AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ನನ್ನ ಕೊನೆಯ ವಿಶ್ವಕಪ್’; ನಿವೃತ್ತಿಯ ಸುಳಿವು ನೀಡಿದ ಆರ್​ ಅಶ್ವಿನ್..!

R Ashwin Retirement: ನಾನು ಈ ಪಂದ್ಯಾವಳಿಯನ್ನು ಆನಂದಿಸಲು ಪ್ರಯತ್ನಿಸುತ್ತೇನೆ. ಭಾರತಕ್ಕೆ ಇದು ನನ್ನ ಕೊನೆಯ ವಿಶ್ವಕಪ್ ಆಗಿರಬಹುದು, ಆದ್ದರಿಂದ ಪಂದ್ಯಾವಳಿಯನ್ನು ಆನಂದಿಸುವುದು ಅತ್ಯಂತ ಮಹತ್ವದ್ದಾಗಿದೆ ಎಂದು ರವಿಚಂದ್ರನ್ ಅಶ್ವಿನ್ ಪಂದ್ಯದ ಪೂರ್ವ ಸಂದರ್ಶನದಲ್ಲಿ ದಿನೇಶ್ ಕಾರ್ತಿಕ್‌ಗೆ ತಿಳಿಸಿದರು.

‘ಇದು ನನ್ನ ಕೊನೆಯ ವಿಶ್ವಕಪ್’; ನಿವೃತ್ತಿಯ ಸುಳಿವು ನೀಡಿದ ಆರ್​ ಅಶ್ವಿನ್..!
ಆರ್​ ಅಶ್ವಿನ್
Follow us
ಪೃಥ್ವಿಶಂಕರ
|

Updated on:Oct 01, 2023 | 7:38 AM

ಕೇವಲ ಎರಡೇ ಎರಡು ವಾರಗಳ ಹಿಂದೆ ತಾನು ವಿಶ್ವಕಪ್ (ODI World Cup 2023) ತಂಡದಲ್ಲಿ ಸ್ಥಾನ ಪಡೆಯುತ್ತೇನೆ ಎಂದು ಕನಸಲ್ಲೂ ಊಹಿಸದ ಆರ್​. ಅಶ್ವಿನ್​ಗೆ (R Ashwin) ಟೀಂ ಇಂಡಿಯಾದ ಬಾಗಿಲು ತೆರೆದಿದೆ. ತಂಡದ ಸ್ಟಾರ್ ಆಲ್​ರೌಂಡರ್ ಅಕ್ಷರ್ ಪಟೇಲ್ (Axar Patel) ಗಾಯಗೊಂಡಿದ್ದರಿಂದಾಗಿ ಭಾರತ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿರುವ ಅನುಭವಿ ಆಫ್ ಸ್ಪಿನ್ನರ್ ಆರ್​ ಅಶ್ವಿನ್ ಇದೀಗ ತಮ್ಮ ಏಕದಿನ ನಿವೃತ್ತಿಯ ಬಗ್ಗೆಯೂ ಸುಳಿವು ನೀಡಿದ್ದಾರೆ. ವಾಸ್ತವವಾಗಿ ಭಾರತ ನಿನ್ನೆ ಅಂದರೆ ಸೆಪ್ಟೆಂಬರ್ 30 ರಂದು ಇಂಗ್ಲೆಂಡ್ ವಿರುದ್ಧ (India vs England) ಅಭ್ಯಾಸ ಪಂದ್ಯವನ್ನು ಆಡಬೇಕಿತ್ತು ಆದರೆ ಆ ಪಂದ್ಯ ಮಳೆಯಿಂದ ರದ್ದಾಯಿತು. ಈ ಪಂದ್ಯಕ್ಕೂ ಮುನ್ನ ಮಾತನಾಡಿದ್ದ ಅಶ್ವಿನ್ ಇದು ನನ್ನ ಕೊನೆಯ ವಿಶ್ವಕಪ್ ಆಗಿರಲಿದೆ ಎಂದು ಹೇಳುವ ಮೂಲಕ ಏಕದಿನ ಕ್ರಿಕೆಟ್​ಗೆ ವಿದಾಯ ಹೇಳುವ ಸುಳಿವು ನೀಡಿದ್ದಾರೆ.

ಸ್ಥಾನ ಪಡೆದ ಬಗ್ಗೆ ನಾನು ಹೆಚ್ಚು ಯೋಚಿಸುತ್ತಿಲ್ಲ

2022 ರ ಜನವರಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ತನ್ನ ಕೊನೆಯ ಏಕದಿನ ಪಂದ್ಯವನ್ನಾಡಿದ್ದ ಆಡಿದ ಅಶ್ವಿನ್ ಆ ನಂತರ ಏಕದಿನ ಮಾದರಿಯಲ್ಲಿ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿರಲಿಲ್ಲ. ಆದರೆ ಅಕ್ಸರ್ ಪಟೇಲ್ ಗಾಯಗೊಂಡಿದ್ದರಿಂದಾಗಿ ತಂಡದ ಆಯ್ಕೆ ಮಂಡಳಿ ಅನುಭವದ ಆದಾರದ ಮೇಲೆ ಅಶ್ವಿನ್​ಗೆ ಭಾರತ ವಿಶ್ವಕಪ್ ತಂಡದಲ್ಲಿ ಅವಕಾಶ ನೀಡಿದೆ. ಇನ್ನು ವಿಶ್ವಕಪ್ ತಂಡದಲ್ಲಿ ಆಯ್ಕೆಯಾದ ಬಗ್ಗೆ ಮಾತನಾಡಿದ ಅಶ್ವಿನ್, ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದ ಬಗ್ಗೆ ನಾನು ಹೆಚ್ಚು ಯೋಚಿಸುತ್ತಿಲ್ಲ. ನಾನು ನನ್ನ ಕ್ರಿಕೆಟ್ ಅನ್ನು ಆನಂದಿಸುತ್ತಿದ್ದೇನೆ, ವಿಶ್ವಕಪ್‌ನಲ್ಲೂ ಅದನ್ನು ಮಾಡಲು ಬಯಸುತ್ತೇನೆ ಎಂದಿದ್ದಾರೆ.

IPL 2023: ಅಂಪೈರ್‌ಗೆ ನಿಯಮ ವಿವರಿಸಿದ್ದಕ್ಕಾಗಿ ಆರ್​. ಅಶ್ವಿನ್​ಗೆ ಬಿತ್ತು ಭಾರಿ ದಂಡ..!

ಇದು ನನ್ನ ಕೊನೆಯ ವಿಶ್ವಕಪ್ ಆಗಿರಬಹುದು

ಇಂಗ್ಲೆಂಡ್ ವಿರುದ್ಧದ ಅಭ್ಯಾಸ ಪಂದ್ಯಕ್ಕೂ ಮುನ್ನ ದಿನೇಶ್ ಕಾರ್ತಿಕ್ ಅವರೊಂದಿಗೆ ತಂಡದಲ್ಲಿ ಆಯ್ಕೆಯಾದ ಬಗ್ಗೆ ಮಾತನಾಡಿದ ಅಶ್ವಿನ್, ಜೀವನವು ಆಶ್ಚರ್ಯಗಳಿಂದ ತುಂಬಿದೆ. ನಾನೂ ಇಲ್ಲಿರುತ್ತೇನೆ ಎಂದು ಅಂದುಕೊಂಡಿರಲಿಲ್ಲ. ತಂಡದ ಆಡಳಿತ ಮಂಡಳಿ ನನ್ನ ಮೇಲೆ ವಿಶ್ವಾಸವನ್ನು ತೋರಿದೆ. ಈ ಪಂದ್ಯಾವಳಿಗಳಲ್ಲಿ ಒತ್ತಡವನ್ನು ಎದುರಿಸುವುದು ತುಂಬಾ ಅವಶ್ಯಕವಾಗಿದೆ. ಇದು ಪಂದ್ಯಾವಳಿಯು ಹೇಗೆ ನಡೆಯುತ್ತದೆ ಎಂಬುದನ್ನು ನಿರ್ದೇಶಿಸುತ್ತದೆ. ನಾನು ಈ ಪಂದ್ಯಾವಳಿಯನ್ನು ಆನಂದಿಸಲು ಪ್ರಯತ್ನಿಸುತ್ತೇನೆ. ಭಾರತಕ್ಕೆ ಇದು ನನ್ನ ಕೊನೆಯ ವಿಶ್ವಕಪ್ ಆಗಿರಬಹುದು, ಆದ್ದರಿಂದ ಪಂದ್ಯಾವಳಿಯನ್ನು ಆನಂದಿಸುವುದು ಅತ್ಯಂತ ಮಹತ್ವದ್ದಾಗಿದೆ ಎಂದು ರವಿಚಂದ್ರನ್ ಅಶ್ವಿನ್ ಪಂದ್ಯದ ಪೂರ್ವ ಸಂದರ್ಶನದಲ್ಲಿ ದಿನೇಶ್ ಕಾರ್ತಿಕ್‌ಗೆ ತಿಳಿಸಿದರು.

ಟೆಸ್ಟ್‌ನಲ್ಲಿ ಮಾತ್ರ ಗಮನ

ರವಿಚಂದ್ರನ್ ಅಶ್ವಿನ್ ಕಳೆದ ಆರು ವರ್ಷಗಳಲ್ಲಿ ಕೇವಲ ಐದು ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಅಶ್ವಿನ್‌ಗೆ ಸದ್ಯ 37 ವರ್ಷ. ಅಲ್ಲದೆ ವಾಷಿಂಗ್ಟನ್ ಸುಂದರ್ ರೂಪದಲ್ಲಿ ಇನ್ನೋರ್ವ ಆಫ್-ಸ್ಪಿನ್ನರ್ ಸಿದ್ಧವಾಗುವುದರಿಂದಾಗಿ ಇದು ಅಶ್ವಿನ್ ಅವರ ಕೊನೆಯ ವಿಶ್ವಕಪ್ ಆಗಿರುವುದು ಖಚಿತ. ವಿಶ್ವಕಪ್ ಬಳಿಕ ಏಕದಿನ ಮಾದರಿಗೆ ವಿದಾಯ ಹೇಳುವ ಮೂಲಕ ಅಶ್ವಿನ್ 2025 ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ವರೆಗೆ ಟೆಸ್ಟ್‌ನಲ್ಲಿ ಮಾತ್ರ ಗಮನಹರಿಸುವ ಸಾಧ್ಯತೆಗಳಿವೆ.

ಭಾರತ ವಿಶ್ವಕಪ್ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಇಶಾನ್ ಕಿಶನ್ , ಸೂರ್ಯ ಕುಮಾರ್ ಯಾದವ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:33 am, Sun, 1 October 23

ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್