AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Cup 2025: ಮಳೆ ಪೀಡಿತ ಪಂದ್ಯದಲ್ಲಿ ಟಾಸ್ ಗೆದ್ದ ಆಫ್ರಿಕಾ; ಭಾರತ ತಂಡದಲ್ಲಿ 1 ಬದಲಾವಣೆ

India vs South Africa: 2025ರ ಮಹಿಳಾ ವಿಶ್ವಕಪ್‌ನಲ್ಲಿ ಭಾರತ vs ದಕ್ಷಿಣ ಆಫ್ರಿಕಾ ತಂಡಗಳು ವಿಶಾಖಪಟ್ಟಣಂನಲ್ಲಿ ಸೆಮಿಫೈನಲ್ ನಿರ್ಣಾಯಕ ಪಂದ್ಯದಲ್ಲಿ ಮುಖಾಮುಖಿಯಾಗಿವೆ. ಮಳೆ ಕಾರಣದಿಂದ ತಡವಾಗಿ ಆರಂಭವಾದ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಅನಾರೋಗ್ಯದ ಕಾರಣದಿಂದ ಹೊರಗುಳಿದಿದ್ದ ಅಮನ್‌ಜೋತ್ ಕೌರ್ ಭಾರತ ತಂಡಕ್ಕೆ ಮರಳಿದ್ದು, ರೇಣುಕಾ ಸಿಂಗ್ ಹೊರಗುಳಿದಿದ್ದಾರೆ. ಉಭಯ ತಂಡಗಳಿಗೆ ಈ ಗೆಲುವು ಮಹತ್ವದ್ದಾಗಿದೆ.

World Cup 2025: ಮಳೆ ಪೀಡಿತ ಪಂದ್ಯದಲ್ಲಿ ಟಾಸ್ ಗೆದ್ದ ಆಫ್ರಿಕಾ; ಭಾರತ ತಂಡದಲ್ಲಿ 1 ಬದಲಾವಣೆ
Ind W Vs Sa W Toss
ಪೃಥ್ವಿಶಂಕರ
|

Updated on:Oct 09, 2025 | 3:51 PM

Share

2025 ರ ಮಹಿಳಾ ವಿಶ್ವಕಪ್‌ನಲ್ಲಿ (Women’s World Cup 2025) ಆತಿಥೇಯ ಭಾರತ ತಂಡ ಇದೀಗ ತನ್ನ ಮೂರನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ (India vs South Africa) ತಂಡವನ್ನು ಎದುರಿಸುತ್ತಿದೆ. ಈ ಪಂದ್ಯವು ವಿಶಾಖಪಟ್ಟಣಂನಲ್ಲಿರುವ ACA VDCA ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಇದು ಪಂದ್ಯಾವಳಿಯಲ್ಲಿ ಉಭಯ ತಂಡಗಳ ನಡುವಿನ ಮೂರನೇ ಪಂದ್ಯವಾಗಿದ್ದು, ಭಾರತ ತನ್ನ ಹಿಂದಿನ ಎರಡೂ ಪಂದ್ಯಗಳನ್ನು ಗೆದ್ದಿದೆ. ಮತ್ತೊಂದೆಡೆ, ದಕ್ಷಿಣ ಆಫ್ರಿಕಾ ತನ್ನ ಕೊನೆಯ ಎರಡು ಪಂದ್ಯಗಳಲ್ಲಿ ಒಂದನ್ನು ಗೆದ್ದಿದ್ದು, ಒಂದನ್ನು ಸೋತಿದೆ. ಇದೀಗ ಸೆಮಿಫೈನಲ್‌ ದೃಷ್ಟಿಯಿಂದ ಎರಡೂ ತಂಡಗಳಿಗೆ ಈ ಪಂದ್ಯದ ಗೆಲುವು ಅತ್ಯವಶ್ಯಕವಾಗಿದೆ.

ಟಾಸ್ ಗೆದ್ದ ಆಫ್ರಿಕಾ ಬೌಲಿಂಗ್ ಆಯ್ಕೆ

ನಿರೀಕ್ಷೆಯಂತೆಯೇ ವಿಶಾಖಪಟ್ಟಣಂನಲ್ಲಿ ಮಳೆ ಎಡೆಬಿಡದೆ ಸುರಿಯುತ್ತಿದೆ. ಹೀಗಾಗಿ ಪಂದ್ಯವನ್ನು 1 ಗಂಟೆ ತಡವಾಗಿ ಆರಂಭಿಸಬೇಕಾಯಿತು. ಇನ್ನು ಈ ಮಳೆ ಪೀಡಿತ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಪಂದ್ಯಕ್ಕಾಗಿ ಭಾರತ ತನ್ನ ಆಡುವ XI ರ ಬಳಗದಲ್ಲಿ ಒಂದು ಬದಲಾವಣೆ ಮಾಡಿದೆ. ಅನಾರೋಗ್ಯದ ಕಾರಣ ಹಿಂದಿನ ಪಂದ್ಯವನ್ನು ತಪ್ಪಿಸಿಕೊಂಡಿದ್ದ ಅಮನ್‌ಜೋತ್ ಕೌರ್ ಇದೀಗ ತಂಡವನ್ನು ಸೇರಿಕೊಂಡಿದ್ದು, ಕಳೆದ ಪಂದ್ಯದಲ್ಲಿ ಅವರ ಬದಲು ಆಡಿದ್ದ ರೇಣುಕಾ ಸಿಂಗ್ ತಂಡದಿಂದ ಹೊರಬಿದಿದ್ದಾರೆ.

ಎರಡೂ ತಂಡುಗಳು

ಭಾರತ ತಂಡ: ಪ್ರತೀಕಾ ರಾವಲ್, ಸ್ಮೃತಿ ಮಂಧಾನ, ಹರ್ಲೀನ್ ಡಿಯೋಲ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಜೆಮಿಮಾ ರಾಡ್ರಿಗಸ್, ರಿಚಾ ಘೋಷ್ (ವಿಕೆಟ್ ಕೀಪರ್), ಅಮನ್ಜೋತ್ ಕೌರ್, ಸ್ನೇಹ ರಾಣಾ, ಕ್ರಾಂತಿ ಗೌಡ್, ಶ್ರೀ ಚರಣಿ.

ದಕ್ಷಿಣ ಆಫ್ರಿಕಾ ತಂಡ: ಲಾರಾ ವೊಲ್ವಾರ್ಡ್ಟ್ (ನಾಯಕಿ), ತಜ್ಮಿನ್ ಬ್ರಿಟ್ಸ್, ಸುನೆ ಲೂಸ್, ಮಾರಿಜಾನ್ನೆ ಕಪ್, ಅನ್ನೆಕೆ ಬಾಷ್, ಸಿನಾಲೊ ಜಫ್ತಾ (ವಿಕೆಟ್ ಕೀಪರ್), ಕ್ಲೋಯ್ ಟ್ರಿಯಾನ್, ನಡಿನ್ ಡಿ ಕ್ಲರ್ಕ್, ಅಯಾಬೊಂಗಾ ಖಾಕಾ, ತುಮಿ ಸೆಖುಖುನೆ, ನಾನ್‌ಕುಲುಲೆಕೊ ಮ್ಲಾಬಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:48 pm, Thu, 9 October 25

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ