Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಮುಂಬೈಗೆ ಮರ್ಮಾಘಾತ; ಆರಂಭಿಕ ಪಂದ್ಯಗಳಿಗೆ ಜಸ್ಪ್ರೀತ್ ಬುಮ್ರಾ ಅಲಭ್ಯ

Jasprit Bumrah injury: ಮುಂಬೈ ಇಂಡಿಯನ್ಸ್ ತಂಡಕ್ಕೆ ಐಪಿಎಲ್ ಆರಂಭಕ್ಕೂ ಮುನ್ನ ದೊಡ್ಡ ಆಘಾತ ಎದುರಾಗಿದೆ. ಹಾರ್ದಿಕ್ ಪಾಂಡ್ಯ ಅವರು ತಂಡದ ಮೊದಲ ಪಂದ್ಯದಿಂದ ಹೊರಗುಳಿದಿದ್ದಾರೆ. ಇದಲ್ಲದೆ, ತಂಡದ ಪ್ರಮುಖ ಬೌಲರ್ ಜಸ್ಪ್ರೀತ್ ಬುಮ್ರಾ ಕೂಡ ಮೊದಲ ಪಂದ್ಯದಲ್ಲಿ ಆಡುವುದಿಲ್ಲ ಎಂದು ಖಚಿತವಾಗಿದೆ. ಮಾರ್ಚ್ 23 ರಂದು ಚೆನ್ನೈನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆಯುವ ಮುಂಬೈನ ಮೊದಲ ಪಂದ್ಯಕ್ಕೆ ಇದು ದೊಡ್ಡ ಹಿನ್ನಡೆಯಾಗಿದೆ.

IPL 2025: ಮುಂಬೈಗೆ ಮರ್ಮಾಘಾತ; ಆರಂಭಿಕ ಪಂದ್ಯಗಳಿಗೆ ಜಸ್ಪ್ರೀತ್ ಬುಮ್ರಾ ಅಲಭ್ಯ
Jasprit Bumrah
Follow us
ಪೃಥ್ವಿಶಂಕರ
|

Updated on:Mar 19, 2025 | 3:02 PM

ಐಪಿಎಲ್ (IPL 2025) ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿರುವಾಗ ಮುಂಬೈ ಇಂಡಿಯನ್ಸ್ (Mumbai Indians) ತಂಡಕ್ಕೆ ಬಿಗ್ ಶಾಕ್ ಎದುರಾಗಿದೆ. ಈಗಾಗಲೇ ಕಳೆದ ಐಪಿಎಲ್​ನಲ್ಲಿ ಮಾಡಿದ ತಪ್ಪಿಗಾಗಿ ತಂಡದ ನಿಯಮಿತ ನಾಯಕ ಹಾರ್ದಿಕ್ ಪಾಂಡ್ಯ ತಂಡದ ಮೊದಲ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಇದೀಗ ತಂಡದ ಬೌಲಿಂಗ್ ಜೀವಾಳ ಎನಿಸಿಕೊಂಡಿರುವ ಜಸ್ಪ್ರೀತ್ ಬುಮ್ರಾ (Jasprit Bumrah) ಲೀಗ್​ನ ಆರಂಭಿಕ ಪಂದ್ಯಗಳಿಂದ ಹೊರಗುಳಿಯುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ. ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಈ ಪಂದ್ಯ ಮಾರ್ಚ್​ 23 ರಂದು ಚೆನ್ನೈನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಆಡದಿರುವುದು ಇದೀಗ ಖಚಿತವಾಗಿದೆ.

ಮುಖ್ಯ ಕೋಚ್ ಹೇಳಿದ್ದೇನು?

ಮಾರ್ಚ್ 19 ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಂಬೈ ಇಂಡಿಯನ್ಸ್ ತಂಡದ ಮುಖ್ಯ ಕೋಚ್ ಮಹೇಲ ಜಯವರ್ಧನೆ, ‘ಜಸ್ಪ್ರೀತ್ ಬುಮ್ರಾ ಯಾವಾಗ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳುತ್ತಾರೆ ಎಂಬುದರ ಬಗ್ಗೆ ಯಾವುದೇ ಖಚಿತ ಮಾಹಿತಿ ಸಿಕ್ಕಿಲ್ಲ. ಬುಮ್ರಾ ಅವರ ಅನುಪಸ್ಥಿತಿಯು ನಮ್ಮ ತಂಡಕ್ಕೆ ಇದೀಗ ದೊಡ್ಡ ಸವಾಲಾಗಿ ಪರಿಣಮಿಸಿದೆ. ಪ್ರಸ್ತುತ ಬುಮ್ರಾ ಬೆಂಗಳೂರಿನಲ್ಲಿರುವ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ರಿಹ್ಯಾಬ್​ಗೆ ಒಳಗಾಗಿದ್ದಾರೆ.

ಇದನ್ನೂ ಓದಿ
Image
ಮಾ.20 ರಂದು ಎಲ್ಲಾ 10 ತಂಡಗಳ ನಾಯಕರ ಸಭೆ ಕರೆದ ಬಿಸಿಸಿಐ
Image
ಗುಜರಾತ್ ಟೈಟನ್ಸ್ ತಂಡಕ್ಕೆ ಹೊಸ ಮಾಲೀಕತ್ವ
Image
ಸೊಂಟ ಬಳುಕಿಸಲಿರುವ ಪಡ್ಡೆ ಹುಡುಗರ ನಿದ್ದೆ ಕದ್ದಿರುವ ಬಾಲಿವುಡ್ ಬೆಡಗಿ
Image
ಇವರೇ ಮುಂಬೈ ತಂಡದ ಬೆನ್ನೇಲುಬು ಎಂದ ಹಾರ್ದಿಕ್ ಪಾಂಡ್ಯ

ಇದನ್ನೂ ಓದಿ: IPL 2025: ಐಪಿಎಲ್ ಆರಂಭಕ್ಕೂ ಮುನ್ನ ಎಲ್ಲಾ 10 ತಂಡಗಳ ನಾಯಕರ ಸಭೆ ಕರೆದ ಬಿಸಿಸಿಐ

ಪ್ರಸ್ತುತ ಎನ್​ಸಿಎ ಅಧಿಕಾರಿಗಳಿಂದ ಬುಮ್ರಾ ಲಭ್ಯತೆಯ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಹಾಗೆಯೇ ಬುಮ್ರಾ ಐಪಿಎಲ್‌ನಲ್ಲಿ ಆಡುವುದಕ್ಕೂ ಎನ್​ಸಿಎಯಿಂದ ಇನ್ನೂ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ ಎಂದಿದ್ದಾರೆ. ಜಯವರ್ಧನೆ ಈ ರೀತಿ ಹೇಳಿಕೆ ನೀಡಿರುವುದು ಮುಂಬೈ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದ್ದು, ಸಧ್ಯಕ್ಕಂತೂ ಬುಮ್ರಾ, ಟೂರ್ನಿಯ ಮೊದಲ ಕೆಲವು ಪಂದ್ಯಗಳಲ್ಲಿ ಆಡಲು ಸಾಧ್ಯವಾಗುವುದಿಲ್ಲ ಎಂಬುದು ಖಚಿತವಾದಂತ್ತಾಗಿದೆ.

ಮುಂಬೈ ಇಂಡಿಯನ್ಸ್ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ಸೂರ್ಯಕುಮಾರ್ ಯಾದವ್, ರೋಹಿತ್ ಶರ್ಮಾ, ತಿಲಕ್ ವರ್ಮಾ, ಜಸ್ಪ್ರೀತ್ ಬುಮ್ರಾ, ಬೆವೊನ್ ಜೇಕಬ್ಸ್, ರಯಾನ್ ರಿಕಲ್ಟನ್, ರಾಬಿನ್ ಮಿಂಜ್, ಕೃಷ್ಣನ್ ಶ್ರೀಜೀತ್, ನಮನ್ ಧೀರ್, ರಾಜ್ ಅಂಗದ್ ಬಾವಾ, ವಿಘ್ನೇಶ್ ಪುತ್ತೂರ್, ವಿಲ್ ಜಾಕ್ಸ್, ಮಿಚೆಲ್ ಸ್ಯಾಂಟ್ನರ್, ಅರ್ಜುನ್ ತೆಂಡೂಲ್ಕರ್, ಅಶ್ವಿನಿ ಕುಮಾರ್, ರೀಸ್ ಟೋಪ್ಲಿ, ಕರ್ಣ್ ಶರ್ಮಾ, ಟ್ರೆಂಟ್ ಬೌಲ್ಟ್, ದೀಪಕ್ ಚಾಹರ್, ವೆಂಕಟ್ ಸತ್ಯನಾರಾಯಣ ರಾಜು, ಮುಜೀಬ್-ಉರ್-ರಹಮಾನ್, ಕಾರ್ಬಿನ್ ಬಾಷ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:40 pm, Wed, 19 March 25

ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು
ರಾಜಣ್ಣಗೆ ಮಾತ್ರವಲ್ಲ ಪುತ್ರನಿಗೂ ಹನಿಟ್ರ್ಯಾಪ್​​​​​ ಬಲೆಗೆ ಬೀಳಿಸುವ ಸಂಚು!
ರಾಜಣ್ಣಗೆ ಮಾತ್ರವಲ್ಲ ಪುತ್ರನಿಗೂ ಹನಿಟ್ರ್ಯಾಪ್​​​​​ ಬಲೆಗೆ ಬೀಳಿಸುವ ಸಂಚು!
ಹನಿಟ್ರ್ಯಾಪ್ ಕೇಸ್ ಉನ್ನತ ಮಟ್ಟದ ತನಿಖೆಗೆ: ಸದನದಲ್ಲೇ ಘೋಷಿಸಿದ ಗೃಹ ಸಚಿವ
ಹನಿಟ್ರ್ಯಾಪ್ ಕೇಸ್ ಉನ್ನತ ಮಟ್ಟದ ತನಿಖೆಗೆ: ಸದನದಲ್ಲೇ ಘೋಷಿಸಿದ ಗೃಹ ಸಚಿವ
ಯಾರು ಮಾಡಿಸುತ್ತಿದ್ದಾರೆ ಅಂತ ಹೇಳಿದರೆ ರಾಜಕೀಯ ಆರೋಪವಾಗುತ್ತದೆ: ಸಚಿವ
ಯಾರು ಮಾಡಿಸುತ್ತಿದ್ದಾರೆ ಅಂತ ಹೇಳಿದರೆ ರಾಜಕೀಯ ಆರೋಪವಾಗುತ್ತದೆ: ಸಚಿವ
ರಾಯರೆಡ್ಡಿ ಇಂಗ್ಲಿಷಲ್ಲಿ ಮಾತು; ಯತ್ನಾಳ್ ಸಹ ಇಂಗ್ಲಿಷ್ ಭಾಷೆಯಲ್ಲೇ ಉತ್ತರ!
ರಾಯರೆಡ್ಡಿ ಇಂಗ್ಲಿಷಲ್ಲಿ ಮಾತು; ಯತ್ನಾಳ್ ಸಹ ಇಂಗ್ಲಿಷ್ ಭಾಷೆಯಲ್ಲೇ ಉತ್ತರ!
ನೂತನ ಟ್ರಾವೆಲ್ ಜೆರ್ಸಿಯಲ್ಲಿ ಮಿರಮಿರ ಮಿಂಚಿದ ಆರ್​ಸಿಬಿ ಬಾಯ್ಸ್
ನೂತನ ಟ್ರಾವೆಲ್ ಜೆರ್ಸಿಯಲ್ಲಿ ಮಿರಮಿರ ಮಿಂಚಿದ ಆರ್​ಸಿಬಿ ಬಾಯ್ಸ್
ಸಚಿವ ಸತೀಶ್ ಜಾರಕಿಹೊಳಿ ಬಾಂಬ್​: ನಮ್ಮ ಮಂತ್ರಿ ಮೇಲೆ ಹನಿಟ್ರ್ಯಾಪ್ ಆಗಿದೆ​
ಸಚಿವ ಸತೀಶ್ ಜಾರಕಿಹೊಳಿ ಬಾಂಬ್​: ನಮ್ಮ ಮಂತ್ರಿ ಮೇಲೆ ಹನಿಟ್ರ್ಯಾಪ್ ಆಗಿದೆ​
ಸಾರ್ವಜನಿಕ ಹಣ ಪೋಲು ಮಾಡುವ ವಿಷಯದಲ್ಲಿ ಕಾಂಗ್ರೆಸ್ ವಿವಿ ಆರಂಭಿಸಿದೆ: ಅಶೋಕ
ಸಾರ್ವಜನಿಕ ಹಣ ಪೋಲು ಮಾಡುವ ವಿಷಯದಲ್ಲಿ ಕಾಂಗ್ರೆಸ್ ವಿವಿ ಆರಂಭಿಸಿದೆ: ಅಶೋಕ
ನಮ್ಮ ನಡತೆ ಸರಿಯಾಗಿದ್ದರೆ ಯಾರೂ ಟಾರ್ಗೆಟ್ ಮಾಡಲ್ಲ: ಬಾಲಕೃಷ್ಣ
ನಮ್ಮ ನಡತೆ ಸರಿಯಾಗಿದ್ದರೆ ಯಾರೂ ಟಾರ್ಗೆಟ್ ಮಾಡಲ್ಲ: ಬಾಲಕೃಷ್ಣ
ವಕ್ಫ್‌ ತಿದ್ದುಪಡಿ ಮಸೂದೆ ವಿರುದ್ಧ ನಿರ್ಣಯ ಅಂಗೀಕಾರ, ಜೋಶಿ ಏನಂದ್ರು?
ವಕ್ಫ್‌ ತಿದ್ದುಪಡಿ ಮಸೂದೆ ವಿರುದ್ಧ ನಿರ್ಣಯ ಅಂಗೀಕಾರ, ಜೋಶಿ ಏನಂದ್ರು?