AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asian Legends League 2026: ಬಾಂಗ್ಲಾ ಟೈಗರ್ಸ್ ಮಣಿಸಿ ಶುಭಾರಂಭ ಮಾಡಿದ ಇಂಡಿಯಾ ರಾಯಲ್ಸ್

Asian Legends League 2026: ಜಾಂಬಿಯಾದಲ್ಲಿ ನಡೆದ 2026ರ ಏಷ್ಯನ್ ಲೆಜೆಂಡ್ಸ್ ಲೀಗ್ ಮೊದಲ ಪಂದ್ಯದಲ್ಲಿ ಇಂಡಿಯಾ ರಾಯಲ್ಸ್, ಬಾಂಗ್ಲಾದೇಶ ಟೈಗರ್ಸ್ ವಿರುದ್ಧ 19 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಶಿಖರ್ ಧವನ್, ಸುರೇಶ್ ರೈನಾ ಇಲ್ಲದಿದ್ದರೂ ನಮನ್ ಓಜಾ ನಾಯಕತ್ವದಲ್ಲಿ ತಂಡ ಶುಭಾರಂಭ ಮಾಡಿತು. ಶದಾಬ್ ಜಕಾತಿ 3 ವಿಕೆಟ್ ಕಬಳಿಸಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು. ಈ ವಿಜಯದೊಂದಿಗೆ ಇಂಡಿಯಾ ರಾಯಲ್ಸ್ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

Asian Legends League 2026: ಬಾಂಗ್ಲಾ ಟೈಗರ್ಸ್ ಮಣಿಸಿ ಶುಭಾರಂಭ ಮಾಡಿದ ಇಂಡಿಯಾ ರಾಯಲ್ಸ್
Indian Royals
ಪೃಥ್ವಿಶಂಕರ
|

Updated on:Aug 01, 2026 | 3:20 PM

Share

ಜಾಂಬಿಯಾದಲ್ಲಿ ನಡೆಯುತ್ತಿರುವ 2026 ರ ಏಷ್ಯನ್ ಲೆಜೆಂಡ್ಸ್ ಲೀಗ್​ನ (Asian Legends League 2026) ಮೊದಲ ಪಂದ್ಯದಲ್ಲಿ ಇಂಡಿಯಾ ರಾಯಲ್ಸ್ ತಂಡವು, ಬಾಂಗ್ಲಾದೇಶ ಟೈಗರ್ಸ್ ತಂಡವನ್ನು (India Royals vs Bangladesh Tigers) ಸೋಲಿಸಿ ಶುಭಾರಂಭ ಮಾಡಿದೆ. ಈ ಪಂದ್ಯದಲ್ಲಿ ಇಂಡಿಯಾ ರಾಯಲ್ಸ್ ಪರ ದಿಗ್ಗಜ ಕ್ರಿಕೆಟಿಗರಾದ ಶಿಖರ್ ಧವನ್, ಸುರೇಶ್ ರೈನಾ, ಅಂಬಟಿ ರಾಯುಡು ಮತ್ತು ಹರ್ಭಜನ್ ಸಿಂಗ್ ಯಾರೂ ಭಾಗವಹಿಸುತ್ತಿಲ್ಲ. ಹೀಗಾಗಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ನಮನ್ ಓಜಾ ತಂಡದ ನಾಯಕತ್ವ ವಹಿಸಿದ್ದರು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಇಂಡಿಯಾ ರಾಯಲ್ಸ್ ತಂಡ 135 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಬಾಂಗ್ಲಾದೇಶ ಟೈಗರ್ಸ್ 116 ರನ್ ಕಲೆಹಾಕಲಷ್ಟೇ ಶಕ್ತವಾಗಿ 19 ರನ್​ಗಳಿಂದ ಸೋಲೊಪ್ಪಿಕೊಂಡಿತು.

135 ರನ್​ಗಳ ಅಲ್ಪ ಗುರಿ

ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಡಿಯಾ ರಾಯಲ್ಸ್ ತಂಡದ ನಾಯಕ ನಮನ್ ಓಜಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಆದರೆ ನಾಯಕನ ನಿರ್ಧಾರವನ್ನು ಬ್ಯಾಟರ್​ಗಳು ಸಮರ್ಥಿಸಿಕೊಳ್ಳಲಿಲ್ಲ. ಸ್ವತಃ ನಾಯಕ ನಮನ್ ಕೂಡ 8 ಎಸೆತಗಳನ್ನು ಎದುರಿಸಿ ಕೇವಲ 1 ರನ್ ಗಳಿಸಿ ಔಟಾದರು. ಅವರ ನಂತರ ಅಭಿಷೇಕ್ ಜಲೋಟಾ 26 ರನ್ ಮತ್ತು ಅಸದ್ ಪಠಾಣ್ 22 ರನ್ ಗಳಿಸಿದರು. ಅಂತಿಮವಾಗಿ, ಸರುಲ್ ಕನ್ವರ್ 40 ರನ್ ಗಳಿಸಿ ಅಜೇಯರಾಗಿ ಉಳಿದರು. ಹೀಗಾಗಿ ಇಂಡಿಯಾ ರಾಯಲ್ಸ್ ತಂಡ 20 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 135 ರನ್​ಗಳ ಅಲ್ಪ ಗುರಿ ನೀಡಿತು.

19 ರನ್​ಗಳಿಂದ ಸೋತ ಬಾಂಗ್ಲಾ

ಈ ಗುರಿ ಬೆನ್ನಟ್ಟಿದ ಬಾಂಗ್ಲಾದೇಶ ಟೈಗರ್ಸ್ ತಂಡಕ್ಕೆ ಇಂಡಿಯಾ ರಾಯಲ್ಸ್ ತಂಡದ ವೇಗಿಗಳು ಮುಕ್ತವಾಗಿ ಬ್ಯಾಟ್ ಬೀಸಲು ಅವಕಾಶ ನೀಡಲಿಲ್ಲ. ಆದಾಗ್ಯೂ ಮಧ್ಯಮ ಕ್ರಮಾಂಕದ ಬ್ಯಾಟರ್ ಅಲೋಕ್ ಕಪಾಲಿ 59 ರನ್ ಮತ್ತು ಮುಕ್ತಾರ್ ಅಲಿ 23 ರನ್​ಗಳ ಇನ್ನಿಂಗ್ಸ್ ಆಡಿದರಾದರೂ ತಂಡವನ್ನು ಗೆಲ್ಲಿಸುವಲ್ಲಿ ವಿಫಲರಾದರು. ಇತ್ತ ಇಂಡಿಯಾ ರಾಯಲ್ಸ್ ಪರ ಶದಾಬ್ ಜಕಾತಿ ನಾಲ್ಕು ಓವರ್‌ಗಳಲ್ಲಿ 25 ರನ್‌ಗಳನ್ನು ನೀಡಿ ಮೂರು ವಿಕೆಟ್‌ಗಳನ್ನು ಕಬಳಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆದರು. ಅವರ ಜೊತೆಗೆ ಅನುರೀತ್ ಸಿಂಗ್ ಕೂಡ ನಾಲ್ಕು ಓವರ್‌ಗಳಲ್ಲಿ ಕೇವಲ 12 ರನ್‌ಗಳನ್ನು ಬಿಟ್ಟುಕೊಟ್ಟು ಎರಡು ವಿಕೆಟ್‌ಗಳನ್ನು ಪಡೆದರು. ಅಭಿಷೇಕ್ ಜಲೋಟಾ ಕೂಡ ಮೂರು ಓವರ್‌ಗಳಲ್ಲಿ 11 ರನ್‌ ನೀಡಿ ಒಂದು ವಿಕೆಟ್ ಪಡೆದರು. ಅಂತಿಮವಾಗಿ ಬಾಂಗ್ಲಾದೇಶ ಟೈಗರ್ಸ್ 20 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ 116 ರನ್‌ಗಳಿಸಲಷ್ಟೇ ಶಕ್ತವಾಯಿತು.

Asian Games 2026: ಏಷ್ಯನ್ ಗೇಮ್ಸ್​ಗೆ ಹಾಲಿ ಚಾಂಪಿಯನ್ ಭಾರತ ಹಾಕಿ ತಂಡ ಪ್ರಕಟ

ಪಾಯಿಂಟ್ ಪಟ್ಟಿಯಲ್ಲಿ ಪಾಕ್​ಗೆ ಕೊನೆಯ ಸ್ಥಾನ

ಈ ಗೆಲುವಿನೊಂದಿಗೆ ಇಂಡಿಯಾ ರಾಯಲ್ಸ್ ತಂಡ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಏರಿದರೆ, ತನ್ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ಪ್ಯಾಂಥರ್ಸ್ ತಂಡವನ್ನು ಸೋಲಿಸಿದ ಏಷ್ಯನ್ ಸ್ಟಾರ್ಸ್ ತಂಡ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ತಮ್ಮ ಮೊದಲ ಪಂದ್ಯದಲ್ಲಿ ಅಫ್ಘಾನಿಸ್ತಾನ ಪಠಾಣ್ಸ್ ವಿರುದ್ಧ ಜಯಗಳಿಸಿ ಅಭಿಯಾನ ಆರಂಭಿಸಿದ್ದ ಶ್ರೀಲಂಕಾ ಲಯನ್ಸ್ ತಂಡವು ಮೂರನೇ ಸ್ಥಾನವನ್ನು ಕಾಯ್ದುಕೊಂಡಿದ್ದರೆ, ಪಾಕಿಸ್ತಾನ ಪ್ರಸ್ತುತ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:17 pm, Sat, 1 August 26

Follow Us
ವಿಮಾನಯಾನ ಕ್ಷೇತ್ರದ ಪ್ರಗತಿ ಒತ್ತಿಹೇಳಿದ ಪ್ರಧಾನಿ ಮೋದಿ
ವಿಮಾನಯಾನ ಕ್ಷೇತ್ರದ ಪ್ರಗತಿ ಒತ್ತಿಹೇಳಿದ ಪ್ರಧಾನಿ ಮೋದಿ
ಕೊಡಗಿನಲ್ಲಿ ಭಾರಿ ಮಳೆ: ಭಾಗಮಂಡಲ‌ ತ್ರಿವೇಣಿ ಸಂಗಮ, ಸ್ನಾನಘಟ್ಟ ಜಲಾವೃತ
ಕೊಡಗಿನಲ್ಲಿ ಭಾರಿ ಮಳೆ: ಭಾಗಮಂಡಲ‌ ತ್ರಿವೇಣಿ ಸಂಗಮ, ಸ್ನಾನಘಟ್ಟ ಜಲಾವೃತ
ಮೈಸೂರಲ್ಲಿ ಸಿಎಂ ಡಿ.ಕೆ ಶಿವಕುಮಾರ್ ಭರ್ಜರಿ ರೋಡ್ ಶೋ
ಮೈಸೂರಲ್ಲಿ ಸಿಎಂ ಡಿ.ಕೆ ಶಿವಕುಮಾರ್ ಭರ್ಜರಿ ರೋಡ್ ಶೋ
ಶಿರಸಿ ನಗರದ ಹಲವು ಬಡಾವಣೆಗಳು ಮುಳುಗಡೆ, ನಿವಾಸಿಗಳ ಪರದಾಟ
ಶಿರಸಿ ನಗರದ ಹಲವು ಬಡಾವಣೆಗಳು ಮುಳುಗಡೆ, ನಿವಾಸಿಗಳ ಪರದಾಟ
ರಾಜ್ಯದಲ್ಲಿ ನಾಳೆ ನಡೆಯುವ ನೇಮಕಾತಿ ಪರೀಕ್ಷೆಗಳಿಗೆ ಬಿಗಿ ಭದ್ರತೆ
ರಾಜ್ಯದಲ್ಲಿ ನಾಳೆ ನಡೆಯುವ ನೇಮಕಾತಿ ಪರೀಕ್ಷೆಗಳಿಗೆ ಬಿಗಿ ಭದ್ರತೆ
ಸರ್ಕಾರಿ ಹುದ್ದೆಗಳ ನೇಮಕಾತಿಗೆ ಕಟ್ಟುನಿಟ್ಟಿನ ಕ್ರಮ; ಖರ್ಗೆ ಘೋಷಣೆ
ಸರ್ಕಾರಿ ಹುದ್ದೆಗಳ ನೇಮಕಾತಿಗೆ ಕಟ್ಟುನಿಟ್ಟಿನ ಕ್ರಮ; ಖರ್ಗೆ ಘೋಷಣೆ
ಖಾಲಿ ಸೈಟ್​ಗಳಲ್ಲಿ 5 ವರ್ಷದ ಒಳಗೆ ಕಟ್ಟಡ ಕಟ್ಟಲೇಬೇಕು: ಸಿಎಂ ಖಡಕ್ ಸೂಚನೆ
ಖಾಲಿ ಸೈಟ್​ಗಳಲ್ಲಿ 5 ವರ್ಷದ ಒಳಗೆ ಕಟ್ಟಡ ಕಟ್ಟಲೇಬೇಕು: ಸಿಎಂ ಖಡಕ್ ಸೂಚನೆ
‘ಪ್ರಜ್ವಲ್​​ಗೆ ಜಿಮ್ ಟ್ರೇನರ್ ಕೊಟ್ಟಿದ್ವಿ, ಆದರೂ ಅಚಿವ್​ ಮಾಡಿಲ್ಲ’
‘ಪ್ರಜ್ವಲ್​​ಗೆ ಜಿಮ್ ಟ್ರೇನರ್ ಕೊಟ್ಟಿದ್ವಿ, ಆದರೂ ಅಚಿವ್​ ಮಾಡಿಲ್ಲ’
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ