AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌತ್ ಆಫ್ರಿಕಾ ತಂಡವನ್ನು ಮಕಾಡೆ ಮಲಗಿಸಿದ ನೆದರ್​ಲೆಂಡ್ಸ್​

Netherlands vs South Africa: ಈ ಸ್ಪರ್ಧಾತ್ಮಕ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ಕೂಡ ಉತ್ತಮ ಆರಂಭ ಪಡೆದಿರಲಿಲ್ಲ. ಕ್ವಿಂಟನ್ ಡಿಕಾಕ್ 20 ರನ್​ಗಳಿಸಿ ವಿಕೆಟ್ ಒಪ್ಪಿಸಿದರೆ, ನಾಯಕ ಟೆಂಬಾ ಬವುಮಾ 16 ರನ್​ಗಳಿಸಿ ಕ್ಲೀನ್ ಬೌಲ್ಡ್ ಆದರು. ಆ ಬಳಿಕ ರಾಸ್ಸಿ ವಂಡೆರ್ ಡಸ್ಸೆನ್ (4) ಹಾಗೂ ಐಡೆನ್ ಮಾರ್ಕ್ರಾಮ್ (1) ಬಂದ ವೇಗದಲ್ಲೇ ಹಿಂತಿರುಗಿದರು.

ಸೌತ್ ಆಫ್ರಿಕಾ ತಂಡವನ್ನು ಮಕಾಡೆ ಮಲಗಿಸಿದ ನೆದರ್​ಲೆಂಡ್ಸ್​
Netherlands vs South Africa
TV9 Web
| Edited By: |

Updated on:Oct 17, 2023 | 11:07 PM

Share

ಏಕದಿನ ವಿಶ್ವಕಪ್​ನ 15ನೇ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡದ ವಿರುದ್ಧ ನೆದರ್​ಲೆಂಡ್ಸ್​ ಅಮೋಘ ಗೆಲುವು ದಾಖಲಿಸಿದೆ. ಧರ್ಮಶಾಲಾದ ಹೆಚ್​​ಪಿಸಿಎ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡವು ಬೌಲಿಂಗ್ ಆಯ್ದುಕೊಂಡಿತು. ಮಳೆಯಿಂದಾಗಿ ತಲಾ 43 ಓವರ್​ಗಳಿಗೆ ಸೀಮಿತವಾಗಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನೆದರ್​ಲೆಂಡ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ.

ಕೇವಲ 50 ರನ್​ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ನೆದರ್​ಲೆಂಡ್ಸ್​ ತಂಡಕ್ಕೆ ನಾಯಕ ಸ್ಕಾಟ್​ ಎಡ್ವರ್ಡ್ಸ್ ಆಸರೆಯಾದರು. ಅದ್ಭುತ ಇನಿಂಗ್ಸ್ ಕಟ್ಟಿದ ಎಡ್ವರ್ಡ್ಸ್​ ಸೌತ್ ಆಫ್ರಿಕಾ ಬೌಲರ್​ಗಳ ಬೆಂಡೆತ್ತಿದರು. ಪರಿಣಾಮ ಕೇವಲ 69 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 10 ಫೋರ್​ಗಳೊಂದಿಗೆ ಎಡ್ವರ್ಡ್ಸ್ ಅಜೇಯ 78 ರನ್ ಬಾರಿಸಿದರು.

ಇನ್ನು ಅಂತಿಮ ಹಂತದಲ್ಲಿ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಆರ್ಯನ್ ದತ್ 9 ಎಸೆತಗಳಲ್ಲಿ 3 ಸಿಕ್ಸ್​ಗಳೊಂದಿಗೆ ಅಜೇಯ 23 ರನ್ ಸಿಡಿಸಿದರು. ಈ ಬಿರುಸಿನ ಬ್ಯಾಟಿಂಗ್ ನೆರವಿನಿಂದ ನೆದರ್​ಲೆಂಡ್ಸ್ ತಂಡವು ನಿಗದಿತ 43 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 245 ರನ್ ಕಲೆಹಾಕಿತು.

ಈ ಸ್ಪರ್ಧಾತ್ಮಕ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ಕೂಡ ಉತ್ತಮ ಆರಂಭ ಪಡೆದಿರಲಿಲ್ಲ. ಕ್ವಿಂಟನ್ ಡಿಕಾಕ್ 20 ರನ್​ಗಳಿಸಿ ವಿಕೆಟ್ ಒಪ್ಪಿಸಿದರೆ, ನಾಯಕ ಟೆಂಬಾ ಬವುಮಾ 16 ರನ್​ಗಳಿಸಿ ಕ್ಲೀನ್ ಬೌಲ್ಡ್ ಆದರು. ಆ ಬಳಿಕ ರಾಸ್ಸಿ ವಂಡೆರ್ ಡಸ್ಸೆನ್ (4) ಹಾಗೂ ಐಡೆನ್ ಮಾರ್ಕ್ರಾಮ್ (1) ಬಂದ ವೇಗದಲ್ಲೇ ಹಿಂತಿರುಗಿದರು.

ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ಹೆನ್ರಿಕ್ ಕ್ಲಾಸೆನ್ ಹಾಗೂ ಡೇವಿಡ್ ಮಿಲ್ಲರ್ ಉತ್ತಮ ಜೊತೆಯಾಟ ಪ್ರದರ್ಶಿಸಿದರು. 28 ರನ್​ಗಳಿಸಿ ಆಪಾಯಕಾರಿಯಾಗುವ ಸೂಚನೆ ನೀಡಿದ್ದ ಕ್ಲಾಸೆನ್ ಅವರನ್ನು ಔಟ್ ಮಾಡುವಲ್ಲಿ ವ್ಯಾನ್ ಬೀಕ್ ಯಶಸ್ವಿಯಾದರು.

ಪರಿಣಾಮ 89 ರನ್​ಗಳಿಗೆ ಸೌತ್ ಆಫ್ರಿಕಾ ತಂಡವು 5 ವಿಕೆಟ್ ಕಳೆದುಕೊಂಡಿತು. ಆ ಬಳಿಕ ಬಂದ ಮಾರ್ಕೊ ಯಾನ್ಸನ್ 9 ರನ್​ಗಳಿಸಿ ಕ್ಲೀನ್ ಬೌಲ್ಡ್ ಆಗಿ ನಿರ್ಗಮಿಸಿದರು. ಇದಾಗ್ಯೂ ಮತ್ತೊಂದೆಡೆ ಡೇವಿಡ್ ಮಿಲ್ಲರ್ ಭರ್ಜರಿ ಬ್ಯಾಟಿಂಗ್ ಮುಂದುವರೆಸಿದ್ದರು. 52 ಎಸೆತಗಳಲ್ಲಿ 43 ರನ್ ಬಾರಿಸಿ ತಂಡಕ್ಕೆ ಆಸರೆಯಾಗಿದ್ದ ಡೇವಿಡ್ ಮಿಲ್ಲರ್​ನನ್ನು ಕೊನೆಗೂ ಬೌಲ್ಡ್ ಮಾಡುವಲ್ಲಿ ವ್ಯಾನ್ ಬೀಕ್ ಯಶಸ್ವಿಯಾದರು. ಇದರ ಬೆನ್ನಲ್ಲೇ ಜೆರಾಲ್ಡ್ ಕೋಟ್ಝಿ (22) ಕೂಡ ವಿಕೆಟ್ ಒಪ್ಪಿಸಿದರು. ಇನ್ನು ಕಗಿಸೊ ರಬಾಡ ಇನಿಂಗ್ಸ್​ 9 ರನ್​ಗಳಿಗೆ ಸೀಮಿತವಾಗಿತ್ತು.

ಅಂತಿಮವಾಗಿ 42.5 ಓವರ್​ಗಳಲ್ಲಿ 207 ರನ್​ಗಳಿಗೆ ಆಲೌಟ್ ಆಗುವ ಮೂಲಕ ಸೌತ್ ಆಫ್ರಿಕಾ ತಂಡವು 38 ರನ್​ಗಳಿಂದ ಸೋಲೊಪ್ಪಿಕೊಂಡಿತು. ಅತ್ತ ಈ ಐತಿಹಾಸಿಕ ಗೆಲುವಿನೊಂದಿಗೆ ನೆದರ್​ಲೆಂಡ್ಸ್ ತಂಡವು ಏಕದಿನ ವಿಶ್ವಕಪ್ 2023 ರಲ್ಲಿ ಗೆಲುವಿನ ಖಾತೆ ತೆರೆದಿರುವುದು ವಿಶೇಷ.

ಸೌತ್ ಆಫ್ರಿಕಾ (ಪ್ಲೇಯಿಂಗ್ XI): ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಟೆಂಬಾ ಬವುಮಾ (ನಾಯಕ), ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್, ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಯಾನ್ಸೆನ್, ಕಗಿಸೊ ರಬಾಡ, ಕೇಶವ್ ಮಹಾರಾಜ್, ಲುಂಗಿ ಎನ್‌ಗಿಡಿ, ಜೆರಾಲ್ಡ್ ಕೋಟ್ಝಿ.

ಇದನ್ನೂ ಓದಿ: ಚೇಸ್ ಮಾಸ್ಟರ್…ಸಚಿನ್ ವಿಶ್ವ ದಾಖಲೆ ಮುರಿದ ಕಿಂಗ್ ಕೊಹ್ಲಿ

ನೆದರ್​ಲೆಂಡ್ಸ್​ (ಪ್ಲೇಯಿಂಗ್ XI): ವಿಕ್ರಮಜಿತ್ ಸಿಂಗ್, ಮ್ಯಾಕ್ಸ್ ಓಡೌಡ್, ಕಾಲಿನ್ ಅಕರ್ಮನ್, ಬಾಸ್ ಡಿ ಲೀಡೆ, ತೇಜ ನಿಡಮನೂರು, ಸ್ಕಾಟ್ ಎಡ್ವರ್ಡ್ಸ್ (ನಾಯಕ), ಸೈಬ್ರಾಂಡ್ ಎಂಗಲ್ಬ್ರೆಕ್ಟ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ಲೋಗನ್ ವ್ಯಾನ್ ಬೀಕ್, ಆರ್ಯನ್ ದತ್ತ್, ಪಾಲ್ ವ್ಯಾನ್ ಮೀಕೆರೆನ್.

Published On - 11:01 pm, Tue, 17 October 23

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ