AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murali Vijay: ಬರೋಬ್ಬರಿ 12 ಸಿಕ್ಸ್​: ಸಿಡಿಲಬ್ಬರದ ಶತಕ ಸಿಡಿಸಿದ ಮುರಳಿ ವಿಜಯ್

TNPL 2022: ಇನಿಂಗ್ಸ್ ಆರಂಭಿಸಿದ ರಾಯಲ್ ಕಿಂಗ್ಸ್​ ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 29 ರನ್​ಗಳಿಗೆ 2 ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಸಿಲುಕಿತ್ತು. ಈ ಹಂತದಲ್ಲಿ ಕಣಕ್ಕಿಳಿದ ಬಾಬಾ ಅಪರಜಿತ್ ಹಾಗೂ ಸಂಜಯ್ ಯಾದವ್ ಇಡೀ ಪಂದ್ಯದ ಚಿತ್ರಣ ಬದಲಿಸಿಬಿಟ್ಟರು.

Murali Vijay: ಬರೋಬ್ಬರಿ 12 ಸಿಕ್ಸ್​: ಸಿಡಿಲಬ್ಬರದ ಶತಕ ಸಿಡಿಸಿದ ಮುರಳಿ ವಿಜಯ್
Murali Vijay
TV9 Web
| Edited By: |

Updated on:Jul 16, 2022 | 12:38 PM

Share

ಐಪಿಎಲ್​ ಮೂಲಕ ದಿನೇಶ್ ಕಾರ್ತಿಕ್ ಟೀಮ್ ಇಂಡಿಯಾಗೆ (Team India) ಕಂಬ್ಯಾಕ್ ಮಾಡಿದ ಬೆನ್ನಲ್ಲೇ ಅತ್ತ ಮತ್ತೋರ್ವ ತಮಿಳುನಾಡು ಆಟಗಾರ ಮುರಳಿ ವಿಜಯ್ (Murali Vijay) ಟಿ20 ಲೀಗ್​ಗೆ ಮರಳಿದ್ದರು. ಹೌದು, 38 ವರ್ಷದ ಮುರಳಿ ವಿಜಯ್ ಪ್ರಸ್ತುತ ನಡೆಯುತ್ತಿರುವ ತಮಿಳುನಾಡು ಪ್ರೀಮಿಯರ್ ಲೀಗ್ (TNPL)​ ಮೂಲಕ ಮತ್ತೆ ಬ್ಯಾಟ್ ಬೀಸಲಾರಂಭಿಸಿದ್ದಾರೆ. ಆದರೆ ಆರಂಭಿಕ ಪಂದ್ಯಗಳಲ್ಲಿ ವಿಫಲರಾಗಿದ್ದ ವಿಜಯ್ ಇದೀಗ ತಮ್ಮ ಬ್ಯಾಟಿಂಗ್ ಖದರ್ ತೋರಿಸಿದ್ದಾರೆ. ಈ ಮೂಲಕ ಕಳೆದ ಕೆಲ ದಿನಗಳಿಂದ ಕೇಳಿ ಬಂದಿದ್ದ ಎಲ್ಲಾ ಟೀಕೆಗಳಿಗೂ ಬ್ಯಾಟ್ ಮೂಲಕವೇ ಉತ್ತರಿಸಿದ್ದಾರೆ. ಟಿಎನ್​ಪಿಎಲ್​ನಲ್ಲಿ ನಡೆದ 19ನೇ ಪಂದ್ಯದಲ್ಲಿ ನೆಲ್ಲೈ ರಾಯಲ್ ಕಿಂಗ್ಸ್ ಹಾಗೂ ರುಬಿ ತಿರುಚ್ಚಿ ವಾರಿಯರ್ಸ್ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ತಿರುಚ್ಚಿ ವಾರಿಯರ್ಸ್ ಬೌಲಿಂಗ್ ಆಯ್ದುಕೊಂಡಿತು.

ಅದರಂತೆ ಇನಿಂಗ್ಸ್ ಆರಂಭಿಸಿದ ರಾಯಲ್ ಕಿಂಗ್ಸ್​ ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 29 ರನ್​ಗಳಿಗೆ 2 ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಸಿಲುಕಿತ್ತು. ಈ ಹಂತದಲ್ಲಿ ಕಣಕ್ಕಿಳಿದ ಬಾಬಾ ಅಪರಜಿತ್ ಹಾಗೂ ಸಂಜಯ್ ಯಾದವ್ ಇಡೀ ಪಂದ್ಯದ ಚಿತ್ರಣ ಬದಲಿಸಿಬಿಟ್ಟರು. ಆರಂಭದಲ್ಲೇ ಮೇಲುಗೈ ಹೊಂದಿದ್ದ ತಿರುಚ್ಚಿ ವಾರಿಯರ್ಸ್ ವಿರುದ್ದ ಅಪರಜಿತ್ ಹಾಗೂ ಸಂಜಯ್ ಯಾದವ್ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಕೇವಲ 48 ಎಸೆತಗಳಲ್ಲಿ ಅಪರಜಿತ್ 8 ಸಿಕ್ಸ್ ಹಾಗೂ 5 ಫೋರ್​ನೊಂದಿಗೆ ಅಜೇಯ 92 ರನ್​ ಬಾರಿಸಿದರೆ, ಸಂಜಯ್ ಯಾದವ್ 55 ಎಸೆತಗಳಲ್ಲಿ 9 ಸಿಕ್ಸ್ ಹಾಗೂ 6 ಫೋರ್​ನೊಂದಿಗೆ ಅಜೇಯ ಶತಕ (103) ಸಿಡಿಸಿದರು. ಅಲ್ಲದೆ ಸಿಕ್ಸ್​-ಫೋರ್​ಗಳ ಸುರಿಮಳೆಗೈದ ಈ ಜೋಡಿಯು 3ನೇ ವಿಕೆಟ್​ಗೆ 207 ರನ್​ಗಳ ಜೊತೆಯಾಟವಾಡಿದರು. ಪರಿಣಾಮ ರಾಯಲ್ ಕಿಂಗ್ಸ್ ಕೇವಲ 2 ವಿಕೆಟ್ ನಷ್ಟಕ್ಕೆ 236 ರನ್​ ಕಲೆಹಾಕಿತು.

237 ರನ್​ಗಳ ಬೃಹತ್ ಮೊತ್ತವನ್ನು ಬೆನ್ನತ್ತಿದ ತಿರುಚ್ಚಿ ವಾರಿಯರ್ಸ್ ಪರ ಆರಂಭಿಕ ಆಟಗಾರ ಮುರುಳಿ ವಿಜಯ್ ಅಕ್ಷರಶಃ ಅಬ್ಬರಿಸಿದ್ದರು. ರಾಯಲ್ ಕಿಂಗ್ಸ್ ಬೌಲರ್​ಗಳ ಬೆಂಡೆತ್ತಿದ ವಿಜಯ್ ಬರೋಬ್ಬರಿ 12 ಸಿಕ್ಸ್ ಹಾಗೂ 7 ಫೋರ್​ಗಳನ್ನು ಬಾರಿಸಿದ್ದರು. ಒಂದೆಡೆ ಮುರಳಿ ವಿಜಯ್ ಅಬ್ಬರಿಸುತ್ತಿದ್ದರೆ ಮತ್ತೊಂದೆಡೆಯಿಂದ ಉತ್ತಮ ಸಾಥ್ ಸಿಕ್ಕಿರಲಿಲ್ಲ. ಪರಿಣಾಮ ತಿರುಚ್ಚಿ ತಂಡವು 108 ರನ್​ಗಳಿಸುವಷ್ಟರಲ್ಲಿ ಪ್ರಮುಖ 5 ವಿಕೆಟ್​ಗಳನ್ನು ಕಳೆದುಕೊಂಡಿತು.

ಇದನ್ನೂ ಓದಿ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್
Image
Steve Smith: ಬರೋಬ್ಬರಿ 30 ಕೋಟಿ ಲಾಭ ಪಡೆದ ಸ್ಟೀವ್ ಸ್ಮಿತ್..!
Image
Cricket Records: ಕ್ರಿಕೆಟ್ ಇತಿಹಾಸದ ಈ ಅದ್ಭುತ ದಾಖಲೆಗಳನ್ನು ಎಂದಿಗೂ ಮುರಿಯಲಾಗುವುದಿಲ್ಲ!
Image
Team India: 1 ವರ್ಷದೊಳಗೆ 8 ನಾಯಕರನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ..!

ಇದಾಗ್ಯೂ ಏಕಾಂಗಿ ಹೋರಾಟ ಮುಂದುವರೆಸಿದ ಮುರಳಿ ವಿಜಯ್ ಅಂತಿಮವಾಗಿ 66 ಎಸೆತಗಳಲ್ಲಿ 121 ರನ್ ಬಾರಿಸಿ ವಿಕೆಟ್​ ಒಪ್ಪಿಸಿದರು. ಈ ಭರ್ಜರಿ  ಶತಕದ ಹೊರತಾಗಿಯೂ ತಂಡಕ್ಕೆ ಗೆಲುವು ತಂದುಕೊಡಲಾಗಲಿಲ್ಲ. ಅಂತಿಮವಾಗಿ ತಿರುಚ್ಚಿ ವಾರಿಯರ್ಸ್ ತಂಡವು 7 ವಿಕೆಟ್ ನಷ್ಟಕ್ಕೆ 170 ರನ್​ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ನೆಲ್ಲೈ ರಾಯಲ್ ಕಿಂಗ್ಸ್ ತಂಡವು 66 ರನ್​ಗಳಿಂದ ಜಯ ಸಾಧಿಸಿತು. ವಿಶೇಷ ಎಂದರೆ ತಿರುಚ್ಚಿ ವಾರಿಯರ್ಸ್ ಕಲೆಹಾಕಿದ 170 ರನ್​ಗಳಲ್ಲಿ ಏಕಾಂಗಿಯಾಗಿ 121 ರನ್ ಬಾರಿಸಿ ಮುರಳಿ ವಿಜಯ್ ಗಮನ ಸೆಳೆದರು. ಅಲ್ಲದೆ ತಮ್ಮ ಹಳೆಯ ಸ್ಪೋಟಕ ಬ್ಯಾಟಿಂಗ್ ಖದರ್ ಪ್ರದರ್ಶಿಸಿ ಟೀಕಾಗಾರರಿಗೆ ಬ್ಯಾಟ್ ಮೂಲಕವೇ ಉತ್ತರ ನೀಡಿದರು.

Published On - 11:32 am, Sat, 16 July 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ