AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇಪಾಳ ತಂಡಕ್ಕೆ ಬೆಂಗಳೂರಿನಲ್ಲಿ ಟ್ರೈನಿಂಗ್..!

Cricket World Cup League 2: ಕ್ರಿಕೆಟ್ ವಿಶ್ವಕಪ್ ಲೀಗ್ 2 ನಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯುತ್ತವೆ. ಈ ತಂಡಗಳ ನಡುವೆ ಸರಣಿಗಳು ನಡೆಯಲಿದ್ದು, ಇದಕ್ಕಾಗಿ ಅಂಕ ಪಟ್ಟಿಯನ್ನೂ ಸಹ ರೂಪಿಸಲಾಗಿದೆ. ಈ ಅಂಕ ಪಟ್ಟಿಯಲ್ಲಿ ಅಗ್ರ ನಾಲ್ಕು ಸ್ಥಾನಗಳನ್ನು ಪಡೆಯುವ ತಂಡಗಳು 2027ರ ಏಕದಿನ ವಿಶ್ವಕಪ್​ಗಾಗಿ ಅರ್ಹತಾ ಸುತ್ತಿಗೆ ಪ್ರವೇಶಿಸಲಿದೆ.

ನೇಪಾಳ ತಂಡಕ್ಕೆ ಬೆಂಗಳೂರಿನಲ್ಲಿ ಟ್ರೈನಿಂಗ್..!
Nepal
ಝಾಹಿರ್ ಯೂಸುಫ್
|

Updated on: Aug 13, 2024 | 7:29 AM

Share

ನೇಪಾಳ ಕ್ರಿಕೆಟ್ ತಂಡವು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (NCA) ನಲ್ಲಿ ಟ್ರೈನಿಂಗ್ ನಡೆಸಲಿದೆ. ಕೆನಡಾದಲ್ಲಿ ನಡೆಯಲಿರುವ ಕ್ರಿಕೆಟ್ ವಿಶ್ವಕಪ್ ಲೀಗ್ 2 ಪಂದ್ಯಗಳಿಗಾಗಿ ತಯಾರಿ ನಡೆಸಲು ಎನ್​ಸಿಎಗೆ ಬರಲಿದೆ. ಇದಕ್ಕಾಗಿ ಈಗಾಗಲೇ ಬಿಸಿಸಿಐ ಅನುಮತಿ ನೀಡಿದ್ದು, ಅದರಂತೆ ಮುಂದಿನ ಎರಡು ವಾರಗಳ ಕಾಲ ನೇಪಾಳ ತಂಡವು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಅಭ್ಯಾಸ ನಡೆಸಲಿದ್ದಾರೆ.

ಕ್ರಿಕೆಟ್ ವಿಶ್ವಕಪ್ ಲೀಗ್ 2 ಪಂದ್ಯಕ್ಕೂ ಮುನ್ನ ನೇಪಾಳ ತಂಡವು ಎರಡು ವಾರಗಳ ಕಾಲ ಎನ್‌ಸಿಎಯಲ್ಲಿ ತರಬೇತಿ ಪಡೆಯಲಿದೆ. ಇದಾದ ಬಳಿಕ ನೇಪಾಳ ತಂಡವು ಕೆನಡಾ ಮತ್ತು ಒಮಾನ್‌ನೊಂದಿಗೆ ತ್ರಿಕೋನ ಸರಣಿಯನ್ನು ಆಡಲಿದ್ದಾರೆ. ನೇಪಾಳವು ಪ್ರಸ್ತುತ ಲೀಗ್ 2 ಟೇಬಲ್‌ನಲ್ಲಿ ಆರನೇ ಸ್ಥಾನದಲ್ಲಿದ್ದು, ಮುಂಬರುವ ಸರಣಿ ಮೂಲಕ ಅಂಕ ಪಟ್ಟಿಯಲ್ಲಿ ಮೇಲೇರುವ ವಿಶ್ವಾಸದಲ್ಲಿದ್ದಾರೆ.

ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ ಲೀಗ್ 2 ತಯಾರಿ ಸರಣಿಗೆ ಸಜ್ಜಾಗಲು ನೇಪಾಳ ತಂಡವು ಭಾರತಕ್ಕೆ ಹೊರಟಿದೆ. ಎರಡು ವಾರಗಳ ಕಾಲ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್‌ಸಿಎ) ತರಬೇತಿ ಪಡೆಯುವುದರಿಂದ ನಮ್ಮ ಆಟಗಾರರ ಕೌಶಲ್ಯ ಮತ್ತು ತಂತ್ರಗಳು ಮತ್ತಷ್ಟು ಅಭಿವೃಧ್ದಿಯಾಗಲಿದೆ ಎಂದು ನೇಪಾಳದ ಕ್ರಿಕೆಟ್ ಅಸೋಸಿಯೇಷನ್ ​​ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದೆ.

ನೇಪಾಳ ತಂಡದ ನಾಯಕ ರೋಹಿತ್ ಪೌಡೆಲ್, ದೀಪೇಂದ್ರ ಸಿಂಗ್ ಐರಿ ಮತ್ತು ಸಂದೀಪ್ ಲಮಿಚಾನೆ ಸೇರಿದಂತೆ ಕೆಲ ಆಟಗಾರರು ಇತ್ತೀಚೆಗೆ ಕೆನಡಾದಲ್ಲಿ ನಡೆದ ಗ್ಲೋಬಲ್ ಟಿ 20 ಲೀಗ್‌ನಲ್ಲಿ ಭಾಗವಹಿಸಿದ್ದರು. ಇದೀಗ ಈ ಆಟಗಾರರು ರಾಷ್ಟ್ರೀಯ ತಂಡವನ್ನು ಸೇರಿಕೊಳ್ಳಲಿದ್ದಾರೆ.

ಅದರಲ್ಲೂ ಮುಂಬರುವ ಏಕದಿನ ವಿಶ್ವಕಪ್​ನಲ್ಲಿ ಸ್ಥಾನ ಪಡೆಯಬೇಕಿದ್ದರೆ ನೇಪಾಳ ತಂಡವು ಕ್ರಿಕೆಟ್ ವಿಶ್ವಕಪ್ ಲೀಗ್ 2 ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಬೇಕಿದೆ. ಡಿಸೆಂಬರ್ 2026 ರ ವೇಳೆಗೆ ಲೀಗ್ 2 ಟೇಬಲ್‌ನ ಅಗ್ರ ನಾಲ್ಕರಲ್ಲಿ ಸ್ಥಾನ ಪಡೆದರೆ ಮಾತ್ರ ಏಕದಿನ ವಿಶ್ವಕಪ್​ ಅರ್ಹತಾ ಸುತ್ತಿಗೆ ಪ್ರವೇಶ ಪಡೆಯಲಿದೆ.

ಇದನ್ನೂ ಓದಿ: Virat Kohli: ವಿರಾಟ್ ಕೊಹ್ಲಿಯ ದಾಖಲೆ ಮುರಿದ ಬೆನ್ ಸ್ಟೋಕ್ಸ್​

ಹೀಗಾಗಿ ಮುಂಬರುವ ಸರಣಿಗಳು ನೇಪಾಳ ತಂಡದ ಪಾಲಿಗೆ ತುಂಬಾ ಮಹತ್ವದ್ದು. ಹೀಗಾಗಿಯೇ ಬಿಸಿಸಿಐ ಜೊತೆ ಮಾತುಕತೆ ನಡೆಸಿ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿನ ಸೌಲಭ್ಯಗಳನ್ನು ಬಳಸಿಕೊಳ್ಳಲು ಅನುಮತಿ ಕೋರಿದೆ. ಅದರಂತೆ ಇದೀಗ ನೇಪಾಳ ತಂಡವು 2 ವಾರಗಳ ಕಾಲ ಎನ್​ಸಿಎ ನಲ್ಲಿ ಅಭ್ಯಾಸ ನಡೆಸಲಿದ್ದಾರೆ.

ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ
ಗಿಲ್ಲಿ ನಟನ ಕ್ರೇಜ್ ನೋಡಿ; ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ
ಗಿಲ್ಲಿ ನಟನ ಕ್ರೇಜ್ ನೋಡಿ; ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ
ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ಸ್ಥಗಿತಕ್ಕೆ ಕಾರಣ ಕೊಟ್ಟ ಅಮೆರಿಕ
ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ಸ್ಥಗಿತಕ್ಕೆ ಕಾರಣ ಕೊಟ್ಟ ಅಮೆರಿಕ
ಕಿರುತೆರೆಯಲ್ಲಿ ಪ್ರಸಾರ ಕಾಣಲು ರೆಡಿ ಆಯ್ತು ‘ಕಾಂತಾರ: ಚಾಪ್ಟರ್ 1’
ಕಿರುತೆರೆಯಲ್ಲಿ ಪ್ರಸಾರ ಕಾಣಲು ರೆಡಿ ಆಯ್ತು ‘ಕಾಂತಾರ: ಚಾಪ್ಟರ್ 1’
ಲೋಡ್​ಗಟ್ಟಲೆ ಬಿಯರ್, ವೈನ್ ಚರಂಡಿ ಪಾಲು! ಯಾಕೆ ಗೊತ್ತೇ?
ಲೋಡ್​ಗಟ್ಟಲೆ ಬಿಯರ್, ವೈನ್ ಚರಂಡಿ ಪಾಲು! ಯಾಕೆ ಗೊತ್ತೇ?
ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ ಆಗಮಿಸಿದ ಇಸ್ರೇಲ್ ದಂಪತಿ!
ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ ಆಗಮಿಸಿದ ಇಸ್ರೇಲ್ ದಂಪತಿ!
ತುಮಕೂರು ರಸ್ತೆ ಅಪಘಾತ ಭೀಕರತೆ ಬಿಚ್ಚಿಟ್ಟ ಗಾಯಾಳು: ಹೇಳಿದ್ದೇನು ನೋಡಿ
ತುಮಕೂರು ರಸ್ತೆ ಅಪಘಾತ ಭೀಕರತೆ ಬಿಚ್ಚಿಟ್ಟ ಗಾಯಾಳು: ಹೇಳಿದ್ದೇನು ನೋಡಿ
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!