AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಇಂಗ್ಲೆಂಡ್​ಗೆ ಎರಡೆರಡು ವಿಶ್ವಕಪ್ ಗೆಲ್ಲಿಸಿಕೊಟ್ಟವ ಈಗ ಮುಂಬೈ ತಂಡಕ್ಕೆ ಕೋಚ್

Mumbai Indians Appoints New Fielding Coach: 2025ರ ಐಪಿಎಲ್ ಟೂರ್ನಿ ಮಾರ್ಚ್‌ನಿಂದ ಆರಂಭವಾಗಲಿದೆ. ಅದಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ತಂಡವು ತಮ್ಮ ಫೀಲ್ಡಿಂಗ್ ಕೋಚ್ ಆಗಿ ಇಂಗ್ಲೆಂಡ್‌ನ ಅನುಭವಿ ಆಟಗಾರ ಕಾರ್ಲ್ ಹಾಪ್ಕಿನ್ಸನ್ ಅವರನ್ನು ನೇಮಿಸಿಕೊಂಡಿದೆ. ಹಾಪ್ಕಿನ್ಸನ್ ಅವರು ಇಂಗ್ಲೆಂಡ್ ತಂಡದ ಏಕದಿನ ಮತ್ತು ಟಿ20 ವಿಶ್ವಕಪ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

IPL 2025: ಇಂಗ್ಲೆಂಡ್​ಗೆ ಎರಡೆರಡು ವಿಶ್ವಕಪ್ ಗೆಲ್ಲಿಸಿಕೊಟ್ಟವ ಈಗ ಮುಂಬೈ ತಂಡಕ್ಕೆ ಕೋಚ್
ಮುಂಬೈ ಇಂಡಿಯನ್ಸ್
ಪೃಥ್ವಿಶಂಕರ
|

Updated on: Dec 14, 2024 | 5:38 PM

Share

2025 ರ ಐಪಿಎಲ್ ಮಾರ್ಚ್ ತಿಂಗಳಿನಿಂದ ಪ್ರಾರಂಭವಾಗಲಿದೆ. ಇತ್ತೀಚೆಗಷ್ಟೇ ಈ ಸೀಸನ್​ನ ಹರಾಜು ಪ್ರಕ್ರಿಯೆ ನಡೆದಿತ್ತು. ಇದರಲ್ಲಿ ಎಲ್ಲಾ ಫ್ರಾಂಚೈಸಿಗಳು ತಮಗೆ ಬೇಕಾದ ಆಟಗಾರರನ್ನು ಖರೀದಿಸಿದ್ದವು. ಇದೀಗ ಎಲ್ಲಾ ಫ್ರಾಂಚೈಸಿಗಳು ತಮ್ಮ ತಂಡಗಳ ಕೋಚಿಂಗ್ ಸಿಬ್ಬಂದಿಗಳಲ್ಲಿ ಬದಲಾವಣೆಗೆ ಮುಂದಾಗಿವೆ. ಅದರಂತೆ ಐಪಿಎಲ್ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ತಂಡವಾದ ಮುಂಬೈ ಇಂಡಿಯನ್ಸ್ ಕೂಡ ತನ್ನ ತಂಡಕ್ಕೆ ಹೊಸ ಫೀಲ್ಡಿಂಗ್ ಕೋಚ್ ಅನ್ನು ನೇಮಿಸಿದೆ. ಮುಂಬೈ ಇಂಡಿಯನ್ಸ್ ತನ್ನ ಫೀಲ್ಡಿಂಗ್ ಕೋಚ್ ಆಗಿ ಇಂಗ್ಲೆಂಡ್‌ನ ಅನುಭವಿ ಆಟಗಾರ ಕಾರ್ಲ್ ಹಾಪ್ಕಿನ್ಸನ್ ಅವರನ್ನು ತಂಡಕ್ಕೆ ಆಯ್ಕೆ ಮಾಡಿದೆ. ಕಾರ್ಲ್ ಹಾಪ್ಕಿನ್ಸನ್ ಅವರ ಕೋಚಿಂಗ್ ಅಡಿಯಲ್ಲಿ ಇಂಗ್ಲೆಂಡ್‌ ತಂಡ ಏಕದಿನ ಮತ್ತು ಟಿ20 ವಿಶ್ವಕಪ್‌ನಲ್ಲಿ ಚಾಂಪಿಯನ್ ಆಗಿದೆ.

ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರ

ಅಚ್ಚರಿಯ ಸಂಗತಿಯೆಂದರೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಫೀಲ್ಡಿಂಗ್ ಕೋಚ್ ಆಗಿ ನೇಮಕಗೊಂಡಿರುವ 43 ವರ್ಷದ ಹಾಪ್ಕಿನ್ಸನ್ ಒಂದೇ ಒಂದು ಅಂತಾರಾಷ್ಟ್ರೀಯ ಪಂದ್ಯವನ್ನು ಆಡಿಲ್ಲ. ಆದರೆ 64 ಪ್ರಥಮ ದರ್ಜೆ ಪಂದ್ಯಗಳನ್ನಾಡಿರುವ ಅವರು 2705 ರನ್ ಗಳಿಸಿದ್ದಾರೆ. ಇದರ ಜೊತೆಗೆ 92 ಲಿಸ್ಟ್ ಎ ಪಂದ್ಯಗಳಲ್ಲಿ 1400 ರನ್ ಕಲೆಹಾಕಿದ್ದಾರೆ ಆದರೆ ಕೋಚ್ ಆಗಿ ಸಾಕಷ್ಟು ಯಶಸ್ಸು ಸಾಧಿಸಿರುವ ಕಾರ್ಲ್, ಫೀಲ್ಡಿಂಗ್ ಕೋಚ್ ಆಗಿ 2019ರ ಏಕದಿನ ವಿಶ್ವಕಪ್ ಮತ್ತು 2022ರ ಟಿ20 ವಿಶ್ವಕಪ್​ನಲ್ಲಿ ಇಂಗ್ಲೆಂಡ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಮುಂಬೈ ತಂಡಕ್ಕೆ ಹಾರ್ದಿಕ್ ನಾಯಕ

ಮುಂಬರುವ ಐಪಿಎಲ್ ಮಾರ್ಚ್ 14 ರಿಂದ ಆರಂಭವಾಗಲಿದ್ದು, ಈ ಬಾರಿಯೂ ಮುಂಬೈ ಇಂಡಿಯನ್ಸ್ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ತಂಡವಾಗಿರುವ ಮುಂಬೈ 2013, 2015, 2017, 2019 ಮತ್ತು 2022ರಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ 5 ಬಾರಿ ಐಪಿಎಲ್ ಪ್ರಶಸ್ತಿ ಗೆದ್ದಿದೆ. ಆದರೆ ಕಳೆದ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪ್ರದರ್ಶನ ತೀರಾ ಕಳಪೆಯಾಗಿತ್ತು. ಹೀಗಾಗಿ 2025 ರಲ್ಲಿ ತನ್ನ ಹಳೆಯ ಲಯಕ್ಕೆ ಮರಳಲು ಅಂಬಾನಿ ಪಡೆ ಯತ್ನಿಸಲಿದೆ.

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ, ಹಾರ್ದಿಕ್ ಪಾಂಡ್ಯ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಜೋಫ್ರಾ ಆರ್ಚರ್, ನಮನ್ ಧೀರ್, ರಾಬಿನ್ ಮಿನ್ನೆಸ್, ಕರ್ಣ್ ಶರ್ಮಾ, ರಯಾನ್ ರಿಕಲ್ಟನ್, ದೀಪಕ್ ಚಹಾರ್, ಅಲ್ಲಾ ಗಜನ್ಫರ್, ವಿಲ್ ಜಾಕ್ಸ್, ಕೆಎಲ್ ಶ್ರೀಜಿತ್, ರೀಸ್ ಟೋಪ್ಲಿ, ಮಿಚೆಲ್ ಸ್ಯಾಂಟ್ನರ್, ರಾಜ್ ಅಂಗದ್ ಬಾವಾ, ವಿ. ಸತ್ಯನಾರಾಯಣ್, ಬೆವನ್ ಜೇಕಬ್ಸ್, ವಿಘ್ನೇಶ್ ಪುತ್ತೂರು, ಅರ್ಜುನ್ ತೆಂಡೂಲ್ಕರ್, ಲಿಜ್ದಾಡ್ ವಿಲಿಯಮ್ಸ್, ಅಶ್ವನಿ ಕುಮಾರ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?