AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharaja Trophy 2024: ಬೆಂಗಳೂರಿಗೆ ಸೋಲುಣಿಸಿ ಚೊಚ್ಚಲ ಮಹಾರಾಜ ಟ್ರೋಫಿ ಗೆದ್ದ ಮೈಸೂರು

Maharaja Trophy 2024: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಹಾರಾಜ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಮೈಸೂರು ವಾರಿಯರ್ಸ್​ ಹಾಗೂ ಬೆಂಗಳೂರು ಬ್ಲಾಸ್ಟರ್ಸ್​ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೈಸೂರು ತಂಡ, ಬೆಂಗಳೂರು ತಂಡವನ್ನು ರನ್​ಗಳಿಂದ ಮಣಿಸಿ ಮೊದಲ ಬಾರಿಗೆ ಮಹಾರಾಜ ಟ್ರೋಫಿಯನ್ನು ಎತ್ತಿಹಿಡಿದಿದೆ.

Maharaja Trophy 2024: ಬೆಂಗಳೂರಿಗೆ ಸೋಲುಣಿಸಿ ಚೊಚ್ಚಲ ಮಹಾರಾಜ ಟ್ರೋಫಿ ಗೆದ್ದ ಮೈಸೂರು
ಮೈಸೂರು ತಂಡ
ಪೃಥ್ವಿಶಂಕರ
|

Updated on:Sep 01, 2024 | 10:44 PM

Share

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಹಾರಾಜ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಮೈಸೂರು ವಾರಿಯರ್ಸ್​ ಹಾಗೂ ಬೆಂಗಳೂರು ಬ್ಲಾಸ್ಟರ್ಸ್​ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೈಸೂರು ತಂಡ, ಬೆಂಗಳೂರು ತಂಡವನ್ನು 45 ರನ್​ಗಳಿಂದ ಮಣಿಸಿ ಮೊದಲ ಬಾರಿಗೆ ಮಹಾರಾಜ ಟ್ರೋಫಿಯನ್ನು ಎತ್ತಿಹಿಡಿದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮೈಸೂರು ತಂಡ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 207 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಬೆಂಗಳೂರು ತಂಡ 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 162 ರನ್ ಕಲೆಹಾಕಲಷ್ಟೆ ಶಕ್ತವಾಯಿತು.

ಕಾರ್ತಿಕ್ ಅರ್ಧಶತಕ

ಟಾಸ್ ಗೆದ್ದ ಬೆಂಗಳೂರು ತಂಡದ ನಾಯಕ ಮಯಾಂಕ್ ಅಗರ್ವಾಲ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಕರುಣ್ ನಾಯರ್ ನಾಯಕತ್ವದ ಮೈಸೂರು ತಂಡಕ್ಕೆ ಮೊದಲ ವಿಕೆಟ್​ಗೆ 29 ರನ್​ಗಳ ಜೊತೆಯಾಟ ಸಿಕ್ಕಿತು. ಆರಂಭಿಕ ಕಾರ್ತಿಕ್ ಸಿ 3 ರನ್​ಗಳಿಗೆ ಇನ್ನಿಂಗ್ಸ್ ಮುಗಿಸಿದರು. ನಂತರ ಕಾರ್ತಿಕ್ ಎಸ್​ಯು ಅವರಿಗೆ ಜೊತೆಯಾದ ನಾಯಕ ಕರುಣ್ ಎರಡನೇ ವಿಕೆಟ್​ಗೆ 80 ಕ್ಕೂ ಹೆಚ್ಚು ರನ್​ಗಳ ಜೊತೆಯಾಟ ನೀಡಿದರು. ಈ ವೇಳೆ ಆರಂಭಿಕ ಕಾರ್ತಿಕ್ 44 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 77 ರನ್ ಬಾರಿಸಿ ಔಟಾದರು.

ಕರುಣ್ 66 ರನ್

ಆ ನಂತರ 4ನೇ ಕ್ರಮಾಂಕದಲ್ಲಿ ಬಂದ ಹರ್ಷಿಲ್ 6 ರನ್​ಗಳಿಗೆ ಸುಸ್ತಾದರೆ, ನಾಯಕ ಕರುಣ್​ಗೆ ಜೊತೆಯಾದ ಮನೋಜ್, ನಯನ ಮನೋಹರ ಬ್ಯಾಟಿಂಗ್ ಮಾಡಿದರು. ಈ ಜೋಡಿ ಬೆಂಗಳೂರು ಹಿಡಿತದಲ್ಲಿದ್ದ ಪಂದ್ಯವನ್ನು ತನ್ನೆಡೆಗೆ ಸೆಳೆದುಕೊಂಡಿತು. ನಾಯಕ ಕರುಣ್ 45 ಎಸೆತಗಳಲ್ಲಿ 6 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 66 ರನ್ ಬಾರಿಸಿ ಔಟಾದರೆ, ಕೊನೆಯಲ್ಲಿ ಮನೋಜ್ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದರು.

ಮನೋಜ್ 13 ಎಸೆತಗಳಲ್ಲಿ 44 ರನ್

19ನೇ ಓವರ್​ನಲ್ಲಿ ಸಿಕ್ಕ ಜೀವದಾನವನ್ನು ಸದುಪಯೋಗಪಡಿಸಿಕೊಂಡ ಮನೋಜ್ ಕೊನೆಯ ಓವರ್​ನ ಕೊನೆಯ 4 ಎಸೆತಗಳಲ್ಲಿ 3 ಸಿಕ್ಸರ್ ಹಾಗೂ 1 ಬೌಂಡರಿ ಬಾರಿಸಿದರು. ಅಂತಿಮವಾಗಿ ಕೇವಲ 13 ಎಸೆತಗಳಲ್ಲಿ 2 ಬೌಂಡರಿ ಹಾಗೂ 5 ಸಿಕ್ಸರ್​ಗಳ ಸಹಿತ ಅಜೇಯ 44 ರನ್ ಬಾರಿಸಿದರು. ಈ ಮೂವರ ಆಟದಿಂದಾಗಿ ಮೈಸೂರು ತಂಡ 207 ರನ್​ಗಳ ಬೃಹತ್ ಟಾರ್ಗೆಟ್ ನೀಡಿತು.

ಬೆಂಗಳೂರಿಗೆ ಕಳಪೆ ಆರಂಭ

ಮೈಸೂರು  ನೀಡಿದ 207 ರನ್​ಗಳನ್ನು ಬೆನ್ನಟ್ಟಿದ್ದ ಬೆಂಗಳೂರು ತಂಡ ಉತ್ತಮ ಪ್ರದರ್ಶನ ನೀಡಲಿದೆ ಎಂದು ಎಲ್ಲರೂ ನಿರೀಕ್ಷಿಸಿದ್ದರು. ಆದರೆ ಅದು ಸಾಧ್ಯವಾಗದೆ ಕೇವಲ 9 ರನ್​ಗಳಿಗೆ ಮೊದಲ ವಿಕೆಟ್ ಪತನವಾಯಿತು. ನಾಯಕ ಮಯಾಂಕ್ 6 ರನ್​ಗಳಿಗೆ ಇನ್ನಿಂಗ್ಸ್ ಮುಗಿಸಿದರು. ನಂತರ ಬಂದ ಭುವನ್ ಕೂಡ 1 ರನ್​ಗಳಿಗೆ ಸುಸ್ತಾದರೆ, ರಕ್ಷಿತ್ ಕೂಡ 5 ರನ್ ಮೀರಿ ಹೊಗಲಿಲ್ಲ.

ಚೇತನ್ ಏಕಾಂಗಿ ಹೋರಾಟ

ಕೆಳಕ್ರಮಾಂಕದಲ್ಲಿ ಆಲ್​ರೌಂಡರ್ ಶುಭಾಂಗ್ ಹೆಗ್ಡೆ ಮೇಲೆ ನಿರೀಕ್ಷೆಗಳಿದ್ದವು. ಆದರೆ ಅವರು ಕೂಡ 5 ರನ್​ಗಳಿಗೆ ಪೆವಿಲಿಯನ್ ಹಾದಿ ಹಿಡಿದಿರು. ಸೂರಜ್ ಅಹುಜಾ ಕೂಡ 8 ರನ್​ಗಳಿಗೆ ಬ್ಯಾಟ್ ಎತ್ತಿಟ್ಟರೆ, ಅನುಭವಿ ಅನಿರುದ್ಧ್ ಜೋಶಿ ಕೂಡ ಯಾವುದೇ ಕಮಾಲ್ ಮಾಡದೆ 18 ರನ್​ಗಳಿಗೆ ಸುಸ್ತಾದರು. ಆದರೆ ತಂಡದ ಪರ ಏಕಾಂಗಿ ಹೋರಾಟ ನಡೆಸಿದ ಆರಂಭಿಕ ಎಲ್​ಆರ್ ಚೇತನ್ 32 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 51 ರನ್ ಬಾರಿಸಿ ಸ್ಟಂಪ್​ ಔಟ್​ಗೆ ಬಲಿಯಾದರು. ಚೇತನ್ ಕ್ರೀಸ್​ನಲ್ಲಿ ಇರುವರೆಗೂ ಗೆಲುವಿನ ನಂಬಿಕೆ ಇರಿಸಿಕೊಂಡಿದ್ದ ಬೆಂಗಳೂರು, ಚೇತನ್ ಔಟಾಗುತ್ತಿದ್ದಂತೆ ಪಂದ್ಯವನ್ನು ಕೈಚೆಲ್ಲಿದಂತೆ ವರ್ತಿಸಿತು.

ಕ್ರಾಂತಿ ಹೋರಾಟ ವ್ಯರ್ಥ

ಇದರ ಪರಿಣಾಮವಾಗಿ ಚೇತನ್ ಬಳಿಕ ಬಂದ ಯಾವುದೇ ಬ್ಯಾಟ್ಸ್‌ಮನ್ ಗೆಲುವಿಗಾಗಿ ಹೋರಾಟ ತೋರದೆ ಒಂದಂಕಿಗೆ ವಿಕೆಟ್ ಒಪ್ಪಿಸಿ, ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡರು. ಕೊನೆಯಲ್ಲಿ ಕ್ರಾಂತಿ ಕುಮಾರ್ ಹೊಡಿಬಡಿ ಆಟಕ್ಕೆ ಮುಂದಾದರಾದರೂ ಆ ವೇಳೆಗೆ ಪಂದ್ಯ ಮೈಸೂರು ಕಡೆ ವಾಲಿತ್ತು. ಕೊನೆಯಲ್ಲಿ ಜ್ಞಾನೇಶ್ವರ್ ನವೀನ್ 17 ರನ್​ಗಳ ಕೊಡುಗೆ ನೀಡಿದರೆ, ಕ್ರಾಂತಿ ಕುಮಾರ್ 21 ಎಸೆತಗಳಲ್ಲಿ 39 ರನ್ ಬಾರಿಸಿ ಅಜೇಯರಾಗಿ ಉಳಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:35 pm, Sun, 1 September 24

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?