AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ನಾವು ಅಂದುಕೊಂಡಂತೆ ಏನೂ ನಡೆದಿಲ್ಲ, ಅದಕ್ಕೆ ಗೆಲ್ತಿರಲಿಲ್ಲ: ಧೋನಿ

IPL 2025 CSK vs LSG: ಚೆನ್ನೈ ಸೂಪರ್ ಕಿಂಗ್ಸ್ ತಂಡವು ಕೊನೆಗೂ ಗೆಲುವಿನ ಲಯಕ್ಕೆ ಮರಳಿದೆ. ಏಕಾನ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 166 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ 19.3 ಓವರ್​ಗಳಲ್ಲಿ ಗೆಲುವಿನ ಗುರಿ ಮುಟ್ಟಿದೆ.

IPL 2025: ನಾವು ಅಂದುಕೊಂಡಂತೆ ಏನೂ ನಡೆದಿಲ್ಲ, ಅದಕ್ಕೆ ಗೆಲ್ತಿರಲಿಲ್ಲ: ಧೋನಿ
Ms Dhoni
ಝಾಹಿರ್ ಯೂಸುಫ್
|

Updated on: Apr 15, 2025 | 9:04 AM

Share

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 30ನೇ ಪಂದ್ಯದ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವು ಗೆಲುವಿನ ಲಯಕ್ಕೆ ಮರಳಿದೆ. ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್​ಕೆ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ (MS Dhoni) ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡವು ರಿಷಭ್ ಪಂತ್ (63) ಅರ್ಧಶತಕದ ನೆರವಿನೊಂದಿಗೆ 20 ಓವರ್​ಗಳಲ್ಲಿ 166 ರನ್ ಕಲೆಹಾಕಿತು.

167 ರನ್​ಗಳ ಸ್ಪರ್ಧಾತ್ಮಕ ಗುರಿ ಪಡೆದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 19.3 ಓವರ್​ಗಳಲ್ಲಿ 166 ರನ್ ಬಾರಿಸಿ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. ವಿಶೇಷ ಎಂದರೆ ಇದು ಈ ಸೀಸನ್​ನಲ್ಲಿನ ಸಿಎಸ್​ಕೆ ತಂಡ 2ನೇ ಗೆಲುವು. ಇದಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಸತತ 5 ಪಂದ್ಯಗಳಲ್ಲಿ ಸೋಲನುಭವಿಸಿತ್ತು.

ಈ ಗೆಲುವಿನ ಬಳಿಕ ಮಾತನಾಡಿದ ಮಹೇಂದ್ರ ಸಿಂಗ್ ಧೋನಿ, ಈ ಗೆಲುವು ಖುಷಿ ಕೊಟ್ಟಿದೆ. ದುರದೃಷ್ಟವಶಾತ್ ನಾವು ಕೊನೆಯ ಪಂದ್ಯವನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ಆದರೆ ಈ ಗೆಲುವು ನಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. ಇದು ಕಠಿಣ ಪಂದ್ಯವಾಗಿತ್ತು ಮತ್ತು ಗೆದ್ದಿದ್ದಕ್ಕೆ ನನಗೆ ಸಂತೋಷವಾಗಿದೆ. ಅಲ್ಲದೆ ಈ ಜಯದೊಂದಿಗೆ ತಂಡವು ಲಯವನ್ನು ಮರಳುತ್ತದೆ ಎಂಬ ವಿಶ್ವಾಸವಿದೆ ಎಂದರು.

ಇದನ್ನೂ ಓದಿ
Image
PSL 2025: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ RCB ಮಾಜಿ ಆಟಗಾರರು
Image
ಪ್ರಿಯಾಂಶ್ ಆರ್ಯನ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್
Image
ಕ್ರಿಸ್​ ಗೇಲ್ ದಾಖಲೆ ಜಸ್ಟ್ ಮಿಸ್: ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ
Image
ಉಲ್ಟಾ ಹೊಡೆದ RCB ಕಪ್ ಗೆಲ್ಲಬಾರದು ಎಂದಿದ್ದ ಅಂಬಾಟಿ ರಾಯುಡು

ಇನ್ನು ಈ ಸೀಸನ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ತನ್ನ ತವರು ಮೈದಾನವಾದ ಚೆಪಾಕ್ ಕ್ರೀಡಾಂಗಣದಲ್ಲಿ ಮೂರು ಸೋಲುಗಳನ್ನು ಅನುಭವಿಸಿದೆ. ತಂಡದ ಬ್ಯಾಟ್ಸ್‌ಮನ್‌ಗಳು ಮತ್ತು ಬೌಲರ್‌ಗಳು ತವರಿನ ಉತ್ತಮ ಪ್ರದರ್ಶನ ನಿಡಲು ಪರದಾಡುತ್ತಿದ್ದಾರೆ.

ಈ ಬಗ್ಗೆ ಕೇಳಿದಾಗ, ಹಿಂದಿನ ಪಂದ್ಯಗಳಲ್ಲಿ, ನಾವು ಮೊದಲ ಆರು ಓವರ್‌ಗಳಲ್ಲಿ ಬೌಲಿಂಗ್ ಮಾಡುವಾಗ ಕಷ್ಟಪಟ್ಟ್ಟಿರುವುದು ನಿಜ. ಆದರೆ ಮಧ್ಯದ ಓವರ್‌ಗಳಲ್ಲಿ ಮತ್ತೆ ಕಂಬ್ಯಾಕ್ ಮಾಡಿದ್ದೆವು. ಬ್ಯಾಟರ್​ಗಳು ಸಹ, ನಾವು ಬಯಸಿದ ಆರಂಭವನ್ನು ಪಡೆಯುತ್ತಿರಲಿಲ್ಲ. ನಾವು ಅಂದುಕೊಂಡಂತೆ ಏನೂ ಸಹ ನಡೆಯುತ್ತಿರಲಿಲ್ಲ. ಅದಕ್ಕೆ ಗೆಲುವು ನಮ್ಮದಾಗಿರಲಿಲ್ಲ. ಬಹುಶಃ ಚೆನ್ನೈ ಪಿಚ್​ ಇದಕ್ಕೆ ಕಾರಣ ಇರಬಹುದು. ಭವಿಷ್ಯದಲ್ಲಿ ನಾವು ಉತ್ತಮ ವಿಕೆಟ್‌ಗಳಲ್ಲಿ ಉತ್ತಮ ಪ್ರದರ್ಶನ ನೀಡುತ್ತೇವೆ ಎಂಬ ನಂಬಿಕೆಯಿದೆ ಎಂದು ಧೋನಿ ಹೇಳಿದ್ದಾರೆ.

ಇನ್ನು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ಆಡುವ ಬಳಗದಲ್ಲಿ ಕಾಣಿಸಿಕೊಂಡಿರಲಿಲ್ಲ. ಈ ಬಗ್ಗೆ ಸ್ಪಷ್ಟನೆ ನೀಡಿದ ಧೋನಿ, ಮೊದಲ ಆರು ಓವರ್‌ಗಳಲ್ಲಿ ನಮಗೆ ಹೆಚ್ಚಿನ ಬೌಲರ್‌ಗಳು ಬೇಕಾಗಿದ್ದರು. ಆದರೆ ಪವರ್​ಪ್ಲೇನಲ್ಲಿ ಅಶ್ವಿನ್ ಅವರಿಂದ 2 ಓವರ್​ಗಳನ್ನು ಬೌಲಿಂಗ್ ಮಾಡಿಸುವುದರಿಂದ ಅವರು ಒತ್ತಡಕ್ಕೆ ಒಳಗಾಗುತ್ತಿದ್ದರು. ಇದಕ್ಕಾಗಿಯೇ ನಾವು ಬೌಲಿಂಗ್‌ನಲ್ಲಿ ಬದಲಾವಣೆಗಳನ್ನು ಮಾಡಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: ಮೋಸದಾಟದ ಡೌಟ್… ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್

ಇದೀಗ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಉತ್ತಮ ಗೆಲುವು ದಾಖಲಿಸಿರುವ ಕಾರಣ, ಮುಂದಿನ ಪಂದ್ಯಗಳಲ್ಲೂ ಸಿಎಸ್​ಕೆ ಕಡೆಯಿಂದ ಉತ್ತಮ ಪ್ರದರ್ಶನ ನಿರೀಕ್ಷಿಸಬಹುದು. ಈ ಮೂಲಕ ಉಳಿದ ಪಂದ್ಯಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗೆಲುವು ದಾಖಲಿಸುವ ವಿಶ್ವಾಸವಿದೆ ಎಂದು ಮಹೇಂದ್ರ ಸಿಂಗ್ ಧೋನಿ ಹೇಳಿದ್ದಾರೆ.

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​