Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಚೆಂಡನ್ನು ಮುಟ್ಟಿ ಔಟಾದ ಮುಶ್ಫಿಕುರ್ ರಹೀಮ್

Bangladesh vs New Zealand: ಈ ಹಂತದಲ್ಲಿ ಜೊತೆಗೂಡಿದ ಮುಶ್ಫಿಕುರ್ ರಹೀಮ್ ಹಾಗೂ ಶಾಹದತ್ ಹೊಸೈನ್ ಉತ್ತಮ ಜೊತೆಯಾಟ ಪ್ರದರ್ಶಿಸಿದರು. ಐದನೇ ವಿಕೆಟ್​ಗೆ ಜೊತೆಗೂಡಿದ ಈ ಜೋಡಿಯು 57 ರನ್​ಗಳ ಕಾಣಿಕೆ ನೀಡಿದರು. ಆದರೆ ಪಂದ್ಯದ 41ನೇ ಓವರ್​ನ 4ನೇ ಎಸೆತದಲ್ಲಿ ಮಾಡಿದ ಎಡವಟ್ಟಿನಿಂದಾಗಿ ಮುಶ್ಫಿಕುರ್ ರಹೀಮ್ ಔಟಾದರು.

VIDEO: ಚೆಂಡನ್ನು ಮುಟ್ಟಿ ಔಟಾದ ಮುಶ್ಫಿಕುರ್ ರಹೀಮ್
Mushfiqur Rahim
Follow us
TV9 Web
| Updated By: ಝಾಹಿರ್ ಯೂಸುಫ್

Updated on: Dec 06, 2023 | 2:31 PM

ಮಿರ್‌ಪುರ್​ನಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡದ ವಿಕೆಟ್ ಕೀಪರ್ ಬ್ಯಾಟರ್ ಮುಶ್ಫಿಕುರ್ ರಹೀಮ್ (Mushfiqur Rahim)  ವಿಚಿತ್ರವಾಗಿ ಔಟಾಗಿದ್ದರು. ಅದು ಕೂಡ ಬ್ಯಾಟ್​ನಿಂದ ಬಾಲ್ ಅನ್ನು ಬಾರಿಸಿ ಚೆಂಡನ್ನು ಮುಟ್ಟುವ ಮೂಲಕ ಎಂಬುದು ಇಲ್ಲಿ ಅಚ್ಚರಿ. ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ್ ತಂಡವು ಮೊದಲು ಬ್ಯಾಟ್ ಮಾಡುವ ನಿರ್ಧಾರ ತೆಗೆದುಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಹಸನ್ ಜಾಯ್ (14) ಹಾಗೂ ಝಾಕಿರ್ ಹಸನ್ (8) ಬೇಗನೆ ವಿಕೆಟ್ ಒಪ್ಪಿಸಿದ್ದರು. ಆ ಬಳಿಕ ಬಂದ ನಾಯಕ ನಜ್ಮುಲ್ ಹೊಸೈನ್ ಶಾಂಟೊ (5) ಹಾಗೂ ಮೊಯಿನುಲ್ ಹಕ್ (5) ಕ್ರೀಸ್ ಕಚ್ಚಿ ನಿಲ್ಲುವಲ್ಲಿ ವಿಫಲರಾದರು.

ಈ ಹಂತದಲ್ಲಿ ಜೊತೆಗೂಡಿದ ಮುಶ್ಫಿಕುರ್ ರಹೀಮ್ ಹಾಗೂ ಶಾಹದತ್ ಹೊಸೈನ್ ಉತ್ತಮ ಜೊತೆಯಾಟ ಪ್ರದರ್ಶಿಸಿದರು. ಐದನೇ ವಿಕೆಟ್​ಗೆ ಜೊತೆಗೂಡಿದ ಈ ಜೋಡಿಯು 57 ರನ್​ಗಳ ಕಾಣಿಕೆ ನೀಡಿದರು. ಆದರೆ ಪಂದ್ಯದ 41ನೇ ಓವರ್​ನ 4ನೇ ಎಸೆತದಲ್ಲಿ ಮಾಡಿದ ಎಡವಟ್ಟಿನಿಂದಾಗಿ ಮುಶ್ಫಿಕುರ್ ರಹೀಮ್ ಔಟಾದರು. ಕೈಲ್ ಜೇಮಿಸನ್ ಎಸೆದ ಎಸೆತವನ್ನು ಮುಶ್ಫಿಕುರ್ ರಕ್ಷಣಾತ್ಮಕವಾಗಿ ಆಡಿದ್ದರು. ಬ್ಯಾಟ್​​ಗೆ ತಾಗಿದ ಚೆಂಡು ಮತ್ತೆ ಬೌನ್ಸ್ ಆಗುತ್ತಿದ್ದಂತೆ ಬಾಂಗ್ಲಾದೇಶ್ ತಂಡದ ಆಟಗಾರ ಕೈಯಿಂದ ತಡೆದರು.

ಇದರ ಬೆನ್ನಲ್ಲೇ ನ್ಯೂಝಿಲೆಂಡ್ ಆಟಗಾರರು ಫೀಲ್ಡ್​ ಅಂಪೈರ್​ಗೆ ಮನವಿ ಸಲ್ಲಿಸಿದ್ದಾರೆ. ಈ ಮನವಿಯನ್ನು ಪುರಸ್ಕರಿಸಿದ ತೀರ್ಪುಗಾರರು ಚರ್ಚಿಸಿ ಮರು ಪರಿಶೀಲನೆಗೆ ಮೂರನೇ ಅಂಪೈರ್​ಗೆ ಮನವಿ ಸಲ್ಲಿಸಿದರು.

ರೀಪ್ಲೆ ಪರಿಶೀಲಿಸಿದ ಮೂರನೇ ಅಂಪೈರ್​ ಔಟ್ ಎಂದು ತೀರ್ಪು ನೀಡಿದ್ದಾರೆ. ಈ ಮೂಲಕ ಮುಶ್ಫಿಕುರ್ ರಹೀಮ್​​ ಟೆಸ್ಟ್ ಕ್ರಿಕೆಟ್‌ನಲ್ಲಿ ಫೀಲ್ಡಿಂಗ್​ಗೆ ಅಡ್ಡಿಪಡಿಸಿ ಔಟಾದ ಮೊದಲ ಬಾಂಗ್ಲಾದೇಶ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಐಸಿಸಿ ನಿಯಮ ಏನು ಹೇಳುತ್ತೆ?

ಐಸಿಸಿ ನಿಯಮ 37.1.2 ರ ಪ್ರಕಾರ, “37.2 ರ ಸಂದರ್ಭಗಳನ್ನು ಹೊರತುಪಡಿಸಿ, ಬೌಲರ್ ಎಸೆದ ಚೆಂಡನ್ನು ಸ್ವೀಕರಿಸುವ ಕ್ರಿಯೆಯಲ್ಲಿ, ಅವನು/ಅವಳು ಉದ್ದೇಶಪೂರ್ವಕವಾಗಿ ಬ್ಯಾಟ್ ಅನ್ನು ಹಿಡಿಯದೆ ಕೈಯಿಂದ ಚೆಂಡನ್ನು ಹೊಡೆಯುವಂತಿಲ್ಲ ಅಥವಾ ತಡೆಯುವಂತಿಲ್ಲ. ಹಾಗೆಯೇ ಕೈಯಿಂದ ಚೆಂಡನ್ನು ತಡೆದು ಫೀಲ್ಡರ್​ಗಳಿಗೆ ಅಡ್ಡಿಪಡಿಸುವಂತಿಲ್ಲ.

ಇದನ್ನೂ ಓದಿ: Shubman Gill: ಸಚಿನ್​ರ​ ಮತ್ತೊಂದು ವಿಶ್ವ ದಾಖಲೆ ಸರಿಗಟ್ಟಿದ ಶುಭ್​ಮನ್ ಗಿಲ್

ಒಂದು ವೇಳೆ ಚೆಂಡು ವಿಕೆಟ್​​ಗೆ ಬೀಳುತ್ತಿದ್ದರೆ ಒಂದಕ್ಕಿಂತ ಹೆಚ್ಚು ಬಾರಿ ಚೆಂಡನ್ನು ಹೊಡೆಯಬಹುದು ಎಂದು ತಿಳಿಸಲಾಗಿದೆ. ಇಲ್ಲಿ ಮುಶ್ಫಿಕುರ್ ರಹೀಮ್ ಹೊರ ಹೋಗುತ್ತಿದ್ದಂತೆ ಚೆಂಡನ್ನು ಕೈಯಿಂದ ತಡೆದಿದ್ದಾರೆ. ಹೀಗಾಗಿ ಐಸಿಸಿ ನಿಯಮದ ಪ್ರಕಾರ ಮೂರನೇ ಅಂಪೈರ್ ಔಟ್ ಎಂದು ತೀರ್ಪು ನೀಡಿದ್ದಾರೆ.

ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್