AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sandeep Lamichhane: ಕೇವಲ 9 ರನ್​ಗೆ 5 ವಿಕೆಟ್ ಕಬಳಿಸಿ ಕೆಟ್ಟ ದಾಖಲೆ ಬರೆದ ಸ್ಪಿನ್ನರ್..!

Sandeep Lamichhane: ನೇಪಾಳ ವಿರುದ್ದ ನಡೆದ 4ನೇ ಟಿ20 ಪಂದ್ಯದಲ್ಲಿ ಕೀನ್ಯಾ ತಂಡವು ಸಂದೀಪ್ ಲಾಮಿಚಾನೆ ಸ್ಪಿನ್ ಮೋಡಿಗೆ ತತ್ತರಿಸಿತು. 4 ಓವರ್​ಗಳಲ್ಲಿ ಕೇವಲ 9 ರನ್ ನೀಡಿ 5 ವಿಕೆಟ್ ಕಬಳಿಸಿ ನೇಪಾಳ ನಾಯಕ ಮಿಂಚಿದ್ದರು.

Sandeep Lamichhane: ಕೇವಲ 9 ರನ್​ಗೆ 5 ವಿಕೆಟ್ ಕಬಳಿಸಿ ಕೆಟ್ಟ ದಾಖಲೆ ಬರೆದ ಸ್ಪಿನ್ನರ್..!
Sandeep Lamichhane
TV9 Web
| Edited By: |

Updated on: Aug 31, 2022 | 3:00 PM

Share

ಕ್ರಿಕೆಟ್ ಅಂಗಳದಲ್ಲಿ ಭರ್ಜರಿ ಪ್ರದರ್ಶನದ ಮೂಲಕ ಹಲವು ದಾಖಲೆಗಳು ನಿರ್ಮಾಣವಾಗಿರುವುದನ್ನು ನೀವು ನೋಡುತ್ತೀರಿ. ಆದರೆ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ನೇಪಾಳ ತಂಡದ ನಾಯಕ ಸಂದೀಪ್ ಲಾಮಿಚಾನೆ ಕೆಟ್ಟ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ.  ನೇಪಾಳ ವಿರುದ್ದ ನಡೆದ 4ನೇ ಟಿ20 ಪಂದ್ಯದಲ್ಲಿ ಕೀನ್ಯಾ ತಂಡವು ಸಂದೀಪ್ ಲಾಮಿಚಾನೆ ಸ್ಪಿನ್ ಮೋಡಿಗೆ ತತ್ತರಿಸಿತು. 4 ಓವರ್​ಗಳಲ್ಲಿ ಕೇವಲ 9 ರನ್ ನೀಡಿ 5 ವಿಕೆಟ್ ಕಬಳಿಸಿ ನೇಪಾಳ ನಾಯಕ ಮಿಂಚಿದ್ದರು. ಪರಿಣಾಮ ಕೀನ್ಯಾ ತಂಡವು ಕೇವಲ 101 ರನ್​ಗಳಿಗೆ ಆಲೌಟ್ ಆಯಿತು.

ಈ ಸುಲಭ ಮೊತ್ತವನ್ನು ಬೆನ್ನತ್ತಿದ ನೇಪಾಳ ತಂಡವು ಬ್ಯಾಟಿಂಗ್ ವೈಫಲ್ಯ ಎದುರಿಸಿತು. ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 94 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಇದರೊಂದಿಗೆ ಕೀನ್ಯಾ ತಂಡವು 7 ರನ್​ಗಳ ರೋಚಕ ಜಯ ಸಾಧಿಸಿತು. ಈ ಸೋಲಿನೊಂದಿಗೆ ಟಿ20 ಕ್ರಿಕೆಟ್​ನ ಕೆಟ್ಟ ದಾಖಲೆಯೊಂದು ಸಂದೀಪ್ ಲಾಮಿಚಾನೆ ಪಾಲಾಗಿದೆ.

ಅಂದರೆ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ತಂಡದ ನಾಯಕರೊಬ್ಬರು 5 ವಿಕೆಟ್ ಪಡೆದಿದ್ದು ಇದೇ ಮೊದಲು. ಆದರೆ ಅದೇ ಪಂದ್ಯದಲ್ಲಿ ಸೋಲು ಕಾಣುವ ಮೂಲಕ ಟಿ20 ಕ್ರಿಕೆಟ್​ನಲ್ಲಿ ಐದು ವಿಕೆಟ್ ಪಡೆದು ಸೋಲುಂಡ ಮೊದಲ ನಾಯಕ ಎಂಬ ಕೆಟ್ಟ ದಾಖಲೆ ಸಂದೀಪ್ ಲಾಮಿಚಾನೆ ಪಾಲಾಯಿತು.

ಇದನ್ನೂ ಓದಿ
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Team India: ಟೀಮ್ ಇಂಡಿಯಾದ ಸರ್ವಶ್ರೇಷ್ಠ ಆರಂಭಿಕ ಆಟಗಾರ ಯಾರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಟಿ20 ಕ್ರಿಕೆಟ್​ನಲ್ಲಿ ಯಾವುದೇ ನಾಯಕ 5 ವಿಕೆಟ್ ಪಡೆದು ಸೋಲಿನ ರುಚಿ ನೋಡಿರಲಿಲ್ಲ. ಇದೀಗ ನೇಪಾಳ ತಂಡದ ನಾಯಕ ಸಂದೀಪ್ ಲಾಮಿಚಾನೆ ಅದ್ಭುತ ಪ್ರದರ್ಶನ ನೀಡಿಯೂ ಹೀನಾಯ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ.

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ