AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇಪಾಳ ತಂಡಕ್ಕೆ ಬೆಂಗಳೂರಿನಲ್ಲಿ ಟ್ರೈನಿಂಗ್..!

Cricket World Cup League 2: ಕ್ರಿಕೆಟ್ ವಿಶ್ವಕಪ್ ಲೀಗ್ 2 ನಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯುತ್ತವೆ. ಈ ತಂಡಗಳ ನಡುವೆ ಸರಣಿಗಳು ನಡೆಯಲಿದ್ದು, ಇದಕ್ಕಾಗಿ ಅಂಕ ಪಟ್ಟಿಯನ್ನೂ ಸಹ ರೂಪಿಸಲಾಗಿದೆ. ಈ ಅಂಕ ಪಟ್ಟಿಯಲ್ಲಿ ಅಗ್ರ ನಾಲ್ಕು ಸ್ಥಾನಗಳನ್ನು ಪಡೆಯುವ ತಂಡಗಳು 2027ರ ಏಕದಿನ ವಿಶ್ವಕಪ್​ಗಾಗಿ ಅರ್ಹತಾ ಸುತ್ತಿಗೆ ಪ್ರವೇಶಿಸಲಿದೆ.

ನೇಪಾಳ ತಂಡಕ್ಕೆ ಬೆಂಗಳೂರಿನಲ್ಲಿ ಟ್ರೈನಿಂಗ್..!
Nepal
ಝಾಹಿರ್ ಯೂಸುಫ್
|

Updated on: Aug 13, 2024 | 7:29 AM

Share

ನೇಪಾಳ ಕ್ರಿಕೆಟ್ ತಂಡವು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (NCA) ನಲ್ಲಿ ಟ್ರೈನಿಂಗ್ ನಡೆಸಲಿದೆ. ಕೆನಡಾದಲ್ಲಿ ನಡೆಯಲಿರುವ ಕ್ರಿಕೆಟ್ ವಿಶ್ವಕಪ್ ಲೀಗ್ 2 ಪಂದ್ಯಗಳಿಗಾಗಿ ತಯಾರಿ ನಡೆಸಲು ಎನ್​ಸಿಎಗೆ ಬರಲಿದೆ. ಇದಕ್ಕಾಗಿ ಈಗಾಗಲೇ ಬಿಸಿಸಿಐ ಅನುಮತಿ ನೀಡಿದ್ದು, ಅದರಂತೆ ಮುಂದಿನ ಎರಡು ವಾರಗಳ ಕಾಲ ನೇಪಾಳ ತಂಡವು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಅಭ್ಯಾಸ ನಡೆಸಲಿದ್ದಾರೆ.

ಕ್ರಿಕೆಟ್ ವಿಶ್ವಕಪ್ ಲೀಗ್ 2 ಪಂದ್ಯಕ್ಕೂ ಮುನ್ನ ನೇಪಾಳ ತಂಡವು ಎರಡು ವಾರಗಳ ಕಾಲ ಎನ್‌ಸಿಎಯಲ್ಲಿ ತರಬೇತಿ ಪಡೆಯಲಿದೆ. ಇದಾದ ಬಳಿಕ ನೇಪಾಳ ತಂಡವು ಕೆನಡಾ ಮತ್ತು ಒಮಾನ್‌ನೊಂದಿಗೆ ತ್ರಿಕೋನ ಸರಣಿಯನ್ನು ಆಡಲಿದ್ದಾರೆ. ನೇಪಾಳವು ಪ್ರಸ್ತುತ ಲೀಗ್ 2 ಟೇಬಲ್‌ನಲ್ಲಿ ಆರನೇ ಸ್ಥಾನದಲ್ಲಿದ್ದು, ಮುಂಬರುವ ಸರಣಿ ಮೂಲಕ ಅಂಕ ಪಟ್ಟಿಯಲ್ಲಿ ಮೇಲೇರುವ ವಿಶ್ವಾಸದಲ್ಲಿದ್ದಾರೆ.

ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ ಲೀಗ್ 2 ತಯಾರಿ ಸರಣಿಗೆ ಸಜ್ಜಾಗಲು ನೇಪಾಳ ತಂಡವು ಭಾರತಕ್ಕೆ ಹೊರಟಿದೆ. ಎರಡು ವಾರಗಳ ಕಾಲ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್‌ಸಿಎ) ತರಬೇತಿ ಪಡೆಯುವುದರಿಂದ ನಮ್ಮ ಆಟಗಾರರ ಕೌಶಲ್ಯ ಮತ್ತು ತಂತ್ರಗಳು ಮತ್ತಷ್ಟು ಅಭಿವೃಧ್ದಿಯಾಗಲಿದೆ ಎಂದು ನೇಪಾಳದ ಕ್ರಿಕೆಟ್ ಅಸೋಸಿಯೇಷನ್ ​​ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದೆ.

ನೇಪಾಳ ತಂಡದ ನಾಯಕ ರೋಹಿತ್ ಪೌಡೆಲ್, ದೀಪೇಂದ್ರ ಸಿಂಗ್ ಐರಿ ಮತ್ತು ಸಂದೀಪ್ ಲಮಿಚಾನೆ ಸೇರಿದಂತೆ ಕೆಲ ಆಟಗಾರರು ಇತ್ತೀಚೆಗೆ ಕೆನಡಾದಲ್ಲಿ ನಡೆದ ಗ್ಲೋಬಲ್ ಟಿ 20 ಲೀಗ್‌ನಲ್ಲಿ ಭಾಗವಹಿಸಿದ್ದರು. ಇದೀಗ ಈ ಆಟಗಾರರು ರಾಷ್ಟ್ರೀಯ ತಂಡವನ್ನು ಸೇರಿಕೊಳ್ಳಲಿದ್ದಾರೆ.

ಅದರಲ್ಲೂ ಮುಂಬರುವ ಏಕದಿನ ವಿಶ್ವಕಪ್​ನಲ್ಲಿ ಸ್ಥಾನ ಪಡೆಯಬೇಕಿದ್ದರೆ ನೇಪಾಳ ತಂಡವು ಕ್ರಿಕೆಟ್ ವಿಶ್ವಕಪ್ ಲೀಗ್ 2 ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಬೇಕಿದೆ. ಡಿಸೆಂಬರ್ 2026 ರ ವೇಳೆಗೆ ಲೀಗ್ 2 ಟೇಬಲ್‌ನ ಅಗ್ರ ನಾಲ್ಕರಲ್ಲಿ ಸ್ಥಾನ ಪಡೆದರೆ ಮಾತ್ರ ಏಕದಿನ ವಿಶ್ವಕಪ್​ ಅರ್ಹತಾ ಸುತ್ತಿಗೆ ಪ್ರವೇಶ ಪಡೆಯಲಿದೆ.

ಇದನ್ನೂ ಓದಿ: Virat Kohli: ವಿರಾಟ್ ಕೊಹ್ಲಿಯ ದಾಖಲೆ ಮುರಿದ ಬೆನ್ ಸ್ಟೋಕ್ಸ್​

ಹೀಗಾಗಿ ಮುಂಬರುವ ಸರಣಿಗಳು ನೇಪಾಳ ತಂಡದ ಪಾಲಿಗೆ ತುಂಬಾ ಮಹತ್ವದ್ದು. ಹೀಗಾಗಿಯೇ ಬಿಸಿಸಿಐ ಜೊತೆ ಮಾತುಕತೆ ನಡೆಸಿ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿನ ಸೌಲಭ್ಯಗಳನ್ನು ಬಳಸಿಕೊಳ್ಳಲು ಅನುಮತಿ ಕೋರಿದೆ. ಅದರಂತೆ ಇದೀಗ ನೇಪಾಳ ತಂಡವು 2 ವಾರಗಳ ಕಾಲ ಎನ್​ಸಿಎ ನಲ್ಲಿ ಅಭ್ಯಾಸ ನಡೆಸಲಿದ್ದಾರೆ.

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ