Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL ಆಡಲು ಪಾಕಿಸ್ತಾನ್ ವಿರುದ್ಧದ ಸರಣಿಯಿಂದ ಹಿಂದೆ ಸರಿದ 6 ಆಟಗಾರರು..!

New Zealand vs Pakistan: ನ್ಯೂಝಿಲೆಂಡ್ ಹಾಗೂ ಪಾಕಿಸ್ತಾನ್ ತಂಡಗಳು ಟಿ20 ಸರಣಿಗಾಗಿ ಸಜ್ಜಾಗಿದೆ. ಮಾರ್ಚ್ 16 ರಿಂದ ಶುರುವಾಗಲಿರುವ ಈ ಸರಣಿಯಲ್ಲಿ ಒಟ್ಟು 5 ಟಿ20 ಪಂದ್ಯಗಳನ್ನು ಆಡಲಾಗುತ್ತದೆ. ಆದರೆ ಈ ಸರಣಿಯಿಂದ ನ್ಯೂಝಿಲೆಂಡ್ ತಂಡದ 6 ಪ್ರಮುಖ ಆಟಗಾರರು ಹಿಂದೆ ಸರಿದಿದ್ದಾರೆ. ಅದು ಕೂಡ ಐಪಿಎಲ್ ಆಡಲು ಎಂಬುದು ವಿಶೇಷ.

IPL ಆಡಲು ಪಾಕಿಸ್ತಾನ್ ವಿರುದ್ಧದ ಸರಣಿಯಿಂದ ಹಿಂದೆ ಸರಿದ 6 ಆಟಗಾರರು..!
Pakistan - Ipl
Follow us
ಝಾಹಿರ್ ಯೂಸುಫ್
|

Updated on: Mar 13, 2025 | 7:54 AM

ವಿಶ್ವದ ಶ್ರೀಮಂತ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್​ ಆರಂಭಕ್ಕೆ ಇನ್ನುಳಿದಿರುವುದು ಕೇವಲ ದಿನಗಳು ಮಾತ್ರ. ಮಾರ್ಚ್ 22 ರಿಂದ ಶುರುವಾಗಲಿರುವ ಈ ಟೂರ್ನಿಗಾಗಿ ಎಲ್ಲಾ ಫ್ರಾಂಚೈಸಿಗಳು ಅಭ್ಯಾಸ ಕ್ಯಾಂಪ್​ಗಳನ್ನು ಆರಂಭಿಸಿದೆ. ಆದರೆ ಇತ್ತ ಐಪಿಎಲ್ ಶುರುವಾಗುವ ಹೊತ್ತಿನಲ್ಲೇ ಪಾಕಿಸ್ತಾನ್ ತಂಡ ನ್ಯೂಝಿಲೆಂಡ್ ಜೊತೆ ಟಿ20 ಸರಣಿಯನ್ನು ಆಡಲಿದೆ. ಆದರೀಗ ಐಪಿಎಲ್​ಗೆ ಆಯ್ಕೆಯಾಗಿರುವ ಕಿವೀಸ್ ಪಡೆಯ ಪ್ರಮುಖ ಆಟಗಾರರು ಪಾಕ್ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದಾರೆ. ಆ ಆಟಗಾರರು ಯಾರೆಂದರೆ…

  1. ಮಿಚೆಲ್ ಸ್ಯಾಂಟ್ನರ್ (ಮುಂಬೈ ಇಂಡಿಯನ್ಸ್): ನ್ಯೂಝಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್ ಈ ಬಾರಿಯ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯಲಿದ್ದಾರೆ. ಹೀಗಾಗಿ ಪಾಕಿಸ್ತಾನ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಗೆ ಅವರು ಅಲಭ್ಯರಾಗಿದ್ದಾರೆ.
  2. ಡೆವೊನ್ ಕಾನ್ವೆ (ಚೆನ್ನೈ ಸೂಪರ್ ಕಿಂಗ್ಸ್): ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅವಿಭಾಜ್ಯ ಅಂಗವಾಗಿರುವ ಡೆವೊನ್ ಕಾನ್ವೆ ಪಾಕಿಸ್ತಾನದ ವಿರುದ್ಧ ಆಡುವ ಬದಲು ಫ್ರಾಂಚೈಸಿ ಲೀಗ್​ನಲ್ಲಿ ಆಡಲು ಮುಂದಾಗಿದ್ದಾರೆ.
  3. ಲಾಕಿ ಫರ್ಗುಸನ್ (ಪಂಜಾಬ್ ಕಿಂಗ್ಸ್): ಗಾಯದ ಕಾರಣ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದ ನ್ಯೂಝಿಲೆಂಡ್ ತಂಡದ ಪ್ರಮುಖ ವೇಗಿ ಲಾಕಿ ಫರ್ಗುಸನ್ ಸಹ ಪಾಕಿಸ್ತಾನ್ ವಿರುದ್ಧದ ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ. ಬದಲಿಗೆ ಅವರು ಪಂಜಾಬ್ ಕಿಂಗ್ಸ್ ತಂಡವನ್ನು ಕೂಡಿಕೊಳ್ಳಲಿದ್ದಾರೆ.
  4. ಗ್ಲೆನ್ ಫಿಲಿಪ್ಸ್ (ಗುಜರಾತ್ ಟೈಟಾನ್ಸ್): ಚಾಂಪಿಯನ್ಸ್ ಟ್ರೋಫಿಯಲ್ಲಿ ಅದ್ಭುತ ಫೀಲ್ಡಿಂಗ್ ಮಾಡಿ ಮನೆಮಾತಾಗಿರುವ ಗ್ಲೆನ್ ಫಿಲಿಪ್ಸ್ ಸಹ ಪಾಕಿಸ್ತಾನ್ ವಿರುದ್ಧದ ಸರಣಿಯಿಂದ ಹೊರುಗಳಿದಿದ್ದಾರೆ. ಅಲ್ಲದೆ ಶೀಘ್ರದಲ್ಲೇ ಅವರು ಗುಜರಾತ್ ಟೈಟಾನ್ಸ್​ ತಂಡವನ್ನು ಕೂಡಿಕೊಳ್ಳಲಿದ್ದಾರೆ.
  5. ಇದನ್ನೂ ಓದಿ
    Image
    IPL 2025: RCB ನೂತನ ಜೆರ್ಸಿ ಫೋಟೋ ಇಲ್ಲಿದೆ
    Image
    15 ಭರ್ಜರಿ ಸಿಕ್ಸ್​: ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಎಬಿ ಡಿವಿಲಿಯರ್ಸ್
    Image
    ಈ ಸಲನೂ RCB ಕಪ್ ಗೆಲ್ಲದಿರಲಿ, ಅದಕ್ಕಾಗಿ ನಾನು ಪ್ರಾರ್ಥಿಸುವೆ..!
    Image
    ಗಂಭೀರ್ ಅವರ ಒಂದು ದೃಢ ನಿರ್ಧಾರ ಚಾಂಪಿಯನ್ಸ್ ಟ್ರೋಫಿಯ ಚಿತ್ರಣ ಬದಲಿಸಿತು
  6. ರಚಿನ್ ರವೀಂದ್ರ (ಚೆನ್ನೈ ಸೂಪರ್ ಕಿಂಗ್ಸ್): ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿರುವ ನ್ಯೂಝಿಲೆಂಡ್​ನ ಯುವ ದಾಂಡಿಗ ರಚಿನ್ ರವೀಂದ್ರ ಸಹ ಪಾಕಿಸ್ತಾನ್ ವಿರುದ್ಧದ ಸರಣಿಯಿಂದ ಹಿಂದೆ ಸರಿದಿದ್ದಾರೆ. ಅಲ್ಲದೆ ಐಪಿಎಲ್​ನಲ್ಲಿ ಕಣಕ್ಕಿಳಿಯಲು ಪ್ರಾಶಸ್ತ್ಯ ನೀಡಿದ್ದಾರೆ.
  7. ಬೆವೊನ್ ಜೇಕಬ್ಸ್ (ಮುಂಬೈ ಇಂಡಿಯನ್ಸ್): ನ್ಯೂಝಿಲೆಂಡ್ ತಂಡದ ಯುವ ಆಲ್‌ರೌಂಡರ್ ಪಾಕಿಸ್ತಾನ್ ವಿರುದ್ಧದ ಸರಣಿಗೆ ಅಲಭ್ಯರಾಗಿದ್ದು, ಶೀಘ್ರದಲ್ಲೇ ಅವರು ಮುಂಬೈ ಇಂಡಿಯನ್ಸ್ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಮುಂದಿನ ವಿಶ್ವಕಪ್​ಗೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಇಲ್ಲ..!

ಈ 6 ಪ್ರಮುಖ ಆಟಗಾರರ ಅಲಭ್ಯತೆಯ ನಡುವೆ ನ್ಯೂಝಿಲೆಂಡ್ ಟಿ20 ತಂಡವನ್ನು ಪ್ರಕಟಿಸಿದ್ದು, ಇವರಲ್ಲಿ ವಿಲ್ ಒರೋಕ್, ಕೈಲ್ ಜೇಮಿಸನ್ ಮೊದಲ 3 ಪಂದ್ಯಗಳಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಪಾಕಿಸ್ತಾನ್ ವಿರುದ್ಧದ ಸರಣಿಗೆ ನ್ಯೂಝಿಲೆಂಡ್ ತಂಡ ಹೀಗಿದೆ…

ನ್ಯೂಝಿಲೆಂಡ್ ಟಿ20 ತಂಡ: ಮೈಕೆಲ್ ಬ್ರೇಸ್‌ವೆಲ್ (ನಾಯಕ), ಫಿನ್ ಅಲೆನ್, ಮಾರ್ಕ್ ಚಾಪ್‌ಮನ್, ಜಾಕೋಬ್ ಡಫಿ, ಜ್ಯಾಕ್ ಫೌಲ್ಕ್ಸ್, ಮಿಚ್ ಹೇ, ಮ್ಯಾಟ್ ಹೆನ್ರಿ , ಕೈಲ್ ಜೇಮಿಸನ್, ಡೇರಿಲ್ ಮಿಚೆಲ್, ಜಿಮ್ಮಿ ನೀಶಮ್, ವಿಲ್ ಒರೋಕ್, ಟಿಮ್ ರಾಬಿನ್ಸನ್, ಬೆನ್ ಸಿಯರ್ಸ್, ಟಿಮ್ ಸೀಫರ್ಟ್, ಇಶ್ ಸೋಧಿ.

ತೆಲಂಗಾಣದಲ್ಲಿ ನಿರ್ಮಾಣ ಹಂತದ ಆರು ಅಂತಸ್ತಿನ ಕಟ್ಟಡ ಕುಸಿತ
ತೆಲಂಗಾಣದಲ್ಲಿ ನಿರ್ಮಾಣ ಹಂತದ ಆರು ಅಂತಸ್ತಿನ ಕಟ್ಟಡ ಕುಸಿತ
Daily Devotional: ಪೂಜೆ ಮಾಡುವಾಗ ದೇವರ ಮನೆಯಲ್ಲಿ ಹೂ ಬಿದ್ರೆ ಏನರ್ಥ?
Daily Devotional: ಪೂಜೆ ಮಾಡುವಾಗ ದೇವರ ಮನೆಯಲ್ಲಿ ಹೂ ಬಿದ್ರೆ ಏನರ್ಥ?
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್