AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆರಿಬಿಯನ್ ನಾಡಲ್ಲಿ ನಡೆಯುವ ಟಿ20 ವಿಶ್ವಕಪ್​ನಿಂದ ಹಿಂದೆ ಸರಿದ ನ್ಯೂಜಿಲೆಂಡ್! ಕಾರಣವೇನು ಗೊತ್ತಾ?

2022 Under-19 World Cup: ನ್ಯೂಜಿಲೆಂಡ್ 2022 ರ ಪುರುಷರ ಅಂಡರ್-19 ವಿಶ್ವಕಪ್ ಆಡದಿರಲು ನಿರ್ಧರಿಸಿದೆ. ಕ್ವಾರಂಟೈನ್ ನಿಯಮಗಳಿಂದಾಗಿ ಅವರು ಈ ಕ್ರಮ ಕೈಗೊಂಡಿದ್ದಾರೆ.

ಕೆರಿಬಿಯನ್ ನಾಡಲ್ಲಿ ನಡೆಯುವ ಟಿ20 ವಿಶ್ವಕಪ್​ನಿಂದ ಹಿಂದೆ ಸರಿದ ನ್ಯೂಜಿಲೆಂಡ್! ಕಾರಣವೇನು ಗೊತ್ತಾ?
ನ್ಯೂಜಿಲೆಂಡ್ ತಂಡ
TV9 Web
| Edited By: |

Updated on:Nov 18, 2021 | 3:37 PM

Share

ನ್ಯೂಜಿಲೆಂಡ್ 2022 ರ ಪುರುಷರ ಅಂಡರ್-19 ವಿಶ್ವಕಪ್ ಆಡದಿರಲು ನಿರ್ಧರಿಸಿದೆ. ಕ್ವಾರಂಟೈನ್ ನಿಯಮಗಳಿಂದಾಗಿ ಅವರು ಈ ಕ್ರಮ ಕೈಗೊಂಡಿದ್ದಾರೆ. ನ್ಯೂಜಿಲೆಂಡ್‌ನ ಕ್ವಾರಂಟೈನ್ ನಿಯಮದ ಪ್ರಕಾರ, ಅಪ್ರಾಪ್ತ ವಯಸ್ಕರು ಹೊರಗಿನಿಂದ ಬಂದರೆ ಕ್ವಾರಂಟೈನ್‌ನಲ್ಲಿ ಉಳಿಯುವುದು ಕಡ್ಡಾಯವಾಗಿದೆ. ಹೀಗಾಗಿ ಕ್ವಾರಂಟೈನ್​ನಲ್ಲಿರಲು ಒಪ್ಪದ ಮಂಡಳಿ ಈ ನಿರ್ಧಾರ ತೆಗೆದುಕೊಂಡಿದೆ. ಕಿವೀಸ್ ಪಡೆ ಹಿಂದೆ ಸರಿದಿದ್ದರಿಂದ ಈಗ ಸ್ಕಾಟ್ಲೆಂಡ್ ವಿಶ್ವಕಪ್‌ಗೆ ಅರ್ಹತೆ ಪಡೆದಿದೆ. 19 ವರ್ಷದೊಳಗಿನವರ ವಿಶ್ವಕಪ್ ವೆಸ್ಟ್ ಇಂಡೀಸ್‌ನಲ್ಲಿ ನಡೆಯಲಿದೆ. ಈ ಪಂದ್ಯಾವಳಿಯು ಜನವರಿ 14 ರಿಂದ ಫೆಬ್ರವರಿ 5, 2022 ರವರೆಗೆ ನಡೆಯಲಿದ್ದು, ಒಟ್ಟು 48 ಪಂದ್ಯಗಳನ್ನು ಆಡಲಾಗುತ್ತದೆ. ಆಂಟಿಗುವಾ ಮತ್ತು ಬಾರ್ಬುಡಾ, ಗಯಾನಾ, ಸೇಂಟ್ ಕಿಟ್ಸ್ ಮತ್ತು ನೆವಿಸ್ ಮತ್ತು ಟ್ರಿನಿಡಾಡ್ ಮತ್ತು ಟೊಬಾಗೊದಲ್ಲಿ 10 ಮೈದಾನಗಳಲ್ಲಿ 16 ತಂಡಗಳ ನಡುವೆ ಪಂದ್ಯಗಳು ನಡೆಯಲಿವೆ.

ನಾಲ್ಕು ಬಾರಿಯ ಚಾಂಪಿಯನ್ ಭಾರತವು 19 ವರ್ಷದೊಳಗಿನವರ ವಿಶ್ವಕಪ್‌ಗಾಗಿ ಬಿ ಗುಂಪಿನಲ್ಲಿ ದಕ್ಷಿಣ ಆಫ್ರಿಕಾ, ಐರ್ಲೆಂಡ್ ಮತ್ತು ಚೊಚ್ಚಲ ಉಗಾಂಡದೊಂದಿಗೆ ಕ್ಲಬ್ ಆಗಿದೆ. ಹಾಲಿ ಚಾಂಪಿಯನ್ ಬಾಂಗ್ಲಾದೇಶ, ಇಂಗ್ಲೆಂಡ್, ಕೆನಡಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ಎ ಗುಂಪಿನಲ್ಲಿ ಸ್ಥಾನ ಪಡೆದಿದ್ದರೆ, ಸಿ ಗುಂಪಿನಲ್ಲಿ ಪಾಕಿಸ್ತಾನ, ಅಫ್ಘಾನಿಸ್ತಾನ, ಜಿಂಬಾಬ್ವೆ ಮತ್ತು ಪಪುವಾ ನ್ಯೂಗಿನಿ ಸೇರಿವೆ. ಆತಿಥೇಯ ವೆಸ್ಟ್ ಇಂಡೀಸ್, ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ತಂಡಗಳು ಡಿ ಗುಂಪಿನಲ್ಲಿ ಸ್ಥಾನ ಪಡೆದಿವೆ. ಈ ಗುಂಪಿನಲ್ಲಿ ಸ್ಕಾಟ್ಲೆಂಡ್ ಕೊನೆಯ ತಂಡವಾಗಿದೆ, ಅವರು ನ್ಯೂಜಿಲೆಂಡ್ ಬದಲಿಗೆ ಸ್ಥಾನ ಪಡೆದಿದ್ದಾರೆ.

ಟಿ20 ವಿಶ್ವಕಪ್ 23 ದಿನಗಳ ಕಾಲ ನಡೆಯಲಿದೆ ಪ್ರತಿ ಗುಂಪಿನಿಂದ ಎರಡು ತಂಡಗಳು ಸೂಪರ್ ಲೀಗ್‌ಗೆ ಅರ್ಹತೆ ಪಡೆಯುತ್ತವೆ ಮತ್ತು ಉಳಿದ ತಂಡಗಳು ಪ್ಲೇಟ್ ವಿಭಾಗದಲ್ಲಿ ಆಡುತ್ತವೆ. ಈ ಸ್ಪರ್ಧೆಯು 23 ದಿನಗಳ ಕಾಲ ನಡೆಯಲಿದೆ. ಫೆಬ್ರವರಿ 1 ಮತ್ತು 2 ರಂದು ಸೆಮಿಫೈನಲ್ ಪಂದ್ಯಗಳು ನಡೆಯಲಿದ್ದು, ಫೆಬ್ರವರಿ 5 ರಂದು ಸರ್ ವಿವಿಯನ್ ರಿಚರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಫೈನಲ್ ನಡೆಯಲಿದೆ. ಇದಕ್ಕೂ ಮುನ್ನ ಜನವರಿ 9 ಮತ್ತು ಜನವರಿ 12 ರ ನಡುವೆ 16 ಅಭ್ಯಾಸ ಪಂದ್ಯಗಳು ಸಹ ನಡೆಯಲಿವೆ. ಈ ಪಂದ್ಯಗಳು ಸೇಂಟ್ ಕಿಟ್ಸ್ ಮತ್ತು ನೆವಿಸ್ ಮತ್ತು ಗಯಾನಾದಲ್ಲಿ ನಡೆಯಲಿವೆ.

10 ತಂಡಗಳು ನೇರವಾಗಿ ಅರ್ಹತೆ ಪಡೆದಿವೆ ಈ ಟೂರ್ನಿಯಲ್ಲಿ 10 ತಂಡಗಳು ನೇರ ಸ್ಥಾನ ಗಳಿಸಿವೆ. ಅದೇ ಸಮಯದಲ್ಲಿ, ಐದು ತಂಡಗಳು ತಮ್ಮ ಪ್ರಾದೇಶಿಕ ಅರ್ಹತಾ ಪಂದ್ಯಗಳನ್ನು ಗೆಲ್ಲುವ ಮೂಲಕ ಇಲ್ಲಿಗೆ ತಲುಪಿವೆ. ಕೆನಡಾ ಯುಎಸ್ ಪ್ರದೇಶಕ್ಕೆ ಪ್ರವೇಶಿಸಿತು ಮತ್ತು ಅರ್ಹತಾ ಪಂದ್ಯಗಳಲ್ಲಿ ಯುಎಸ್, ಅರ್ಜೆಂಟೀನಾ ಮತ್ತು ಬರ್ಮುಡಾವನ್ನು ಸೋಲಿಸಿತು. ಪಪುವಾ ನ್ಯೂಗಿನಿಯಾ ಪೂರ್ವ ಏಷ್ಯಾ-ಪೆಸಿಫಿಕ್ ಪ್ರದೇಶದಿಂದ ಅರ್ಹತೆ ಗಳಿಸಿದೆ. ಆಫ್ರಿಕಾ ವಲಯದಲ್ಲಿ ನಮೀಬಿಯಾ ಮತ್ತು ನೈಜೀರಿಯಾದಂತಹ ತಂಡಗಳನ್ನು ಸೋಲಿಸುವ ಮೂಲಕ ಉಗಾಂಡಾ ಅರ್ಹತೆ ಗಳಿಸಿತು. ಯುರೋಪ್ ವಲಯದಲ್ಲಿ ಐರ್ಲೆಂಡ್ ಪ್ರವೇಶಿಸಿದೆ. ಈಗ ನ್ಯೂಜಿಲೆಂಡ್‌ ಹೊರಗಿರುವ ಕಾರಣ, ಸ್ಕಾಟ್ಲೆಂಡ್ ಕೂಡ ಈ ಪ್ರದೇಶದಿಂದ ಅವಕಾಶ ಪಡೆದಿದೆ.

ಇಲ್ಲಿಯವರೆಗಿನ ವಿಜೇತರ ಪಟ್ಟಿ ವೆಸ್ಟ್ ಇಂಡೀಸ್ ಒಮ್ಮೆ ಅಂಡರ್-19 ವಿಶ್ವಕಪ್ ಗೆದ್ದಿದೆ. ಅವರು 2016 ರಲ್ಲಿ ಭಾರತವನ್ನು ಸೋಲಿಸುವ ಮೂಲಕ ಈ ಯಶಸ್ಸನ್ನು ಸಾಧಿಸಿದರು. ಆಸ್ಟ್ರೇಲಿಯಾ ಮೂರು ಬಾರಿ ಈ ಪ್ರಶಸ್ತಿಯನ್ನು ಗೆದ್ದಿದ್ದರೆ, ಪಾಕಿಸ್ತಾನ ಎರಡು ಬಾರಿ ಈ ಪ್ರಶಸ್ತಿಯನ್ನು ಗೆದ್ದಿದೆ. ದಕ್ಷಿಣ ಆಫ್ರಿಕಾ, ಇಂಗ್ಲೆಂಡ್ ಮತ್ತು ಬಾಂಗ್ಲಾದೇಶ ತಲಾ ಒಂದು ಬಾರಿ ಗೆದ್ದಿವೆ. ಕಳೆದ ಮೂರು ಸೀಸನ್‌ಗಳಲ್ಲಿ ಭಾರತ ಫೈನಲ್‌ಗೆ ಪ್ರವೇಶಿಸಿದೆ ಆದರೆ ಒಮ್ಮೆ ಮಾತ್ರ ಟ್ರೋಫಿ ಗೆದ್ದಿದೆ.

Published On - 3:34 pm, Thu, 18 November 21

ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ