AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಗೆದ್ದ RCB, ಪ್ಲೇಆಫ್ ರೇಸ್​ನಿಂದ ಹೊರಬಿದ್ದ ಮುಂಬೈ ಇಂಡಿಯನ್ಸ್

IPL 2022 Playoffs: ಡೆಲ್ಲಿ ಕ್ಯಾಪಿಟಲ್ಸ್​ 10 ಮ್ಯಾಚ್ ಆಡಿ 10 ಪಾಯಿಂಟ್ಸ್ ಪಡೆದುಕೊಂಡಿದೆ. ಅಂದರೆ ನಾಲ್ಕು ಮ್ಯಾಚ್​ನಲ್ಲಿ ಮೂರು ಗೆದ್ದರೆ 16 ಪಾಯಿಂಟ್ಸ್ ಆಗಲಿದೆ. ಹಾಗೆಯೇ ಎಸ್​ಆರ್​ಹೆಚ್ ಹಾಗೂ ಪಂಜಾಬ್ ಕಿಂಗ್ಸ್​ ತಂಡಗಳಿಗೂ 3 ಮ್ಯಾಚ್​ಗಳು ಉಳಿದಿದ್ದು, ಈ ಪಂದ್ಯಗಳಲ್ಲಿ ಈ ಎರಡು ತಂಡಗಳು ಗೆದ್ದರೆ ಆ ತಂಡಗಳ ಪಾಯಿಂಟ್ಸ್ ಕೂಡ 16 ಆಗಲಿದೆ.

IPL 2022: ಗೆದ್ದ RCB, ಪ್ಲೇಆಫ್ ರೇಸ್​ನಿಂದ ಹೊರಬಿದ್ದ ಮುಂಬೈ ಇಂಡಿಯನ್ಸ್
Rohit Sharma
TV9 Web
| Updated By: ಝಾಹಿರ್ ಯೂಸುಫ್|

Updated on: May 08, 2022 | 8:03 PM

Share

IPL 2022: ಐಪಿಎಲ್ ಸೀಸನ್​ 15 ಪ್ಲೇಆಫ್​ ರೇಸ್​ನಿಂದ 5 ಬಾರಿಯ ಐಪಿಎಲ್​ ಚಾಂಪಿಯನ್ ಮುಂಬೈ ಇಂಡಿಯನ್ಸ್​ ಅಧಿಕೃತವಾಗಿ ಹೊರಬಿದ್ದಿದೆ. ಆಡಿರುವ 10 ಪಂದ್ಯಗಳಲ್ಲಿ ಕೇವಲ 2 ಜಯ ಸಾಧಿಸಿ 4 ಪಾಯಿಂಟ್ಸ್ ಪಡೆದಿದ್ದ ಮುಂಬೈಗೆ ಇನ್ನು 4 ಪಂದ್ಯಗಳು ಬಾಕಿಯಿವೆ. ಆದರೆ ಈ ನಾಲ್ಕು ಮ್ಯಾಚ್​ನಲ್ಲೂ ಗೆದ್ದರೂ ಸಹ ಇನ್ನು ಪ್ಲೇಆಫ್ ಪ್ರವೇಶಿಸಲು ಸಾಧ್ಯವಾಗುವುದಿಲ್ಲ. ಏಕೆಂದರೆ ಈಗಾಗಲೇ ಪಾಯಿಂಟ್ಸ್ ಟೇಬಲ್​​ನಲ್ಲಿ ಎರಡು ತಂಡಗಳು 16 ಪಾಯಿಂಟ್ಸ್ ಪಡೆದಿದ್ದು, ಮತ್ತೆರಡು ತಂಡಗಳು 14 ಪಾಯಿಂಟ್ಸ್ ಪಡೆದಿವೆ. ಆರ್​ಸಿಬಿ ತಂಡವು ಸನ್​ರೈಸರ್ಸ್​ ಹೈದರಾಬಾದ್ ವಿರುದ್ದ ಗೆಲ್ಲುವ ಮೂಲಕ ಒಟ್ಟು 14 ಪಾಯಿಂಟ್ಸ್​ಗಳಿಸಿ ಅಗ್ರ ನಾಲ್ಕರಲ್ಲಿ 4ನೇ ಸ್ಥಾನ ಪಡೆದಿದೆ. ಇದರೊಂದಿಗೆ ಮುಂಬೈ ಇಂಡಿಯನ್ಸ್ ಪ್ಲೇಆಫ್ ಕನಸು ಕೂಡ ಕಮರಿದೆ.

ಏಕೆಂದರೆ ಮುಂಬೈ ಇಂಡಿಯನ್ಸ್​ ಇನ್ನುಳಿದ ನಾಲ್ಕು ಮ್ಯಾಚ್​ಗಳನ್ನು ಗೆದ್ದರೂ ಒಟ್ಟು ಪಾಯಿಂಟ್ಸ್ ಕೇವಲ 12 ಮಾತ್ರ ಆಗಲಿದೆ. ಆದರೆ ಈಗಾಗಲೇ ಅಗ್ರ ನಾಲ್ಕು ತಂಡಗಳು 14 ಮತ್ತು ಅದಕ್ಕಿಂತ ಹೆಚ್ಚಿನ ಪಾಯಿಂಟ್ಸ್ ಪಡೆದಿರುವ ಕಾರಣ ಮುಂಬೈಗೆ ಪ್ಲೇಆಫ್ ಗೇರುವ ಚಾನ್ಸ್ ಇಲ್ಲ. ಪಾಯಿಂಟ್ಸ್ ಟೇಬಲ್​ನ ಟಾಪ್ 4 ತಂಡಗಳಲ್ಲಿ ಒಂದು ತಂಡವು 12 ಪಾಯಿಂಟ್ಸ್​ ಪಡೆದಿದ್ದರೆ ಮಾತ್ರ ಮುಂಬೈಗೆ ಅವಕಾಶವಿತ್ತು. ಇದೀಗ ಆರ್​ಸಿಬಿ ಗೆಲುವಿನೊಂದಿಗೆ ಪಾಯಿಂಟ್ಸ್ ಟೇಬಲ್​ನಲ್ಲಿರುವ ಅಗ್ರ ನಾಲ್ಕು ತಂಡಗಳ ಪಾಯಿಂಟ್ಸ್ 16 ಮತ್ತು 14 ಆಗಿವೆ. ಇದರೊಂದಿಗೆ ಮುಂಬೈ ಇಂಡಿಯನ್ಸ್ ಪ್ಲೇಆಫ್​ ರೇಸ್​ನಿಂದ ಹೊರಬಿದ್ದ ಮೊದಲ ತಂಡ ಎನಿಸಿಕೊಂಡಿದೆ.

ಇದಾಗ್ಯೂ ಯಾವುದೇ ತಂಡ ಇನ್ನೂ ಕೂಡ ಪ್ಲೇಆಫ್ ಅನ್ನು ಖಚಿತಪಡಿಸಿಕೊಂಡಿಲ್ಲ. ಪಾಯಿಂಟ್ಸ್ ಟೇಬಲ್​ನಲ್ಲಿ ಅಗ್ರಸ್ಥಾನ ಪಡೆದಿರುವ ಲಕ್ನೋ ಸೂಪರ್ ಜೈಂಟ್ಸ್​ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಮುಂದಿನ ಪಂದ್ಯಗಳನ್ನು ಗೆದ್ದರೆ ಅಧಿಕೃತವಾಗಿ ಪ್ಲೇಆಫ್​ಗೆ ಎಂಟ್ರಿ ಕೊಡಲಿದೆ. ಇನ್ನು ಆರ್​ಸಿಬಿ ಪ್ಲೇಆಫ್ ಖಚಿತಪಡಿಸಿಕೊಳ್ಳಬೇಕಿದ್ರೆ ಮತ್ತೆರಡು ಪಂದ್ಯಗಳನ್ನು ಗೆಲ್ಲಬೇಕು.

ಏಕೆಂದರೆ ಆರ್​ಸಿಬಿ ತಂಡವು ಮುಂದಿನ 2 ಪಂದ್ಯಗಳಲ್ಲಿ ಗೆದ್ದರೆ ಮಾತ್ರ ಪ್ಲೇಆಫ್ ಕನ್​​ಫರ್ಮ್ ಮಾಡಿಕೊಳ್ಳಬಹುದು. ಅಂದರೆ ಒಟ್ಟು 18 ಪಾಯಿಂಟ್​ಗಳಿಸಿ ಪ್ಲೇಆಫ್​ ಪ್ರವೇಶಿಸಬಹುದು. ಇನ್ನು ಒಂದರಲ್ಲಿ ಮಾತ್ರ ಗೆದ್ದರೆ ಒಟ್ಟು 16 ಪಾಯಿಂಟ್ ಆಗಲಿದೆ. ಆದರೆ ಈಗಾಗಲೇ ಗುಜರಾತ್ ಟೈಟನ್ಸ್ 16 ಪಾಯಿಂಟ್ಸ್ ಪಡೆದಿದೆ. ಹಾಗೆಯೇ ಲಕ್ನೋ ಸೂಪರ್ ಜೈಂಟ್ಸ್​ 16 ಪಾಯಿಂಟ್ಸ್​ನೊಂದಿಗೆ ಅಗ್ರಸ್ಥಾನದಲ್ಲಿದೆ. ಮತ್ತೊಂದೆಡೆ ರಾಜಸ್ಥಾನ್ ರಾಯಲ್ಸ್ 14 ಪಾಯಿಂಟ್ಸ್​ ಹೊಂದಿದೆ. ಆದರೆ ರಾಜಸ್ಥಾನ್​ ರಾಯಲ್ಸ್ ಇನ್ನೂ 3 ಮ್ಯಾಚ್ ಉಳಿದಿದೆ. ಹೀಗಾಗಿ ಆರ್​ಆರ್ ಕೂಡ 16 ಪಾಯಿಂಟ್ಸ್​ ಗಳಿಸುವ ಸಾಧ್ಯತೆಯಿದೆ.

ಮತ್ತೊಂದೆಡೆ ಡೆಲ್ಲಿ ಕ್ಯಾಪಿಟಲ್ಸ್​ 10 ಮ್ಯಾಚ್ ಆಡಿ 10 ಪಾಯಿಂಟ್ಸ್ ಪಡೆದುಕೊಂಡಿದೆ. ಅಂದರೆ ನಾಲ್ಕು ಮ್ಯಾಚ್​ನಲ್ಲಿ ಮೂರು ಗೆದ್ದರೆ 16 ಪಾಯಿಂಟ್ಸ್ ಆಗಲಿದೆ. ಹಾಗೆಯೇ ಎಸ್​ಆರ್​ಹೆಚ್ ಹಾಗೂ ಪಂಜಾಬ್ ಕಿಂಗ್ಸ್​ ತಂಡಗಳಿಗೂ 3 ಮ್ಯಾಚ್​ಗಳು ಉಳಿದಿದ್ದು, ಈ ಪಂದ್ಯಗಳಲ್ಲಿ ಈ ಎರಡು ತಂಡಗಳು ಗೆದ್ದರೆ ಆ ತಂಡಗಳ ಪಾಯಿಂಟ್ಸ್ ಕೂಡ 16 ಆಗಲಿದೆ. ಒಂದು ವೇಳೆ 3ನೇ ಮತ್ತು 4ನೇ ಸ್ಥಾನ ಪಡೆಯುವ ತಂಡಗಳ ಪಾಯಿಂಟ್ಸ್​ 16 ಆದರೆ ನೆಟ್​ ರನ್​ ರೇಟ್​ನ ಮೊರೆ ಹೋಗಬೇಕಾಗುತ್ತದೆ. ಹೀಗಾಗಿ ಆರ್​ಸಿಬಿ ಪ್ಲೇಆಫ್​ ಖಚಿತಪಡಿಸಿಕೊಳ್ಳಲು ಮುಂದಿನ 2 ಪಂದ್ಯಗಳನ್ನು ಗೆಲ್ಲಲೇಬೇಕಿದೆ.

ಮುಂಬೈ ಇಂಡಿಯನ್ಸ್ (MI): ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಡೆವಾಲ್ಡ್ ಬ್ರೆವಿಸ್, ಕೀರಾನ್ ಪೊಲಾರ್ಡ್, ಜಸ್ಪ್ರೀತ್ ಬುಮ್ರಾ, ಮುರುಗನ್ ಅಶ್ವಿನ್, ಬಾಸಿಲ್ ಥಂಪಿ, ಜಯದೇವ್ ಉನದ್ಕತ್, ಮಯಾಂಕ್ ಮಾರ್ಕಂಡೆ, ಸಂಜಯ್ ಯಾದವ್, ರಮಣ್‌ದೀಪ್ ಸಿಂಗ್, ಆರ್ಯನ್ ಜುಯಲ್, ಅರ್ಜುನ್ ತೆಂಡೂಲ್ಕರ್, ತಿಲಕ್ ವರ್ಮಾ, ರಾಹುಲ್ ಬುಮ್ರಾ, ಹೃತಿಕ್ ಶೋಕೀನ್ , ಅರ್ಷದ್ ಖಾನ್, ಟೈಮಲ್ ಮಿಲ್ಸ್, ಜೋಫ್ರಾ ಆರ್ಚರ್, ಫ್ಯಾಬಿಯನ್ ಅಲೆನ್, ಡೇನಿಯಲ್ ಸ್ಯಾಮ್ಸ್, ಅನ್ಮೋಲ್ಪ್ರೀತ್ ಸಿಂಗ್, ಟಿಮ್ ಡೇವಿಡ್, ರಿಲೆ ಮೆರೆಡಿತ್.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ