AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೆಜೆಂಡ್ ಕ್ರಿಕೆಟಿಗನ ಕಾಲಿಗೆ ಬಿದ್ದ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!

Australia vs India, 4th Test: ಮೆಲ್ಬೋರ್ನ್​ನ ಎಂಸಿಜಿ ಮೈದಾನದಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 4ನೇ ಟೆಸ್ಟ್ ಪಂದ್ಯವು ನಾಲ್ಕನೇ ದಿನದಾಟಕ್ಕೆ ಕಾಲಿಟ್ಟಿದೆ. ಈ ಪಂದ್ಯದಲ್ಲಿ ದ್ವಿತೀಯ ಇನಿಂಗ್ಸ್ ಆರಂಭಿಸಿರುವ ಆಸ್ಟ್ರೇಲಿಯಾ ತಂಡವು 2 ವಿಕೆಟ್ ಕಳೆದುಕೊಂಡಿದ್ದು, ಇದಾಗ್ಯೂ ಉತ್ತಮ ಬ್ಯಾಟಿಂಗ್ ಮುಂದುವರೆಸಿದೆ.

ಲೆಜೆಂಡ್ ಕ್ರಿಕೆಟಿಗನ ಕಾಲಿಗೆ ಬಿದ್ದ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
Nitish Kumar Reddy
ಝಾಹಿರ್ ಯೂಸುಫ್
|

Updated on: Dec 29, 2024 | 8:21 AM

Share

ಮೆಲ್ಬೋರ್ನ್​ ಕ್ರಿಕೆಟ್ ಗ್ರೌಂಡ್ ಶನಿವಾರ ಅವಿಸ್ಮರಣೀಯ ಕ್ಷಣಗಳಿಗೆ ಸಾಕ್ಷಿಯಾಗಿತ್ತು. ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 4ನೇ ಟೆಸ್ಟ್ ಪಂದ್ಯದ ಮೂರನೇ ದಿನದಾಟದಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ನಿತೀಶ್ ಕುಮಾರ್ ರೆಡ್ಡಿ ಆಕರ್ಷಕ ಶತಕ ಬಾರಿಸಿ ಮಿಂಚಿದ್ದರು. ಇತ್ತ ನಿತೀಶ್ ಶತಕ ಪೂರೈಸುತ್ತಿದ್ದರೆ, ಅತ್ತ ಅವರ ತಂದೆ ಮುತ್ಯಾಲ ರೆಡ್ಡಿ ಆನಂದಭಾಷ್ಪ ಸುರಿಸಿದ್ದರು.

ಇದಾದ ಬಳಿಕ ಮೆಲ್ಬೋರ್ನ್ ಕ್ರಿಕೆಟ್ ಸ್ಟೇಡಿಯಂನ ಕಾಮೆಂಟ್ರಿ ರೂಮ್​ ಬಳಿ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ ದಿ ಲೆಜೆಂಡ್ ಸುನಿಲ್ ಗವಾಸ್ಕರ್ ಅವರನ್ನು ಭೇಟಿಯಾಗಿದ್ದಾರೆ. ಗವಾಸ್ಕರ್ ಅವರೊಂದಿಗೆ ಮಾತನಾಡುತ್ತಾ ಮುತ್ಯಾಲ ರೆಡ್ಡಿ ದಂಪತಿ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದು ವಿಶೇಷವಾಗಿತ್ತು. ಇದೀಗ ಗವಾಸ್ಕರ್ ಅವರಿಂದ ಆಶೀರ್ವಾದ ಪಡೆಯುತ್ತಿರುವ ನಿತೀಶ್ ಕುಮಾರ್ ರೆಡ್ಡಿ ಅವರ ಪೋಷಕರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಪರ ಸ್ಯಾಮ್ ಕೊನ್​ಸ್ಟಾಸ್ (60), ಉಸ್ಮಾನ್ ಖ್ವಾಜಾ (57) ಹಾಗೂ ಮಾರ್ನಸ್ ಲಾಬುಶೇನ್ (72) ಅರ್ಧಶತಕ ಬಾರಿಸಿದರೆ, ಸ್ಟೀವ್ ಸ್ಮಿತ್ (140) ಶತಕ ಸಿಡಿಸಿದರು. ಈ ಮೂಲಕ ಆಸ್ಟ್ರೇಲಿಯಾ ತಂಡವು ಮೊದಲ ಇನಿಂಗ್ಸ್​ನಲ್ಲಿ 474 ರನ್ ಕಲೆಹಾಕಿದೆ.

ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆಡಿದ ಟೀಮ್ ಇಂಡಿಯಾ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಇದಾಗ್ಯೂ 8ನೇ ವಿಕೆಟ್​ಗೆ ಜೊತೆಯಾದ ವಾಷಿಂಗ್ಟನ್ ಸುಂದರ್ ಹಾಗೂ ನಿತೀಶ್ ಕುಮಾರ್ ರೆಡ್ಡಿ ಶತಕದ ಜೊತೆಯಾಟವಾಡಿದರು.

ವಾಷಿಂಗ್ಟನ್ ಸುಂದರ್ ಅರ್ಧಶತಕ ಬಾರಿಸಿ ವಿಕೆಟ್ ಒಪ್ಪಿಸಿದರೆ, ನಿತೀಶ್ ಕುಮಾರ್ ರೆಡ್ಡಿ 114 ರನ್​ಗಳ ಭರ್ಜರಿ ಶತಕ ಸಿಡಿಸಿದರು. ಈ ಅತ್ಯುತ್ತಮ ಬ್ಯಾಟಿಂಗ್ ನೆರವಿನಿಂದ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 369 ರನ್ ಕಲೆಹಾಕಿದೆ.

ಇದನ್ನೂ ಓದಿ: ಭಾರತ vs ಆಸ್ಟ್ರೇಲಿಯಾ ಪಂದ್ಯದ ನಡುವೆ ಹಾರಾಡಿದ ಕಾಂಡೋಮ್

ಇದೀಗ 105 ರನ್​​ಗಳ ಮೊದಲ ಇನಿಂಗ್ಸ್​ ಮುನ್ನಡೆಯೊಂದಿಗೆ ಆಸ್ಟ್ರೇಲಿಯಾ ತಂಡವು ದ್ವಿತೀಯ ಇನಿಂಗ್ಸ್ ಶುರು ಮಾಡಿದ್ದು, 31 ಓವರ್​​ಗಳ ಮುಕ್ತಾಯದ ವೇಳೆಗೆ 2 ವಿಕೆಟ್ ಕಳೆದುಕೊಂಡು 78 ರನ್ ಕಲೆಹಾಕಿದೆ. ಕ್ರೀಸ್​ನಲ್ಲಿ ಮಾರ್ನಸ್ ಲಾಬುಶೇನ್ ಹಾಗೂ ಸ್ಟೀವ್ ಸ್ಮಿತ್ ಬ್ಯಾಟಿಂಗ್ ಮುಂದುವರೆಸಿದ್ದಾರೆ.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ