AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CSK vs MI: ಟಿ20ಯಲ್ಲಿ ಹಾರ್ದಿಕ್ ಪಾಂಡ್ಯ ಟೆಸ್ಟ್ ಮಾದರಿಯ ಇನ್ನಿಂಗ್ಸ್: ಮುಂಬೈ ತಂಡಕ್ಕೆ ನಾಯಕನೇ ವಿಲನ್?

Hardik Pandya: ಐಪಿಎಲ್ 2026 ರ 44 ನೇ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಮುಂಬೈ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್‌ನಲ್ಲಿ ಸಂಪೂರ್ಣವಾಗಿ ವಿಫಲರಾದರು. ಅವರು 23 ಎಸೆತಗಳಲ್ಲಿ ಕೇವಲ 18 ರನ್ ಗಳಿಸಿ ಔಟಾದರು. ಅವರ ಸ್ಟ್ರೈಕ್ ರೇಟ್ ಕೇವಲ 78.26 ಆಗಿತ್ತು.

CSK vs MI: ಟಿ20ಯಲ್ಲಿ ಹಾರ್ದಿಕ್ ಪಾಂಡ್ಯ ಟೆಸ್ಟ್ ಮಾದರಿಯ ಇನ್ನಿಂಗ್ಸ್: ಮುಂಬೈ ತಂಡಕ್ಕೆ ನಾಯಕನೇ ವಿಲನ್?
Hardik Pandya
ಸಾಯಿನಂದಾ
| Edited By: |

Updated on: May 03, 2026 | 10:39 AM

Share

ಬೆಂಗಳೂರು (ಮೇ. 03): ಇಂಡಿಯನ್ ಪ್ರೀಮಿಯರ್ ಲೀಗ್ 2026 ರ 44 ನೇ ಪಂದ್ಯ ಮೇ 2 ರಂದು ಚೆಪಾಕ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ನಡೆಯಿತು. ಮುಂಬೈ ಇಂಡಿಯನ್ಸ್ (Mumbai Indians) ಈ ಪಂದ್ಯವನ್ನು ಹೀನಾಯವಾಗಿ ಸೋತಿತು. ಇದು ಅವರ ಸತತ ಮೂರನೇ ಸೋಲು. ಈ ಸೋಲಿನ ಮೂಲಕ ಮುಂಬೈ ಪ್ಲೇಆಫ್ ರೇಸ್‌ನಿಂದ ಬಹುತೇಕ ಹೊರಬಿದ್ದಿದೆ. ಒಂದು ಪವಾಡ ನಡೆದರೆ ಮಾತ್ರ ಪ್ಲೇಆಫ್‌ನಲ್ಲಿ ಸ್ಥಾನ ಪಡೆಯಲು ಸಾಧ್ಯ. ನಿನ್ನೆಯ ಪಂದ್ಯದಲ್ಲಿ ಮುಂಬೈನ ಈ ಸ್ಥಿತಿಗೆ ಸ್ವತಃ ನಾಯಕನೇ ಕಾರಣರಾದರು. ಚೆನ್ನೈ ವಿರುದ್ಧ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಅವರ ಬ್ಯಾಟಿಂಗ್ ಸಾಕಷ್ಟು ನಿರಾಶಾದಾಯಕವಾಗಿತ್ತು. ಹಾರ್ದಿಕ್ ಪಾಂಡ್ಯ 100 ಕ್ಕಿಂತ ಕಡಿಮೆ ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟಿಂಗ್ ಮಾಡಿದರು.

23 ಎಸೆತಗಳಲ್ಲಿ 18 ರನ್ ಗಳಿಸಿ ಔಟಾದ ಹಾರ್ದಿಕ್ ಪಾಂಡ್ಯ

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಹಾರ್ದಿಕ್ ಪಾಂಡ್ಯ ತುಂಬಾ ನಿಧಾನಗತಿಯ ಇನ್ನಿಂಗ್ಸ್ ಆಡಿದರು. ಮುಂಬೈ ಅಭಿಮಾನಿಗಳು ಮಾತ್ರವಲ್ಲದೆ ತಂಡ ಕೂಡ ಪಾಂಡ್ಯ ಕಡೆಯಿಂದ ಬಿರುಗಾಳಿಯ ಇನ್ನಿಂಗ್ಸ್ ನಿರೀಕ್ಷಿಸಿತ್ತು. ಆದರೆ ಅವರು 23 ಎಸೆತಗಳಲ್ಲಿ ಕೇವಲ 18 ರನ್ ಗಳಿಸಿ ಔಟಾದರು. ಅವರ ಸ್ಟ್ರೈಕ್ ರೇಟ್ ಕೇವಲ 78.26 ಆಗಿತ್ತು. ಹಾರ್ದಿಕ್ ಅವರ ಬ್ಯಾಟ್​ನಿಂದ ಬಂದಿದ್ದು ಕೇವಲ ಎರಡು ಬೌಂಡರಿ ಮಾತ್ರ.

ಹಾರ್ದಿಕ್ ಪಾಂಡ್ಯ ವೇಗವಾಗಿ ರನ್ ಗಳಿಸಿ ಕೊನೆಯವರೆಗೂ ಆಡಿದ್ದರೆ, ಮುಂಬೈ ಇಂಡಿಯನ್ಸ್ 200 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಬಹುದಿತ್ತು. ಆದಾಗ್ಯೂ, ಮುಂಬೈ ಇಂಡಿಯನ್ಸ್ ನಾಯಕನ ಬ್ಯಾಟ್‌ನಿಂದ ದೊಡ್ಡ ಇನ್ನಿಂಗ್ಸ್ ಬರಲಿಲ್ಲ. ಅಷ್ಟೇ ಅಲ್ಲದೆ ಅವರು ತಮ್ಮ ಬೌಲಿಂಗ್‌ನಿಂದಲೂ ಯಾವುದೇ ವಿಕೆಟ್ ಪಡೆಯಲಿಲ್ಲಿ.

IPL 2026: ಡಗೌಟ್​ನಿಂದಲೇ ಹಾರ್ದಿಕ್​ಗೆ ನಾಯಕನ ಪಾಠ ಮಾಡಿದ ರೋಹಿತ್ ಶರ್ಮಾ

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 7 ವಿಕೆಟ್‌ಗಳಿಗೆ 159 ರನ್ ಗಳಿಸಿ ಚೆನ್ನೈ ಸೂಪರ್ ಕಿಂಗ್ಸ್‌ಗೆ 160 ರನ್‌ಗಳ ಗುರಿಯನ್ನು ನೀಡಿತು. ಮುಂಬೈ ಪರ ನಮನ್ ಧೀರ್ 57 ರನ್ ಗಳಿಸಿದರು. ರಯಾನ್ ರಿಕಲ್ಟನ್ ಕೂಡ 37 ರನ್ ಗಳಿಸಿದರು. ಸಿಎಸ್‌ಕೆ ಪರ ಅನ್ಶುಲ್ ಕಾಂಬೋಜ್ ಗರಿಷ್ಠ 3 ವಿಕೆಟ್ ಪಡೆದರು.

ಚೆನ್ನೈ ಸೂಪರ್ ಕಿಂಗ್ಸ್ 18.1 ಓವರ್‌ಗಳಲ್ಲಿ 8 ವಿಕೆಟ್‌ಗಳು ಬಾಕಿ ಇರುವಂತೆ 160 ರನ್‌ಗಳ ಗುರಿಯನ್ನು ಬೆನ್ನಟ್ಟಿತು. ಸಿಎಸ್‌ಕೆ ನಾಯಕ ರುತುರಾಜ್ ಗಾಯಕ್ವಾಡ್ ನಾಯಕತ್ವದ ಇನ್ನಿಂಗ್ಸ್ ಆಡಿದರು. ಅವರು ಔಟಾಗದೆ 67 ರನ್ ಗಳಿಸಿದರು. ಕಾರ್ತಿಕ್ ಶರ್ಮಾ ಕೂಡ ಅರ್ಧಶತಕ ಗಳಿಸಿ ಅಜೇಯ 54 ರನ್ ಗಳಿಸಿದರು. ಮುಂಬೈ ಇಂಡಿಯನ್ಸ್ ಪರ ಜಸ್ಪ್ರೀತ್ ಬುಮ್ರಾ ಮತ್ತು ಅಲ್ಲಾಹ್ ಗಜನ್ಫರ್ ತಲಾ ಒಂದು ವಿಕೆಟ್ ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!