AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಹಿತ್ ಶರ್ಮಾರ ‘ದುರಾದೃಷ್ಟ’ಕ್ಕೆ ಹಾರ್ದಿಕ್ ಪಾಂಡ್ಯ ಬ್ರೇಕ್!

MI vs KKR: ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 20 ಓವರ್​ಗಳಲ್ಲಿ 220 ರನ್​ ಕಲೆಹಾಕಿತು. ಈ ಗುರಿಯನ್ನು ಮುಂಬೈ ಇಂಡಿಯನ್ಸ್ ಕೇವಲ 19.1 ಓವರ್​ಗಳಲ್ಲಿ ಚೇಸ್ ಮಾಡಿ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ರೋಹಿತ್ ಶರ್ಮಾರ 'ದುರಾದೃಷ್ಟ'ಕ್ಕೆ ಹಾರ್ದಿಕ್ ಪಾಂಡ್ಯ ಬ್ರೇಕ್!
Rohit Sharma
ಝಾಹಿರ್ ಯೂಸುಫ್
|

Updated on:Mar 30, 2026 | 8:43 AM

Share

IPL 2026: ಬರೋಬ್ಬರಿ 13 ವರ್ಷಗಳ ಬಳಿಕ ಮುಂಬೈ ಇಂಡಿಯನ್ಸ್ ತಂಡವು ಐಪಿಎಲ್​ನಲ್ಲಿ ಮೊದಲ ಮ್ಯಾಚ್ ಗೆದ್ದಿದೆ. ಅಂದರೆ ಕಳೆದ ಹದಿಮೂರು ವರ್ಷಗಳಲ್ಲಿ ಮುಂಬೈ ಪಡೆ ತನ್ನ ಮೊದಲ ಪಂದ್ಯದಲ್ಲಿ ಗೆಲುವು ದಾಖಲಿಸಿರಲಿಲ್ಲ. ಇಂತಹದೊಂದು ಅನ್​ಲಕ್ಕಿ ಓಪನಿಂಗ್​​ಗೆ ನಾಂದಿಯಾಡಿದ್ದು ಮಾಜಿ ನಾಯಕ ರೋಹಿತ್ ಶರ್ಮಾ ಎಂಬುದು ವಿಶೇಷ.

ಮುಂಬೈ ಇಂಡಿಯನ್ಸ್ ತಂಡವು ಕೊನೆಯ ಬಾರಿ ಮೊದಲ ಮ್ಯಾಚ್​ ಗೆದ್ದಿದ್ದು 2012 ರಲ್ಲಿ. ಅದು ಸಹ ಹರ್ಭಜನ್ ಸಿಂಗ್ ನಾಯಕತ್ವದಲ್ಲಿ. ಇದಾದ ಬಳಿಕ 2013 ರಲ್ಲಿ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡದ ನೂತನ ನಾಯಕನಾಗಿ ಆಯ್ಕೆಯಾಗಿದ್ದರು. ಇತ್ತ ಹಿಟ್​ಮ್ಯಾನ್ ನಾಯಕನಾದ ಬಳಿಕ ಮುಂಬೈ ಇಂಡಿಯನ್ಸ್ ತಂಡವು ಒಮ್ಮೆಯೂ ಮೊದಲ ಮ್ಯಾಚ್​ನಲ್ಲಿ ಗೆಲುವು ದಾಖಲಿಸಿರಲಿಲ್ಲ ಎಂಬುದು ವಿಶೇಷ.

ಇನ್ನು ಐಪಿಎಲ್ 2024 ರಲ್ಲಿ ಹಾರ್ದಿಕ್ ಪಾಂಡ್ಯ ನಾಯಕನಾದರೂ ಮುಂಬೈ ಇಂಡಿಯನ್ಸ್ ತಂಡ ಎರಡು ಸೀಸನ್​ಗಳಲ್ಲಿ ಮೊದಲ ಮ್ಯಾಚ್​ನಲ್ಲಿ ಮುಗ್ಗರಿಸಿದ್ದರು. ಆದರೆ ಮೂರನೇ ಸೀಸನ್​ನಲ್ಲಿ ರೋಹಿತ್ ಶರ್ಮಾ ಶುರು ಮಾಡಿದ್ದ ದುರಾದೃಷ್ಟಕ್ಕೆ ಬ್ರೇಕ್ ಹಾಕುವಲ್ಲಿ ಹಾರ್ದಿಕ್ ಪಾಂಡ್ಯ ಯಶಸ್ವಿಯಾಗಿದ್ದಾರೆ.

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 220 ರನ್ ಕಲೆಹಾಕಿತು.

ಈ ಬೃಹತ್ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು 19.1 ಓವರ್​ಗಳಲ್ಲಿ 224 ರನ್ ಬಾರಿಸಿ 6 ವಿಕೆಟ್​ಗಳ ಜಯ ಸಾಧಿಸಿದೆ. ಈ ಮೂಲಕ 2012ರ ಬಳಿಕ ಮುಂಬೈ ಇಂಡಿಯನ್ಸ್​ ತಂಡವು ಐಪಿಎಲ್​ನ ಮೊದಲ ಪಂದ್ಯದಲ್ಲೇ ಗೆಲುವಿನ ನಗೆ ಬೀರಿದೆ.

ಸೋತರೂ ಕಪ್ ಗೆದ್ದಿದ್ದ ಮುಂಬೈ ಪಡೆ:

ರೋಹಿತ್ ಶರ್ಮಾ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ತಂಡ ಮೊದಲ ಪಂದ್ಯದಲ್ಲಿ ಸೋತರೂ ಐದು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿರುವುದು ವಿಶೇಷ. ಅಂದರೆ ಮೊದಲ ಮ್ಯಾಚ್​ನಲ್ಲಿ ಮುಗ್ಗರಿಸಿದರೂ ಮುಂಬೈ ಪಡೆ ಪ್ರಚಂಡ ಪ್ರದರ್ಶನ ನೀಡುತ್ತಾ ಬಂದಿದೆ.

ಇದನ್ನೂ ಓದಿ: VIDEO: ಟಾಸ್ ಫಿಕ್ಸಿಂಗ್..? ಮುಂಬೈ ಇಂಡಿಯನ್ಸ್ ವಿರುದ್ಧ ಗಂಭೀರ ಆರೋಪ

ಈ ಮೂಲಕ 2013, 2015, 2017, 2019 ಮತ್ತು 2020 ರಲ್ಲಿ ಮುಂಬೈ ಇಂಡಿಯನ್ಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇದೀಗ ಹಾರ್ದಿಕ್ ಪಾಂಡ್ಯ ನೇತೃತ್ವದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಮೊದಲ ಮ್ಯಾಚ್​ನಲ್ಲೇ ಗೆಲ್ಲುವ ಮೂಲಕ ಶುಭಾರಂಭ ಮಾಡಿದೆ. ಈ ಶುಭಾರಂಭದೊಂದಿಗೆ ಮುಂಬೈ ಪಡೆ ಮತ್ತೊಮ್ಮೆ ಚಾಂಪಿಯನ್ ಪಟ್ಟಕ್ಕೇರಲಿದೆಯಾ ಕಾದು ನೋಡಬೇಕಿದೆ.

Published On - 8:36 am, Mon, 30 March 26

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ