AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Naveen-ul-Haq: ಅಫ್ಘಾನಿಸ್ತಾನ್ ತಂಡದಿಂದ ನವೀನ್ ಉಲ್ ಹಕ್ ಔಟ್..!

Bangladesh vs Afghanistan: ಬಾಂಗ್ಲಾದೇಶ್ ಹಾಗೂ ಅಫ್ಘಾನಿಸ್ತಾನ್ ನಡುವಣ ಮೊದಲ ಟಿ20 ಪಂದ್ಯ ಜುಲೈ 14 ರಂದು ನಡೆಯಲಿದ್ದು, 2ನೇ ಪಂದ್ಯವು ಜುಲೈ 16 ರಂದು ಜರುಗಲಿದೆ.

Naveen-ul-Haq: ಅಫ್ಘಾನಿಸ್ತಾನ್ ತಂಡದಿಂದ ನವೀನ್ ಉಲ್ ಹಕ್ ಔಟ್..!
Naveen-ul-Haq
TV9 Web
| Edited By: |

Updated on: Jul 08, 2023 | 6:52 PM

Share

Bangladesh vs Afghanistan: ಜನವರಿ 14 ರಿಂದ ಶುರುವಾಗಲಿರುವ ಬಾಂಗ್ಲಾದೇಶ್ ವಿರುದ್ಧದ ಟಿ20 ಸರಣಿಯಿಂದ ಅಫ್ಘಾನಿಸ್ತಾನ್ ವೇಗಿ ನವೀನ್ ಉಲ್ ಹಕ್ (Naveen-ul-Haq) ಹೊರಬಿದ್ದಿದ್ದಾರೆ. ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಯುವ ವೇಗಿ ಇದೀಗ ಹೆಚ್ಚಿನ ಚಿಕಿತ್ಸೆಗೆ ಇಂಗ್ಲೆಂಡ್​ಗೆ ಪ್ರಯಾಣಿಸಲು ನಿರ್ಧರಿಸಿದ್ದಾರೆ. ಹೀಗಾಗಿ ಬಾಂಗ್ಲಾ ವಿರುದ್ಧದ ಟಿ20 ಸರಣಿಯಲ್ಲಿ ನವೀನ್ ಉಲ್ ಹಕ್ ಕಾಣಿಸಿಕೊಳ್ಳುವುದಿಲ್ಲ. ಇತ್ತ ನವೀನ್ ಉಲ್ ಹಕ್ ಹೊರಗುಳಿಯುತ್ತಿದ್ದಂತೆ ಮತ್ತೋರ್ವ ವೇಗಿ ನಿಜಾತ್ ಮಸೂದ್ ಅವರನ್ನು ಅಫ್ಘಾನಿಸ್ತಾನ್ ಕ್ರಿಕೆಟ್ ಮಂಡಳಿ ಆಯ್ಕೆ ಮಾಡಿದೆ.

ಇದುವರೆಗೆ ಕೇವಲ 3 ಟಿ20 ಪಂದ್ಯಗಳನ್ನಾಡಿರುವ ಮಸೂದ್ 4 ವಿಕೆಟ್ ಕಬಳಿಸಲು ಮಾತ್ರ ಯಶಸ್ವಿಯಾಗಿದ್ದಾರೆ. ಇದಾಗ್ಯೂ ಇತ್ತೀಚೆಗೆ ನಡೆದ ಬಾಂಗ್ಲಾದೇಶ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ನಿಜಾತ್ ಮಸೂದ್ 5 ವಿಕೆಟ್ ಕಬಳಿಸಿ ಮಿಂಚಿದ್ದರು. ಹೀಗಾಗಿ ನವೀನ್ ಸ್ಥಾನದಲ್ಲಿ ಮಸೂದ್​ಗೆ ಅವಕಾಶ ನೀಡಲಾಗಿದೆ.

ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ನವೀನ್ ಉಲ್ ಹಕ್ ಎರಡು ತಿಂಗಳ ಕಾಲ ತಂಡದಿಂದ ಹೊರಗುಳಿಯುವ ಸಾಧ್ಯತೆಯಿದೆ ಎಂದು ಅಫ್ಘಾನಿಸ್ತಾನ ಕ್ರಿಕೆಟ್ ತಂಡದ ಮುಖ್ಯ ಆಯ್ಕೆಗಾರ ಅಸಾದುಲ್ಲಾ ಖಾನ್ ಶನಿವಾರ ತಿಳಿಸಿದ್ದಾರೆ. ಇದಾಗ್ಯೂ ಅವರು ಏಕದಿನ ವಿಶ್ವಕಪ್​ ವೇಳೆಗೆ ತಂಡಕ್ಕೆ ಕಂಬ್ಯಾಕ್ ಮಾಡಲಿದ್ದಾರಾ ಎಂಬುದರ ಬಗ್ಗೆ ಸ್ಪಷ್ಟನೆ ನೀಡಿಲ್ಲ.

ಬಾಂಗ್ಲಾದೇಶ್ ಹಾಗೂ ಅಫ್ಘಾನಿಸ್ತಾನ್ ನಡುವಣ ಮೊದಲ ಟಿ20 ಪಂದ್ಯ ಜುಲೈ 14 ರಂದು ನಡೆಯಲಿದ್ದು, 2ನೇ ಪಂದ್ಯವು ಜುಲೈ 16 ರಂದು ಜರುಗಲಿದೆ. ಈ ಸರಣಿಗಾಗಿ ಆಯ್ಕೆ ಮಾಡಲಾದ ಅಫ್ಘಾನಿಸ್ತಾನ್ ತಂಡ ಈ ಕೆಳಗಿನಂತಿದೆ.

ಇದನ್ನೂ ಓದಿ: Virat Kohli vs Naveen-ul-Haq: ನಾನಲ್ಲ, ಜಗಳ ಶುರು ಮಾಡಿದ್ದೇ ಕೊಹ್ಲಿ ಎಂದ ನವೀನ್ ಉಲ್ ಹಕ್

ಅಫ್ಘಾನಿಸ್ತಾನ್ ಟಿ20 ತಂಡ: ರಶೀದ್ ಖಾನ್ (ನಾಯಕ), ರಹಮಾನುಲ್ಲಾ ಗುರ್ಬಾಝ್ (ವಿಕೆಟ್ ಕೀಪರ್), ಇಬ್ರಾಹಿಂ ಝದ್ರಾನ್, ಮೊಹಮ್ಮದ್ ಶೆಹಝಾದ್, ವಫಾದರ್ ಮೊಮಂಡ್, ಹಝರತುಲ್ಲಾ ಝಝೈ, ಸಿದ್ದಿಕುಲ್ಲಾ ಅಟಲ್, ನಜಿಬುಲ್ಲಾ ಝದ್ರಾನ್, ಕರೀಮ್ ಜನತ್, ಮೊಹಮ್ಮದ್ ನಬಿ, ಅಝ್ಮತುಲ್ಲಾ ಒಮರ್​ಝೈ, ನೂರ್ ಅಹ್ಮದ್, ಮುಜೀಬ್ ಉರ್ ರೆಹಮಾನ್, ಫರೀದ್ ಅಹ್ಮದ್, ಫಝಲ್ಹಕ್ ಫಾರೂಕಿ ಮತ್ತು ನಿಜಾತ್ ಮಸೂದ್.

Follow Us
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ