AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಟರೂ ಅಲ್ಲ, ಬೌಲರೂ ಅಲ್ಲ… ಸೋಲಿಗೆ ಧೋನಿ ದೂರಿದ್ದು ಯಾರನ್ನ ಗೊತ್ತೇ..!

IPL 2025 CSK vs PBKS: ಇಂಡಿಯನ್ ಪ್ರೀಮಿಯರ್ ಲೀಗ್​ನ 49ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 19.2 ಓವರ್​ಗಳಲ್ಲಿ 190 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡ 19.4 ಓವರ್​ಗಳಲ್ಲಿ 194 ರನ್​ ಬಾರಿಸಿ 6 ವಿಕೆಟ್​ಗಳ ಗೆಲುವು ದಾಖಲಿಸಿದೆ.

ಬ್ಯಾಟರೂ ಅಲ್ಲ, ಬೌಲರೂ ಅಲ್ಲ... ಸೋಲಿಗೆ ಧೋನಿ ದೂರಿದ್ದು ಯಾರನ್ನ ಗೊತ್ತೇ..!
Ms Dhoni
ಝಾಹಿರ್ ಯೂಸುಫ್
|

Updated on: May 01, 2025 | 9:57 AM

Share

ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2025) 49ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಸೋಲನುಭವಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೇಯಸ್ ಅಯ್ಯರ್ ಸಿಎಸ್​ಕೆ ತಂಡವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ಪರ ಸ್ಯಾಮ್ ಕರನ್ 47 ಎಸೆತಗಳಲ್ಲಿ 88 ರನ್ ಬಾರಿಸಿದ್ದರು. ಈ ಸ್ಪೋಟಕ ಬ್ಯಾಟಿಂಗ್ ನೆರವಿನೊಂದಿಗೆ ಸಿಎಸ್​ಕೆ ತಂಡವು 190 ರನ್ ಕಲೆಹಾಕಿತು.

191 ರನ್​ಗಳ ಗುರಿ ಪಡೆದ ಪಂಜಾಬ್ ಕಿಂಗ್ಸ್ ತಂಡದ ಪರ ಪ್ರಭ್​ಸಿಮ್ರಾನ್ ಸಿಂಗ್ 54 ರನ್ ಬಾರಿಸಿದರೆ, ನಾಯಕ ಶ್ರೇಯಸ್ ಅಯ್ಯರ್ 72 ರನ್​ ಚಚ್ಚಿದರು. ಈ ಮೂಲಕ ಪಂಜಾಬ್ ಪಡೆ 19.4 ಓವರ್​ಗಳಲ್ಲಿ 190 ರನ್ ಬಾರಿಸಿ 6 ವಿಕೆಟ್​ಗಳ ಗೆಲುವು ದಾಖಲಿಸಿತು. ಈ ಸೋಲಿನೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ.

ಈ ಸೋಲಿನ ಬಳಿಕ ಮಾತನಾಡಿದ ಸಿಎಸ್​ಕೆ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ, ಈ ಪಂದ್ಯದಲ್ಲಿ ನಾವು ಚೆನ್ನಾಗಿ ಆಡಿದ್ದೆವು. ಅದರಲ್ಲೂ ನಮ್ಮ ಬ್ಯಾಟಿಂಗ್ ಉತ್ತಮವಾಗಿತ್ತು. ಇದೇ ಮೊದಲ ಬಾರಿಗೆ ನಾವು ಸಾಕಷ್ಟು ರನ್​ಗಳಿಸಲು ಯಶಸ್ವಿಯಾದೆವು.

ಇದನ್ನೂ ಓದಿ
Image
PSL 2025: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ RCB ಮಾಜಿ ಆಟಗಾರರು
Image
ಪ್ರಿಯಾಂಶ್ ಆರ್ಯನ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್
Image
ಕ್ರಿಸ್​ ಗೇಲ್ ದಾಖಲೆ ಜಸ್ಟ್ ಮಿಸ್: ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ
Image
ಉಲ್ಟಾ ಹೊಡೆದ RCB ಕಪ್ ಗೆಲ್ಲಬಾರದು ಎಂದಿದ್ದ ಅಂಬಾಟಿ ರಾಯುಡು

ಆದರೆ ಇದು ಉತ್ತಮ ಸ್ಕೋರ್ ಆಗಿತ್ತೇ ಎಂದು ಕೇಳಿದರೆ, ಖಂಡಿತವಾಗಿಯೂ ಅಲ್ಲ. ಅಂತಿಮ ಹಂತದಲ್ಲಿ ಸ್ಕೋರ್​ಗಳಿಸುವಲ್ಲಿ ನಾವು ಎಡವಿದೆವು. ಕೊನೆಯ ಓವರ್​ಗಳ ವೇಳೆ ಮತ್ತಷ್ಟು ರನ್​ಗಳಿಸಿದ್ದರೆ ಉತ್ತಮ ಪೈಪೋಟಿ ನೀಡಬಹುದಿತ್ತು ಎಂದು ಧೋನಿ ಹೇಳಿದ್ದಾರೆ.

ನಮ್ಮ ಪರ ಡೆವಾಲ್ಡ್ ಬ್ರೆವಿಸ್ ಮತ್ತು ಸ್ಯಾಮ್ ಕರನ್ ಉತ್ತಮ ಜೊತೆಯಾಟ ಪ್ರದರ್ಶಿಸಿದ್ದರು. ಆದರೆ ಕೊನೆಯ 4 ಎಸೆತಗಳಿರುವಾಗಲೇ ನಾವು ಆಲೌಟ್ ಆಗಿದ್ದು ದುಬಾರಿಯಾಯಿತು. ಅಂತಿಮ ಹಂತದಲ್ಲಿ ನಾಲ್ವರು ಬ್ಯಾಟರ್​ಗಳು ವಿಕೆಟ್ ಒಪ್ಪಿಸಿದ್ದು ಸ್ಕೋರ್ ಕಡಿಮೆಯಾಗುವಂತೆ ಮಾಡಿತು.

ಇದಾಗ್ಯೂ ಬೃಹತ್ ಮೊತ್ತ ಪೇರಿಸುವಲ್ಲಿ ಯಶಸ್ವಿಯಾಗಿದ್ದವು. ಹೀಗಾಗಿ ಬೌಲರ್​ಗಳಿಂದ ಉತ್ತಮ ಪೈಪೋಟಿ ನಿರೀಕ್ಷಿಸಿದ್ದೆವು. ಆದರೆ ನಮ್ಮ ಫೀಲ್ಡರ್​ಗಳು ಮಾಡಿದ ತಪ್ಪಿನಿಂದಾಗಿ ಸೋಲನುಭವಿಸಬೇಕಾಯಿತು. ನಾವು ಕೈ ಬಿಟ್ಟ ಕೆಲ ಕ್ಯಾಚ್​ಗಳು ಇಡೀ ಪಂದ್ಯದ ಮೇಲೆ ಪರಿಣಾಮ ಬೀರಿತು. ಕೈಚೆಲ್ಲಿದ ಕ್ಯಾಚ್​ಗಳಿಂದಾಗಿಯೇ ಚೆನ್ನೈ ಸೂಪರ್ ಕಿಂಗ್ಸ್ ಸೋಲನುಭವಿಸಬೇಕಾಯಿತು ಎಂದು ಮಹೇಂದ್ರ ಸಿಂಗ್ ಧೋನಿ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: 11 ಫೋರ್, 3 ಸಿಕ್ಸ್: ಕೊನೆಗೂ ಶತಕ ಪೂರೈಸಿದ ಗ್ಲೆನ್ ಮ್ಯಾಕ್ಸ್​ವೆಲ್

ಒಟ್ಟಿನಲ್ಲಿ ಈವರೆಗೆ 10 ಪಂದ್ಯಗಳನ್ನಾಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು 8 ಮ್ಯಾಚ್​ಗಳಲ್ಲಿ ಸೋಲನುಭವಿಸುವ ಮೂಲಕ ಐಪಿಎಲ್ ಸೀಸನ್-18ರ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ. ಇದರೊಂದಿಗೆ ಈ ಬಾರಿ ಟ್ರೋಫಿ ಗೆಲ್ಲಬೇಕೆಂಬ ಸಿಎಸ್​ಕೆ ತಂಡದ ಕನಸು ಕೂಡ ಕಮರಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ