AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ:ಬುಮ್ರಾ, ಅಕ್ಷರ್ ಔಟ್..! ಟಾಸ್ ಗೆದ್ದ ಟೀಂ ಇಂಡಿಯಾದಲ್ಲಿ 2 ಬದಲಾವಣೆ

India vs New Zealand T20: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2ನೇ ಟಿ20 ಪಂದ್ಯ ರಾಯ್‌ಪುರದಲ್ಲಿ ನಡೆಯುತ್ತಿದೆ. ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿರುವ ಭಾರತ, ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದೆ. 2026ರ ಟಿ20 ವಿಶ್ವಕಪ್ ದೃಷ್ಟಿಯಿಂದ ಈ ಪಂದ್ಯ ಮಹತ್ವದ್ದಾಗಿದೆ. ಎರಡೂ ತಂಡಗಳಲ್ಲಿ ಪ್ರಮುಖ ಬದಲಾವಣೆಗಳಾಗಿವೆ. ಭಾರತ ಗೆಲುವಿನ ಓಟ ಮುಂದುವರಿಸಲು ನೋಡಿದರೆ, ನ್ಯೂಜಿಲೆಂಡ್ ಸರಣಿಯಲ್ಲಿ ಪುನರಾಗಮನ ಮಾಡಲು ಯತ್ನಿಸುತ್ತಿದೆ.

IND vs NZ:ಬುಮ್ರಾ, ಅಕ್ಷರ್ ಔಟ್..! ಟಾಸ್ ಗೆದ್ದ ಟೀಂ ಇಂಡಿಯಾದಲ್ಲಿ 2 ಬದಲಾವಣೆ
Ind Vs Sa
ಪೃಥ್ವಿಶಂಕರ
|

Updated on:Jan 23, 2026 | 6:44 PM

Share

ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಪ್ರಸ್ತುತ ಟೀಂ ಇಂಡಿಯಾ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದ್ದು, ಮೊದಲ ಟಿ20ಪಂದ್ಯವನ್ನು 41 ರನ್‌ಗಳಿಂದ ಗೆದ್ದುಕೊಂಡಿತು. ಆದ್ದರಿಂದ, ಟೀಂ ಇಂಡಿಯಾ ತನ್ನ ಗೆಲುವಿನ ಓಟವನ್ನು ಮುಂದುವರೆಸುವ ಇರಾದೆಯಲ್ಲಿದೆ. ಇತ್ತ ನ್ಯೂಜಿಲೆಂಡ್ ಸರಣಿಯಲ್ಲಿ ಪುನರಾಗಮನ ಮಾಡಲು ನೋಡುತ್ತಿದೆ. 2026 ರ ಟಿ20 ವಿಶ್ವಕಪ್ ಅನ್ನು ಪರಿಗಣಿಸಿ ಈ ಸರಣಿ ಎರಡೂ ತಂಡಗಳಿಗೆ ನಿರ್ಣಾಯಕವಾಗಿದೆ.

ಟಾಸ್ ಗೆದ್ದ ಸೂರ್ಯಕುಮಾರ್

ಈ ಪಂದ್ಯದ ಟಾಸ್ ಕೂಡ ಮುಗಿದಿದ್ದು, ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಎರಡನೇ ಇನ್ನಿಂಗ್ಸ್​ನಲ್ಲಿ ಬ್ಯಾಟಿಂಗ್‌ ಮಾಡುವ ತಂಡಕ್ಕೆ ಇಬ್ಬನಿಯ ನೆರವು ಸಿಗುವ ಕಾರಣ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಳ್ಳುತ್ತಿರುವುದಾಗಿ ಸೂರ್ಯ ಹೇಳಿದರು. ಟಾಸ್ ಜೊತೆಗೆ ಎರಡೂ ತಂಡಗಳ ಪ್ಲೇಯಿಂಗ್ 11 ಕೂಡ ಹೊರಬಿದ್ದಿದ್ದು, ಟೀಂ ಇಂಡಿಯಾದಲ್ಲಿ 2 ಬದಲಾವಣೆಗಳನ್ನು ಮಾಡಲಾಗಿದೆ. ವೇಗಿ ಜಸ್ಪ್ರೀತ್ ಬುಮ್ರಾ ಹಾಗೂ ಅಕ್ಷರ್ ಪಟೇಲ್ ಈ ಪಂದ್ಯದಿಂದ ವಿಶ್ರಾಂತಿ ಪಡೆದಿದ್ದಾರೆ. ಇತ್ತ ನ್ಯೂಜಿಲೆಂಡ್ ತಂಡದಲ್ಲೂ 3 ಬದಲಾವಣೆಗಳಾಗಿವೆ.

ಹೆಡ್ ಟು ಹೆಡ್ ದಾಖಲೆ

ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಇಲ್ಲಿಯವರೆಗೆ ಒಟ್ಟು 26 ಟಿ20 ಪಂದ್ಯಗಳು ನಡೆದಿವೆ. ಈ ಅವಧಿಯಲ್ಲಿ, ಟೀಂ ಇಂಡಿಯಾ 15 ಪಂದ್ಯಗಳನ್ನು ಗೆದ್ದಿದ್ದರೆ, ನ್ಯೂಜಿಲೆಂಡ್ 10 ಪಂದ್ಯಗಳನ್ನು ಗೆದ್ದಿದೆ, ಒಂದು ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಇನ್ನು ಭಾರತದಲ್ಲಿ ಉಭಯ ತಂಡಗಳ ನಡುವೆ 12 ಟಿ20 ಪಂದ್ಯಗಳು ನಡೆದಿದ್ದು, ಇದರಲ್ಲಿ ಭಾರತ ಎಂಟು ಪಂದ್ಯಗಳಲ್ಲಿ ಮೇಲುಗೈ ಸಾಧಿಸಿದೆ. ಮತ್ತೊಂದೆಡೆ, ಕಿವೀಸ್ ಭಾರತದಲ್ಲಿ ಕೇವಲ ನಾಲ್ಕು ಟಿ20 ಪಂದ್ಯಗಳನ್ನು ಗೆದ್ದಿದೆ.

ಉಭಯ ತಂಡಗಳು

ಭಾರತ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ (ನಾಯಕ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ರಿಂಕು ಸಿಂಗ್, ಹರ್ಷಿತ್ ರಾಣಾ, ಅರ್ಶ್ದೀಪ್ ಸಿಂಗ್, ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ.

ನ್ಯೂಜಿಲೆಂಡ್: ಡೆವೊನ್ ಕಾನ್ವೆ, ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ರಚಿನ್ ರವೀಂದ್ರ, ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಡ್ಯಾರಿಲ್ ಮಿಚೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಜಕಾರಿ ಫಾಕ್ಸ್, ಮ್ಯಾಟ್ ಹೆನ್ರಿ, ಇಶ್ ಸೋಧಿ, ಜಾಕೋಬ್ ಡಫಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:41 pm, Fri, 23 January 26

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!