AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ರೋಹಿತ್ ಶರ್ಮಾಗೆ ಹಾರ್ದಿಕ್ ಪಾಂಡ್ಯ ವಾರ್ನಿಂಗ್..! ಮೌನ ಮುರಿದ ಫ್ರಾಂಚೈಸಿ

IPL 2026: 2026ರ ಐಪಿಎಲ್ ಆರಂಭಕ್ಕೂ ಮುನ್ನ ಹಾರ್ದಿಕ್ ಪಾಂಡ್ಯ ರೋಹಿತ್ ಶರ್ಮಾಗೆ ವಾರ್ನಿಂಗ್ ನೀಡಿದ್ದಾರೆಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಡಿತ್ತು. ರೋಹಿತ್‌ರ ಐಪಿಎಲ್ ಪ್ರದರ್ಶನದ ಬಗ್ಗೆ ಪಾಂಡ್ಯ ಅಸಮಾಧಾನಗೊಂಡಿದ್ದಾರೆಂಬ ಪೋಸ್ಟ್‌ ವೈರಲ್ ಆಗಿತ್ತು. ಆದರೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಈ ವದಂತಿಯನ್ನು ನಿರಾಕರಿಸಿದೆ. ಇದೆಲ್ಲವೂ ಕೇವಲ ಕಟ್ಟುಕತೆ ಎಂದು ಸ್ಪಷ್ಟಪಡಿಸಿದೆ.

IPL 2026: ರೋಹಿತ್ ಶರ್ಮಾಗೆ ಹಾರ್ದಿಕ್ ಪಾಂಡ್ಯ ವಾರ್ನಿಂಗ್..! ಮೌನ ಮುರಿದ ಫ್ರಾಂಚೈಸಿ
Rohit, Hardik
ಪೃಥ್ವಿಶಂಕರ
|

Updated on: Mar 14, 2026 | 4:38 PM

Share

2026 ರ ಐಪಿಎಲ್​ಗೆ (IPL 2026) ದಿನಗಣನೆ ಆರಂಭವಾಗಿದೆ. ಲೀಗ್‌ನ 19 ನೇ ಸೀಸನ್ ಮಾರ್ಚ್ 28 ರಿಂದ ಪ್ರಾರಂಭವಾಗಲಿದೆ. ಈ ಸೀಸನ್‌ಗಾಗಿ ಎಲ್ಲಾ ತಂಡಗಳು ತಮ್ಮ ಸಿದ್ಧತೆಗಳನ್ನು ತೀವ್ರಗೊಳಿಸಿವೆ. ಬಿಸಿಸಿಐ ಆರಂಭಿಕ ಪಂದ್ಯಗಳ ವೇಳಾಪಟ್ಟಿಯನ್ನು ಸಹ ಬಿಡುಗಡೆ ಮಾಡಿದೆ. ಏತನ್ಮಧ್ಯೆ, ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಶಿಬಿರದಿಂದ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಸೀಸನ್ ಆರಂಭಕ್ಕೂ ಮುನ್ನ ಮುಂಬೈ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಮಾಜಿ ನಾಯಕ ರೋಹಿತ್ ಶರ್ಮಾಗೆ (Rohit Sharma) ಎಚ್ಚರಿಕೆ ನೀಡಿದ್ದಾರೆ ಎಂಬ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಈ ಸೋಶಿಯಲ್ ಮೀಡಿಯಾ ಪೋಸ್ಟ್​ ಗಾಳಿಯಂತೆ ಹಬ್ಬವುದನ್ನು ಗಮನಿಸಿದ ಮುಂಬೈ ಇಂಡಿಯನ್ಸ್ (Mumbai Indians) ಫ್ರಾಂಚೈಸಿ ಈ ಪೋಸ್ಟ್​ಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡುವ ಕೆಲಸ ಮಾಡಿದೆ.

ರೋಹಿತ್ ಶರ್ಮಾಗೆ ಹಾರ್ದಿಕ್ ಪಾಂಡ್ಯ ವಾರ್ನಿಂಗ್?

2026 ರ ಐಪಿಎಲ್ ಆರಂಭಕ್ಕೂ ಮುನ್ನ, ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಮಾಜಿ ನಾಯಕ ರೋಹಿತ್ ಶರ್ಮಾಗೆ ಎಚ್ಚರಿಕೆ ನೀಡಿದ್ದಾರೆ ಎಂಬ ವದಂತಿ ಸೋಶಿಯಲ್ ಮೀಡಿಯಾದಲ್ಲಿ ಹರಡಿದೆ. ವೈರಲ್ ಆಗಿರುವ ಪೋಸ್ಟ್‌ನಲ್ಲಿ, ಐಪಿಎಲ್‌ನಲ್ಲಿ ರನ್ ಬರ ಎದುರಿಸುತ್ತಿರುವ ರೋಹಿತ್ ಶರ್ಮಾಗೆ ಹಾರ್ದಿಕ್ ಪಾಂಡ್ಯ ಎಚ್ಚರಿಕೆ ನೀಡಿದ್ದು, ಈ ಬಾರಿ ರನ್ ಗಳಿಸದಿದ್ದರೆ ಅವರನ್ನು ತಂಡದಲ್ಲಿ ಆಡಿಸಲು ಸಾಧ್ಯವಿಲ್ಲ ಎಂದು ಮುಂಬೈ ಆಡಳಿತ ಮಂಡಳಿಗೆ ತಿಳಿಸಿದ್ದಾರೆ. ಮಾತ್ರವಲ್ಲದೆ ರೋಹಿತ್ ಅವರ ಪ್ರದರ್ಶನದ ಬಗ್ಗೆ ಮ್ಯಾನೇಜ್‌ಮೆಂಟ್ ಕೂಡ ಅಸಮಾಧಾನಗೊಂಡಿದೆ ಎಂದು ಬರೆಯಲಾಗಿದೆ.

ಆಕ್ಸಿಜನ್ ಎಂಬ ಹೆಸರಿನ ಖಾತೆಯಿಂದ ಈ ಪೋಸ್ಟ್ ಪ್ರಕಟವಾಗಿದ್ದು, ಕೆಲವೇ ನಿಮಿಷಗಳಲ್ಲಿ ಸೋಶಿಯಲ್ ಮೀಡಿಯಾದಲ್ಲಿ ತಲ್ಲಣ ಸೃಷ್ಟಿಸಿದೆ. ಇತ್ತ ಈ ಪೋಸ್ಟ್​ ನೋಡಿದ ರೋಹಿತ್ ಅಭಿಮಾನಿಗಳು ಪಾಂಡ್ಯ ವಿರುದ್ಧ ಕಿಡಿಕಾರಲು ಶುರು ಮಾಡಿದ್ದಾರೆ. ಪಾಂಡ್ಯ ಮೇಲೆ ನಿಂದನೆಗಳ ಸುರಿಮಳೆಗೈಯಲಾರಂಭಿಸಿದ್ದಾರೆ. ಈ ಪೋಸ್ಟ್​ ನೋಡಿ ಕೂಡಲೇ ಎಚ್ಚೆತ್ತುಕೊಂಡಿರುವ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ, ಹಾರ್ದಿಕ್ ಪಾಂಡ್ಯರ GIF ಅನ್ನು ಪೋಸ್ಟ್ ಮಾಡಿದ್ದು, ಅದರಲ್ಲಿ ‘ಹಾಗೆನಾದರೂ ಇದೆಯಾ’ ಎಂದು ಹಾರ್ದಿಕ್​ರನ್ನು ತಮಾಷೆಯಾಗಿ ಪ್ರಶಸ್ತಿದೆ. ಇದರ ಜೊತೆಗೆ ತಮಾಷೆಯ ಎಮೋಜಿಯನ್ನು ಹಂಚಿಕೊಂಡಿದೆ. ಅಂದರೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ಪೋಸ್ಟ್​ನಲ್ಲಿ ನಿಜಾಂಶವಿಲ್ಲ. ಇದೆಲ್ಲ ಶುದ್ಧ ಕಟ್ಟುಕತೆ ಎಂದು ಮುಂಬೈ ಇಂಡಿಯನ್ಸ್ ಖಚಿತ ಪಡಿಸಿದೆ.

IPL 2026: ಐಪಿಎಲ್ ಆರಂಭಕ್ಕೂ ಮುನ್ನವೇ ಸಂಕಷ್ಟಕ್ಕೆ ಸಿಲುಕಿದ ಆರ್​ಸಿಬಿ- ಎಸ್​ಆರ್​ಹೆಚ್

ಐದು ಬಾರಿಯ ಚಾಂಪಿಯನ್

ವಾಸ್ತವವಾಗಿ 2013 ರಿಂದ ಯಾವುದೇ ಐಪಿಎಲ್ ಆವೃತ್ತಿಯಲ್ಲಿ ರೋಹಿತ್​ ಶರ್ಮಾ 500 ರನ್ ಗಳಿಸಿಲ್ಲ. ಕಳೆದ ಆವೃತ್ತಿಯಲ್ಲಿ 15 ಪಂದ್ಯಗಳನ್ನಾಡಿದ್ದ ರೋಹಿತ್ 418 ರನ್ ಕಲೆಹಾಕಿದ್ದರು. ಆದಾಗ್ಯೂ ರೋಹಿತ್ ಹಾಗೂ ಹಾರ್ದಿಕ್ ನಡುವೆ ಮನಸ್ತಾಪವಿದೆ ಎಂಬ ಸುಳ್ಳು ಸುದ್ದಿಯನ್ನು ಹುಟ್ಟುಹಾಕಲಾಗಿದೆ. ಇವರಿಬ್ಬರು ಮುಂಬೈ ತಂಡದ ಬೆನ್ನೆಲುಬಾಗಿದ್ದಾರೆ. ರೋಹಿತ್ ನಾಯಕತ್ವದಲ್ಲೇ ಮುಂಬೈ ಐದು ಬಾರಿ ಚಾಂಪಿಯನ್‌ ಆಗಿದೆ. ಹೀಗಿರುವಾಗ ರೋಹಿತ್ ಶರ್ಮಾ ಬಗ್ಗೆ ಯಾರು ಈ ರೀತಿಯಾಗಿ ಮಾತನಾಡಲು ಸಾಧ್ಯವೆ ಇಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ