AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿಯಿಡೀ ಪಾರ್ಟಿ, ಬೆಳಿಗ್ಗೆ ನೋ ಡ್ಯೂಟಿ: ಪೃಥ್ವಿ ಶಾ ಮೋಜು ಮಸ್ತಿ ವಿಚಾರ ಬಹಿರಂಗ

Prithvi Shaw: 25 ವರ್ಷದ ಪೃಥ್ವಿ ಶಾ ಟೀಮ್ ಇಂಡಿಯಾ ಪರ 5 ಟೆಸ್ಟ್, 6 ಏಕದಿನ ಹಾಗೂ 1 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಒಟ್ಟು 528 ರನ್​ಗಳನ್ನು ಕಲೆಹಾಕಿದ್ದಾರೆ. ಹಾಗೆಯೇ ಐಪಿಎಲ್​ನಲ್ಲಿ 79 ಪಂದ್ಯಗಳಲ್ಲಿ ಕಾಣಿಸಿಕೊಂಡಿರುವ ಪೃಥ್ವಿ ಶಾ ಅವರನ್ನು ಈ ಬಾರಿ ಯಾವುದೇ ಫ್ರಾಂಚೈಸಿ ಖರೀದಿಸಿಲ್ಲ ಎಂಬುದು ವಿಶೇಷ.

ರಾತ್ರಿಯಿಡೀ ಪಾರ್ಟಿ, ಬೆಳಿಗ್ಗೆ ನೋ ಡ್ಯೂಟಿ: ಪೃಥ್ವಿ ಶಾ ಮೋಜು ಮಸ್ತಿ ವಿಚಾರ ಬಹಿರಂಗ
Prithvi Shaw
ಝಾಹಿರ್ ಯೂಸುಫ್
|

Updated on: Dec 21, 2024 | 11:54 AM

Share

ವಿಜಯ ಹಝಾರೆ ಟೂರ್ನಿನಿಂದ ಪೃಥ್ವಿ ಶಾ ಅವರನ್ನು ಕೈ ಬಿಡಲಾಗಿದೆ. ಇತ್ತೀಚೆಗೆ ಪ್ರಕಟಿಸಲಾದ 16 ಸದಸ್ಯರ ಮುಂಬೈ ತಂಡದಲ್ಲಿ ಪೃಥ್ವಿಗೆ ಚಾನ್ಸ್ ನೀಡಲಾಗಿಲ್ಲ. ಇದರ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ ಯುವ ದಾಂಡಿಗ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದರು. ಪೃಥ್ವಿ ಶಾ ಅವರ ಸೋಷಿಯಲ್ ಮೀಡಿಯಾ ಪೋಸ್ಟ್​ಗೆ ಮುಂಬೈ ಕ್ರಿಕೆಟ್ ಅಸೋಸಿಯೇಷನ್ ತಿರುಗೇಟು ನೀಡಿದೆ. ಅಲ್ಲದೆ ಯುವ ಬ್ಯಾಟರ್​ನನ್ನು ಕೈ ಬಿಡಲು ಮುಖ್ಯ ಕಾರಣವೇನು ಎಂಬುದನ್ನು ಸಹ ಬಹಿರಂಗಪಡಿಸಿದ್ದಾರೆ.

ಇತ್ತೀಚೆಗೆ ಮುಕ್ತಾಯಗೊಂಡ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಪೃಥ್ವಿ ಶಾ ಮುಂಬೈ ತಂಡದ ಭಾಗವಾಗಿದ್ದರು. ಆದರೆ ಅವರ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬರುತ್ತಿಲ್ಲ. ಇದಕ್ಕೆ ಒಂದು ಕಾರಣ ಯುವ ಆಟಗಾರನ ಲೇಟ್ ನೈಟ್ ಮೋಜು ಮಸ್ತಿ ಎಂದು ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಬಹಿರಂಗಪಡಿಸಿದೆ.

ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿ ವೇಳೆ ಪೃಥ್ವಿ ಶಾ ನಿರಂತರವಾಗಿ ಅಭ್ಯಾಸಕ್ಕೆ ಗೈರಾಗುತ್ತಿದ್ದ. ರಾತ್ರಿಯೆಲ್ಲಾ ಪಾರ್ಟ್ ಮಾಡಿ, ಬೆಳಿಗ್ಗೆ 6 ಗಂಟೆಗೆ ಅವರು ರೂಮ್​ಗೆ ಬರುತ್ತಿದ್ದ. ಅವನನ್ನು ನಾವು ಮಗು ತರ ಮುದ್ದು ಮಾಡೋಕೆ ಸಾಧ್ಯವಿಲ್ಲ.  ಆತನ ಅಶಿಸ್ತೇ ಆತನ ದೊಡ್ಡ ಶತ್ರುವಾಗಿ ಪರಿಣಮಿಸಿದೆ. ಹೀಗಾಗಿಯೇ ಈ ಬಾರಿ ವಿಜಯ ಹಝಾರೆ ಟೂರ್ನಿಯಿಂದ ಪೃಥ್ವಿ ಶಾ ಅವರನ್ನು ಕೈ ಬಿಡಲು ನಿರ್ಧರಿಸಿದೆವು ಎಂದು ಮುಂಬೈ ಕ್ರಿಕೆಟ್ ಅಸೋಸಿಯೇಷನ್​ನ ಅಧಿಕಾರಿಯೊಬ್ಬರು ಬಹಿರಂಗಪಡಿಸಿದ್ದಾರೆ.

ಇದರೊಂದಿಗೆ ತಂಡದಲ್ಲಿದ್ದಾಗಲೂ ಪೃಥ್ವಿ ಶಾ ನಿಯಮಗಳನ್ನು ಪಾಲಿಸದೇ ಮೋಜು ಮಸ್ತಿಯಲ್ಲಿ ತೊಡಗಿಸಿಕೊಳ್ಳುತ್ತಿರುವ ವಿಚಾರಗಳು ಬಹಿರಂಗವಾಗಿದೆ. ಈ ಅಶಿಸ್ತಿನ ಬಗ್ಗೆ ಹಲವರು ಎಚ್ಚರಿಸಿದರೂ ಯುವ ಆಟಗಾರ ಕ್ಯಾರೆ ಎನ್ನುತ್ತಿಲ್ಲ. ಹೀಗಾಗಿಯೇ ಇದೀಗ ದೇಶೀಯ ಟೂರ್ನಿಯಿಂದ ಪೃಥ್ವಿ ಶಾ ಅವರನ್ನು ಕೈ ಬಿಡಲಾಗಿದೆ.

ಇದನ್ನೂ ಓದಿ: ಒಂದೇ ವರ್ಷ ಟೀಮ್ ಇಂಡಿಯಾದ 11 ಆಟಗಾರರು ನಿವೃತ್ತಿ..!

ಹಾಗೆಯೇ ಈ ಬಾರಿಯ ಐಪಿಎಲ್​ ಮೆಗಾ ಹರಾಜಿನಲ್ಲಿ ಕೇವಲ 75 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಪೃಥ್ವಿ ಶಾ ಅವರನ್ನು ಖರೀದಿಸಲು ಯಾವುದೇ ಫ್ರಾಂಚೈಸಿ ಮುಂದಾಗಿರಲಿಲ್ಲ. ಇದಾಗ್ಯೂ ಯುವ ಆಟಗಾರನಿಗೆ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಚಾನ್ಸ್ ನೀಡಲಾಗಿತ್ತು. ಇದೀಗ ಆ ಟೂರ್ನಿಯ ವೇಳೆಯೂ ನಿಯಮ ಪಾಲಿಸದೇ ಮೋಜು ಮಸ್ತಿಯಲ್ಲಿ ಕಾಲ ಕಳೆದಿರುವ ಗಂಭೀರ ಆರೋಪ ಕೇಳಿ ಬಂದಿರುವುದು ಮಾತ್ರ ವಿಪರ್ಯಾಸ.

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?