AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ಟ್ರೋಫಿ ಗೆದ್ದ ಖುಷಿಯಲ್ಲಿ ಧೋನಿ ಮಡದಿ ಸಾಕ್ಷಿ ಮೈದಾನಕ್ಕೆ ಬಂದು ಮಾಡಿದ್ದೇನು ನೋಡಿ

MS Dhoni Hugging Sakshi, Daughter Ziva: ಐಪಿಎಲ್ 2021 ಫೈನಲ್​​ನಲ್ಲಿ ಕೆಕೆಆರ್ ವಿರುದ್ಧ ಸಿಎಸ್​ಕೆ 27 ರನ್​ಗಳ ಜಯ ಸಾಧಿಸಿತು. ಪಂದ್ಯ ಮುಗಿದ ಬಳಿಕ ಎಂ. ಎಸ್ ಧೋನಿ ಹೆಂಡತಿ ಸಾಕ್ಷಿ ಮಗಳು ಝೀವಾಳೊಂದಿಗೆ ಮೈದಾನಕ್ಕೆ ಕಾಲಿಟ್ಟು ಧೋನಿಯನ್ನು ತಬ್ಬಿಕೊಂಡು ಸಂತಸ ಪಟ್ಟರು.

MS Dhoni: ಟ್ರೋಫಿ ಗೆದ್ದ ಖುಷಿಯಲ್ಲಿ ಧೋನಿ ಮಡದಿ ಸಾಕ್ಷಿ ಮೈದಾನಕ್ಕೆ ಬಂದು ಮಾಡಿದ್ದೇನು ನೋಡಿ
MSS Dhoni Wife Sakshi Hugging
TV9 Web
| Edited By: |

Updated on: Oct 16, 2021 | 11:19 AM

Share

ಇಂಡಿಯನ್ ಪ್ರೀಮಿಯರ್ ಲೀಗ್ 2021ರ (Indian Premier League) ಚಾಂಪಿಯನ್ ಆಗಿ ಮಹೇಂದ್ರ ಸಿಂಗ್ ಧೋನಿ (MS Dhoni) ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ಹೊರಹೊಮ್ಮಿದೆ. ಫಾಫ್ ಡುಪ್ಲೆಸಿಸ್ (Faf du Plessis) ಅವರ ಅಮೋಘ ಬ್ಯಾಟಿಂಗ್ ಮತ್ತು ಸಿಎಸ್​ಕೆ ಬೌಲರ್​ಗಳ ಸಂಘಟಿತ ಹೋರಾಟದ ನೆರವಿನಿಂದ ಐಪಿಎಲ್ 2021 ಫೈನಲ್ (IPL 2021 Final) ಕೂಟದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (CSK vs KKR) ವಿರುದ್ಧ 27 ರನ್​ಗಳಿಂದ ಗೆದ್ದು ನಾಲ್ಕನೇ ಬಾರಿ ಪ್ರಶಸ್ತಿಗೆ ಮುತ್ತಿಕ್ಕಿದೆ. ಈ ಮೂಲಕ ಕಳೆದ ಬಾರಿ ನೀಡಿದ್ದ ಹೀನಾಯ ಪ್ರದರ್ಶನಕ್ಕೆ ಧೋನಿ ಟ್ರೋಫಿ ಮೂಲಕ ಖಡಕ್ ಉತ್ತರ ಕೊಟ್ಟಿದ್ದಾರೆ. ಸಿಎಸ್​ಕೆ ಗೆಲುವಿನ ನಗೆ ಬೀರುತ್ತಿದ್ದಂತೆ ಸ್ಟೇಡಿಯಂನಲ್ಲಿ, ಮೈದಾನದಲ್ಲಿ ಸಂಭ್ರಮ ಮನೆ ಮಾಡಿತ್ತು. ಅದರಲ್ಲೂ ನಾಯಕ ಎಂ ಎಸ್ ಧೋನಿ ಹೆಂಡತಿ ಸಾಕ್ಷಿ (Sakshi Dhoni) ಅವರು ಧೋನಿಯನ್ನು ತಬ್ಬಿಕೊಂಡು ಸಂಭ್ರಮ ಹಂಚಿಕೊಂಡರು.

ಹೌದು, ಗೆಲ್ಲಲು 193 ರನ್​ಗಳ ಬೃಹತ್ ಮೊತ್ತದ ಗುರಿಗೆ ಪ್ರತಿಯಾಗಿ ಕೋಲ್ಕತಾ ನೈಟ್ ರೈಡರ್ಸ್ ತಂಡದ ಇನ್ನಿಂಗ್ಸ್ 165 ರನ್​ಗೆ ಅಂತ್ಯಗೊಂಡು ಸಿಎಸ್​ಕೆ 27 ರನ್​ಗಳ ಜಯ ಸಾಧಿಸುತ್ತಿದ್ದಂತೆ ಡಗೌಟ್​ನಲ್ಲಿದ್ದ ಸಿಎಸ್​ಕೆ ತಂಡದ ಆಟಗಾರರು ಓಡಿ ಬಂದರು. ಪಂದ್ಯ ಮುಗಿದ ಬಳಿಕ ಟ್ರೋಫಿ ಗೆದ್ದ ಖುಷಿಯಲ್ಲಿ ಸಾಕ್ಷಿ ಧೋನಿ ಅವರು ಮಗಳು ಝೀವಾಳೊಂದಿಗೆ ಮೈದಾನಕ್ಕೆ ಕಾಲಿಟ್ಟು ಧೋನಿಯನ್ನು ತಬ್ಬಿಕೊಂಡು ಸಂತಸ ಪಟ್ಟರು. ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದ್ದು, ಇದೊಂದು ಅತ್ಯುತ್ತಮ ಫ್ಯಾಮಿಲಿ ಫೋಟೋ ಎಂದು ನೆಟ್ಟಿಗರು ಕೊಂಡಾಡಿದ್ದಾರೆ.

ಇನ್ನು ಪಂದ್ಯ ಮುಗಿದ ಬಳಿಕ ಧೋನಿ ಅನೇಕ ವಿಚಾರವನ್ನು ಹಂಚಿಕೊಂಡು ಅಭಿಮಾನಿಗಳಿಗೆ ಮತ್ತಷ್ಟು ಖುಷಿ ನೀಡಿದ್ದಾರೆ. ಮೊದಲಿಗೆ ನಿಮ್ಮ ಗೆಲುವಿನ ಬಗ್ಗೆ ಹೇಳಿ ಎಂಬ ಕೂಡಲೇ ಧೋನಿ ಆ ಬಗ್ಗೆ ಮಾತನಾಡದೆ ಕೆಕೆಆರ್ ತಂಡವನ್ನು ಹಾಡಿಹೊಗಳಿದರು. “ನಾನು ನಮ್ಮ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬಗ್ಗೆ ಮಾತನಾಡುವ ಮುನ್ನ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಬಗ್ಗೆ ಮಾತನಾಡುವುದು ಮುಖ್ಯ. ಯಾಕಂದ್ರೆ ಮೊದಲ ಚರಣದಲ್ಲಿ ಅವರಿದ್ದ ಸ್ಥಾನ ಮತ್ತು ಎರಡನೇ ಚರಣದಲ್ಲಿ ಅವರು ಮಾಡಿದ ಕಮ್​ಬ್ಯಾಕ್​ಗೆ ತಲೆಬಾಗಲೇಬೇಕು. ನನಗನ್ನಿಸುವ ಪ್ರಕಾರ ಈ ವರ್ಷ ಐಪಿಎಲ್ ಪ್ರಶಸ್ತಿ ಗೆಲ್ಲಲು ಅರ್ಹವಾದ ತಂಡ ಎಂದರೆ ಅದು ಕೆಕೆಆರ್” ಎಂದು ಧೋನಿ ನುಡಿದರು.

ಇದೇವೇಳೆ ನಿರೂಪಕ ಹರ್ಷ ಭೋಗ್ಲೆ ಅವರು ಧೋನಿಗೆ ‘ನೀವು ಬಿಟ್ಟು ಹೋದ ಪರಂಪರೆಯ ಬಗ್ಗೆ ಬಹಳ ಹೆಮ್ಮೆ ಪಡುತ್ತೀರಿ” ಎಂದರು. ಇದಕ್ಕೆ ಧೋನಿ,” ಇನ್ನೂ ಎನನ್ನೂ ಬಿಟ್ಟು ನಡೆದಿಲ್ಲ” ಎಂದು ನಕ್ಕರು. ಈ ಮೂಲಕ ಧೋನಿ ಈ ಸೀಸನ್ ಬಳಿಕ ವಿದಾಯ ಹೇಳುತ್ತಾರೆ ಎನ್ನುವ ಲೆಕ್ಕಾಚಾರಗಳನ್ನು ಧೋನಿ ತಮ್ಮದೇ ಸ್ಟೈಲ್ ನಲ್ಲಿ ಬದಿಗೆ ಸರಿಸಿದ್ದಾರೆ.

ಇದರ ನಡುವೆ ಧೋನಿ ಅವರು ಸಿಎಸ್​ಕೆ ಪರವಾಗಿ ಆಡುವ ಬಗ್ಗೆ ಇನ್ನೂ ಖಚಿತ ಪಡಿಸಿಲ್ಲ. “ಮುಂದಿನ ಆವೃತ್ತಿಗೆ ಇನ್ನೆರಡು ತಂಡಗಳು ಸೇರ್ಪಡೆಯಾಗುವ ಕಾರಣ ಏನನ್ನೂ ಹೇಳಲಾಗದು” ಎಂದು ಅಭಿಮಾನಿಗಳ ತಲೆಗೆ ಹುಳಬಿಟ್ಟು ಕಾದುನೋಡುವಂತೆ ಮಾಡಿದ್ದಾರೆ.

Avi Barot: ಶಾಕಿಂಗ್: ಭಾರತ ಅಂಡರ್-19 ತಂಡದ ಮಾಜಿ ನಾಯಕ, 29 ವರ್ಷದ ಸ್ಟಾರ್ ಬ್ಯಾಟ್ಸ್​ಮನ್ ನಿಧನ

Team India Head Coach: ಟೀಮ್ ಇಂಡಿಯಾ ಪೂರ್ಣಾವಧಿ ಕೋಚ್ ಆಗಲು ರಾಹುಲ್ ದ್ರಾವಿಡ್ ಒಪ್ಪಿಗೆ, 10 ಕೋಟಿ ಸಂಭಾವನೆ: ವರದಿ

(MS Dhoni wife Sakshi and daughter Ziva hugging photo viral After CSK vs KKR IPL 2021 Final Match)

Follow Us
Web contact
Web contact

TV9 Kannada

Read More
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ