AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿಯಿಡೀ ಪಾರ್ಟಿ, ಬೆಳಿಗ್ಗೆ ನೋ ಡ್ಯೂಟಿ: ಪೃಥ್ವಿ ಶಾ ಮೋಜು ಮಸ್ತಿ ವಿಚಾರ ಬಹಿರಂಗ

Prithvi Shaw: 25 ವರ್ಷದ ಪೃಥ್ವಿ ಶಾ ಟೀಮ್ ಇಂಡಿಯಾ ಪರ 5 ಟೆಸ್ಟ್, 6 ಏಕದಿನ ಹಾಗೂ 1 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಒಟ್ಟು 528 ರನ್​ಗಳನ್ನು ಕಲೆಹಾಕಿದ್ದಾರೆ. ಹಾಗೆಯೇ ಐಪಿಎಲ್​ನಲ್ಲಿ 79 ಪಂದ್ಯಗಳಲ್ಲಿ ಕಾಣಿಸಿಕೊಂಡಿರುವ ಪೃಥ್ವಿ ಶಾ ಅವರನ್ನು ಈ ಬಾರಿ ಯಾವುದೇ ಫ್ರಾಂಚೈಸಿ ಖರೀದಿಸಿಲ್ಲ ಎಂಬುದು ವಿಶೇಷ.

ರಾತ್ರಿಯಿಡೀ ಪಾರ್ಟಿ, ಬೆಳಿಗ್ಗೆ ನೋ ಡ್ಯೂಟಿ: ಪೃಥ್ವಿ ಶಾ ಮೋಜು ಮಸ್ತಿ ವಿಚಾರ ಬಹಿರಂಗ
Prithvi Shaw
ಝಾಹಿರ್ ಯೂಸುಫ್
|

Updated on: Dec 21, 2024 | 11:54 AM

Share

ವಿಜಯ ಹಝಾರೆ ಟೂರ್ನಿನಿಂದ ಪೃಥ್ವಿ ಶಾ ಅವರನ್ನು ಕೈ ಬಿಡಲಾಗಿದೆ. ಇತ್ತೀಚೆಗೆ ಪ್ರಕಟಿಸಲಾದ 16 ಸದಸ್ಯರ ಮುಂಬೈ ತಂಡದಲ್ಲಿ ಪೃಥ್ವಿಗೆ ಚಾನ್ಸ್ ನೀಡಲಾಗಿಲ್ಲ. ಇದರ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ ಯುವ ದಾಂಡಿಗ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದರು. ಪೃಥ್ವಿ ಶಾ ಅವರ ಸೋಷಿಯಲ್ ಮೀಡಿಯಾ ಪೋಸ್ಟ್​ಗೆ ಮುಂಬೈ ಕ್ರಿಕೆಟ್ ಅಸೋಸಿಯೇಷನ್ ತಿರುಗೇಟು ನೀಡಿದೆ. ಅಲ್ಲದೆ ಯುವ ಬ್ಯಾಟರ್​ನನ್ನು ಕೈ ಬಿಡಲು ಮುಖ್ಯ ಕಾರಣವೇನು ಎಂಬುದನ್ನು ಸಹ ಬಹಿರಂಗಪಡಿಸಿದ್ದಾರೆ.

ಇತ್ತೀಚೆಗೆ ಮುಕ್ತಾಯಗೊಂಡ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಪೃಥ್ವಿ ಶಾ ಮುಂಬೈ ತಂಡದ ಭಾಗವಾಗಿದ್ದರು. ಆದರೆ ಅವರ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬರುತ್ತಿಲ್ಲ. ಇದಕ್ಕೆ ಒಂದು ಕಾರಣ ಯುವ ಆಟಗಾರನ ಲೇಟ್ ನೈಟ್ ಮೋಜು ಮಸ್ತಿ ಎಂದು ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಬಹಿರಂಗಪಡಿಸಿದೆ.

ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿ ವೇಳೆ ಪೃಥ್ವಿ ಶಾ ನಿರಂತರವಾಗಿ ಅಭ್ಯಾಸಕ್ಕೆ ಗೈರಾಗುತ್ತಿದ್ದ. ರಾತ್ರಿಯೆಲ್ಲಾ ಪಾರ್ಟ್ ಮಾಡಿ, ಬೆಳಿಗ್ಗೆ 6 ಗಂಟೆಗೆ ಅವರು ರೂಮ್​ಗೆ ಬರುತ್ತಿದ್ದ. ಅವನನ್ನು ನಾವು ಮಗು ತರ ಮುದ್ದು ಮಾಡೋಕೆ ಸಾಧ್ಯವಿಲ್ಲ.  ಆತನ ಅಶಿಸ್ತೇ ಆತನ ದೊಡ್ಡ ಶತ್ರುವಾಗಿ ಪರಿಣಮಿಸಿದೆ. ಹೀಗಾಗಿಯೇ ಈ ಬಾರಿ ವಿಜಯ ಹಝಾರೆ ಟೂರ್ನಿಯಿಂದ ಪೃಥ್ವಿ ಶಾ ಅವರನ್ನು ಕೈ ಬಿಡಲು ನಿರ್ಧರಿಸಿದೆವು ಎಂದು ಮುಂಬೈ ಕ್ರಿಕೆಟ್ ಅಸೋಸಿಯೇಷನ್​ನ ಅಧಿಕಾರಿಯೊಬ್ಬರು ಬಹಿರಂಗಪಡಿಸಿದ್ದಾರೆ.

ಇದರೊಂದಿಗೆ ತಂಡದಲ್ಲಿದ್ದಾಗಲೂ ಪೃಥ್ವಿ ಶಾ ನಿಯಮಗಳನ್ನು ಪಾಲಿಸದೇ ಮೋಜು ಮಸ್ತಿಯಲ್ಲಿ ತೊಡಗಿಸಿಕೊಳ್ಳುತ್ತಿರುವ ವಿಚಾರಗಳು ಬಹಿರಂಗವಾಗಿದೆ. ಈ ಅಶಿಸ್ತಿನ ಬಗ್ಗೆ ಹಲವರು ಎಚ್ಚರಿಸಿದರೂ ಯುವ ಆಟಗಾರ ಕ್ಯಾರೆ ಎನ್ನುತ್ತಿಲ್ಲ. ಹೀಗಾಗಿಯೇ ಇದೀಗ ದೇಶೀಯ ಟೂರ್ನಿಯಿಂದ ಪೃಥ್ವಿ ಶಾ ಅವರನ್ನು ಕೈ ಬಿಡಲಾಗಿದೆ.

ಇದನ್ನೂ ಓದಿ: ಒಂದೇ ವರ್ಷ ಟೀಮ್ ಇಂಡಿಯಾದ 11 ಆಟಗಾರರು ನಿವೃತ್ತಿ..!

ಹಾಗೆಯೇ ಈ ಬಾರಿಯ ಐಪಿಎಲ್​ ಮೆಗಾ ಹರಾಜಿನಲ್ಲಿ ಕೇವಲ 75 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಪೃಥ್ವಿ ಶಾ ಅವರನ್ನು ಖರೀದಿಸಲು ಯಾವುದೇ ಫ್ರಾಂಚೈಸಿ ಮುಂದಾಗಿರಲಿಲ್ಲ. ಇದಾಗ್ಯೂ ಯುವ ಆಟಗಾರನಿಗೆ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಚಾನ್ಸ್ ನೀಡಲಾಗಿತ್ತು. ಇದೀಗ ಆ ಟೂರ್ನಿಯ ವೇಳೆಯೂ ನಿಯಮ ಪಾಲಿಸದೇ ಮೋಜು ಮಸ್ತಿಯಲ್ಲಿ ಕಾಲ ಕಳೆದಿರುವ ಗಂಭೀರ ಆರೋಪ ಕೇಳಿ ಬಂದಿರುವುದು ಮಾತ್ರ ವಿಪರ್ಯಾಸ.

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ