AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

N Jagadeesan: ಕ್ರಿಕೆಟ್​ನಲ್ಲೊಂದು ಅಸಹ್ಯ ಘಟನೆ: ಮಂಕಡ್ ರನೌಟ್ ಮಾಡಿದ್ದಕ್ಕೆ ಮಧ್ಯದ ಬೆರಳು ತೋರಿಸಿದ ಜಗದೀಶನ್

TNPL 2022: ತಮಿಳುನಾಡು ಪ್ರೀಮಿಯರ್ ಲೀಗ್​ನ ಪಂದ್ಯವೊಂದರಲ್ಲಿ ನಡೆದ ಮಂಕಡ್ ರನೌಟ್ ಭಾರೀ ವೈರಲ್ ಆಗುತ್ತಿದೆ. ಚೆಪಾಕ್ ಸೂಪರ್ ಗಿಲ್ಲಿಸ್ ಹಾಗೂ ನೆಲೈ ರಾಯಲ್ ಕಿಂಗ್ಸ್​ ನಡುವಣ ಟಿಎನ್​ಪಿಎಲ್​ನ ಮೊದಲ ಪಂದ್ಯದಲ್ಲೇ ಈ ಘಟನೆ ನಡೆದಿದೆ.

N Jagadeesan: ಕ್ರಿಕೆಟ್​ನಲ್ಲೊಂದು ಅಸಹ್ಯ ಘಟನೆ: ಮಂಕಡ್ ರನೌಟ್ ಮಾಡಿದ್ದಕ್ಕೆ ಮಧ್ಯದ ಬೆರಳು ತೋರಿಸಿದ ಜಗದೀಶನ್
N Jagadeesan Mankad TNPL 2022
TV9 Web
| Edited By: |

Updated on: Jun 24, 2022 | 10:43 AM

Share

ಕ್ರಿಕೆಟ್ ಲೋಕದಲ್ಲಿ ಈ ಹಿಂದೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದ ಮಂಕಡ್ ಈಗ ಮತ್ತೆ ಸುದ್ದಿಯಲ್ಲಿದೆ. ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ ಮಂಕಡ್ ಅನ್ನು ಅಧಿಕೃತಗೊಳಿಸಿದ್ದು ನಿಯಮ 38ರ ಅಡಿಯಲ್ಲಿ ಇದನ್ನು ರನೌಟ್ ಎಂದು ಈ ವರ್ಷದ ಆರಂಭದಲ್ಲಿ ಘೋಷಿಸಿತ್ತು. ಇದಾದ ಬಳಿಕ ಮಂಖಡ್ (Mankad) ರನೌಟ್ ಕ್ರಿಕೆಟ್ ಲೋಕದಲ್ಲಿ ನಡೆದಿದ್ದು ತೀರಾ ಕಡಿಮೆ. ಆದರೀಗ ಆರನೇ ಆವೃತ್ತಿಯ ತಮಿಳುನಾಡು ಪ್ರೀಮಿಯರ್ ಲೀಗ್​ನ (TNPL 2022) ಪಂದ್ಯವೊಂದರಲ್ಲಿ ನಡೆದ ಮಂಕಡ್ ರನೌಟ್ ಭಾರೀ ವೈರಲ್ ಆಗುತ್ತಿದೆ. ಚೆಪಾಕ್ ಸೂಪರ್ ಗಿಲ್ಲಿಸ್ ಹಾಗೂ ನೆಲೈ ರಾಯಲ್ ಕಿಂಗ್ಸ್​ ನಡುವಣ ಟಿಎನ್​ಪಿಎಲ್​ನ ಮೊದಲ ಪಂದ್ಯದಲ್ಲೇ ಈ ಘಟನೆ ನಡೆದಿದೆ. ಚೆಪಾಕ್ ತಂಡದ ಬ್ಯಾಟರ್ ಎನ್. ಜಗದೀಶನ್ (N Jagadeesan) ಅವರನ್ನು ಬಾಬ ಅಪರಂಜಿತ್ ಮಂಕಡ್ ರನೌಟ್ ಮಾಡಿ ಪೆವಿಲಿಯನ್​ಗೆ ಅಟ್ಟಿದರು. ಈ ಸಂದರ್ಭ ದೊಡ್ಡ ಡ್ರಾಮವೇ ನಡೆಯಿತು.

ನೆಲೈ ನೀಡಿದ್ದ 185 ರನ್​ಗಳ ಸವಾಲಿನ ಟಾರ್ಗೆಟ್ ಬೆನ್ನಟ್ಟಲು ಬಂದ ಚೆಪಾಕ್ ಸ್ಫೋಟಕ ಆರಂಭವನ್ನ ಪಡೆದುಕೊಂಡಿತು. ಆದರೆ, 4ನೇ ಓವರ್ ಅಪರಂಜಿತ್ ಬೌಲಿಂಗ್ ಮಾಡಲು ಬಂದರು. ಈ ಸಂದರ್ಭ ನಾಲ್ಕನೇ ಎಸೆತ ಹಾಕಲು ಮುಂದಾದಾಗ ನಾನ್ ಸ್ಟ್ರೈಕರ್​ನಲ್ಲಿದ್ದ ಜಗದೀಶನ್ ಬೌಲರ್ ಬೌಲಿಂಗ್ ಮಾಡುವ ಮುನ್ನ ಕ್ರೀಸ್ ಬಿಟ್ಟು ಮುಂದೆ ಬಂದರು. ಇದನ್ನ ಗಮನಿಸಿದ ಬೌಲರ್ ಚೆಂಡನ್ನು ವಿಕೆಟ್​ಗೆ ತಾಗಿಸಿ ಮಂಕಡ್ ರನೌಟ್ ಮಾಡಿದರು. ಬೇರೆನೂ ದಾರಿಯಿಲ್ಲದೆ ಜಗದೀಶನ್ ಪೆವಿಲಿಯನ್​ಗೆ ತೆರಳಬೇಕಾಯಿತು.

ಇದನ್ನೂ ಓದಿ
Image
ENG vs NED: ಮುಟ್ಟಿದ್ದೆಲ್ಲ ಚಿನ್ನ; ಧೋನಿ ಹೆಸರಿನಲ್ಲಿದ್ದ 17 ವರ್ಷಗಳ ಹಳೆಯ ದಾಖಲೆ ಮುರಿದ ಬಟ್ಲರ್..!
Image
IND vs LEI: ಜೋ ರೂಟ್ ಮ್ಯಾಜಿಕ್ ಕಾಪಿ ಮಾಡುವಲ್ಲಿ ಕೊಹ್ಲಿ ವಿಫಲ; ವಿಡಿಯೋ ಸಖತ್ ವೈರಲ್
Image
Tribute: ಅಗಲಿದ ಪಂಜಾಬಿ ಗಾಯಕ ಸಿಧು ಮೂಸೇವಾಲಗೆ ಭಾವನಾತ್ಮಕ ಶ್ರದ್ಧಾಂಜಲಿ ಸಲ್ಲಿಸಿದ ಸರ್ಫರಾಜ್; ವಿಡಿಯೋ
Image
Ranji Trophy Final 2022: ಎರಡನೇ ದಿನದಾಟ ಅಂತ್ಯ; ಸರ್ಫರಾಜ್ ಶತಕ, ಪಂದ್ಯದಲ್ಲಿ ಬಿಗಿ ಹಿಡಿತ ಸಾಧಿಸಿದ ಮಧ್ಯಪ್ರದೇಶ

Virat Kohli: ಶ್ರೇಯಸ್ ಅಯ್ಯರ್ ಔಟ್ ಮಾಡಲು ಎದುರಾಳಿ ತಂಡದ ಬೌಲರ್​ಗೆ ಟಿಪ್ಸ್ ನೀಡಿದ ಕೊಹ್ಲಿ

ಈ ಘಟನೆಯಿಂದ ಸಿಟ್ಟಾದ ಜಗದೀಶನ್ ಮಧ್ಯಮ ಬೆರಳನ್ನು ತೋರಿಸುತ್ತಾ ಡಗೌಟ್ ಕಡೆ ಹೆಜ್ಜೆ ಹಾಕಿದರು. ತಮಿಳುನಾಡು ತಂಡದ ಹಿರಿಯ ಆಟಗಾರ ಜಗದೀಶನ್ ಐಪಿಎಲ್​ನಲ್ಲಿ ಕಳೆದ ಮೂರು ವರ್ಷದಿಂದ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ಪರ ಆಡುತ್ತಿದ್ದಾರೆ. 26 ಪ್ರಥಮ ದರ್ಜೆ ಕ್ರಿಕೆಟ್, 36 ಲಿಸ್ಟ್ ಎ ಪಂದ್ಯ ಮತ್ತು 45 ಟಿ20 ಪಂದ್ಯಗಳನ್ನು ಆಡಿದ ಅನುಭವ ಹೊಂದಿದ್ದಾರೆ.

ಇನ್ನೂ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಕಿಂಗ್ಸ್​ ತಂಡ 20 ಓವರ್​ನಲ್ಲಿ 4 ವಿಕೆಟ್ ನಷ್ಟಕ್ಕೆ 184 ರನ್ ಚಚ್ಚಿತು. ತಂಡದ ಪರ ಸಂಜಯ್ ಯಾದವ್ ಕೇವಲ 47 ಎಸೆತಗಳಲ್ಲಿ 5 ಫೋರ್, 6 ಸಿಕ್ಸರ್​​ನೊಂದಿಗೆ ಅಜೇಯ 87 ರನ್ ಸಿಡಿಸಿದರೆ, ಸೂರ್ಯಪ್ರಕಾಶ್ 50 ಎಸೆತಗಳಲ್ಲಿ 62 ರನ್ ಗಳಿಸಿದರು. ಇವರಿಬ್ಬರು ಶತಕದ ಜೊತೆಯಾಟ ಆಡಿ ವಿಶೇಷ ದಾಖಲೆ ಬರೆದರು.

ಟಾರ್ಗೆಟ್ ಬೆನ್ನಟ್ಟಿದ ಚೆಪಾಕ್ ಕೂಡ ಅತ್ಯುತ್ತಮ ಬ್ಯಾಟಿಂಗ್ ನಡೆಸಿತು. ನಾಯಕ ಕೌಶಿಕ್ ಗಾಂಧಿ 43 ಎಸೆತಗಳಲ್ಲಿ 7 ಫೋರ್, 2 ಸಿಕ್ಸರ್ ಬಾರಿಸಿ 64 ರನ್ ಚಚ್ಚಿದರು. ಸೋನು ಯಾದವ 34 ರನ್​ಗಳ ಕಾಣಿಕೆ ನೀಡಿದರೆ ಎಸ್. ಹರಿಶ್ ಕುಮಾರ್ ಅಜೇಯ 26 ರನ್ ಸಿಡಿಸಿ ಪಂದ್ಯವನ್ನು ಟೈ ಮಾಡುವಲ್ಲಿ ಯಶಸ್ವಿಯಾದರು. ಹೌದು, ಚೆಪಾಕ್ ತಂಡ ಕೂಡ 20 ಓವರ್​​ಗೆ 7 ವಿಕೆಟ್ ನಷ್ಟಕ್ಕೆ 184 ರನ್ ಗಳಿಸಿತು. ಹೀಗಾಗಿ ಸೂಪರ್ ಓವರ್ ನಡೆಸಲಾಯಿತು. ಸೂಪರ್ ಓವರ್​​ನಲ್ಲಿ ಮೊದಲು ಬ್ಯಾಟ್ ಮಾಡಿದ ಚೆಪಾಕ್ 9 ರನ್ ಗಳಿಸಿತು. ಈ ಟಾರ್ಗೆಟ್ ಅನ್ನು ನೆಲೈ ತಂಡ ಒಂದು ಎಸೆತ ಬಾಕಿ ಇರುವಂತೆ ಗೆದ್ದು ಬೀಗಿತು. ಸುಜಯ್ ಯಾದವ್ ಪಂದ್ಯಶ್ರೇಷ್ಠ ಪ್ರಶಸ್ತಿ ಬಾಜಿಕೊಂಡರು.

KS Bharat: ಭಾರತದ ಮಾನ ಉಳಿಸಿದ ಭರತ್: ಕೊಹ್ಲಿ-ರೋಹಿತ್ ವೈಫಲ್ಯದ ನಡುವೆ ತೊಡೆತಟ್ಟಿನಿಂತ ಶ್ರೀಕರ್

Follow Us
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ