Sign In

By signing in or creating an account, you agree with Associated Broadcasting Company's Terms & Conditions and Privacy Policy.

15 ವರ್ಷಗಳ ಬಳಿಕ ಬಾಂಗ್ಲಾದೇಶ್ ವಿರುದ್ಧ ಗೆದ್ದ ನ್ಯೂಝಿಲೆಂಡ್

New Zealand vs Bangladesh: ನ್ಯೂಝಿಲೆಂಡ್ ತಂಡವು ಬಾಂಗ್ಲಾದೇಶದಲ್ಲಿ ಬಾಂಗ್ಲಾ ವಿರುದ್ಧ ಏಕದಿನ ಪಂದ್ಯ ಗೆದ್ದು ಬರೋಬ್ಬರಿ 15 ವರ್ಷಗಳೇ ಕಳೆದಿತ್ತು. ಅಂದರೆ 2008 ರಲ್ಲಿ ಕಿವೀಸ್ ಪಡೆ ಕೊನೆಯ ಬಾರಿ ಬಾಂಗ್ಲಾದೇಶ್​ನಲ್ಲಿ ಏಕದಿನ ಪಂದ್ಯ ಗೆದ್ದುಕೊಂಡಿತ್ತು.  ಇದರ ನಡುವೆ ಬಾಂಗ್ಲಾದಲ್ಲಿ ನ್ಯೂಝಿಲೆಂಡ್ ಹಾಗೂ ಬಾಂಗ್ಲಾದೇಶ್ ತಂಡಗಳು 8 ಬಾರಿ ಮುಖಾಮುಖಿಯಾಗಿದೆ.

15 ವರ್ಷಗಳ ಬಳಿಕ ಬಾಂಗ್ಲಾದೇಶ್ ವಿರುದ್ಧ ಗೆದ್ದ ನ್ಯೂಝಿಲೆಂಡ್
New Zealand TeamImage Credit source: AFP/Getty Images
Follow us
TV9 Web
| Updated By: ಝಾಹಿರ್ ಯೂಸುಫ್

Updated on:Sep 23, 2023 | 10:25 PM

ಢಾಕಾದ ಶೇರೆ ಬಾಂಗ್ಲಾ ನ್ಯಾಷನಲ್ ಸ್ಡೇಡಿಯಂನಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಕಿವೀಸ್ ಪಡೆ 15 ವರ್ಷಗಳ ಬಳಿಕ ಬಾಂಗ್ಲಾ ನೆಲದಲ್ಲಿ ಏಕದಿನ ಕ್ರಿಕೆಟ್​ನಲ್ಲಿ ಗೆಲುವಿನ ನಗೆ ಬೀರಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡದ ನಾಯಕ ಲಾಕಿ ಫರ್ಗುಸನ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

ಅದರಂತೆ ಇನಿಂಗ್ಸ್ ಆರಂಭಿಸಿದ ನ್ಯೂಝಿಲೆಂಡ್ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಫಿನ್ ಅಲೆನ್ (12) ಹಾಗೂ ವಿಲ್ ಹಂಗ್ (0) ಮೊದಲ ಪವರ್​ಪ್ಲೇನಲ್ಲೇ ವಿಕೆಟ್ ಒಪ್ಪಿಸಿದ್ದರು. ಇನ್ನು ಚಡ್ ಬೌವ್ಸ್ 14 ರನ್​ಗಳಿಸಿದರೆ, ಹೆನ್ರಿ ನಿಕೋಲ್ಸ್ 49 ರನ್ ಬಾರಿಸಿದರು. ಇದರ ನಡುವೆ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ವಿಕೆಟ್ ಕೀಪರ್ ಬ್ಯಾಟರ್ ಟಾಮ್ ಬ್ಲಂಡೆಲ್ 66 ಎಸೆತಗಳಲ್ಲಿ 68 ರನ್ ಬಾರಿಸಿ ತಂಡಕ್ಕೆ ಆಸರೆಯಾದರು.

ಮತ್ತೊಂದೆಡೆ ಇಶ್ ಸೋಧಿ 35 ರನ್​ಗಳ ಕಾಣಿಕೆ ನೀಡಿದರು. ಇದಾಗ್ಯೂ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ 49.2 ಓವರ್​ಗಳಲ್ಲಿ 254 ರನ್​ಗಳಿಸಿ ನ್ಯೂಝಿಲೆಂಡ್ ತಂಡವು ಆಲೌಟ್ ಆಯಿತು.

255 ರನ್​ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಬಾಂಗ್ಲಾದೇಶ್ ತಂಡದ ಪರ ಆರಂಭಿಕ ತಮೀಮ್ ಇಕ್ಬಾಲ್ 58 ಎಸೆತಗಳಲ್ಲಿ 44 ರನ್ ಬಾರಿಸಿದ್ದರು. ಆದರೆ ಉಳಿದ ಬ್ಯಾಟರ್​ಗಳನ್ನು ಬೇಗನೆ ಪೆವಿಲಿಯನ್​ಗೆ ಕಳುಹಿಸುವಲ್ಲಿ ಸ್ಪಿನ್ನರ್ ಇಶ್ ಸೋಧಿ ಯಶಸ್ವಿಯಾದರು.

ಇದಾಗ್ಯೂ 6ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಮಹಮದುಲ್ಲಾ 76 ಎಸೆತಗಳಲ್ಲಿ 49 ರನ್ ಬಾರಿಸಿದರು. ಆದರೆ ಇಶ್ ಸೋಧಿ ಸ್ಪಿನ್ ಮೋಡಿಗೆ ಪೆವಿಲಿಯನ್ ಪರೇಡ್ ನಡೆಸಿದ ಬಾಂಗ್ಲಾ ಆಟಗಾರರು 41.1 ಓವರ್​ಗಳಲ್ಲಿ 168 ರನ್​ಗಳಿಗೆ ಆಲೌಟ್ ಆಯಿತು. ನ್ಯೂಝಿಲೆಂಡ್ ಪರ 10 ಓವರ್​ಗಳಲ್ಲಿ 39 ರನ್ ನೀಡಿ ಇಶ್ ಸೋಧಿ 6 ವಿಕೆಟ್ ಕಬಳಿಸಿ ಮಿಂಚಿದರು.

ಕಿವೀಸ್ ಪಡೆಗೆ ಐತಿಹಾಸಿಕ ಗೆಲುವು:

ನ್ಯೂಝಿಲೆಂಡ್ ತಂಡವು ಬಾಂಗ್ಲಾದೇಶದಲ್ಲಿ ಬಾಂಗ್ಲಾ ವಿರುದ್ಧ ಏಕದಿನ ಪಂದ್ಯ ಗೆದ್ದು ಬರೋಬ್ಬರಿ 15 ವರ್ಷಗಳೇ ಕಳೆದಿತ್ತು. ಅಂದರೆ 2008 ರಲ್ಲಿ ಕಿವೀಸ್ ಪಡೆ ಕೊನೆಯ ಬಾರಿ ಬಾಂಗ್ಲಾದೇಶ್​ನಲ್ಲಿ ಏಕದಿನ ಪಂದ್ಯ ಗೆದ್ದುಕೊಂಡಿತ್ತು.  ಇದರ ನಡುವೆ ಬಾಂಗ್ಲಾದಲ್ಲಿ ನ್ಯೂಝಿಲೆಂಡ್ ಹಾಗೂ ಬಾಂಗ್ಲಾದೇಶ್ ತಂಡಗಳು 8 ಬಾರಿ ಮುಖಾಮುಖಿಯಾಗಿದೆ.

ಆದರೆ ಕಿವೀಸ್ ಪಡೆಗೆ ಒಮ್ಮೆಯೂ ಗೆಲುವು ಮಾತ್ರ ದಕ್ಕಿರಲಿಲ್ಲ. ಇದೀಗ 15 ವರ್ಷಗಳ ಬಳಿಕ ಲಾಕಿ ಫರ್ಗುಸನ್ ನಾಯಕತ್ವದ ನ್ಯೂಝಿಲೆಂಡ್ ತಂಡವು ಬಾಂಗ್ಲಾದೇಶ್ ತಂಡವನ್ನು ತವರಿನಲ್ಲೇ ಮಣಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಹದಿನೈದು ವರ್ಷಗಳ ಸುದೀರ್ಘ ಸೋಲಿನ ಸರಪಳಿಯನ್ನು ಕಳಚುವಲ್ಲಿ ನ್ಯೂಝಿಲೆಂಡ್ ತಂಡ ಯಶಸ್ವಿಯಾಗಿದೆ.

ಬಾಂಗ್ಲಾದೇಶ್ ಪ್ಲೇಯಿಂಗ್ 11: ತಮೀಮ್ ಇಕ್ಬಾಲ್ , ಲಿಟ್ಟನ್ ದಾಸ್ (ನಾಯಕ) , ತಂಜಿದ್ ಹಸನ್ , ಸೌಮ್ಯ ಸರ್ಕಾರ್ , ಮಹಮದುಲ್ಲಾ , ತೌಹಿದ್ ಹೃದೋಯ್ , ಮಹೇದಿ ಹಸನ್ , ಖಲೀದ್ ಅಹ್ಮದ್ , ನಸುಮ್ ಅಹ್ಮದ್ , ಮುಸ್ತಫಿಜುರ್ ರೆಹಮಾನ್ , ಹಸನ್ ಮಹಮೂದ್.

ಇದನ್ನೂ ಓದಿ: ನಂಬರ್ 1: ಕ್ರಿಕೆಟ್ ಇತಿಹಾಸದಲ್ಲೇ ಈ ಸಾಧನೆ ಮಾಡಿದ 2ನೇ ತಂಡ ಭಾರತ

ನ್ಯೂಝಿಲೆಂಡ್ ಪ್ಲೇಯಿಂಗ್ 11: ಫಿನ್ ಅಲೆನ್ , ವಿಲ್ ಯಂಗ್ , ಚಡ್ ಬೋವ್ಸ್ , ಹೆನ್ರಿ ನಿಕೋಲ್ಸ್ , ಟಾಮ್ ಬ್ಲಂಡೆಲ್ ( ವಿಕೆಟ್ ಕೀಪರ್) , ರಚಿನ್ ರವೀಂದ್ರ , ಕೋಲ್ ಮೆಕಾಂಚಿ , ಕೈಲ್ ಜೇಮಿಸನ್ , ಇಶ್ ಸೋಧಿ , ಲಾಕಿ ಫರ್ಗುಸನ್ (ನಾಯಕ) , ಟ್ರೆಂಟ್ ಬೌಲ್ಟ್.

Published On - 10:21 pm, Sat, 23 September 23

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ