AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN: 6 ಪಂದ್ಯಗಳ ಸರಣಿಗಾಗಿ ಬಾಂಗ್ಲಾ ಪ್ರವಾಸ ಮಾಡಲಿದೆ ಭಾರತ; ವೇಳಾಪಟ್ಟಿ ಪ್ರಕಟ

India vs Bangladesh Cricket Tour Schedule Released: ಬಾಂಗ್ಲಾದೇಶದಲ್ಲಿ ರಾಜಕೀಯ ಅಸ್ಥಿರತೆ ಮತ್ತು ಮುಸ್ತಾಫಿಜುರ್ ಐಪಿಎಲ್ ಭಾಗವಹಿಸುವಿಕೆಯ ವಿವಾದದ ನಡುವೆಯೂ, ಭಾರತ ಕ್ರಿಕೆಟ್ ತಂಡ ಬಾಂಗ್ಲಾದೇಶ ಪ್ರವಾಸಕ್ಕೆ ಸಜ್ಜಾಗಿದೆ.ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ಏಕದಿನ ಮತ್ತು ಟಿ20 ಸರಣಿಗಳ ಸಂಪೂರ್ಣ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಪ್ರವಾಸವು ಆರು ಪಂದ್ಯಗಳನ್ನು ಒಳಗೊಂಡಿರಲಿದೆ.

IND vs BAN: 6 ಪಂದ್ಯಗಳ ಸರಣಿಗಾಗಿ ಬಾಂಗ್ಲಾ ಪ್ರವಾಸ ಮಾಡಲಿದೆ ಭಾರತ; ವೇಳಾಪಟ್ಟಿ ಪ್ರಕಟ
Ind Vs Ban
ಪೃಥ್ವಿಶಂಕರ
|

Updated on:Jan 02, 2026 | 4:10 PM

Share

ಬಾಂಗ್ಲಾದೇಶದ ಸ್ಟಾರ್ ವೇಗಿ ಮುಸ್ತಾಫಿಜುರ್ ರೆಹಮಾನ್ (Mustafizur Rahman ) ಅವರನ್ನು ಐಪಿಎಲ್‌ನಲ್ಲಿ (IPL) ಆಡಲು ಅನುಮತಿ ನೀಡಿರುವುದಕ್ಕೆ ಭಾರತದಲ್ಲಿ ಅಸಾಮಾಧಾನ ಸ್ಫೋಟಗೊಂಡಿದೆ. ಬಾಂಗ್ಲಾ ಆಟಗಾರನನ್ನು 9 ಕೋಟಿ ರೂ,ಗೆ ಖರೀದಿಸಿರುವ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡಕ್ಕೂ ಜನ ಛೀಮಾರಿ ಹಾಕುತ್ತಿದ್ದಾರೆ. ಇದೆಲ್ಲದರ ನಡುವೆ ಬಿಸಿಸಿಐ (BCCI) ಅಚ್ಚರಿಯ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಅದೆನೆಂದರೆ, ಏಕದಿನ ಹಾಗೂ ಟಿ20 ಸರಣಿಗಾಗಿ ಟೀಂ ಇಂಡಿಯಾ, ಬಾಂಗ್ಲಾದೇಶ ಪ್ರವಾಸವನ್ನು ಮಾಡಲಿದೆ. ಈ ಪ್ರವಾಸದ ವೇಳಾಪಟ್ಟಿಯನ್ನು ಇಂದು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಬಿಡುಗಡೆ ಮಾಡಿದೆ.

ವಾಸ್ತವವಾಗಿ ಬಾಂಗ್ಲಾದೇಶದಲ್ಲಿನ ರಾಜಕೀಯ ಅಸ್ಥಿರತೆ ಮತ್ತು ಹಿಂಸಾಚಾರದಿಂದಾಗಿ ಬಿಸಿಸಿಐ, ಈ ಪ್ರವಾಸವನ್ನು ಮುಂದೂಡಿತ್ತು. ಇದೀಗ ಈ ಪ್ರವಾಸದ ಬಗ್ಗೆ ಖಚಿತ ಮಾಹಿತಿ ನೀಡಿರುವ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಒಟ್ಟು 6 ಪಂದ್ಯಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಅದರಂತೆ ಭಾರತದ ಬಾಂಗ್ಲಾದೇಶ ಪ್ರವಾಸ ಏಕದಿನ ಸರಣಿಯೊಂದಿಗೆ ಆರಂಭವಾಗಲಿದೆ. ಹಾಗೆಯೇ ಟಿ20 ಸರಣಿಯೊಂದಿಗೆ ಅಂತ್ಯವಾಗಲಿದೆ.

ಪ್ರವಾಸದ ವಿವರ ಹೀಗಿದೆ

ಆದಾಗ್ಯೂ ಟೀಂ ಇಂಡಿಯಾದ ಈ ಪ್ರವಾಸಕ್ಕೆ ಇನ್ನು ಸಾಕಷ್ಟು ಸಮಯ ಉಳಿದಿದೆ. ಉಭಯ ತಂಡಗಳು ಸೆಪ್ಟೆಂಬರ್ ತಿಂಗಳಲ್ಲಿ ಮುಖಾಮುಖಿಯಾಗಲಿವೆ. ವೇಳಾಪಟ್ಟಿಯ ಪ್ರಕಾರ ಎರಡು ತಂಡಗಳ ನಡುವೆ ಮೊದಲು ಏಕದಿನ ಸರಣಿ ನಡೆಯಲಿದ್ದು, ಸರಣಿಯ ಮೊದಲ ಪಂದ್ಯ ಸೆಪ್ಟೆಂಬರ್ 1 ರಂದು ನಡೆಯಲಿದೆ. ಆ ಬಳಿಕ ಎರಡನೇ ಪಂದ್ಯ ಸೆಪ್ಟೆಂಬರ್ 3 ಹಾಗೂ ಮೂರನೇ ಪಂದ್ಯ ಸೆಪ್ಟೆಂಬರ್ 6 ರಂದು ನಡೆಯಲಿದೆ. ಏಕದಿನ ಸರಣಿಯ ಬಳಿಕ ಮೂರು ಪಂದ್ಯಗಳ ಟಿ20 ಸರಣಿ ನಡೆಯಲಿದ್ದು, ಪಂದ್ಯಗಳು ಸೆಪ್ಟೆಂಬರ್ 9, 12 ಮತ್ತು 13 ರಂದು ನಡೆಯಲಿವೆ.

ಸರಣಿ ಸೋತಿದ್ದ ಟೀಂ ಇಂಡಿಯಾ

ಭಾರತ ತಂಡವು ಕೊನೆಯ ಬಾರಿಗೆ 2022-23 ರಲ್ಲಿ ಬಾಂಗ್ಲಾದೇಶ ಪ್ರವಾಸ ಮಾಡಿತ್ತು, ಅಲ್ಲಿ ಏಕದಿನ ಸರಣಿಯನ್ನು ಸೋತಿತ್ತು. ಬಾಂಗ್ಲಾದೇಶ 2-1 ಅಂತರದಲ್ಲಿ ಸರಣಿಯನ್ನು ಗೆದ್ದುಕೊಂಡಿತು. ಆದಾಗ್ಯೂ, ಬಾಂಗ್ಲಾದೇಶ ನೆಲದಲ್ಲಿ ಭಾರತ ಉತ್ತಮ ದಾಖಲೆಯನ್ನು ಹೊಂದಿದೆ. ಬಾಂಗ್ಲಾದೇಶದಲ್ಲಿ ಭಾರತ ಆಡಿರುವ 25 ಪಂದ್ಯಗಳಲ್ಲಿ 18 ರಲ್ಲಿ ಗೆದ್ದಿದ್ದು, 6 ರಲ್ಲಿ ಸೋತಿದೆ ಮತ್ತು ಒಂದು ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:03 pm, Fri, 2 January 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್