AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy 2024: 42ನೇ ಬಾರಿ ರಣಜಿ ಕಿರೀಟ ಮುಡಿಗೇರಿಸಿಕೊಂಡ ಮುಂಬೈ

Ranji Trophy 2024: 1934-35 ರಲ್ಲಿ ಮೊದಲ ಬಾರಿಗೆ ರಣಜಿ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದ್ದ ಮುಂಬೈ ತಂಡವು ಕೊನೆಯ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದು 2015-16 ರಲ್ಲಿ. ಇದೀಗ ಏಳು ವರ್ಷಗಳ ಬಳಿಕ ಮತ್ತೊಮ್ಮೆ ಗತವೈಭದ ರಣಜಿ ಟ್ರೋಫಿಯನ್ನು ಗೆಲ್ಲುವಲ್ಲಿ ಮುಂಬೈ ತಂಡ ಯಶಸ್ವಿಯಾಗಿದೆ.

Ranji Trophy 2024: 42ನೇ ಬಾರಿ ರಣಜಿ ಕಿರೀಟ ಮುಡಿಗೇರಿಸಿಕೊಂಡ ಮುಂಬೈ
Mumbai
TV9 Web
| Edited By: |

Updated on:Mar 14, 2024 | 2:02 PM

Share

ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ರಣಜಿ ಟ್ರೋಫಿ (Ranji Trophy 2024) ಫೈನಲ್ ಪಂದ್ಯದಲ್ಲಿ ವಿದರ್ಭ ವಿರುದ್ಧ ಮುಂಬೈ 169 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಚಾಂಪಿಯನ್​ ಪಟ್ಟದೊಂದಿಗೆ ಮುಂಬೈ ತಂಡವು 42ನೇ ಬಾರಿ ರಣಜಿ ಟ್ರೋಫಿ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ವಿದರ್ಭ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ತಂಡವು ಮೊದಲ ಇನಿಂಗ್ಸ್​ನಲ್ಲಿ 224 ರನ್​ಗಳಿಸಿ ಆಲೌಟ್ ಆಯಿತು.

ಇದರ ಬೆನ್ನಲ್ಲೇ ಇನಿಂಗ್ಸ್ ಆರಂಭಿಸಿದ ವಿದರ್ಭ ತಂಡವು ಕೇವಲ 105 ರನ್​ಗಳಿಗೆ ಸರ್ವಪತನ ಕಂಡಿತು. ಮುಂಬೈ ಪರ ಶಮ್ಸ್ ಮುಲಾನಿ, ತನುಷ್ ಕೋಟ್ಯಾನ್ ಮತ್ತು ಧವಳ್ ಕುಲ್ಕರ್ಣಿ ತಲಾ 3 ವಿಕೆಟ್ ಕಬಳಿಸಿ ಮಿಂಚಿದರು.

ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಮುಂಬೈ ಪರ ಯುವ ದಾಂಡಿಗ ಮುಶೀರ್ ಖಾನ್ (136) ಶತಕ ಬಾರಿಸಿದರೆ, ಶ್ರೇಯಸ್ ಅಯ್ಯರ್ 95 ರನ್​ಗಳ ಕೊಡುಗೆ ನೀಡಿದರು. ಹಾಗೆಯೇ ಶಮ್ಸ್ ಮುಲಾನಿ 50 ರನ್ ಬಾರಿಸಿ ಮಿಂಚಿದರು. ಈ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಮುಂಬೈ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ 418 ರನ್ ಕಲೆಹಾಕಿತು.

ಮೊದಲ ಇನಿಂಗ್ಸ್ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​ನಲ್ಲಿ 538 ರನ್​ಗಳ ಗುರಿ ಪಡೆದಿರುವ ವಿದರ್ಭ ತಂಡಕ್ಕೆ ಈ ಬಾರಿ ಕರುಣ್ ನಾಯರ್ ಆಸರೆಯಾದರು. 74 ರನ್​ಗಳನ್ನು ಬಾರಿಸುವ ಮೂಲಕ ಕರುಣ್ ನಾಲ್ಕನೇ ದಿನದಾಟದ ವೇಳೆ ವಿದರ್ಭ ತಂಡದ ಸ್ಕೋರ್​ ಅನ್ನು 200 ರ ಗಡಿದಾಟಿಸಿ ವಿಕೆಟ್ ಒಪ್ಪಿಸಿದರು.

ಅದರಂತೆ ನಾಲ್ಕನೇ ದಿನದಾಟದ ಅಂತ್ಯದ ವೇಳೆಗೆ ವಿದರ್ಭ ತಂಡವು 5 ವಿಕೆಟ್ ಕಳೆದುಕೊಂಡು 248 ರನ್ ಕಲೆಹಾಕಿದ್ದ ವಿದರ್ಭ ಪರ ಐದನೇ ದಿದನಾಟದಲ್ಲಿ ಅಕ್ಷಯ್ ವಾಡ್ಕರ್ (102) ಹಾಗೂ ಹರ್ಷ್ ದುಬೆ (65) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಆದರೆ ಇವರಿಬ್ಬರ ವಿಕೆಟ್ ಸಿಗುತ್ತಿದ್ದಂತೆ ಪಂದ್ಯದ ಮೇಲೆ ಹಿಡಿತ ಸಾಧಿಸಿದ ಮುಂಬೈ ಬೌಲರ್​ಗಳು ವಿದರ್ಭ ತಂಡವನ್ನು 368 ರನ್​ಗಳಿಗೆ ಆಲೌಟ್ ಮಾಡಿದರು.

ಈ ಮೂಲಕ ಮುಂಬೈ ತಂಡವು 169 ರನ್​ಗಳ ಭರ್ಜರಿ ಜಯ ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಅಲ್ಲದೆ ದೇಶೀಯ ಅಂಗಳದಲ್ಲಿ 42ನೇ ಬಾರಿ ರಣಜಿ ಟ್ರೋಫಿ ಮುಡಿಗೇರಿಸಿಕೊಂಡ ವಿಶೇಷ ಸಾಧನೆ ಮಾಡಿದೆ.

ಮುಂಬೈ ಪ್ಲೇಯಿಂಗ್ 11: ಪೃಥ್ವಿ ಶಾ , ಭೂಪೇನ್ ಲಾಲ್ವಾನಿ , ಮುಶೀರ್ ಖಾನ್ , ಅಜಿಂಕ್ಯ ರಹಾನೆ (ನಾಯಕ) , ಶ್ರೇಯಸ್ ಅಯ್ಯರ್ , ಹಾರ್ದಿಕ್ ತಮೋರ್ (ವಿಕೆಟ್ ಕೀಪರ್) , ಶಮ್ಸ್ ಮುಲಾನಿ , ಶಾರ್ದೂಲ್ ಠಾಕೂರ್ , ತನುಷ್ ಕೋಟ್ಯಾನ್ , ತುಷಾರ್ ದೇಶಪಾಂಡೆ , ಧವಲ್ ಕುಲಕರ್ಣಿ.

ಇದನ್ನೂ ಓದಿ: Musheer Khan: ಭರ್ಜರಿ ಶತಕದೊಂದಿಗೆ ಸಚಿನ್ ದಾಖಲೆ ಮುರಿದ ಮುಶೀರ್ ಖಾನ್

ವಿದರ್ಭ ಪ್ಲೇಯಿಂಗ್ 11: ಅಥರ್ವ ತೈಡೆ , ಧ್ರುವ ಶೋರೆ , ಅಮನ್ ಮೊಖಡೆ , ಕರುಣ್ ನಾಯರ್ , ಯಶ್ ರಾಥೋಡ್ , ಅಕ್ಷಯ್ ವಾಡ್ಕರ್ (ನಾಯಕ) , ಆದಿತ್ಯ ಸರ್ವತೆ , ಉಮೇಶ್ ಯಾದವ್ , ಹರ್ಷ ದುಬೆ , ಯಶ್ ಠಾಕೂರ್ , ಆದಿತ್ಯ ಠಾಕ್ರೆ.

Published On - 1:54 pm, Thu, 14 March 24

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್