AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL ಆಡಲು ಪಾಕಿಸ್ತಾನ್ ವಿರುದ್ಧದ ಸರಣಿಯಿಂದ ಹಿಂದೆ ಸರಿದ 6 ಆಟಗಾರರು..!

New Zealand vs Pakistan: ನ್ಯೂಝಿಲೆಂಡ್ ಹಾಗೂ ಪಾಕಿಸ್ತಾನ್ ತಂಡಗಳು ಟಿ20 ಸರಣಿಗಾಗಿ ಸಜ್ಜಾಗಿದೆ. ಮಾರ್ಚ್ 16 ರಿಂದ ಶುರುವಾಗಲಿರುವ ಈ ಸರಣಿಯಲ್ಲಿ ಒಟ್ಟು 5 ಟಿ20 ಪಂದ್ಯಗಳನ್ನು ಆಡಲಾಗುತ್ತದೆ. ಆದರೆ ಈ ಸರಣಿಯಿಂದ ನ್ಯೂಝಿಲೆಂಡ್ ತಂಡದ 6 ಪ್ರಮುಖ ಆಟಗಾರರು ಹಿಂದೆ ಸರಿದಿದ್ದಾರೆ. ಅದು ಕೂಡ ಐಪಿಎಲ್ ಆಡಲು ಎಂಬುದು ವಿಶೇಷ.

IPL ಆಡಲು ಪಾಕಿಸ್ತಾನ್ ವಿರುದ್ಧದ ಸರಣಿಯಿಂದ ಹಿಂದೆ ಸರಿದ 6 ಆಟಗಾರರು..!
Pakistan - Ipl
ಝಾಹಿರ್ ಯೂಸುಫ್
|

Updated on: Mar 13, 2025 | 7:54 AM

Share

ವಿಶ್ವದ ಶ್ರೀಮಂತ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್​ ಆರಂಭಕ್ಕೆ ಇನ್ನುಳಿದಿರುವುದು ಕೇವಲ ದಿನಗಳು ಮಾತ್ರ. ಮಾರ್ಚ್ 22 ರಿಂದ ಶುರುವಾಗಲಿರುವ ಈ ಟೂರ್ನಿಗಾಗಿ ಎಲ್ಲಾ ಫ್ರಾಂಚೈಸಿಗಳು ಅಭ್ಯಾಸ ಕ್ಯಾಂಪ್​ಗಳನ್ನು ಆರಂಭಿಸಿದೆ. ಆದರೆ ಇತ್ತ ಐಪಿಎಲ್ ಶುರುವಾಗುವ ಹೊತ್ತಿನಲ್ಲೇ ಪಾಕಿಸ್ತಾನ್ ತಂಡ ನ್ಯೂಝಿಲೆಂಡ್ ಜೊತೆ ಟಿ20 ಸರಣಿಯನ್ನು ಆಡಲಿದೆ. ಆದರೀಗ ಐಪಿಎಲ್​ಗೆ ಆಯ್ಕೆಯಾಗಿರುವ ಕಿವೀಸ್ ಪಡೆಯ ಪ್ರಮುಖ ಆಟಗಾರರು ಪಾಕ್ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದಾರೆ. ಆ ಆಟಗಾರರು ಯಾರೆಂದರೆ…

  1. ಮಿಚೆಲ್ ಸ್ಯಾಂಟ್ನರ್ (ಮುಂಬೈ ಇಂಡಿಯನ್ಸ್): ನ್ಯೂಝಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್ ಈ ಬಾರಿಯ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯಲಿದ್ದಾರೆ. ಹೀಗಾಗಿ ಪಾಕಿಸ್ತಾನ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಗೆ ಅವರು ಅಲಭ್ಯರಾಗಿದ್ದಾರೆ.
  2. ಡೆವೊನ್ ಕಾನ್ವೆ (ಚೆನ್ನೈ ಸೂಪರ್ ಕಿಂಗ್ಸ್): ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅವಿಭಾಜ್ಯ ಅಂಗವಾಗಿರುವ ಡೆವೊನ್ ಕಾನ್ವೆ ಪಾಕಿಸ್ತಾನದ ವಿರುದ್ಧ ಆಡುವ ಬದಲು ಫ್ರಾಂಚೈಸಿ ಲೀಗ್​ನಲ್ಲಿ ಆಡಲು ಮುಂದಾಗಿದ್ದಾರೆ.
  3. ಲಾಕಿ ಫರ್ಗುಸನ್ (ಪಂಜಾಬ್ ಕಿಂಗ್ಸ್): ಗಾಯದ ಕಾರಣ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದ ನ್ಯೂಝಿಲೆಂಡ್ ತಂಡದ ಪ್ರಮುಖ ವೇಗಿ ಲಾಕಿ ಫರ್ಗುಸನ್ ಸಹ ಪಾಕಿಸ್ತಾನ್ ವಿರುದ್ಧದ ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ. ಬದಲಿಗೆ ಅವರು ಪಂಜಾಬ್ ಕಿಂಗ್ಸ್ ತಂಡವನ್ನು ಕೂಡಿಕೊಳ್ಳಲಿದ್ದಾರೆ.
  4. ಗ್ಲೆನ್ ಫಿಲಿಪ್ಸ್ (ಗುಜರಾತ್ ಟೈಟಾನ್ಸ್): ಚಾಂಪಿಯನ್ಸ್ ಟ್ರೋಫಿಯಲ್ಲಿ ಅದ್ಭುತ ಫೀಲ್ಡಿಂಗ್ ಮಾಡಿ ಮನೆಮಾತಾಗಿರುವ ಗ್ಲೆನ್ ಫಿಲಿಪ್ಸ್ ಸಹ ಪಾಕಿಸ್ತಾನ್ ವಿರುದ್ಧದ ಸರಣಿಯಿಂದ ಹೊರುಗಳಿದಿದ್ದಾರೆ. ಅಲ್ಲದೆ ಶೀಘ್ರದಲ್ಲೇ ಅವರು ಗುಜರಾತ್ ಟೈಟಾನ್ಸ್​ ತಂಡವನ್ನು ಕೂಡಿಕೊಳ್ಳಲಿದ್ದಾರೆ.
  5. ಇದನ್ನೂ ಓದಿ
    Image
    IPL 2025: RCB ನೂತನ ಜೆರ್ಸಿ ಫೋಟೋ ಇಲ್ಲಿದೆ
    Image
    15 ಭರ್ಜರಿ ಸಿಕ್ಸ್​: ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಎಬಿ ಡಿವಿಲಿಯರ್ಸ್
    Image
    ಈ ಸಲನೂ RCB ಕಪ್ ಗೆಲ್ಲದಿರಲಿ, ಅದಕ್ಕಾಗಿ ನಾನು ಪ್ರಾರ್ಥಿಸುವೆ..!
    Image
    ಗಂಭೀರ್ ಅವರ ಒಂದು ದೃಢ ನಿರ್ಧಾರ ಚಾಂಪಿಯನ್ಸ್ ಟ್ರೋಫಿಯ ಚಿತ್ರಣ ಬದಲಿಸಿತು
  6. ರಚಿನ್ ರವೀಂದ್ರ (ಚೆನ್ನೈ ಸೂಪರ್ ಕಿಂಗ್ಸ್): ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿರುವ ನ್ಯೂಝಿಲೆಂಡ್​ನ ಯುವ ದಾಂಡಿಗ ರಚಿನ್ ರವೀಂದ್ರ ಸಹ ಪಾಕಿಸ್ತಾನ್ ವಿರುದ್ಧದ ಸರಣಿಯಿಂದ ಹಿಂದೆ ಸರಿದಿದ್ದಾರೆ. ಅಲ್ಲದೆ ಐಪಿಎಲ್​ನಲ್ಲಿ ಕಣಕ್ಕಿಳಿಯಲು ಪ್ರಾಶಸ್ತ್ಯ ನೀಡಿದ್ದಾರೆ.
  7. ಬೆವೊನ್ ಜೇಕಬ್ಸ್ (ಮುಂಬೈ ಇಂಡಿಯನ್ಸ್): ನ್ಯೂಝಿಲೆಂಡ್ ತಂಡದ ಯುವ ಆಲ್‌ರೌಂಡರ್ ಪಾಕಿಸ್ತಾನ್ ವಿರುದ್ಧದ ಸರಣಿಗೆ ಅಲಭ್ಯರಾಗಿದ್ದು, ಶೀಘ್ರದಲ್ಲೇ ಅವರು ಮುಂಬೈ ಇಂಡಿಯನ್ಸ್ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಮುಂದಿನ ವಿಶ್ವಕಪ್​ಗೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಇಲ್ಲ..!

ಈ 6 ಪ್ರಮುಖ ಆಟಗಾರರ ಅಲಭ್ಯತೆಯ ನಡುವೆ ನ್ಯೂಝಿಲೆಂಡ್ ಟಿ20 ತಂಡವನ್ನು ಪ್ರಕಟಿಸಿದ್ದು, ಇವರಲ್ಲಿ ವಿಲ್ ಒರೋಕ್, ಕೈಲ್ ಜೇಮಿಸನ್ ಮೊದಲ 3 ಪಂದ್ಯಗಳಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಪಾಕಿಸ್ತಾನ್ ವಿರುದ್ಧದ ಸರಣಿಗೆ ನ್ಯೂಝಿಲೆಂಡ್ ತಂಡ ಹೀಗಿದೆ…

ನ್ಯೂಝಿಲೆಂಡ್ ಟಿ20 ತಂಡ: ಮೈಕೆಲ್ ಬ್ರೇಸ್‌ವೆಲ್ (ನಾಯಕ), ಫಿನ್ ಅಲೆನ್, ಮಾರ್ಕ್ ಚಾಪ್‌ಮನ್, ಜಾಕೋಬ್ ಡಫಿ, ಜ್ಯಾಕ್ ಫೌಲ್ಕ್ಸ್, ಮಿಚ್ ಹೇ, ಮ್ಯಾಟ್ ಹೆನ್ರಿ , ಕೈಲ್ ಜೇಮಿಸನ್, ಡೇರಿಲ್ ಮಿಚೆಲ್, ಜಿಮ್ಮಿ ನೀಶಮ್, ವಿಲ್ ಒರೋಕ್, ಟಿಮ್ ರಾಬಿನ್ಸನ್, ಬೆನ್ ಸಿಯರ್ಸ್, ಟಿಮ್ ಸೀಫರ್ಟ್, ಇಶ್ ಸೋಧಿ.

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ