AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮಲ್ಲಿ ಸೀಟ್​ ಇಲ್ಲ, ಬಾತ್​ರೂಮ್ ಬಗ್ಗೆ ಕೇಳುವಂತೆಯೇ ಇಲ್ಲ: ಪಾಕಿಸ್ತಾನ್ ಸ್ಟೇಡಿಯಂನ ಅವಸ್ಥೆ ಬಿಚ್ಚಿಟ್ಟ ಪಿಸಿಬಿ

Champions Trophy 2025: ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿದೆ. ಅದರಂತೆ ಭಾರತ, ಪಾಕಿಸ್ತಾನ್, ಸೌತ್ ಆಫ್ರಿಕಾ, ನ್ಯೂಝಿಲೆಂಡ್, ಅಫ್ಘಾನಿಸ್ತಾನ್, ಇಂಗ್ಲೆಂಡ್, ಬಾಂಗ್ಲಾದೇಶ್ ಮತ್ತು ಆಸ್ಟ್ರೇಲಿಯಾ ತಂಡಗಳು ಸೆಣಸಲಿದೆ. ಇನ್ನು 2025ರ ಚಾಂಪಿಯನ್ಸ್​ ಟ್ರೋಫಿ ಆಯೋಜನೆಯ ಹಕ್ಕು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಕೈಯಲ್ಲಿದ್ದು, ಹೀಗಾಗಿ ಭಾರತ ತಂಡ ಪಾಕ್​ಗೆ ತೆರಳಲಿದೆಯಾ ಎಂಬುದೇ ಈಗ ಪ್ರಶ್ನೆ.

ನಮ್ಮಲ್ಲಿ ಸೀಟ್​ ಇಲ್ಲ, ಬಾತ್​ರೂಮ್ ಬಗ್ಗೆ ಕೇಳುವಂತೆಯೇ ಇಲ್ಲ: ಪಾಕಿಸ್ತಾನ್ ಸ್ಟೇಡಿಯಂನ ಅವಸ್ಥೆ ಬಿಚ್ಚಿಟ್ಟ ಪಿಸಿಬಿ
PCB
ಝಾಹಿರ್ ಯೂಸುಫ್
|

Updated on: Aug 20, 2024 | 3:10 PM

Share

2025ರ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ ಪಾಕಿಸ್ತಾನದಲ್ಲಿ ನಡೆಯಲಿದೆ. ಆದರೆ ಈ ಟೂರ್ನಿಯ ಆಯೋಜನೆಗೆ ಬೇಕಾದ ವ್ಯವಸ್ಥೆ ಪಾಕಿಸ್ತಾನದಲ್ಲಿದ್ಯಾ? ಎಂದು ಕೇಳಿದರೆ ಉತ್ತರ ಇಲ್ಲ. ಇದನ್ನು ಹೇಳಿದ್ದು ಮತ್ಯಾರೂ ಅಲ್ಲ ಖುದ್ದು ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯ ಮುಖ್ಯಸ್ಥ ಮೊಹ್ಸಿನ್ ನಖ್ವಿ. ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಪಂದ್ಯಗಳನ್ನು ಆಯೋಜಿಸಲಿರುವ ಲಾಹೋರ್​ನ ಗಡಾಫಿ ಸ್ಟೇಡಿಯಂಗೆ ನಖ್ವಿ ಪರಿಶೀಲನೆಗೆ ತೆರಳಿದ್ದಾರೆ. ಈ ವೇಳೆ ಅಲ್ಲಿನ ಅವವ್ಯಸ್ಥೆಯನ್ನು ಕಣ್ಣಾರೆ ಕಂಡಿದ್ದಾರೆ. ಹೀಗಾಗಿಯೇ ಅಂತಾರಾಷ್ಟ್ರೀಯ ಟೂರ್ನಿಯನ್ನು ಆಯೋಜಿಸಲು ಬೇಕಾದ ವ್ಯವಸ್ಥೆ ಸದ್ಯದ ಮಟ್ಟಿಗೆ ಪಾಕಿಸ್ತಾನದಲ್ಲಿಲ್ಲ ಎಂದು ಅವರು ಒಪ್ಪಿಕೊಂಡಿದ್ದಾರೆ.

ನಮ್ಮ ಕ್ರೀಡಾಂಗಣಗಳು ಮತ್ತು ಪ್ರಪಂಚದ ಉಳಿದ ಕ್ರೀಡಾಂಗಣಗಳ ನಡುವೆ ಸಾಕಷ್ಟು ವ್ಯತ್ಯಾಸವಿದೆ. ಯಾವುದೇ ರೀತಿಯಲ್ಲೂ ನಮ್ಮದು ಅಂತಾರಾಷ್ಟ್ರೀಯ ಕ್ರೀಡಾಂಗಣವಾಗಿ ಉಳಿದಿಲ್ಲ. ಗಡಾಫಿ ಸ್ಟೇಡಿಯಂನಲ್ಲಿ ಸರಿಯಾದ ಆಸನ ವ್ಯವಸ್ಥೆಯೇ ಇಲ್ಲ. ಇನ್ನು ಬಾತ್​ರೂಮ್​ಗಳ ಬಗ್ಗೆ ಕೇಳುವಂತೆಯೇ ಇಲ್ಲ. ಒಂದು ಸ್ಟೇಡಿಯಂನಲ್ಲಿ ಇವರೆಡು ಬಹಳ ಮುಖ್ಯ. ಆದರೆ ಇದುವೇ ನಮ್ಮಲ್ಲಿಲ್ಲ ಎಂದು ಮೊಹ್ಸಿನ್ ನಖ್ವಿ ಬಹಿರಂಗಪಡಿಸಿದ್ದಾರೆ.

ಇನ್ನು ಸ್ಟೇಡಿಯಂನಲ್ಲಿ ಕೂತು ಪಂದ್ಯ ವೀಕ್ಷಿಸುತ್ತಿದ್ದಂತೆ 500 ಮೀಟರ್ ದೂರದಿಂದ ನೋಡಿದಂತಾಗುತ್ತದೆ. ಅಂದರೆ ಅಂತಾರಾಷ್ಟ್ರೀಯ ಸ್ಟೇಡಿಯಂಗೆ ಇರಬೇಕಾದ ಯಾವುದೇ ಮಾನದಂಡಗಳು ಇಲ್ಲಿಲ್ಲ. ಹೀಗಾಗಿ ಚಾಂಪಿಯನ್ಸ್ ಟ್ರೋಫಿಯನ್ನು ಆಯೋಜಿಸಬೇಕಿದ್ದರೆ ಮೊದಲು ನಮ್ಮ ಸ್ಟೇಡಿಯಂಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೇರಿಸಬೇಕಾದ ಅಗತ್ಯತೆಯಿದೆ ಎಂದು ನಖ್ವಿ ಹೇಳಿದ್ದಾರೆ.

ಚಾಂಪಿಯನ್ಸ್ ಟ್ರೋಫಿಗೂ ಮುನ್ನ ನಾವು ನಮ್ಮ ಕ್ರೀಡಾಂಗಣಗಳನ್ನು ವಿಶ್ವದ ಅತ್ಯುತ್ತಮ ಕ್ರೀಡಾಂಗಣಗಳಲ್ಲಿ ಒಂದನ್ನಾಗಿ ಮಾಡಬೇಕಿದೆ. ಕ್ರೀಡಾಂಗಣಗಳಲ್ಲಿ ಮೂಲ ಸೌಕರ್ಯಗಳನ್ನು ಒದಗಿಸುವುದು ನಮ್ಮ ಮೊದಲ ಆದ್ಯತೆಯಾಗಿದೆ. ಈ ಮೂಲಕ ಸಕಲ ಸೌಲಭ್ಯಗಳೊಂದಿಗೆ ಟೂರ್ನಿಯನ್ನು ಆಯೋಜಿಸುವ ಭರವಸೆಯನ್ನು ಪಿಸಿಬಿ ಮುಖ್ಯಸ್ಥರು ವ್ಯಕ್ತಪಡಿಸಿದ್ದಾರೆ.

ಚಾಂಪಿಯನ್ಸ್ ಟ್ರೋಫಿ ಯಾವಾಗ ಶುರು?

ಚಾಂಪಿಯನ್ಸ್​ ಟ್ರೋಫಿ ಟೂರ್ನಿಗಾಗಿ ತಾತ್ಕಾಲಿಕ ದಿನಾಂಕ ನಿಗದಿ ಮಾಡಲಾಗಿದೆ. ಅದರಂತೆ ಮುಂದಿನ ವರ್ಷ ಫೆಬ್ರವರಿ 19 ರಿಂದ ಮಾರ್ಚ್ 9 ರವರೆಗೆ ಚಾಂಪಿಯನ್ಸ್ ಟ್ರೋಫಿ ನಡೆಯಲಿದೆ. ಆದರೆ ಈ ಟೂರ್ನಿಯಲ್ಲಿ ಭಾರತ ತಂಡ ಪಾಲ್ಗೊಳ್ಳಲಿದೆಯಾ ಎಂಬುದೇ ಪ್ರಶ್ನೆ. ಏಕೆಂದರೆ ಈ ಟೂರ್ನಿ ಪಾಕಿಸ್ತಾನದಲ್ಲಿ ನಡೆಯಲಿದ್ದು, ಪಾಕ್​ನಲ್ಲಿ ಟೂರ್ನಿ ಆಯೋಜನೆಗೊಳ್ಳುವುದಾದರೆ ಭಾರತ ತಂಡವು ಹಿಂದೆ ಸರಿಯುವ ಸಾಧ್ಯತೆಯಿದೆ.

ಇದನ್ನೂ ಓದಿ: IPL 2025: LSG ತಂಡಕ್ಕೆ ಝಹೀರ್ ಖಾನ್..?

ಅಲ್ಲದೆ ಟೂರ್ನಿಯಲ್ಲಿ ಪಾಲ್ಗೊಳ್ಳಬೇಕಿದ್ದರೆ ಹೈಬ್ರಿಡ್ ಮಾದರಿಯಲ್ಲಿ ಪಂದ್ಯಾವಳಿಯನ್ನು ಆಯೋಜಿಸುವಂತೆ ಬೇಡಿಕೆ ಮುಂದಿಡಬಹುದು. ಅದರಂತೆ ಭಾರತದ ಪಂದ್ಯಗಳು ಶ್ರೀಲಂಕಾ ಅಥವಾ ಯುಎಇ ನಲ್ಲಿ ಆಯೋಜಿಸಲು ಐಸಿಸಿಗೆ ಮನವಿ ಮಾಡುವ ಸಾಧ್ಯತೆಯಿದೆ.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್