AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

N Jagadeesan: ಕ್ರಿಕೆಟ್​ನಲ್ಲೊಂದು ಅಸಹ್ಯ ಘಟನೆ: ಮಂಕಡ್ ರನೌಟ್ ಮಾಡಿದ್ದಕ್ಕೆ ಮಧ್ಯದ ಬೆರಳು ತೋರಿಸಿದ ಜಗದೀಶನ್

TNPL 2022: ತಮಿಳುನಾಡು ಪ್ರೀಮಿಯರ್ ಲೀಗ್​ನ ಪಂದ್ಯವೊಂದರಲ್ಲಿ ನಡೆದ ಮಂಕಡ್ ರನೌಟ್ ಭಾರೀ ವೈರಲ್ ಆಗುತ್ತಿದೆ. ಚೆಪಾಕ್ ಸೂಪರ್ ಗಿಲ್ಲಿಸ್ ಹಾಗೂ ನೆಲೈ ರಾಯಲ್ ಕಿಂಗ್ಸ್​ ನಡುವಣ ಟಿಎನ್​ಪಿಎಲ್​ನ ಮೊದಲ ಪಂದ್ಯದಲ್ಲೇ ಈ ಘಟನೆ ನಡೆದಿದೆ.

N Jagadeesan: ಕ್ರಿಕೆಟ್​ನಲ್ಲೊಂದು ಅಸಹ್ಯ ಘಟನೆ: ಮಂಕಡ್ ರನೌಟ್ ಮಾಡಿದ್ದಕ್ಕೆ ಮಧ್ಯದ ಬೆರಳು ತೋರಿಸಿದ ಜಗದೀಶನ್
N Jagadeesan Mankad TNPL 2022
TV9 Web
| Updated By: Vinay Bhat|

Updated on: Jun 24, 2022 | 10:43 AM

Share

ಕ್ರಿಕೆಟ್ ಲೋಕದಲ್ಲಿ ಈ ಹಿಂದೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದ ಮಂಕಡ್ ಈಗ ಮತ್ತೆ ಸುದ್ದಿಯಲ್ಲಿದೆ. ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ ಮಂಕಡ್ ಅನ್ನು ಅಧಿಕೃತಗೊಳಿಸಿದ್ದು ನಿಯಮ 38ರ ಅಡಿಯಲ್ಲಿ ಇದನ್ನು ರನೌಟ್ ಎಂದು ಈ ವರ್ಷದ ಆರಂಭದಲ್ಲಿ ಘೋಷಿಸಿತ್ತು. ಇದಾದ ಬಳಿಕ ಮಂಖಡ್ (Mankad) ರನೌಟ್ ಕ್ರಿಕೆಟ್ ಲೋಕದಲ್ಲಿ ನಡೆದಿದ್ದು ತೀರಾ ಕಡಿಮೆ. ಆದರೀಗ ಆರನೇ ಆವೃತ್ತಿಯ ತಮಿಳುನಾಡು ಪ್ರೀಮಿಯರ್ ಲೀಗ್​ನ (TNPL 2022) ಪಂದ್ಯವೊಂದರಲ್ಲಿ ನಡೆದ ಮಂಕಡ್ ರನೌಟ್ ಭಾರೀ ವೈರಲ್ ಆಗುತ್ತಿದೆ. ಚೆಪಾಕ್ ಸೂಪರ್ ಗಿಲ್ಲಿಸ್ ಹಾಗೂ ನೆಲೈ ರಾಯಲ್ ಕಿಂಗ್ಸ್​ ನಡುವಣ ಟಿಎನ್​ಪಿಎಲ್​ನ ಮೊದಲ ಪಂದ್ಯದಲ್ಲೇ ಈ ಘಟನೆ ನಡೆದಿದೆ. ಚೆಪಾಕ್ ತಂಡದ ಬ್ಯಾಟರ್ ಎನ್. ಜಗದೀಶನ್ (N Jagadeesan) ಅವರನ್ನು ಬಾಬ ಅಪರಂಜಿತ್ ಮಂಕಡ್ ರನೌಟ್ ಮಾಡಿ ಪೆವಿಲಿಯನ್​ಗೆ ಅಟ್ಟಿದರು. ಈ ಸಂದರ್ಭ ದೊಡ್ಡ ಡ್ರಾಮವೇ ನಡೆಯಿತು.

ನೆಲೈ ನೀಡಿದ್ದ 185 ರನ್​ಗಳ ಸವಾಲಿನ ಟಾರ್ಗೆಟ್ ಬೆನ್ನಟ್ಟಲು ಬಂದ ಚೆಪಾಕ್ ಸ್ಫೋಟಕ ಆರಂಭವನ್ನ ಪಡೆದುಕೊಂಡಿತು. ಆದರೆ, 4ನೇ ಓವರ್ ಅಪರಂಜಿತ್ ಬೌಲಿಂಗ್ ಮಾಡಲು ಬಂದರು. ಈ ಸಂದರ್ಭ ನಾಲ್ಕನೇ ಎಸೆತ ಹಾಕಲು ಮುಂದಾದಾಗ ನಾನ್ ಸ್ಟ್ರೈಕರ್​ನಲ್ಲಿದ್ದ ಜಗದೀಶನ್ ಬೌಲರ್ ಬೌಲಿಂಗ್ ಮಾಡುವ ಮುನ್ನ ಕ್ರೀಸ್ ಬಿಟ್ಟು ಮುಂದೆ ಬಂದರು. ಇದನ್ನ ಗಮನಿಸಿದ ಬೌಲರ್ ಚೆಂಡನ್ನು ವಿಕೆಟ್​ಗೆ ತಾಗಿಸಿ ಮಂಕಡ್ ರನೌಟ್ ಮಾಡಿದರು. ಬೇರೆನೂ ದಾರಿಯಿಲ್ಲದೆ ಜಗದೀಶನ್ ಪೆವಿಲಿಯನ್​ಗೆ ತೆರಳಬೇಕಾಯಿತು.

ಇದನ್ನೂ ಓದಿ
Image
ENG vs NED: ಮುಟ್ಟಿದ್ದೆಲ್ಲ ಚಿನ್ನ; ಧೋನಿ ಹೆಸರಿನಲ್ಲಿದ್ದ 17 ವರ್ಷಗಳ ಹಳೆಯ ದಾಖಲೆ ಮುರಿದ ಬಟ್ಲರ್..!
Image
IND vs LEI: ಜೋ ರೂಟ್ ಮ್ಯಾಜಿಕ್ ಕಾಪಿ ಮಾಡುವಲ್ಲಿ ಕೊಹ್ಲಿ ವಿಫಲ; ವಿಡಿಯೋ ಸಖತ್ ವೈರಲ್
Image
Tribute: ಅಗಲಿದ ಪಂಜಾಬಿ ಗಾಯಕ ಸಿಧು ಮೂಸೇವಾಲಗೆ ಭಾವನಾತ್ಮಕ ಶ್ರದ್ಧಾಂಜಲಿ ಸಲ್ಲಿಸಿದ ಸರ್ಫರಾಜ್; ವಿಡಿಯೋ
Image
Ranji Trophy Final 2022: ಎರಡನೇ ದಿನದಾಟ ಅಂತ್ಯ; ಸರ್ಫರಾಜ್ ಶತಕ, ಪಂದ್ಯದಲ್ಲಿ ಬಿಗಿ ಹಿಡಿತ ಸಾಧಿಸಿದ ಮಧ್ಯಪ್ರದೇಶ

Virat Kohli: ಶ್ರೇಯಸ್ ಅಯ್ಯರ್ ಔಟ್ ಮಾಡಲು ಎದುರಾಳಿ ತಂಡದ ಬೌಲರ್​ಗೆ ಟಿಪ್ಸ್ ನೀಡಿದ ಕೊಹ್ಲಿ

ಈ ಘಟನೆಯಿಂದ ಸಿಟ್ಟಾದ ಜಗದೀಶನ್ ಮಧ್ಯಮ ಬೆರಳನ್ನು ತೋರಿಸುತ್ತಾ ಡಗೌಟ್ ಕಡೆ ಹೆಜ್ಜೆ ಹಾಕಿದರು. ತಮಿಳುನಾಡು ತಂಡದ ಹಿರಿಯ ಆಟಗಾರ ಜಗದೀಶನ್ ಐಪಿಎಲ್​ನಲ್ಲಿ ಕಳೆದ ಮೂರು ವರ್ಷದಿಂದ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ಪರ ಆಡುತ್ತಿದ್ದಾರೆ. 26 ಪ್ರಥಮ ದರ್ಜೆ ಕ್ರಿಕೆಟ್, 36 ಲಿಸ್ಟ್ ಎ ಪಂದ್ಯ ಮತ್ತು 45 ಟಿ20 ಪಂದ್ಯಗಳನ್ನು ಆಡಿದ ಅನುಭವ ಹೊಂದಿದ್ದಾರೆ.

ಇನ್ನೂ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಕಿಂಗ್ಸ್​ ತಂಡ 20 ಓವರ್​ನಲ್ಲಿ 4 ವಿಕೆಟ್ ನಷ್ಟಕ್ಕೆ 184 ರನ್ ಚಚ್ಚಿತು. ತಂಡದ ಪರ ಸಂಜಯ್ ಯಾದವ್ ಕೇವಲ 47 ಎಸೆತಗಳಲ್ಲಿ 5 ಫೋರ್, 6 ಸಿಕ್ಸರ್​​ನೊಂದಿಗೆ ಅಜೇಯ 87 ರನ್ ಸಿಡಿಸಿದರೆ, ಸೂರ್ಯಪ್ರಕಾಶ್ 50 ಎಸೆತಗಳಲ್ಲಿ 62 ರನ್ ಗಳಿಸಿದರು. ಇವರಿಬ್ಬರು ಶತಕದ ಜೊತೆಯಾಟ ಆಡಿ ವಿಶೇಷ ದಾಖಲೆ ಬರೆದರು.

ಟಾರ್ಗೆಟ್ ಬೆನ್ನಟ್ಟಿದ ಚೆಪಾಕ್ ಕೂಡ ಅತ್ಯುತ್ತಮ ಬ್ಯಾಟಿಂಗ್ ನಡೆಸಿತು. ನಾಯಕ ಕೌಶಿಕ್ ಗಾಂಧಿ 43 ಎಸೆತಗಳಲ್ಲಿ 7 ಫೋರ್, 2 ಸಿಕ್ಸರ್ ಬಾರಿಸಿ 64 ರನ್ ಚಚ್ಚಿದರು. ಸೋನು ಯಾದವ 34 ರನ್​ಗಳ ಕಾಣಿಕೆ ನೀಡಿದರೆ ಎಸ್. ಹರಿಶ್ ಕುಮಾರ್ ಅಜೇಯ 26 ರನ್ ಸಿಡಿಸಿ ಪಂದ್ಯವನ್ನು ಟೈ ಮಾಡುವಲ್ಲಿ ಯಶಸ್ವಿಯಾದರು. ಹೌದು, ಚೆಪಾಕ್ ತಂಡ ಕೂಡ 20 ಓವರ್​​ಗೆ 7 ವಿಕೆಟ್ ನಷ್ಟಕ್ಕೆ 184 ರನ್ ಗಳಿಸಿತು. ಹೀಗಾಗಿ ಸೂಪರ್ ಓವರ್ ನಡೆಸಲಾಯಿತು. ಸೂಪರ್ ಓವರ್​​ನಲ್ಲಿ ಮೊದಲು ಬ್ಯಾಟ್ ಮಾಡಿದ ಚೆಪಾಕ್ 9 ರನ್ ಗಳಿಸಿತು. ಈ ಟಾರ್ಗೆಟ್ ಅನ್ನು ನೆಲೈ ತಂಡ ಒಂದು ಎಸೆತ ಬಾಕಿ ಇರುವಂತೆ ಗೆದ್ದು ಬೀಗಿತು. ಸುಜಯ್ ಯಾದವ್ ಪಂದ್ಯಶ್ರೇಷ್ಠ ಪ್ರಶಸ್ತಿ ಬಾಜಿಕೊಂಡರು.

KS Bharat: ಭಾರತದ ಮಾನ ಉಳಿಸಿದ ಭರತ್: ಕೊಹ್ಲಿ-ರೋಹಿತ್ ವೈಫಲ್ಯದ ನಡುವೆ ತೊಡೆತಟ್ಟಿನಿಂತ ಶ್ರೀಕರ್

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ