AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಟೀಮ್ ಇಂಡಿಯಾ ಎ ತಂಡದಿಂದ ಪ್ರಮುಖ ಆಟಗಾರ ಔಟ್..!

India A vs New Zealand A: ನ್ಯೂಜಿಲೆಂಡ್ ಎ ತಂಡದ ವಿರುದ್ಧ ಸೆಪ್ಟೆಂಬರ್ 22 ರಿಂದ ಭಾರತ ಎ ತಂಡವು ಮೂರು ಪಂದ್ಯಗಳ ಏಕದಿನ ಸರಣಿ ಆಡಲಿದೆ. ಈ ಸರಣಿಯ ಎಲ್ಲಾ ಪಂದ್ಯಗಳು ಚೆನ್ನೈನಲ್ಲಿ ನಡೆಯಲಿವೆ.

Team India: ಟೀಮ್ ಇಂಡಿಯಾ ಎ ತಂಡದಿಂದ ಪ್ರಮುಖ ಆಟಗಾರ ಔಟ್..!
Navdeep Saini
TV9 Web
| Edited By: |

Updated on: Sep 18, 2022 | 1:55 PM

Share

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೂ ಮುನ್ನ ಟೀಮ್ ಇಂಡಿಯಾದಿಂದ ಮೊಹಮ್ಮದ್ ಶಮಿ ಹೊರಗುಳಿದಿದ್ದಾರೆ. ಕೊರೋನಾ ಸೋಂಕಿಗೆ ಒಳಗಾಗಿರುವ ಶಮಿ ಅವರನ್ನು ತಂಡದಿಂದ ಕೈ ಬಿಡಲಾಗಿದ್ದು, ಅವರ ಬದಲಿಗೆ ಉಮೇಶ್ ಯಾದವ್​ಗೆ ಸ್ಥಾನ ನೀಡಲಾಗಿದೆ. ಇದರ ಬೆನ್ನಲ್ಲೇ ಇದೀಗ ಟೀಮ್ ಇಂಡಿಯಾ ಎ ತಂಡದಿಂದ ಮತ್ತೋರ್ವ ವೇಗಿ ಕೂಡ ಹೊರಬಿದ್ದಿದ್ದಾರೆ.

ನ್ಯೂಜಿಲೆಂಡ್ ಎ ತಂಡದ ವಿರುದ್ಧ ನಡೆಯಲಿರುವ ಸರಣಿಗೆ ಭಾರತ ಎ ತಂಡದಲ್ಲಿ ಸ್ಥಾನ ಪಡೆದಿದ್ದ ನವದೀಪ್ ಸೈನಿ ಕೂಡ ಇದೀಗ ಹೊರಗುಳಿಯುವ ನಿರ್ಧಾರ ಮಾಡಿದ್ದಾರೆ. ದುಲೀಪ್ ಟ್ರೋಫಿಯಲ್ಲಿ ದಕ್ಷಿಣ ವಲಯ ಮತ್ತು ಉತ್ತರ ವಲಯ ನಡುವಿನ ಪಂದ್ಯದ ವೇಳೆ ಸೈನಿ ತೊಡೆಸಂದು ಗಾಯದ ಸಮಸ್ಯೆಗೆ ಒಳಗಾಗಿದ್ದರು.

ಇದೀಗ ಗಾಯವು ಗಂಭೀರವಾಗಿರುವ ಕಾರಣ ಭಾರತ ಎ ತಂಡದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಅದರಂತೆ ನ್ಯೂಜಿಲೆಂಡ್ ಎ ತಂಡದ ವಿರುದ್ಧದ ಸರಣಿಗೆ ನವದೀಪ್ ಸೈನಿ ಅಲಭ್ಯರಾಗಲಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ. ಇನ್ನು ನವದೀಪ್ ಸೈನಿ ಸ್ಥಾನದಲ್ಲಿ ಟೀಮ್ ಇಂಡಿಯಾ ಎ ಪರ ರಿಷಿ ಧವನ್ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ
Image
Team India: ಟೀಮ್ ಇಂಡಿಯಾ ಆಟಗಾರರ ಜೊತೆ ಕಾಣಿಸಿಕೊಂಡ ಸ್ಟಾರ್ ಕ್ರಿಕೆಟಿಗನ ಮಗ..!
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ನ್ಯೂಜಿಲೆಂಡ್ ಎ ತಂಡದ ವಿರುದ್ಧ ಸೆಪ್ಟೆಂಬರ್ 22 ರಿಂದ ಭಾರತ ಎ ತಂಡವು ಮೂರು ಪಂದ್ಯಗಳ ಏಕದಿನ ಸರಣಿ ಆಡಲಿದೆ. ಈ ಸರಣಿಯ ಎಲ್ಲಾ ಪಂದ್ಯಗಳು ಚೆನ್ನೈನಲ್ಲಿ ನಡೆಯಲಿವೆ.

ಭಾರತ ಎ ತಂಡ ಹೀಗಿದೆ: ಸಂಜು ಸ್ಯಾಮ್ಸನ್ (ನಾಯಕ), ಪೃಥ್ವಿ ಶಾ, ಅಭಿಮನ್ಯು ಈಶ್ವರನ್, ರುತುರಾಜ್ ಗಾಯಕ್ವಾಡ್, ರಾಹುಲ್ ತ್ರಿಪಾಠಿ, ರಜತ್ ಪಾಟಿದಾರ್, ಕೆಎಸ್ ಭರತ್ (ವಿಕೆಟ್ ಕೀಪರ್), ಕುಲದೀಪ್ ಯಾದವ್, ಶಹಬಾಜ್ ಅಹ್ಮದ್, ರಾಹುಲ್ ಚಾಹರ್, ತಿಲಕ್ ವರ್ಮಾ, ಕುಲದೀಪ್ ಸೇನ್, ಶಾರ್ದೂಲ್ ಠಾಕೂರ್, ಉಮ್ರಾನ್ ಮಲಿಕ್, ರಿಷಿ ಧವನ್ ಮತ್ತು ರಾಜ್ ಬಾವಾ.

ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ