AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈದಾನದಲ್ಲಿ ಮೊಳಗಿದ DK..DK ಘೋಷಣೆ: ಕೈ ಮುಗಿದು ಬಿಟ್ಟು ಬಿಡ್ರಪ್ಪಾ ಎಂದ ಮುರಳಿ ವಿಜಯ್

TNPL 2022: ತಮಿಳುನಾಡು ಪ್ರೀಮಿಯರ್ ಲೀಗ್​ನಲ್ಲಿ ಈಗಾಗಲೇ 23 ಪಂದ್ಯಗಳು ಮುಗಿದಿದ್ದು, ಪಾಯಿಂಟ್ ಟೇಬಲ್​ನಲ್ಲಿ ನೆಲ್ಲೈ ರಾಯಲ್ ಕಿಂಗ್ಸ್​ ಅಗ್ರಸ್ಥಾನದಲ್ಲಿದೆ. ಇನ್ನು ದ್ವಿತೀಯ ಸ್ಥಾನದಲ್ಲಿ ಚೆಪಕ್ ಸೂಪರ್ ಗಿಲ್ಲೀಸ್ ಇದ್ದರೆ, ಮಧುರೈ ಪ್ಯಾಂಥರ್ಸ್ ಹಾಗೂ ಕೊವೈ ಕಿಂಗ್ಸ್​ 3ನೇ ಮತ್ತು 4ನೇ ಸ್ಥಾನ ಅಲಂಕರಿಸಿದೆ. 

ಮೈದಾನದಲ್ಲಿ ಮೊಳಗಿದ DK..DK ಘೋಷಣೆ: ಕೈ ಮುಗಿದು ಬಿಟ್ಟು ಬಿಡ್ರಪ್ಪಾ ಎಂದ ಮುರಳಿ ವಿಜಯ್
Murali VIjay
TV9 Web
| Edited By: |

Updated on:Jul 20, 2022 | 6:43 PM

Share

ಟೀಮ್ ಇಂಡಿಯಾದ ಟೆಸ್ಟ್ ಸ್ಪೆಷಲಿಸ್ಟ್ ಬ್ಯಾಟ್ಸ್​ಮನ್ ಮುರಳಿ ವಿಜಯ್ ಭಾರತ ತಂಡದ ಪರ ಆಡಿ ವರ್ಷಗಳೇ ಕಳೆದಿವೆ. ಅಷ್ಟೇ ಅಲ್ಲದೆ ಐಪಿಎಲ್​ನಲ್ಲೂ ಅವಕಾಶ ಸಿಗುತ್ತಿಲ್ಲ. ಮತ್ತೊಂದೆಡೆ ದಿನೇಶ್ ಕಾರ್ತಿಕ್ ಐಪಿಎಲ್​ ಮೂಲಕವೇ ಟೀಮ್ ಇಂಡಿಯಾ ಕದ ತಟ್ಟಿದ್ದಾರೆ. ಇತ್ತ ಡಿಕೆಗೆ ಭಾರತ ತಂಡದಲ್ಲಿ ಅವಕಾಶ ಸಿಗುತ್ತಿದ್ದಂತೆ ಮುರಳಿ ವಿಜಯ್ ಕೂಡ ಮೈದಾನಕ್ಕೆ ಮರಳಿದ್ದಾರೆ. ಅದರಂತೆ  ಪ್ರಸ್ತುತ ನಡೆಯುತ್ತಿರುವ ತಮಿಳುನಾಡು ಪ್ರೀಮಿಯರ್​​ ಲೀಗ್​ನಲ್ಲಿ ರೂಬಿ ತಿರುಚ್ಚಿ ವಾರಿಯರ್ಸ್ ಪರ ಮುರಳಿ ವಿಜಯ್ ಕಣಕ್ಕಿಳಿಯುತ್ತಿದ್ದಾರೆ. ಅಷ್ಟೇ ಅಲ್ಲದೆ ನೆಲ್ಲೈ ರಾಯಲ್ ಕಿಂಗ್ಸ್ ವಿರುದ್ದ ಕೇವಲ 66 ಎಸೆತಗಳಲ್ಲಿ 121 ರನ್​ ಬಾರಿಸಿ ಅಬ್ಬರಿಸಿದ್ದಾರೆ.

ಇತ್ತ ಭರ್ಜರಿ ಬ್ಯಾಟಿಂಗ್ ಮೂಲಕ ಗಮನ ಸೆಳೆದ ಮುರಳಿ ವಿಜಯ್​​ಗೆ ಫೀಲ್ಡಿಂಗ್ ಮಾಡುವುದೇ ಸಮಸ್ಯೆಯಾಗಿದೆ. ಏಕೆಂದರೆ ಅವರು ಬೌಂಡರಿ ಲೈನ್​ನಲ್ಲಿ ಫೀಲ್ಡಿಂಗ್​ ನಿಂತರೆ ದಿನೇಶ್ ಕಾರ್ತಿಕ್ ಅವರ ಹೆಸರು ಕೇಳಿ ಬರುತ್ತಿದೆ. ಹೌದು, ಪಂದ್ಯದ ವೇಳೆ ಫೀಲ್ಡಿಂಗ್ ಮಾಡುತ್ತಿದ್ದ ಮುರಳಿ ವಿಜಯ್​ ಅವರನ್ನು ಚುಡಾಯಿಸಲೆಂದೇ ಅಭಿಮಾನಿಗಳು ಇದೀಗ ಡಿಕೆ ಡಿಕೆ ಎಂದು ಘೋಷಣೆ ಕೂಗುತ್ತಿದ್ದಾರೆ.

ಇದನ್ನೂ ಓದಿ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್
Image
Steve Smith: ಬರೋಬ್ಬರಿ 30 ಕೋಟಿ ಲಾಭ ಪಡೆದ ಸ್ಟೀವ್ ಸ್ಮಿತ್..!
Image
Cricket Records: ಕ್ರಿಕೆಟ್ ಇತಿಹಾಸದ ಈ ಅದ್ಭುತ ದಾಖಲೆಗಳನ್ನು ಎಂದಿಗೂ ಮುರಿಯಲಾಗುವುದಿಲ್ಲ!
Image
Team India: 1 ವರ್ಷದೊಳಗೆ 8 ನಾಯಕರನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ..!

ಅತ್ತ ದಿನೇಶ್ ಕಾರ್ತಿಕ್ ತಮಿಳುನಾಡು ಪ್ರೀಮಿಯರ್ ಲೀಗ್​ನಲ್ಲೂ ಕಾಣಿಸಿಕೊಳ್ಳದಿದ್ದರೂ ಅಭಿಮಾನಿಗಳು ಮಾತ್ರ ಡಿಕೆ ಹೆಸರಿನೊಂದಿಗೆ ಹರ್ಷೋದ್ಘಾರ ಮಾಡುತ್ತಿದ್ದಾರೆ. ಅದು ಸಹ ಮುರಳಿ ವಿಜಯ್ ಬೌಂಡರಿ ಲೈನ್​ನಲ್ಲಿ ಫೀಲ್ಡಿಂಗ್ ಮಾಡುವ ವೇಳೆ ಎಂಬುದು ವಿಶೇಷ.

ನೆಲ್ಲೈ ರಾಯಲ್ ಕಿಂಗ್ಸ್ ವಿರುದ್ದದ ಪಂದ್ಯದ ವೇಳೆ ಡಿಕೆಯ ಹೆಸರಿನೊಂದಿಗೆ ಮುರಳಿ ವಿಜಯ್ ಅವರನ್ನು ಅಭಿಮಾನಿಗಳು ಕೀಟಲೆ ಮಾಡುತ್ತಿರುವ ವಿಡಿಯೋವೊಂದು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಡಿಯೋ ಏನ್ರಾಪ್ಪ ನಿಮ್ಮ ಪ್ರಾಬ್ಲಂ ಎನ್ನುವ ಭಾವದಲ್ಲಿ ಮುರಳಿ ವಿಜಯ್ ಕೈಸನ್ನೆ ಮಾಡಿದ್ದಾರೆ. ಇದಾಗ್ಯೂ ಅಭಿಮಾನಿಗಳ ಡಿಕೆ ಘೋಷಣೆ ಜೋರಾಗಿತ್ತು. ಈ ವೇಳೆ ಮುರಳಿ ವಿಜಯ್ ಕೈ ಮುಗಿಯುತ್ತಿರುವುದು ಕೂಡ ಕಾಣಬಹುದು. ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಮತ್ತೊಮ್ಮೆ ಮುರಳಿ ವಿಜಯ್ ಹಾಗೂ ದಿನೇಶ್ ಕಾರ್ತಿಕ್ ವೈಯುಕ್ತಿಕ ವಿಚಾರ ಚರ್ಚೆಗೆ ಗ್ರಾಸವಾಗಿದೆ.

ಅಷ್ಟಕ್ಕೂ ಮುರಳಿ ವಿಜಯ್​ರನ್ನು ಯಾಕೆ ದಿನೇಶ್ ಕಾರ್ತಿಕ್ ಹೆಸರಿನೊಂದಿಗೆ ಅಭಿಮಾನಿಗಳು ಚುಡಾಯಿಸುತ್ತಿದ್ದಾರೆ? ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ:- ಮೋಸ, ಖಿನ್ನತೆ, ಆತ್ಮಹತ್ಯೆ ಚಿಂತೆ: ಇದು ಮುರಳಿ ವಿಜಯ್ ಮುಂದೆ ಸೋತು ಗೆದ್ದ DK ಯ ಕಥೆ

ತಮಿಳುನಾಡು ಪ್ರೀಮಿಯರ್ ಲೀಗ್​ನಲ್ಲಿ ಈಗಾಗಲೇ 23 ಪಂದ್ಯಗಳು ಮುಗಿದಿದ್ದು, ಪಾಯಿಂಟ್ ಟೇಬಲ್​ನಲ್ಲಿ ನೆಲ್ಲೈ ರಾಯಲ್ ಕಿಂಗ್ಸ್​ ಅಗ್ರಸ್ಥಾನದಲ್ಲಿದೆ. ಇನ್ನು ದ್ವಿತೀಯ ಸ್ಥಾನದಲ್ಲಿ ಚೆಪಕ್ ಸೂಪರ್ ಗಿಲ್ಲೀಸ್ ಇದ್ದರೆ, ಮಧುರೈ ಪ್ಯಾಂಥರ್ಸ್ ಹಾಗೂ ಕೊವೈ ಕಿಂಗ್ಸ್​ 3ನೇ ಮತ್ತು 4ನೇ ಸ್ಥಾನ ಅಲಂಕರಿಸಿದೆ.

Published On - 6:24 pm, Wed, 20 July 22

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು