಿಯನ್ನು ಬಗ್ಗು ಬಡಿಯಿತು ಸೆಮಿಫೈನಲ್‌ನಲ್ಲಿ ಬೆಲ್ಜಿಯಂ ವಿರುದ್ಧ 5-2 ಅಂತರದಲ್ಲಿ ಸೋತ ಭಾರತ ತಂಡವು ಕಂಚಿನ ಪದಕದ ಪಂದ್ಯದಲ್ಲಿ ಗುರುವಾರ ಜರ್ಮನಿಯನ್ನು ಎದುರಿಸಿತು. ಭಾರತವು 5-4 ಅಂತರದಲ್ಲಿ ಗೆಲುವು ಸಾಧಿಸುವ ಮುನ್ನ ಪಂದ್ಯದಲ್ಲಿ ಹಿಂದುಳಿದಿತ್ತು. ಆದರೆ ತಂಡವು ಉತ್ತಮ ಪುನರಾಗಮನ ಮಾಡಿ ಜರ್ಮನಿಯನ್ನು ಸೋಲಿಸಿ ಪದಕ ಗೆದ್ದಿತು. ಕಂಚಿನ ಪದಕದ ಪಂದ್ಯದಲ್ಲಿ ಭಾರತದ ಪರ ಹರ್ಮನ್‌ಪ್ರೀತ್ ಸಿಂಗ್, ರೂಪಿಂದರ್ ಪಾಲ್ ಸಿಂಗ್, ಹಾರ್ದಿಕ್ ಸಿಂಗ್ ಮತ್ತು ಸಿಮ್ರಂಜಿತ್ ಸಿಂಗ್ ಗೋಲು ಗಳಿಸಿದರು.

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ