AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs CSK: ಚಿನ್ನಸ್ವಾಮಿಯಲ್ಲಿ ಆರ್​ಸಿಬಿ ಡ್ರೆಸ್ಸಿಂಗ್ ರೂಮ್​ಗೆ ದಿಢೀರ್ ಎಂಟ್ರಿ ಕೊಟ್ಟ ಎಂಎಸ್ ಧೋನಿ: ವಿಡಿಯೋ

MS Dhoni in RCB Dressing Room Video: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಈ ಮ್ಯಾಚ್​ಗಾಗಿ ಈಗಾಗಲೇ ಸಿಎಸ್​ಕೆ ಸಿಲಿಕಾನ್ ಸಿಟಿಗೆ ಬಂದಿದ್ದು, ಅಭ್ಯಾಸ ಶುರುಮಾಡಿಕೊಂಡಿದೆ. ಇದರ ನಡುವೆ ಚಿನ್ನಸ್ವಾಮಿಯಲ್ಲಿ ಎಂಎಸ್ ಧೋನಿ ದಿಢೀರ್ ಆರ್​ಸಿಬಿ ಡ್ರೆಸ್ಸಿಂಗ್ ರೂಮ್​ಗೆ ಬಂದಿದ್ದಾರೆ.

RCB vs CSK: ಚಿನ್ನಸ್ವಾಮಿಯಲ್ಲಿ ಆರ್​ಸಿಬಿ ಡ್ರೆಸ್ಸಿಂಗ್ ರೂಮ್​ಗೆ ದಿಢೀರ್ ಎಂಟ್ರಿ ಕೊಟ್ಟ ಎಂಎಸ್ ಧೋನಿ: ವಿಡಿಯೋ
MS Dhoni rcb dressing room
Vinay Bhat
|

Updated on: May 17, 2024 | 7:32 AM

Share

ಐಪಿಎಲ್ 2024 ರಲ್ಲಿ ಶನಿವಾರ (ಮೇ 18 ರಂದು) ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ (RCB vs CSK) ನಡುವೆ ದೊಡ್ಡ ಪಂದ್ಯ ನಡೆಯಲಿದೆ. ಎರಡೂ ತಂಡಗಳು ಪ್ಲೇ ಆಫ್‌ ರೇಸ್‌ನಲ್ಲಿದ್ದು, ಈ ಪಂದ್ಯವನ್ನು ನಾಕೌಟ್‌ ಎಂದೇ ಪರಿಗಣಿಸಲಾಗುತ್ತಿದೆ. ಇದಲ್ಲದೆ, ಸಿಎಸ್‌ಕೆ ಮತ್ತು ಆರ್‌ಸಿಬಿ ನಡುವಿನ ಪೈಪೋಟಿಯ ಜೊತೆಗೆ, ಭಾರತದ ಇಬ್ಬರು ದೊಡ್ಡ ಕ್ರಿಕೆಟ್ ತಾರೆಗಳಾದ ಮಹೇಂದ್ರ ಸಿಂಗ್ ಧೋನಿ ಮತ್ತು ವಿರಾಟ್ ಕೊಹ್ಲಿ ಕೂಡ ಮುಖಾಮುಖಿಯಾಗಲಿದ್ದಾರೆ. ಈ ಪಂದ್ಯಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಆದರೆ, ಪಂದ್ಯಕ್ಕೂ ಮುನ್ನ ಧೋನಿ ಬೆಂಗಳೂರಿನ ಡ್ರೆಸ್ಸಿಂಗ್ ರೂಮ್‌ನಲ್ಲಿ ಗಮನ ಸೆಳೆದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಆರ್​ಸಿಬಿ ವಿರುದ್ಧದ ಪಂದ್ಯಕ್ಕಾಗಿ ಧೋನಿ ಸೇರಿದಂತೆ ಇಡೀ ಸಿಎಸ್‌ಕೆ ತಂಡ ಬೆಂಗಳೂರಿಗೆ ಆಗಮಿಸಿದೆ. ಇದೀಗ ಆರ್​ಸಿಬಿ ಧೋನಿ ಸ್ವಾಗತದ ವಿಡಿಯೋವನ್ನು ಹಂಚಿಕೊಂಡಿದೆ. ಇದರಲ್ಲಿ ಮಾಜಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಡ್ರೆಸ್ಸಿಂಗ್ ರೂಮ್​ಗೆ ಬಂದು ಚಹಾ ಕೇಳುತ್ತಿರುವುದನ್ನು ಕಾಣಬಹುದು. ಧೋನಿಯ ಚಹಾದ ಮೇಲಿನ ಈ ಪ್ರೀತಿ ಮತ್ತು ಸರಳತೆಯನ್ನು ನೋಡಿ, ಡ್ರೆಸ್ಸಿಂಗ್ ರೂಮ್​ನಲ್ಲಿದ್ದವರು ಮನಸೋತರು. ಆರ್‌ಸಿಬಿ ಸಿಬ್ಬಂದಿ ಅವರಿಗೆ ಒಂದು ಕಪ್ ಚಹಾ ನೀಡಿದರು.

ಆರ್​ಸಿಬಿ- ಸಿಎಸ್​ಕೆ ಪಂದ್ಯದ ಟಿಕೆಟ್ ಬೇಕಾ? ಎಚ್ಚರಿಕೆ..!; 3 ಲಕ್ಷ ಕಳೆದುಕೊಂಡ ಬೆಂಗಳೂರಿನ ಅಭಿಮಾನಿ

ಮಹೇಂದ್ರ ಸಿಂಗ್ ಧೋನಿ ಚಹಾ ಪ್ರೇಮಿ ಎಂಬುದು ಅವರ ಅಭಿಮಾನಿಗಳಿಗೆ ತಿಳಿದಿರಬಹುದು. ಅವರು ಈ ಹಿಂದೆ ಹಲವು ಸಂದರ್ಶನಗಳಲ್ಲಿ ಚಹಾದ ಮೇಲಿನ ಪ್ರೀತಿಯನ್ನು ಪ್ರಸ್ತಾಪಿಸಿದ್ದಾರೆ. ಧೋನಿ ಅವರ ಈ ವಿಡಿಯೋ ನೋಡಿದ ನಂತರ ಕೊಹ್ಲಿ ಮತ್ತು ಧೋನಿ ಅಭಿಮಾನಿಗಳು ತುಂಬಾ ಖುಷಿಪಟ್ಟಿದ್ದಾರೆ. ಮತ್ತೊಮ್ಮೆ ಧೋನಿ ಮತ್ತು ವಿರಾಟ್ ಅವರನ್ನು ಮೈದಾನದಲ್ಲಿ ನೋಡಲು ಕಾಯುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

ಆರ್​ಸಿಬಿ ಡ್ರೆಸ್ಸಿಂಗ್ ರೂಮ್​ನಲ್ಲಿ ಧೋನಿ- ವಿಡಿಯೋ:

ಮುಂದುವರೆಯಲು ದ್ರಾವಿಡ್ ನಕಾರ; ಲಕ್ಷ್ಮಣ್​ಗೂ ಬೇಕಿಲ್ಲ ಮುಖ್ಯ ಕೋಚ್ ಹುದ್ದೆ..!

ಆರ್​ಸಿಬಿ ತಂಡವು ಈ ಮಹತ್ವದ ಪಂದ್ಯವನ್ನು ಗೆದ್ದು ಪ್ಲೇ ಆಫ್‌ಗೆ ಪ್ರವೇಶಿಸಲು ಎದುರು ನೋಡುತ್ತಿದೆ. ಉತ್ತಮ ಫಾರ್ಮ್‌ನಲ್ಲಿರುವ ವಿರಾಟ್ ಕೊಹ್ಲಿ ಮೇಲೆ ಎಲ್ಲರ ನಿರೀಕ್ಷೆಯಿದ್ದು, 661 ರನ್ ಗಳಿಸಿದ್ದಾರೆ. ಆದರೆ, ಈ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಕೂಡ ಇದೆ. ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ನಿರಂತರವಾಗಿ ಮಳೆ ಆಗುತ್ತಿದೆ. ಪಂದ್ಯದ ದಿನ ಕೂಡ ಮಧ್ಯಾಹ್ನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಸಂಜೆ, ತಾಪಮಾನವು ಸುಮಾರು 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಶೇ. 100 ರಷ್ಟು ಮೋಡ ಆವರಿಸಲಿದೆ. ಮಳೆಯ ಸಂಭವನೀಯತೆಯು ಶೇಕಡಾ 47 ರಷ್ಟಿರಲಿದೆ. ರಾತ್ರಿ ವೇಳೆಯೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳು ಶೇಕಡಾ 60 ಕ್ಕಿಂತ ಹೆಚ್ಚಿದೆ. ಅಂದರೆ ಆರ್​ಸಿಬಿ-ಸಿಎಸ್​ಕೆ ನಡುವಣ ಪಂದ್ಯಕ್ಕೆ ಮಳೆ ಅಡಚಣೆಯನ್ನು ಉಂಟು ಮಾಡುವುದು ಬಹುತೇಕ ಖಚಿತ ಎನ್ನಬಹುದು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ