AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

NAM vs KAR: ನಮೀಬಿಯಾದಲ್ಲಿ ರಾಜ್ಯದ ಹುಡುಗರ ದರ್ಬಾರ್: ಕರ್ನಾಟಕಕ್ಕೆ 9 ವಿಕೆಟ್​ಗಳ ಜಯ

Karnataka tour of Namibia: ಈ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ನಮೀಬಿಯಾ ತಂಡ ಆರಂಭದಿಂದಲೇ ವಿಕೆಟ್ ಕಳೆದುಕೊಂಡು ಸಾಗಿತು. ವಿಧ್ವತ್ ಕಾವೇರಪ್ಪ ಹಾಗೂ ರಿಷಿ ಬೋಪಣ್ಣ ಬೌಲಿಂಗ್ ದಾಳಿಗೆ ತತ್ತರಿಸಿ ಹೋಯಿತು.

NAM vs KAR: ನಮೀಬಿಯಾದಲ್ಲಿ ರಾಜ್ಯದ ಹುಡುಗರ ದರ್ಬಾರ್: ಕರ್ನಾಟಕಕ್ಕೆ 9 ವಿಕೆಟ್​ಗಳ ಜಯ
NAM vs KAR
Vinay Bhat
|

Updated on: Jun 03, 2023 | 7:30 AM

Share

ರಾಷ್ಟ್ರೀಯ ತಂಡದ ವಿರುದ್ಧ ಏಕದಿನ ಸರಣಿ ಆಡಲು ಕರ್ನಾಟಕ ತಂಡ ನಮೀಬಿಯಾದಲ್ಲಿ (Namibia vs Karnataka) ಬೀಡುಬಿಟ್ಟಿದೆ. ನಮೀಬಿಯಾ ಅಂತರರಾಷ್ಟ್ರೀಯ ತಂಡದ ವಿರುದ್ಧ ಏಕದಿನ ಸರಣಿ ಆಡುತ್ತಿದೆ. ಶುಕ್ರವಾರ ನಮೀಬಿಯಾದ ರಾಷ್ಟ್ರ ರಾಜಧಾನಿ ವಿಂಡ್‌ಹೋಕ್‌ನಲ್ಲಿ (Windhoek) ನಡೆದ ಮೊದಲ ಏಕದಿನ ಪಂದ್ಯದಲ್ಲಿ ರಾಜ್ಯ ತಂಡ ಭರ್ಜರಿ ಪ್ರದರ್ಶನ ತೋರಿದೆ. ಬ್ಯಾಟಿಂಗ್-ಬೌಲಿಂಗ್​ನಲ್ಲಿ ಮಿಂಚಿದ ಕರ್ನಾಟಕ ತಂಡ ಬರೋಬ್ಬರಿ 9 ವಿಕೆಟ್​ಗಳ ಅಮೋಘ ಜಯ ಸಾಧಿಸಿತು. ಈ ಮೂಲಕ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ (ODI Series) ಕರ್ನಾಟಕ 1-0 ಮುನ್ನಡೆ ಪಡೆದುಕೊಂಡಿದೆ.

ಈ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ನಮೀಬಿಯಾ ತಂಡ ಆರಂಭದಿಂದಲೇ ವಿಕೆಟ್ ಕಳೆದುಕೊಂಡು ಸಾಗಿತು. ವಿಧ್ವತ್ ಕಾವೇರಪ್ಪ ಹಾಗೂ ರಿಷಿ ಬೋಪಣ್ಣ ಬೌಲಿಂಗ್ ದಾಳಿಗೆ ತತ್ತರಿಸಿ ಹೋಯಿತು. ತಂಡದ ಪರ ನಾಲ್ಕು ಬ್ಯಾಟರ್​ಗಳ ಸ್ಕೋರ್ ಮಾತ್ರ ಎರಡಂಕಿ ದಾಟಿತು. ಜಾನ್ ಫ್ರೈಲಿಂಕ್ 61 ಎಸೆತಗಳಲ್ಲಿ 57 ರನ್ ಗಳಿಸಿದರೆ, ನಾಯಕ ಗೆರ್​ಹಾರ್ಡ್ ಎರಸ್ಮುಸ್ 31 ರನ್ ಬಾರಿಸಿದರು. ನಮೀಬಿಯಾ 41.1 ಓವರ್​ನಲ್ಲಿ 171 ರನ್​ಗಳಿಗೆ ಸರ್ವಪತನ ಕಂಡಿತು. ಕರ್ನಾಟಕ ಪರ ವಿಧ್ವತ್ 8.1 ಓವರ್​ಗೆ 16 ರನ್ ನೀಡಿ 4 ವಿಕೆಟ್ ಕಿತ್ತರೆ, ರಿಷಿ 3 ವಿಕೆಟ್ ಪಡೆದರು.

WTC Final 2023: ಡಬ್ಲ್ಯುಟಿಸಿ ಫೈನಲ್ ಗೆದ್ದರೆ ಕ್ರಿಕೆಟ್ ದುನಿಯಾದಲ್ಲಿ ಹೊಸ ಇತಿಹಾಸ ಬರೆಯಲಿದೆ ಟೀಂ ಇಂಡಿಯಾ..!

ಇದನ್ನೂ ಓದಿ
Image
Junior Men’s Asia Cup Hockey: ಪಾಕ್​ ಮಣಿಸಿ ಕಪ್​ ಗೆದ್ದ ಭಾರತ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
Image
ಓರ್ವ ಮಹಿಳೆಯಾಗಿ ನಾನು…: ಕುಸ್ತಿಪಟುಗಳ ಪ್ರತಿಭಟನೆಗೆ ಮಹಾರಾಷ್ಟ್ರದ ಬಿಜೆಪಿ ಸಂಸದೆ ಬೆಂಬಲ
Image
WTC Final 2023: ಭಾರತದ ವಿರುದ್ಧ ದೈತ್ಯರನ್ನೇ ಕಣಕ್ಕಿಳಿಸಲಿದೆ ಕ್ರಿಕೆಟ್ ಆಸ್ಟ್ರೇಲಿಯಾ; ಹೀಗಿದೆ ಸಂಭಾವ್ಯ ತಂಡ
Image
ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ: ಕುಸ್ತಿಪಟುಗಳಿಗೆ ಕಪಿಲ್ ದೇವ್ ನೇತೃತ್ವದ 1983 ಚಾಂಪಿಯನ್ಸ್ ತಂಡದ ಸದಸ್ಯರ ಕಿವಿಮಾತು

ಸುಲಭ ಟಾರ್ಗೆಟ್ ಬೆನ್ನಟ್ಟಿದ ಕರ್ನಾಟಕ ತಂಡ 35.5 ಓವರ್​ಗಳಲ್ಲಿ 1 ವಿಕೆಟ್ ನಷ್ಟಕ್ಕೆ 172 ರನ್ ಬಾರಿಸಿ ಜಯ ಕಂಡಿತು. ರಾಜ್ಯ ತಂಡದ ಪರ ನಾಯಕ ರವಿಕುಮಾರ್ ಸಮರ್ಥ್ 100 ಎಸೆತಗಳಲ್ಲಿ ಅಜೇಯ 78 ರನ್ ಚಚ್ಚಿದರೆ, ನಿಕಿಲ್ ಜೋಸ್ 77 ಎಸೆತಗಳಲ್ಲಿ ಅಜೇಯ 56 ರನ್ ಬಾರಿಸಿದರು. ಎಲ್​ಆರ್ ಚೇತನ್ 37 ರನ್​ಗಳ ಕೊಡುಗೆ ನೀಡಿದರು. ದ್ವಿತೀಯ ಏಕದಿನ ಪಂದ್ಯ ಇದೇ ಮೈದಾನದಲ್ಲಿ ಜೂನ್ 4 ಭಾನುವಾರದಂದು ನಡೆಯಲಿದೆ.

ನಮೀಬಿಯಾ ಪ್ರವಾಸಕ್ಕೆ ಕರ್ನಾಟಕ ತಂಡದಲ್ಲಿ ಕಿರಿಯ ಆಟಗಾರರಿಗೆ ಹೆಚ್ಚಿನ ಮಣೆ ಹಾಕಲಾಗಿದೆ. ಅನೀಶ್ವರ್ ಗೌತಮ್, ವೈಶಾಕ್ ವಿಜಯಕುಮಾರ್, ವಿದ್ವತ್ ಕಾವೇರಪ್ಪ, ಎಲ್​ಆರ್​ ಚೇತನ್, ನಿಕಿನ್ ಜೋಸ್ ಸೇರಿದಂತೆ ಯುವ ಆಟಗಾರರ ದಂಡೇ ಕಾಣಿಸಿಕೊಂಡಿದೆ. ಅಂದಹಾಗೆ ಕರ್ನಾಟಕ ತಂಡ ವಿದೇಶಿ ಟೀಮ್ ಜೊತೆ ಆಡುತ್ತಿರುವುದು ಇದೇ ಮೊದಲೇನಲ್ಲ. ಇದಕ್ಕೂ ಮುನ್ನ ಯುಎಸ್ಎ ವಿರುದ್ಧ ಸೀಮಿತ ಓವರ್‌ಗಳ ಸರಣಿ ಆಡಿ ಜಯ ಸಾಧಿಸಿತ್ತು. ಇದೀಗ ಐಸಿಸಿ ಸಹಾಯಕ ಸದಸ್ಯ ರಾಷ್ಟ್ರವಾಗಿರುವ ನಮೀಬಿಯಾ ವಿರುದ್ಧ ಆಡುತ್ತಿರುವುದು ವಿಶೇಷ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ