AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB: ಆರ್​ಸಿಬಿ ಸೋಲಿಗೆ ಕಾರಣವಾಯ್ತಾ ಕಳಪೆ ಅಂಪೈರಿಂಗ್? ಇಲ್ಲಿದೆ ಸಾಕ್ಷಿ

ಕೊನೆಯ ಓವರ್​ನಲ್ಲಿ ಸೊಂಟದ ಭಾಗಕ್ಕಿಂತ ಎತ್ತರ ಇದ್ದ ಬಾಲ್​ನ ಅಂಪೈರ್ ನೋ ಬಾಲ್ ನೀಡಲಿಲ್ಲ. ಇದನ್ನು ನೋಡಿ ವಿರಾಟ್ ಕೊಹ್ಲಿ ಕೂಡ ಅಸಮಾಧಾನ ಹೊರಹಾಕಿದರು. ಇನ್ನು, ಬೌಂಡರಿ ಹೋಗಿದ್ದನ್ನು ಕೊಡದೆ ಇರುವ ವಿಚಾರವೂ ಚರ್ಚೆ ಹುಟ್ಟುಹಾಕಿದೆ.

RCB: ಆರ್​ಸಿಬಿ ಸೋಲಿಗೆ ಕಾರಣವಾಯ್ತಾ ಕಳಪೆ ಅಂಪೈರಿಂಗ್? ಇಲ್ಲಿದೆ ಸಾಕ್ಷಿ
ಆರ್​ಸಿಬಿ ಸೋಲಿಗೆ ಕಾರಣವಾಯ್ತಾ ಕಳಪೆ ಅಂಪೈರಿಂಗ್?
ರಾಜೇಶ್ ದುಗ್ಗುಮನೆ
|

Updated on:Apr 12, 2024 | 10:05 AM

Share

ಮುಂಬೈನ ವಾಂಖೇಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ (MI) ಹಾಗೂ ಆರ್​​ಸಿಬಿ ನಡುವಿನ ಪಂದ್ಯದಲ್ಲಿ ಆರ್​ಸಿಬಿಗೆ ಹೀನಾಯ ಸೋಲಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 196 ಮೊತ್ತ ಪೇರಿಸಿದರೂ ಗೆಲುವಿಗೆ ಅದು ಸಹಕಾರಿ ಆಗಿಲ್ಲ. ಈ ಮಧ್ಯೆ ಅಂಪೈರಿಂಗ್ ಬಗ್ಗೆ ಟೀಕೆ ವ್ಯಕ್ತವಾಗಿದೆ. ನಿತಿನ್ ಮೆನನ್ ಅವರು ತೆಗೆದುಕೊಂಡ ನಿರ್ಧಾರಗಳು ಪ್ರಶ್ನೆ ಹುಟ್ಟುಹಾಕಿದೆ. ಆ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ.

ಟಾಸ್ ಗೆದ್ದ ಮುಂಬೈ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಆರ್​ಸಿಬಿಯ ಆರಂಭ ಉತ್ತಮವಾಗಿರಲಿಲ್ಲ. ವಿರಾಟ್ ಕೊಹ್ಲಿ ಅವರು ಬೇಗನೆ ಔಟ್ ಆದರು. ಆ ಬಳಿಕ ರಜತ್ ಪಟಿದಾರ್, ಫಾಪ್ ಡುಪ್ಲೆಸಿಸ್ ಹಾಗೂ  ದಿನೇಶ್ ಕಾರ್ತಿಕ್ ಅರ್ಧ ಶತಕ ಸಿಡಿಸಿ ತಂಡಕ್ಕೆ ಆಸರೆ ಆದರು. ಈ ಮಧ್ಯೆ ಅಂಪೈರಿಂಗ್ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಅಂಪೈರ್​ಗಳು ತೆಗೆದುಕೊಂಡ ನಿರ್ಧಾರಗಳು ಮುಂಬೈ ಪರವಾಗಿತ್ತು ಎಂದು ಅನೇಕರು ಟೀಕೆ ಮಾಡಿದ್ದಾರೆ.

ಕೊನೆಯ ಓವರ್​ನಲ್ಲಿ ಸೊಂಟದ ಭಾಗಕ್ಕಿಂತ ಎತ್ತರ ಇದ್ದ ಬಾಲ್​ನ ಅಂಪೈರ್ ನೋ ಬಾಲ್ ನೀಡಲಿಲ್ಲ. ಇದನ್ನು ನೋಡಿ ವಿರಾಟ್ ಕೊಹ್ಲಿ ಕೂಡ ಅಸಮಾಧಾನ ಹೊರಹಾಕಿದರು. ಇನ್ನು, ಬೌಂಡರಿ ಹೋಗಿದ್ದನ್ನು ಕೊಡದೆ ಇರುವ ವಿಚಾರವೂ ಚರ್ಚೆ ಹುಟ್ಟುಹಾಕಿದೆ. ಫೀಲ್ಡರ್​ನ ದೇಹದ ಭಾಗ ಬೌಂಡರಿ ಗಡಿಗೆ ತಾಗಿತ್ತು. ಇದೇ ಸಂದರ್ಭದಲ್ಲಿ ಫೀಲ್ಡರ್​ ಬೌಲನ್​ ಸಂಪರ್ಕದಲ್ಲಿ ಇದ್ದ. ಆದಾಗ್ಯೂ ಇದನ್ನು ಬೌಂಡರಿ ಎಂದು ನೀಡಲಿಲ್ಲ.

ಇನ್ನು ಲೋಮ್ರರ್ ತಾವು ಫೇಸ್ ಮಾಡಿದ ಮೊದಲ ಬಾಲ್​ನಲ್ಲಿ ಎಲ್​ಬಿಡಬ್ಲ್ಯೂಗೆ ಬಲಿಯಾದರು. ಈ ಬಾಲ್ ಕೂಡ ಹೊರಗೆ ಹೋಗುತ್ತಾ ಇತ್ತು. ಆದಾಗ್ಯೂ ಅಂಪೈರ್ ಔಟ್ ನೀಡಿದ್ದರು. ನಂತರ ರಿವ್ಯೂ ತೆಗೆದುಕೊಂಡಾಗ ಸ್ಟಂಪ್​ಗೆ ಸ್ವಲ್ಪ ತಾಗುತ್ತಿದೆ ಎನ್ನುವ ಕಾರಣಕ್ಕೆ ಅಂಪೈರ್ ಕಾಲ್ ನೀಡಲಾಯಿತು.

ಇದನ್ನೂ ಓದಿ: ‘ಅವರೇ ಕಾರಣ’; ಸತತ ನಾಲ್ಕನೇ ಸೋಲಿನ ಬಳಿಕ ಆರ್​ಸಿಬಿ ನಾಯಕ ಫಾಪ್ ದೂರಿದ್ದು ಯಾರನ್ನು?

ಇನ್ನು, ಫಾಪ್​ ಡುಪ್ಲೆಸಿಸ್ ಹೊಡೆದ ಶಾಟ್ ಬ್ಯಾಟ್​ಗೆ ತಾಗದೆ ಕೀಪರ್ ಕೈ ಸೇರಿತು. ಅಂಪೈರ್ ಔಟ್ ನೀಡಿಲ್ಲ. ಹೀಗಾಗಿ, ಇಶಾನ್ ಕಿಶಾನ್ ಮೊದಲಾದವರು ಜೋರಾಗಿ ಅಂಪೈರ್ ಬಳಿ ಔಟ್ ನೀಡುವಂತೆ ಕೋರಿದರು. ಆಗ ಮುಂಬೈ ಇಂಡಿಯನ್ಸ್ ಅವರ ಎಲ್ಲಾ ರಿವ್ಯೂಗಳು ಮುಗಿದಿದ್ದವು. ಹೀಗಾಗಿ, ಅವರು ರಿವ್ಯೂ ಕೇಳುವಂಯೆ ಇರಲಿಲ್ಲ. ಈ ವೇಳೆ ಸ್ವತಃ ಅಂಪೈರ್ ಅವರು ಥರ್ಡ್​ ಅಂಪೈರ್​ಗೆ ರಿವ್ಯೂ ಕೇಳಿದರು. ಇದನ್ನು ಕೆಲವರು ಪ್ರಶ್ನೆ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:58 am, Fri, 12 April 24

Follow Us
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ