AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂಝಿಲೆಂಡ್ ಸೆಮಿಫೈನಲ್​ನಲ್ಲಿ ಗೆದ್ದಿದ್ದು ಕೇವಲ 3 ಬಾರಿ ಮಾತ್ರ..ಆದರೆ

India vs New Zealand: ಕಳೆದ ಬಾರಿಯ ರನ್ನರ್ ನ್ಯೂಝಿಲೆಂಡ್ ಕೂಡ ಮತ್ತೊಮ್ಮೆ ಫೈನಲ್​ಗೇರುವ ತುಟಿತದಲ್ಲಿದೆ. ಹೀಗಾಗಿ ವಾಂಖೆಡೆ ಸ್ಟೇಡಿಯಂನಲ್ಲಿ ರಣರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು. ಆದರೆ ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶ ಎಂದರೆ, ನ್ಯೂಝಿಲೆಂಡ್ ತಂಡವು ಸೆಮಿಫೈನಲ್​ನಲ್ಲಿ ಮುಗ್ಗರಿಸುವ ಹಣೆಪಟ್ಟಿ ಹೊಂದಿರುವುದು.

ನ್ಯೂಝಿಲೆಂಡ್ ಸೆಮಿಫೈನಲ್​ನಲ್ಲಿ ಗೆದ್ದಿದ್ದು ಕೇವಲ 3 ಬಾರಿ ಮಾತ್ರ..ಆದರೆ
New Zealand
TV9 Web
| Edited By: |

Updated on:Nov 13, 2023 | 10:30 PM

Share

ಏಕದಿನ ವಿಶ್ವಕಪ್​ನ ರಣರೋಚಕ ನಾಕೌಟ್ ಪಂದ್ಯಕ್ಕಾಗಿ ಕ್ಷಣಗಣನೆ ಶುರುವಾಗಿದೆ. ನವೆಂಬರ್​ 15 ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಸೆಮಿಫೈನಲ್​ನಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್​ಗೆ ಪ್ರವೇಶಿಸಲಿದೆ. ಇತ್ತ 2011 ರ ಬಳಿಕ ಫೈನಲ್​ಗೇರದ ಟೀಮ್ ಇಂಡಿಯಾ ಅಂತಿಮ ಘಟ್ಟಕ್ಕೆ ತಲುಪುವ ವಿಶ್ವಾಸದಲ್ಲಿದೆ.

ಅತ್ತ ಕಳೆದ ಬಾರಿಯ ರನ್ನರ್ ನ್ಯೂಝಿಲೆಂಡ್ ಕೂಡ ಮತ್ತೊಮ್ಮೆ ಫೈನಲ್​ಗೇರುವ ತುಟಿತದಲ್ಲಿದೆ. ಹೀಗಾಗಿ ವಾಂಖೆಡೆ ಸ್ಟೇಡಿಯಂನಲ್ಲಿ ರಣರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು. ಆದರೆ ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶ ಎಂದರೆ, ನ್ಯೂಝಿಲೆಂಡ್ ತಂಡವು ಸೆಮಿಫೈನಲ್​ನಲ್ಲಿ ಮುಗ್ಗರಿಸುವ ಹಣೆಪಟ್ಟಿ ಹೊಂದಿರುವುದು.

ಅಂದರೆ ಐಸಿಸಿ ಟೂರ್ನಿಗಳಲ್ಲಿ 12 ಬಾರಿ ಸೆಮಿಫೈನಲ್​ಗೇರಿರುವ ಕಿವೀಸ್ ಪಡೆ ಗೆದ್ದಿರುವುದು ಕೇವಲ 3 ಬಾರಿ ಮಾತ್ರ. ಇನ್ನುಳಿದ 9 ನಾಕೌಟ್ ಪಂದ್ಯಗಳಲ್ಲಿ ಮಕಾಡೆ ಮಲಗಿದೆ. ಆದರೆ ಟೀಮ್ ಇಂಡಿಯಾ ವಿರುದ್ಧ ಆಡಿದ ಏಕದಿನ ವಿಶ್ವಕಪ್ ಸೆಮಿಫೈನಲ್​ನಲ್ಲಿ ಜಯ ಸಾಧಿಸಿತ್ತು ಎಂಬುದು ಇಲ್ಲಿ ಉಲ್ಲೇಖಾರ್ಹ. 2019 ರಲ್ಲಿ ವಿಶ್ವಕಪ್​ ವಿಜೇತರಾಗುವ ಫೇವರೇಟ್ ಎನಿಸಿಕೊಂಡಿದ್ದ ಟೀಮ್ ಇಂಡಿಯಾವನ್ನು ಸೆಮಿಫೈನಲ್​ನಲ್ಲಿ ಕಿವೀಸ್ ಪಡೆ ಸೋಲಿಸಿತ್ತು. ಅಷ್ಟೇ ಅಲ್ಲದೆ ಐಸಿಸಿ ಟೂರ್ನಿಗಳಲ್ಲಿ ಭಾರತದ ವಿರುದ್ಧ ಉತ್ತಮ ಪ್ರದರ್ಶನ ನೀಡುತ್ತಾ ಬಂದಿದೆ.

ಇದೀಗ 4 ವರ್ಷಗಳ ಬಳಿಕ ಮತ್ತೆ ಉಭಯ ತಂಡಗಳು ಸೆಮಿಫೈನಲ್​ನಲ್ಲಿ ಮುಖಾಮುಖಿಯಾಗುತ್ತಿದೆ. ಅತ್ತ ಕಳೆದ ಬಾರಿ ಭಾರತಕ್ಕೆ ಸೋಲುಣಿಸಿದ ಆತ್ಮ ವಿಶ್ವಾಸದಲ್ಲಿ ನ್ಯೂಝಿಲೆಂಡ್ ಕಣಕ್ಕಿಳಿಯಲಿದೆ. ಇತ್ತ ಕಳೆದ ಬಾರಿಯ ಸೆಮಿಫೈನಲ್ ಸೋಲಿನ ಸೇಡನ್ನು ತೀರಿಸಿಕೊಳ್ಳುವ ಉತ್ತಮ ಅವಕಾಶ ಟೀಮ್ ಇಂಡಿಯಾ ಮುಂದಿದೆ. ಅದರಂತೆ 4 ವರ್ಷಗಳ ಹಳೆಯ ಸೋಲಿನ ಸೇಡನ್ನು ತೀರಿಸಿ ಭಾರತ ಲೆಕ್ಕ ಚುಕ್ತಾ ಮಾಡಲಿದೆಯಾ ಕಾದು ನೋಡಬೇಕಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್​ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

ಇದನ್ನೂ ಓದಿ: ದಾಖಲೆಗಳ ಸರದಾರ ಕಿಂಗ್ ಕೊಹ್ಲಿ ಮುಂದಿದೆ ಮೂರು ವಿಶ್ವ ದಾಖಲೆಗಳು

ನ್ಯೂಝಿಲೆಂಡ್ ತಂಡ: ಕೇನ್ ವಿಲಿಯಮ್ಸನ್ (ನಾಯಕ), ಟ್ರೆಂಟ್ ಬೌಲ್ಟ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೆ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್, ಡೇರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ವಿಲ್ ಯಂಗ್.

Published On - 10:29 pm, Mon, 13 November 23

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ