AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Naveen-ul-Haq: ಅಫ್ಘಾನಿಸ್ತಾನ್ ತಂಡದಿಂದ ನವೀನ್ ಉಲ್ ಹಕ್ ಔಟ್..!

Bangladesh vs Afghanistan: ಬಾಂಗ್ಲಾದೇಶ್ ಹಾಗೂ ಅಫ್ಘಾನಿಸ್ತಾನ್ ನಡುವಣ ಮೊದಲ ಟಿ20 ಪಂದ್ಯ ಜುಲೈ 14 ರಂದು ನಡೆಯಲಿದ್ದು, 2ನೇ ಪಂದ್ಯವು ಜುಲೈ 16 ರಂದು ಜರುಗಲಿದೆ.

Naveen-ul-Haq: ಅಫ್ಘಾನಿಸ್ತಾನ್ ತಂಡದಿಂದ ನವೀನ್ ಉಲ್ ಹಕ್ ಔಟ್..!
Naveen-ul-Haq
TV9 Web
| Edited By: |

Updated on: Jul 08, 2023 | 6:52 PM

Share

Bangladesh vs Afghanistan: ಜನವರಿ 14 ರಿಂದ ಶುರುವಾಗಲಿರುವ ಬಾಂಗ್ಲಾದೇಶ್ ವಿರುದ್ಧದ ಟಿ20 ಸರಣಿಯಿಂದ ಅಫ್ಘಾನಿಸ್ತಾನ್ ವೇಗಿ ನವೀನ್ ಉಲ್ ಹಕ್ (Naveen-ul-Haq) ಹೊರಬಿದ್ದಿದ್ದಾರೆ. ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಯುವ ವೇಗಿ ಇದೀಗ ಹೆಚ್ಚಿನ ಚಿಕಿತ್ಸೆಗೆ ಇಂಗ್ಲೆಂಡ್​ಗೆ ಪ್ರಯಾಣಿಸಲು ನಿರ್ಧರಿಸಿದ್ದಾರೆ. ಹೀಗಾಗಿ ಬಾಂಗ್ಲಾ ವಿರುದ್ಧದ ಟಿ20 ಸರಣಿಯಲ್ಲಿ ನವೀನ್ ಉಲ್ ಹಕ್ ಕಾಣಿಸಿಕೊಳ್ಳುವುದಿಲ್ಲ. ಇತ್ತ ನವೀನ್ ಉಲ್ ಹಕ್ ಹೊರಗುಳಿಯುತ್ತಿದ್ದಂತೆ ಮತ್ತೋರ್ವ ವೇಗಿ ನಿಜಾತ್ ಮಸೂದ್ ಅವರನ್ನು ಅಫ್ಘಾನಿಸ್ತಾನ್ ಕ್ರಿಕೆಟ್ ಮಂಡಳಿ ಆಯ್ಕೆ ಮಾಡಿದೆ.

ಇದುವರೆಗೆ ಕೇವಲ 3 ಟಿ20 ಪಂದ್ಯಗಳನ್ನಾಡಿರುವ ಮಸೂದ್ 4 ವಿಕೆಟ್ ಕಬಳಿಸಲು ಮಾತ್ರ ಯಶಸ್ವಿಯಾಗಿದ್ದಾರೆ. ಇದಾಗ್ಯೂ ಇತ್ತೀಚೆಗೆ ನಡೆದ ಬಾಂಗ್ಲಾದೇಶ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ನಿಜಾತ್ ಮಸೂದ್ 5 ವಿಕೆಟ್ ಕಬಳಿಸಿ ಮಿಂಚಿದ್ದರು. ಹೀಗಾಗಿ ನವೀನ್ ಸ್ಥಾನದಲ್ಲಿ ಮಸೂದ್​ಗೆ ಅವಕಾಶ ನೀಡಲಾಗಿದೆ.

ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ನವೀನ್ ಉಲ್ ಹಕ್ ಎರಡು ತಿಂಗಳ ಕಾಲ ತಂಡದಿಂದ ಹೊರಗುಳಿಯುವ ಸಾಧ್ಯತೆಯಿದೆ ಎಂದು ಅಫ್ಘಾನಿಸ್ತಾನ ಕ್ರಿಕೆಟ್ ತಂಡದ ಮುಖ್ಯ ಆಯ್ಕೆಗಾರ ಅಸಾದುಲ್ಲಾ ಖಾನ್ ಶನಿವಾರ ತಿಳಿಸಿದ್ದಾರೆ. ಇದಾಗ್ಯೂ ಅವರು ಏಕದಿನ ವಿಶ್ವಕಪ್​ ವೇಳೆಗೆ ತಂಡಕ್ಕೆ ಕಂಬ್ಯಾಕ್ ಮಾಡಲಿದ್ದಾರಾ ಎಂಬುದರ ಬಗ್ಗೆ ಸ್ಪಷ್ಟನೆ ನೀಡಿಲ್ಲ.

ಬಾಂಗ್ಲಾದೇಶ್ ಹಾಗೂ ಅಫ್ಘಾನಿಸ್ತಾನ್ ನಡುವಣ ಮೊದಲ ಟಿ20 ಪಂದ್ಯ ಜುಲೈ 14 ರಂದು ನಡೆಯಲಿದ್ದು, 2ನೇ ಪಂದ್ಯವು ಜುಲೈ 16 ರಂದು ಜರುಗಲಿದೆ. ಈ ಸರಣಿಗಾಗಿ ಆಯ್ಕೆ ಮಾಡಲಾದ ಅಫ್ಘಾನಿಸ್ತಾನ್ ತಂಡ ಈ ಕೆಳಗಿನಂತಿದೆ.

ಇದನ್ನೂ ಓದಿ: Virat Kohli vs Naveen-ul-Haq: ನಾನಲ್ಲ, ಜಗಳ ಶುರು ಮಾಡಿದ್ದೇ ಕೊಹ್ಲಿ ಎಂದ ನವೀನ್ ಉಲ್ ಹಕ್

ಅಫ್ಘಾನಿಸ್ತಾನ್ ಟಿ20 ತಂಡ: ರಶೀದ್ ಖಾನ್ (ನಾಯಕ), ರಹಮಾನುಲ್ಲಾ ಗುರ್ಬಾಝ್ (ವಿಕೆಟ್ ಕೀಪರ್), ಇಬ್ರಾಹಿಂ ಝದ್ರಾನ್, ಮೊಹಮ್ಮದ್ ಶೆಹಝಾದ್, ವಫಾದರ್ ಮೊಮಂಡ್, ಹಝರತುಲ್ಲಾ ಝಝೈ, ಸಿದ್ದಿಕುಲ್ಲಾ ಅಟಲ್, ನಜಿಬುಲ್ಲಾ ಝದ್ರಾನ್, ಕರೀಮ್ ಜನತ್, ಮೊಹಮ್ಮದ್ ನಬಿ, ಅಝ್ಮತುಲ್ಲಾ ಒಮರ್​ಝೈ, ನೂರ್ ಅಹ್ಮದ್, ಮುಜೀಬ್ ಉರ್ ರೆಹಮಾನ್, ಫರೀದ್ ಅಹ್ಮದ್, ಫಝಲ್ಹಕ್ ಫಾರೂಕಿ ಮತ್ತು ನಿಜಾತ್ ಮಸೂದ್.

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ