ಪಾಕ್ ಪಡೆಗೆ ಆಘಾತದ ಮೇಲೆ ಆಘಾತ: ಪ್ರಮುಖ ಬೌಲರ್ ವಿಶ್ವಕಪ್​ನಿಂದ ಔಟ್

ODI World Cup 2023: ಅಕ್ಟೋಬರ್ 6 ರಂದು ನೆದರ್​ಲೆಂಡ್ಸ್​ ವಿರುದ್ಧದ ಪಂದ್ಯದ ಮೂಲಕ ಪಾಕಿಸ್ತಾನ್ ತಂಡವು ಏಕದಿನ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಹಾಗೆಯೇ ಅಕ್ಟೋಬರ್ 14 ರಂದು ಅಹಮದಾಬಾದ್‌ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಭಾರತ-ಪಾಕಿಸ್ತಾನ್ ಮುಖಾಮುಖಿಯಾಗಲಿದೆ.

ಪಾಕ್ ಪಡೆಗೆ ಆಘಾತದ ಮೇಲೆ ಆಘಾತ: ಪ್ರಮುಖ ಬೌಲರ್ ವಿಶ್ವಕಪ್​ನಿಂದ ಔಟ್
Pakistan Team
Follow us
| Updated By: ಝಾಹಿರ್ ಯೂಸುಫ್

Updated on: Sep 16, 2023 | 5:59 PM

ಏಷ್ಯಾಕಪ್​ನಲ್ಲಿನ ಹೀನಾಯ ಸೋಲಿನಿಂದ ಚೇತರಿಸಿಕೊಳ್ಳುವ ಮುನ್ನವೇ ಪಾಕಿಸ್ತಾನ್ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಅದು ಕೂಡ ತಂಡದ ಪ್ರಮುಖ ಬೌಲರ್ ನಸೀಮ್ ಶಾ ಏಕದಿನ ವಿಶ್ವಕಪ್​ ಟೂರ್ನಿಯಿಂದ ಹೊರಬೀಳುವ ಶಾಕಿಂಗ್ ಸುದ್ದಿಯೊಂದಿಗೆ. ಸೋಮವಾರ ಭಾರತದ ವಿರುದ್ಧ ನಡೆದ ಸೂಪರ್-4 ಹಂತದ ಪಂದ್ಯದ ವೇಳೆ ನಸೀಮ್ ಶಾ ಅವರು ಭುಜಕ್ಕೆ ಗಾಯವಾಗಿತ್ತು. ಹೀಗಾಗಿ ಅವರು ಅರ್ಧದಲ್ಲೇ ಮೈದಾನ ತೊರೆದಿದ್ದರು.

ಇದೇ ಕಾರಣದಿಂದಾಗಿ ಶ್ರೀಲಂಕಾ ವಿರುದ್ಧದ ನಿರ್ಣಾಯಕ ಪಂದ್ಯದಲ್ಲೂ ಯುವ ವೇಗಿ ಕಾಣಿಸಿಕೊಂಡಿರಲಿಲ್ಲ. ಇದೀಗ ನಸೀಮ್ ಶಾ ಅವರ ಸ್ಕ್ಯಾನಿಂಗ್ ರಿಪೋರ್ಟ್ ಬಂದಿದ್ದು, ಭುಜದ ಗಾಯವು ನಿರೀಕ್ಷಿಸಿದ್ದಕ್ಕಿಂತ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಹೀಗಾಗಿ ಅವರು ಹೆಚ್ಚಿನ ವಿಶ್ರಾಂತಿ ಪಡೆದುಕೊಳ್ಳಬೇಕಾಗಿ ಬರಬಹುದು ಎಂದು ಪ್ರಾಥಮಿಕ ವೈದ್ಯಕೀಯ ರಿಪೋರ್ಟ್ ತಿಳಿಸಿದೆ.

ಅಂದರೆ ಕನಿಷ್ಠ 2 ತಿಂಗಳುಗಳ ಕಾಲವಾದರೂ ಅವರು ಮೈದಾನದಿಂದ ಹೊರಗುಳಿಯಬೇಕಾಗಿ ಬರಬಹುದು. ಇತ್ತ ಅಕ್ಟೋಬರ್ 5 ರಿಂದ ಏಕದಿನ ವಿಶ್ವಕಪ್ ಶುರುವಾಗಲಿದ್ದು, ಈ ವೇಳೆಗೆ ಅವರು ಚೇತರಿಸಿಕೊಳ್ಳುವುದು ಅನುಮಾನ. ಹೀಗಾಗಿ ನಸೀಮ್ ಶಾ ಇಡೀ ಟೂರ್ನಿಯಿಂದ ಹೊರಗುಳಿಯುವುದು ಬಹುತೇಕ ಖಚಿತ ಎಂದು ವರದಿಯಾಗಿದೆ.

ಏಕದಿನ ವಿಶ್ವಕಪ್​ ಮೂಲಕ ಭಾರತದ ವಿರುದ್ಧದ ಏಷ್ಯಾಕಪ್​ ಸೋಲಿನ ಸೇಡನ್ನು ತೀರಿಸಿಕೊಳ್ಳುವ ತವಕದಲ್ಲಿದ್ದ ಪಾಕ್ ಪಡೆಗೆ ಇದೀಗ ನಸೀಮ್ ಶಾ ಅಲಭ್ಯತೆಯು ದೊಡ್ಡ ಹಿನ್ನಡೆಯನ್ನುಂಟು ಮಾಡುವುದರಲ್ಲಿ ಅನುಮಾನವೇ ಇಲ್ಲ.

ಝಮಾನ್ ಖಾನ್​ಗೆ ಅವಕಾಶ:

ನಸೀಮ್ ಶಾ ಏಕದಿನ ವಿಶ್ವಕಪ್​ನಿಂದ ಹೊರಗುಳಿದರೆ, ಝಮಾನ್​ ಖಾನ್​ಗೆ ಅವಕಾಶ ಸಿಗುವ ಸಾಧ್ಯತೆಯಿದೆ. ಏಕೆಂದರೆ ಶ್ರೀಲಂಕಾ ವಿರುದ್ಧದ ಪಂದ್ಯದ ಮೂಲಕ ಏಕದಿನ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿರುವ ಝಮಾನ್ ಅದ್ಭುತ ದಾಳಿ ಸಂಘಟಿಸಿದ್ದರು. ಅಲ್ಲದೆ ಶ್ರೀಲಂಕಾ ವಿರುದ್ಧ 8 ರನ್​ಗಳ ಗುರಿಯನ್ನು ಕೊನೆಯ ಎಸೆತದವರೆಗೆ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದರು. ಹೀಗಾಗಿ ಚೊಚ್ಚಲ ಪಂದ್ಯದಲ್ಲೇ ಪ್ರಭಾವ ಬೀರಿರುವ ಝಮಾನ್​ ಖಾನ್​ಗೆ ಏಕದಿನ ವಿಶ್ವಕಪ್​ ತಂಡದಲ್ಲಿ ಅವಕಾಶ ನೀಡುವ ಸಾಧ್ಯತೆ ಹೆಚ್ಚಿದೆ.

ಇದನ್ನೂ ಓದಿ: ಕಿಂಗ್ ಕೊಹ್ಲಿಯ 1 ಶತಕಕ್ಕೆ 10 ದಾಖಲೆಗಳು ಉಡೀಸ್..!

ಪಾಕ್ ವಿಶ್ವಕಪ್ ಅಭಿಯಾನ:

ಅಕ್ಟೋಬರ್ 6 ರಂದು ನೆದರ್​ಲೆಂಡ್ಸ್​ ವಿರುದ್ಧದ ಪಂದ್ಯದ ಮೂಲಕ ಪಾಕಿಸ್ತಾನ್ ತಂಡವು ಏಕದಿನ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಹಾಗೆಯೇ ಅಕ್ಟೋಬರ್ 14 ರಂದು ಅಹಮದಾಬಾದ್‌ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಭಾರತ-ಪಾಕಿಸ್ತಾನ್ ಮುಖಾಮುಖಿಯಾಗಲಿದೆ.

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ