AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

7 ಆಟಗಾರರು ಖಾತೆಯನ್ನೇ ತೆರೆಯಲಿಲ್ಲ; 25 ರನ್‌ಗಳಿಗೆ ಆಲೌಟ್..! ರಣಜಿಯಲ್ಲಿ ನಡೆಯಿತು ವಿಚಿತ್ರ ಪಂದ್ಯ

Ranji Trophy 2022: ಎರಡನೇ ಇನ್ನಿಂಗ್ಸ್‌ನಲ್ಲಿ ನಾಗಾಲ್ಯಾಂಡ್‌ ತಂಡದ ಬ್ಯಾಟಿಂಗ್ ಎಷ್ಟು ಕೆಟ್ಟದಾಗಿತ್ತು ಎಂದರೆ ತಂಡದ ಏಳು ಬ್ಯಾಟ್ಸ್‌ಮನ್‌ಗಳಿಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ.

7 ಆಟಗಾರರು ಖಾತೆಯನ್ನೇ ತೆರೆಯಲಿಲ್ಲ; 25 ರನ್‌ಗಳಿಗೆ ಆಲೌಟ್..! ರಣಜಿಯಲ್ಲಿ ನಡೆಯಿತು ವಿಚಿತ್ರ ಪಂದ್ಯ
ಪ್ರಾತಿನಿಧಿಕ ಚಿತ್ರ
TV9 Web
| Updated By: ಪೃಥ್ವಿಶಂಕರ|

Updated on:Dec 16, 2022 | 5:01 PM

Share

ಉತ್ತರಾಖಂಡ ಕ್ರಿಕೆಟ್ ತಂಡ ಪ್ರಸಕ್ತ ಸಾಲಿನ ರಣಜಿ ಟ್ರೋಫಿಯನ್ನು (Ranji Trophy) ಅದ್ಧೂರಿಯಾಗಿ ಆರಂಭಿಸಿದೆ. ಉತ್ತರಾಖಂಡ ತಂಡ ಎ ಗುಂಪಿನ ಮೊದಲ ಪಂದ್ಯದಲ್ಲಿ ನಾಗಾಲ್ಯಾಂಡ್ ತಂಡವನ್ನು 174 ರನ್‌ಗಳಿಂದ ಸೋಲಿಸುವುದರೊಂದಿಗೆ ಗೆಲುವಿನ ಶುಭಾರಂಭ ಮಾಡಿದೆ. ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ನಾಗಾಲ್ಯಾಂಡ್ ಅತ್ಯಂತ ಕಡಿಮೆ ಸ್ಕೋರ್‌ಗೆ ಆಲೌಟ್ ಆಗುವುದರೊಂದಿಗೆ ಮುಜುಗರದ ಸೋಲಿಗೆ ತುತ್ತಾಗಿದೆ. ಈ ಪಂದ್ಯದಲ್ಲಿ ನಾಗಾಲ್ಯಾಂಡ್‌ ಗೆಲುವಿಗೆ ಕೇವಲ 200 ರನ್‌ಗಳ ಅಗತ್ಯವಿತ್ತು. ಆದರೆ ಈ ಗುರಿಯನ್ನು ಸಾಧಿಸುವುದು ಹಾಗಿರಲಿ, ಪಂದ್ಯದ ಕೊನೆಯ ದಿನವಾದ ಶುಕ್ರವಾರ ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ ಇಡೀ ತಂಡ ಕೇವಲ 25 ರನ್‌ಗಳಿಗೆ ಆಲೌಟ್ ಆಯಿತು.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ಮಾಡಿದ ಉತ್ತರಾಖಂಡ ಮೊದಲ ಇನಿಂಗ್ಸ್‌ನಲ್ಲಿ 282 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ನಾಗಾಲ್ಯಾಂಡ್ ತಂಡ 389 ರನ್ ಗಳಿಸಿ, 107 ರನ್​ಗಳ ಮುನ್ನಡೆ ಸಾಧಿಸಿತು. ಇದಕ್ಕುತ್ತರವಾಗಿ ಉತ್ತರಾಖಂಡ ತನ್ನ ಎರಡನೇ ಇನ್ನಿಂಗ್ಸ್​ನಲ್ಲಿ ಏಳು ವಿಕೆಟ್ ನಷ್ಟಕ್ಕೆ 306 ರನ್ ಗಳಿಸಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿ, ನಾಗಾಲ್ಯಾಂಡ್​ಗೆ 200 ರನ್​ಗಳ ಗೆಲುವಿನ ಟಾರ್ಗೆಟ್ ನೀಡಿತು. ಆದರೆ ನಾಗಾಲ್ಯಾಂಡ್​ಗೆ ಈ ಸ್ಕೋರ್​ನ ಸಮೀಪಕ್ಕೂ ತಲುಪಲು ಸಾಧ್ಯವಾಗಲಿಲ್ಲ.

IND vs BAN: ಟೆಸ್ಟ್ ವೃತ್ತಿಜೀವನದ ವೇಗದ ಶತಕ ಸಿಡಿಸಿದ ಪೂಜಾರ..! ಬಾಂಗ್ಲಾಕ್ಕೆ 512 ರನ್​ಗಳ ಟಾರ್ಗೆಟ್

2. 7 ಬ್ಯಾಟ್ಸ್‌ಮನ್‌ಗಳು ಖಾತೆ ತೆರೆಯಲಿಲ್ಲ

ಎರಡನೇ ಇನ್ನಿಂಗ್ಸ್‌ನಲ್ಲಿ ನಾಗಾಲ್ಯಾಂಡ್‌ ತಂಡದ ಬ್ಯಾಟಿಂಗ್ ಎಷ್ಟು ಕೆಟ್ಟದಾಗಿತ್ತು ಎಂದರೆ ತಂಡದ ಏಳು ಬ್ಯಾಟ್ಸ್‌ಮನ್‌ಗಳಿಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ತಂಡದ ಪರ 10 ರನ್ ಗಳಿಸಿದ ನಗಾಹೊ ಚಿಶಿ ತಂಡದ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ಜೋಶುವಾ ಒಜುಕುಮ್ ಮತ್ತು ಇಮ್ಲಿವಾಟಿ ಲೆಮ್ತೂರ್ ತಲಾ ಏಳು ರನ್ ಗಳಿಸಿದರೆ, ನಾಯಕ ಹೊಕೈಟೊ ಜಿಮೊಮಿ ಒಂದು ರನ್ ಗಳಿಸಿದರು. ಇವರನ್ನು ಬಿಟ್ಟರೆ ಉಳಿದ ಬ್ಯಾಟ್ಸ್‌ಮನ್‌ಗಳಿಗೆ ಖಾತೆ ತೆರೆಯಲು ಸಹ ಸಾಧ್ಯವಾಗಲಿಲ್ಲ.

ಇದಕ್ಕೆ ತದ್ವೀರುದ್ದವಾಗಿ, ಉತ್ತರಾಖಂಡ ತಂಡದ ಇಬ್ಬರೇ ಇಬ್ಬರು ಬೌಲರ್‌ಗಳು ಸಂಪೂರ್ಣ ನಾಗಾಲ್ಯಾಂಡ್ ತಂಡವನ್ನು ಪೆವಿಲಿಯನ್‌ಗಟ್ಟಿದರು. ಮಯಾಂಕ್ ಮಿಶ್ರಾ ಒಂಬತ್ತು ಓವರ್​ಗಳಲ್ಲಿ ನಾಲ್ಕು ರನ್ ನೀಡಿ ಐದು ವಿಕೆಟ್ ಪಡೆದರೆ, ಸ್ವಪ್ನಿಲ್ ಸಿಂಗ್ ಒಂಬತ್ತು ಓವರ್​ಗಳಲ್ಲಿ 21 ರನ್ ನೀಡಿ ನಾಲ್ಕು ವಿಕೆಟ್ ಪಡೆದರು. ಇನ್ನುಳಿದಂತೆ ಆರಂಭಿಕ ಆಟಗಾರ ಯುಗಂಧರ್ ಸಿಂಗ್ ಖಾತೆ ತೆರೆಯದೆ ರನೌಟ್ ಆದರು.

3. ಎರಡನೇ ಇನ್ನಿಂಗ್ಸ್​ನಲ್ಲಿ ಮಂಕಾದ ನಾಗಾಲ್ಯಾಂಡ್

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಉತ್ತರಾಖಂಡ ತಂಡದ ಪರ ಕುನಾಲ್ ಚಾಂಡೇಲಾ 129 ಎಸೆತಗಳನ್ನು ಎದುರಿಸಿ 16 ಬೌಂಡರಿಗಳ ನೆರವಿನಿಂದ 92 ರನ್ ಗಳಿಸಿದರೆ, ದಿಕ್ಷಾಂಶು ನೇಗಿ 83 ರನ್‌ಗಳ ಇನಿಂಗ್ಸ್‌ ಆಡಿದರು. ಈ ಇನ್ನಿಂಗ್ಸ್‌ನಲ್ಲಿ 126 ಎಸೆತಗಳನ್ನು ಎದುರಿಸಿದ ನೇಗಿ 13 ಬೌಂಡರಿ ಹಾಗೂ ಒಂದು ಸಿಕ್ಸರ್‌ ಬಾರಿಸಿದರು. ಅಖಿಲ್ ರಾವತ್ ಕೂಡ 76 ಎಸೆತಗಳಲ್ಲಿ ಅಜೇಯ 56 ರನ್ ಗಳಿಸಿದರು. ಈ ಮೂವರ ಆಟದಿಂದಾಗಿ ಉತ್ತರಾಖಂಡ ಮೊದಲ ಇನಿಂಗ್ಸ್‌ನಲ್ಲಿ 282 ರನ್ ಗಳಿಸಿತ್ತು.

ಈ ಟಾರ್ಗೆಟ್ ಬೆನ್ನಟ್ಟಿದ ನಾಗಾಲ್ಯಾಂಡ್ ಪರ ಶ್ರೀಕಾಂತ್ ಮೊದಲ ಇನ್ನಿಂಗ್ಸ್​ನಲ್ಲಿ ಶತಕ ಸಿಡಿಸಿದ್ದರು. 368 ಎಸೆತಗಳನ್ನು ಎದುರಿಸಿದ ಶ್ರೀಕಾಂತ್ 14 ಬೌಂಡರಿಗಳ ಸಹಾಯದಿಂದ 161 ರನ್ ಗಳಿಸಿದರು. ಇವರಲ್ಲದೆ ಯುಗಂಧರ್ ಸಿಂಗ್ 73 ರನ್ ಗಳಿಸಿದರು. ಉತ್ತರಾಖಂಡ ಪರ ಎರಡನೇ ಇನ್ನಿಂಗ್ಸ್‌ನಲ್ಲಿ ಪ್ರಿಯಾಂಶು ಖಂಡೂರಿ 106 ಎಸೆತಗಳಲ್ಲಿ ಐದು ಬೌಂಡರಿಗಳ ನೆರವಿನಿಂದ 73 ರನ್ ಗಳಿಸಿದರೆ, ಸ್ವಪ್ನಿಲ್ ಸಿಂಗ್ ಅಜೇಯ 88 ರನ್ ಗಳಿಸಿದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:59 pm, Fri, 16 December 22

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ