AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೇಯಸ್ ಬದಲಿಗೆ ಸೂರ್ಯಕುಮಾರ್ ಎಂಟ್ರಿ; ತಂಡದಲ್ಲಿ ಹಠಾತ್ ಬದಲಾವಣೆ

Ranji Trophy Quarterfinals: ರಣಜಿ ಟ್ರೋಫಿಯ ಕ್ವಾರ್ಟರ್ ಫೈನಲ್‌ಗೆ ಮುಂಬೈ ತನ್ನ 18 ಸದಸ್ಯರ ತಂಡವನ್ನು ಪ್ರಕಟಿಸಿದೆ. ಭಾರತದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಶ್ರೇಯಸ್ ಅಯ್ಯರ್ ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿಯನ್ನು ಆಡಬೇಕಾಗಿರುವುದರಿಂದ ಅವರನ್ನು ತಂಡದಿಂದ ಕೈಬಿಡಲಾಗಿದೆ.

ಶ್ರೇಯಸ್ ಬದಲಿಗೆ ಸೂರ್ಯಕುಮಾರ್ ಎಂಟ್ರಿ; ತಂಡದಲ್ಲಿ ಹಠಾತ್ ಬದಲಾವಣೆ
ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್
ಪೃಥ್ವಿಶಂಕರ
|

Updated on: Feb 03, 2025 | 8:46 PM

Share

ರಣಜಿ ಟ್ರೋಫಿಯ ಕ್ವಾರ್ಟರ್ ಫೈನಲ್‌ ಸುತ್ತು ಫೆಬ್ರವರಿ 8 ರಿಂದ ಆರಂಭವಾಗಲಿದೆ. ಈ ಸುತ್ತಿಗೆ 8 ತಂಡಗಳು ಎಂಟ್ರಿಕೊಟ್ಟಿದ್ದು, ಇವುಗಳಲ್ಲಿ ಮುಂಬೈ ತಂಡ ಕೂಡ ಸೇರಿದೆ. ಇದೀಗ ರಣಜಿ ಟ್ರೋಫಿಯ ಕ್ವಾರ್ಟರ್ ಫೈನಲ್‌ಗೆ ಮುಂಬೈ ತನ್ನ ತಂಡವನ್ನು ಪ್ರಕಟಿಸಿದ್ದು, ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಶ್ರೇಯಸ್ ಅಯ್ಯರ್ ಬದಲಿಗೆ ಸೂರ್ಯಕುಮಾರ್ ಯಾದವ್​ರನ್ನು ಆಯ್ಕೆ ಮಾಡಲಾಗಿದೆ ಎಂಬುದು ದೊಡ್ಡ ಸುದ್ದಿಯಾಗಿದೆ.

ಮುಂಬೈ ತಂಡ ರಣಜಿ ಟ್ರೋಫಿಯ ಕ್ವಾರ್ಟರ್ ಫೈನಲ್‌ನಲ್ಲಿ ಹರಿಯಾಣ ವಿರುದ್ಧ ಆಡಲಿದೆ. ಈ ಪಂದ್ಯ ಲಾಹ್ಲಿ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯಕ್ಕೆ ಮುಂಬೈ 18 ಸದಸ್ಯರ ತಂಡವನ್ನು ಆಯ್ಕೆ ಮಾಡಿದ್ದು, ಇದರಲ್ಲಿ ಅನೇಕ ಸ್ಟಾರ್ ಆಟಗಾರರ ಹೆಸರುಗಳಿವೆ. ವಾಸ್ತವವಾಗಿ ಶ್ರೇಯಸ್ ಅಯ್ಯರ್ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯನ್ನು ಆಡಲಿರುವ ಕಾರಣದಿಂದ ಅವರನ್ನು ಮುಂಬೈ ತಂಡದಿಂದ ಕೈಬಿಡಲಾಗಿದೆ.

ಮುಂಬೈ ತಂಡ: ಅಜಿಂಕ್ಯ ರಹಾನೆ (ನಾಯಕ), ಆಯುಷ್ ಮ್ಹಾತ್ರೆ, ಅಂಗ್ಕ್ರಿಶ್ ರಘುವಂಶಿ, ಅಮೋಘ್ ಭಟ್ಕಳ್, ಸೂರ್ಯಕುಮಾರ್ ಯಾದವ್, ಸಿದ್ಧೇಶ್ ಲಾಡ್, ಶಿವಂ ದುಬೆ, ಆಕಾಶ್ ಆನಂದ್, ಹಾರ್ದಿಕ್ ತಮೋರ್, ಸೂರ್ಯಾಂಶ್ ಶೆಡ್ಗೆ, ಶಾರ್ದೂಲ್ ಠಾಕೂರ್, ಶಮ್ಸ್ ಮುಲಾನಿ, ತನುಷ್ ಕೋಟ್ಯಾನ್, ಮೋಹಿತ್ ಅವಸ್ತಿ, ಸಿಲ್ವೆಸ್ಟರ್ ಡಿಸೋಜಾ, ರಾಯ್ಸ್ಟನ್ ಡಯಾಸ್, ಅಥರ್ವ ಅಂಕೋಲೆಕರ್, ಹರ್ಷ ತನ್ನಾ

ರಣಜಿ ಟ್ರೋಫಿಯಲ್ಲಿ ಮುಂಬೈ ತಂಡದ ಸಾಧನೆ

ಈ ಬಾರಿಯ ರಣಜಿ ಟ್ರೋಫಿಯಲ್ಲಿ ಮುಂಬೈ ತಂಡದ ಪ್ರದರ್ಶನ ಉತ್ತಮವಾಗಿದ್ದು, ಒಂದೇ ಒಂದು ಪಂದ್ಯದಲ್ಲಿ ಸೋತಿದೆ. ಜಮ್ಮು ಮತ್ತು ಕಾಶ್ಮೀರದ ವಿರುದ್ಧ ಸೋತಿದ್ದ ಮುಂಬೈ, ಬರೋಡಾವನ್ನು 84 ರನ್‌ಗಳಿಂದ ಸೋಲಿಸಿತು. ಮಹಾರಾಷ್ಟ್ರ ವಿರುದ್ಧ 9 ವಿಕೆಟ್‌ಗಳ ಜಯ ಸಾಧಿಸಿದ ಮುಂಬೈ, ತ್ರಿಪುರಾ ವಿರುದ್ಧದ ಪಂದ್ಯವನ್ನು ಡ್ರಾ ಮಾಡಿಕೊಂಡಿತ್ತು ನಂತರ ಒಡಿಶಾವನ್ನು ಇನಿಂಗ್ಸ್ ಮತ್ತು 103 ರನ್‌ಗಳಿಂದ ಸೋಲಿಸಿದ್ದ ಮುಂಬೈ ತಂಡವು ಸರ್ವಿಸಸ್ ವಿರುದ್ಧದ ಪಂದ್ಯದಲ್ಲಿ 9 ವಿಕೆಟ್‌ಗಳಿಂದ ಹಾಗೂ ಮೇಘಾಲಯ ವಿರುದ್ಧ ಇನಿಂಗ್ಸ್ ಮತ್ತು 456 ರನ್‌ಗಳ ಜಯ ಸಾಧಿಸಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ