AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hardik Pandya: ಮಗನೊಂದಿಗೆ ಟಿ20 ವಿಶ್ವಕಪ್ ಗೆಲುವನ್ನು ಸಂಭ್ರಮಿಸಿದ ಪಾಂಡ್ಯ; ಮಡದಿ ನತಾಶಾ ನಾಪತ್ತೆ

Hardik Pandya: ಟಿ20 ವಿಶ್ವಕಪ್ ಗೆದ್ದ ನಂತರ ತಮ್ಮ ಮನೆಗೆ ಮರಳಿರುವ ಹಾರ್ದಿಕ್ ಪಾಂಡ್ಯ, ಈ ಟಿ20 ವಿಶ್ವಕಪ್ ವಿಜಯೋತ್ಸವನ್ನು ತಮ್ಮ ಕುಟುಂಬದೊಂದಿಗೆ ಆಚರಿಸಿದ್ದಾರೆ. ಈ ಆಚರಣೆಯ ಫೋಟೋಗಳನ್ನು ಹಾರ್ದಿಕ್ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದು, ಈ ಫೋಟೋಗಳಲ್ಲಿ ಹಾರ್ದಿಕ್ ಪಾಂಡ್ಯ ಅವರ ಮಗ ಅಗಸ್ತ್ಯ ಕಾಣಿಸಿಕೊಂಡಿದ್ದಾರೆ. ಆದರೆ ಅವರ ಮಡದಿ ನತಾಶಾ ಮಾತ್ರ ಕಾಣಿಸಿಕೊಂಡಿಲ್ಲ.

Hardik Pandya: ಮಗನೊಂದಿಗೆ ಟಿ20 ವಿಶ್ವಕಪ್ ಗೆಲುವನ್ನು ಸಂಭ್ರಮಿಸಿದ ಪಾಂಡ್ಯ; ಮಡದಿ ನತಾಶಾ ನಾಪತ್ತೆ
ಹಾರ್ದಿಕ್ ಪಾಂಡ್ಯ
ಪೃಥ್ವಿಶಂಕರ
|

Updated on: Jul 05, 2024 | 8:22 PM

Share

ಅನುಭವಿ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ 2024ರ ಟಿ20 ವಿಶ್ವಕಪ್‌ನ ಫೈನಲ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿ ಭಾರತ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ಇಡೀ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಉತ್ತಮ ಪ್ರದರ್ಶನ ನೀಡಿದ್ದರು. ಅದರಲ್ಲೂ ದಕ್ಷಿಣ ಆಫ್ರಿಕಾ ವಿರುದ್ಧದ ಫೈನಲ್ ಪಂದ್ಯದಲ್ಲಿ ಪಾಂಡ್ಯ ಮೂರು ಓವರ್‌ಗಳಲ್ಲಿ 20 ರನ್‌ ನೀಡಿ ಮೂರು ಪ್ರಮುಖ ವಿಕೆಟ್‌ಗಳನ್ನು ಕಬಳಿಸಿದ್ದರು. ಭಾರತ ತಂಡ ಇದೀಗ ದೇಶಕ್ಕೆ ಮರಳಿದ್ದು, ಜುಲೈ 4 ರಂದು ತಂಡದ ಎಲ್ಲಾ ಆಟಗಾರರು ಅಭಿಮಾನಿಗಳೊಂದಿಗೆ ಈ ವಿಜಯವನ್ನು ಆಚರಿಸಿದ್ದರು. ಆ ಬಳಿಕ ಭಾರತ ತಂಡದ ಎಲ್ಲಾ ಆಟಗಾರರು ತಮ್ಮ ತಮ್ಮ ಮನೆಗೆ ಮರಳಿದ್ದು, ಕುಟುಂಬದೊಂದಿಗೆ ತಮ್ಮ ಸಂಭ್ರಮಾಚರಣೆಯನ್ನು ನಡೆಸಿದ್ದಾರೆ. ಅವರಲ್ಲಿ ಹಾರ್ದಿಕ್ ಪಾಂಡ್ಯ ಕೂಡ ಸೇರಿದ್ದಾರೆ.

ಮಗನೊಂದಿಗೆ ಸಂಭ್ರಮಾಚರಣೆ

ಟಿ20 ವಿಶ್ವಕಪ್ ಗೆದ್ದ ನಂತರ ತಮ್ಮ ಮನೆಗೆ ಮರಳಿರುವ ಹಾರ್ದಿಕ್ ಪಾಂಡ್ಯ, ಈ ಟಿ20 ವಿಶ್ವಕಪ್ ವಿಜಯೋತ್ಸವನ್ನು ತಮ್ಮ ಕುಟುಂಬದೊಂದಿಗೆ ಆಚರಿಸಿದ್ದಾರೆ. ಈ ಆಚರಣೆಯ ಫೋಟೋಗಳನ್ನು ಹಾರ್ದಿಕ್ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದು, ಈ ಫೋಟೋಗಳಲ್ಲಿ ಹಾರ್ದಿಕ್ ಪಾಂಡ್ಯ ಅವರ ಮಗ ಅಗಸ್ತ್ಯ ಕಾಣಿಸಿಕೊಂಡಿದ್ದಾರೆ. ಆದರೆ ಅವರ ಮಡದಿ ನತಾಶಾ ಮಾತ್ರ ಕಾಣಿಸಿಕೊಂಡಿಲ್ಲ.

ನಿನಗಾಗಿ ಮಾತ್ರ ಮಾಡುತ್ತೇನೆ: ಪಾಂಡ್ಯ

ಮಗನೊಂದಿಗಿನ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಪಾಂಡ್ಯ, ‘ನನ್ನ 1! ನಾನು ಏನೇ ಮಾಡಿದರೂ ನಿನಗಾಗಿ ಮಾತ್ರ ಮಾಡುತ್ತೇನೆ ಎಂದು ಬರೆದುಕೊಂಡಿದ್ದಾರೆ. ಆದರೆ ಈ ಫೋಟೋಗಳಲ್ಲಿ ಹಾರ್ದಿಕ್ ಪತ್ನಿ ನತಾಶಾ ಎಲ್ಲೂ ಕಾಣಿಸಿಕೊಂಡಿಲ್ಲ. ಹೀಗಾಗಿ ಇವರಿಬ್ಬರ ನಡುವಿನ ಸಂಬಂಧದಲ್ಲಿ ಬಿರುಕು ಉಂಟಾಗಿರುವ ಊಹಾಪೋಹಗಳಿಗೆ ಇನ್ನಷ್ಟು ರೆಕ್ಕೆಪುಕ್ಕ ಸಿಕ್ಕಂತಾಗಿದೆ. ಹಾಗೆಯೇ ಮತ್ತೊಮ್ಮೆ ಅವರ ವಿಚ್ಛೇದನದ ವದಂತಿ ಮುನ್ನಲೆಗೆ ಬಂದಿದೆ.

ಟಿ20 ವಿಶ್ವಕಪ್‌ನಲ್ಲಿ ದಿಟ್ಟ ಪ್ರದರ್ಶನ

ಟಿ20 ವಿಶ್ವಕಪ್‌ನಲ್ಲಿ ಹಾರ್ದಿಕ್ ಪಾಂಡ್ಯ ಅದ್ಭುತ ಪ್ರದರ್ಶನ ನೀಡಿದ್ದರು. ಟೂರ್ನಿಯಲ್ಲಿ ಬ್ಯಾಟ್​ನಿಂದ 144 ರನ್ ಕಲೆಹಾಕಿದ ಪಾಂಡ್ಯ ಬೌಲಿಂಗ್​ನಲ್ಲಿ 11 ವಿಕೆಟ್ ಪಡೆದರು. ಫೈನಲ್ ಪಂದ್ಯದಲ್ಲೂ ತಮ್ಮ ಬೌಲಿಂಗ್ ಮೂಲಕ ಸಂಚಲನ ಮೂಡಿಸಿದ್ದರು. ಮೂರು ಓವರ್​ಗಳಲ್ಲಿ 20 ರನ್ ನೀಡಿ 3 ವಿಕೆಟ್ ಪಡೆದರು. ಇದಲ್ಲದೇ ಕೊನೆಯ ಓವರ್​ನಲ್ಲಿ 16 ರನ್ ಡಿಫೆಂಡ್ ಮಾಡಿದ್ದರು. ಟಿ20 ವಿಶ್ವಕಪ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದಕ್ಕಾಗಿ ಪಾಂಡ್ಯ, ಐಸಿಸಿ ಟಿ20 ರ‍್ಯಾಂಕಿಂಗ್‌ನಲ್ಲಿ ಬಹುಮಾನ ಪಡೆದಿದ್ದು, ಟಿ20 ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!